Homeಕರ್ನಾಟಕಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

- Advertisement -
- Advertisement -

ಕಾಡಿನಿಂದ ಆವೃತವಾಗಿರುವ ಉತ್ತರ ಕನ್ನಡದ ಇಡೀ ಜೋಯಿಡಾ ತಾಲ್ಲೂಕಿನಲ್ಲಿ ವೈವಿದ್ಯಮಯ ಗೆಡ್ಡೆ-ಗೆಣಸು ಅನಾದಿ ಕಾಲದಿಂದ ಬೆಳೆಯಲಾಗುತ್ತಿದೆ. ಇಲ್ಲಿಯ ಬುಡಕಟ್ಟು ಕುಣಬಿ ಜನಾಂಗದವರು ಸಾಂಪ್ರದಾಯಿಕವಾಗಿ ಗೆಡ್ಡೆ, ಗೆಣಸು ಬೆಳೆಯುತ್ತಿದ್ದಾರೆ. ಇದು ಕುಣಬಿಗಳ ಮೂಲ ಕಸುಬು. ಕೃಷಿ ವಿಜ್ಞಾನಿಗಳು ಜೋಯಿಡಾ ಭಾಗದ ಗೆಡ್ಡೆ-ಗೆಣಸು ಪರಿಶೀಲಿಸಿ ಇವುಗಳು ಚಿಕ್ಕ ಮಕ್ಕಳ ಆರೋಗ್ಯಕರ ಆಹಾರ ತಯಾರಿಕೆಗೆ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಕೆಲವು ವರ್ಷದಿಂದ ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ ನಡೆಸಲಾಗುತ್ತಿದ್ದು, ಬುಧವಾರ ಈ ಬಾರಿಯ ಮೇಳವನ್ನು ಕುಣಬಿ ಅಭಿವೃದ್ಧಿ ಸಂಘ ಮತ್ತು ಕಾಳಿ ರೈತ ಉತ್ಪದಕರ ಸಂಘ ಆಯೋಜಿಸಿತ್ತು.

230ಕ್ಕೂ ಹೆಚ್ಚು ರೈತರು ಮತ್ತು ರೈತ ಮಹಿಳೆಯರು ತಾವು ಬೆಳೆದ ನಾನಾ ನಮೂನೆಯ ಗೆಡ್ಡೆ, ಗೆಣಸುಗಳ ಪ್ರದರ್ಶನ ಮತ್ತು ಮಾರಾಟ ಮಾಡಿದರು. ಗೆಡ್ಡೆಗಳ ವಿವಿಧ ಬಗೆಯ ಖಾದ್ಯ ಮಾರಾಟವೂ ಇತ್ತು. ಸಣ್ಣ-ಪುಟ್ಟ ಗಾತ್ರದಿಂದ ಬೃಹದಾಕಾರದ ಗೆಡ್ಡೆ, ಗೆಣಸುಗಳು ಗೋವಾ, ಮಹಾರಾಷ್ಟ್ರ, ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಿಂದ ಮೇಳಕ್ಕೆ ಬಂದವರನ್ನು ಚಕಿತಗೋಳಿಸಿದವು. ಜೋಯಿಡಾದ ಸುಮಾರು 50 ಎಕರೆ ಪ್ರದೇಶದಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷದ ಗೆಡ್ಡೆ ಮೇಳದಲ್ಲಿ ಮೂರರಿಂದ ಮೂರುವರೆ ಲಕ್ಷದ ವ್ಯಾಪಾರವಾಗಿದೆ ಎನ್ನಲಾಗಿದೆ.

ಮೇಳ ಉದ್ಘಾಟಿಸಿದ ಕಾಳಿ ಹುಲಿ ಸಂರಕ್ಷಣಾ ಪ್ರದೇಶದ ನಿರ್ದೇಶಕ ಮಾರಿಯೋ ಕ್ರಿಸ್ತರಾಜ ಮಾತನಾಡಿ, “ಜೋಯಿಡಾದ ಹಳ್ಳಿಗಾಡಿನ ಜನರು ಅದರಲ್ಲೂ ಕುಣಬಿ ಸಮುದಾಯದವರು ಗೆಡ್ಡೆ-ಗೆಣಸು ಬೆಳೆದು ಪ್ರಸಿದ್ದರಾಗಿದ್ದಾರೆ. ಹಲವಾರು ತಲೆಮಾರಿನಿಂದ ಬಂದಿರುವ ಈ ಕೃಷಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಪೂರ್ವಜರು ಬೆಳೆಸಿ ಉಳಿಸಿದ ಗೆಡ್ಡೆ, ಗೆಣಸು ತಳಿಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಈ ಪ್ರಯತ್ನ ಯಶಸ್ವಿಯಾಗಲಿ” ಎಂದು ಹಾರೈಸಿದರು.

ಎಲ್ಲ ರಂಗದಲ್ಲಿ ತೀರಾ ಹಿಂದುಳಿದಿರುವ ಜೋಯಿಡಾ ತಾಲೂಕು ಗೆಡ್ಡೆ, ಗೆಣಸು ಮೇಳದಿಂದ ಹೊರ ಪ್ರಪಂಚದಲ್ಲಿ ಗುರುತಿಸಿಕೊಂಡಿದೆ. ದಟ್ಟ ಅಡವಿಯಲ್ಲಿ ಬೆಳೆಯುವ ಗೆಡ್ಡೆ-ಗೆಣಸನ್ನು ಕುಣಬಿ ಬುಡಕಟ್ಟಿನ ಸಮುದಾಯ ಅಡುಗೆ ಮನೆಗೆ ಪರಿಚಯಿಸಿದೆ. ಗೆಡ್ಡೆ-ಗೆಣಸು ಮೇಳದ ಹಿಂದಿನ ಶಕ್ತಿ ಸಹ ಕುಣಬಿ ಜನಾಂಗವೇ ಆಗಿದೆ. ಕೆಸುವಿನ ಗೆಡ್ಡೆ, ಸುವರ್ಣಗೆಡ್ಡೆ, ಕೆಂಪು ಗೆಣಸು, ಅರಿಶಿಣ, ಶುಂಠಿ, ಮಾವಿನ ಶುಂಠಿ, ಆನೆ ಪಾದದಂತೆ ಇರುವ ಬೃಹತ್ ಗಾತ್ರದ ಚರಣ ಮತ್ತಿತರ ಗೆಡ್ಡೆಗಳು ಮೇಳದಲ್ಲಿತ್ತು.

ಡೇರಿಯಾ, ಡಿಗ್ಗಿ, ಬಜಾರಕುಣಂಗ, ನಿಗುಂಡಿ, ತೇರಾಳಿ, ನುಜ್ಜಿ, ಕುಂಡಲ, ಬಾಡಪೋಲಿ, ದುಮಾಳ, ಕರಂಜೋಯಿಡಾ, ಅಣಶಿ, ಕುಂಬಾರವಾಡ, ಕುವೇಶಿ ಮುಂತಾದ ಹಳ್ಳಿಗಳ ಪ್ರತಿಯೊಂದು ಕುಣಬಿ ಮನೆ ಹಿತ್ತಲಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಕಣಬಿಗಳ ಆಡು ಭಾಷೆಯಲ್ಲಿ ಗೆಣಸಿಗೆ ಕೋನ್ ಎಂದರೆ ಕೆಸುವಿನ ಗೆಡ್ಡೆಗೆ ಮುಡ್ಲಿ ಎನ್ನುತ್ತಾರೆ.

ದಾವಾ ಮುಡ್ಲಿ, ಚೇಡ್ವಾಲಿ ಮುಡ್ಲಿ, ರಕ್ಯಾಮುಡ್ಲಿ, ಕುಣಬಿಮುಡ್ಲಿ, ಕಾಳಿ ಮುಡ್ಲಿ, ಪುಲಾ ಮುಡ್ಲಿ, ಗಿಡ್ಡಿ ಮುಡ್ಲಿ, ಲಾಂಬಟ ಮುಡ್ಲಿ, ಹುಂಡು, ಕಾಳೊ ತೆರೊ, ದುರತಾಳಿ, ಆಳೆಕೋನ್, ಧಯೆಕೋನ್, ತಾಂಬ್ಡೆ ಕೋನ್, ದುಕರ್ ಕೋನ್, ನಾಗರ್ ಕೋನ್, ಮಾಂಡೆ ಕೋನ್, ಆಳೆ ಕೋನ್, ಚೇನಿ ಕೋನ್, ಕಾಟೆ ಕಣಗಾ, ಝಾಡ ಕಣಗಾ, ತಾರೋಟಿ ಕಣಗಾ ಮುಂತಾದ ಹೆಸರಿನ ಗೆಡ್ಡೆ-ಗೆಣಸು ಜೋಯಿಡಾ ಪ್ರದೇಶದಲ್ಲಿ ವಿಪುಲವಾಗಿ ಬೆಳೆಯಲಾಗುತ್ತದೆ. ಜೋಯಿಡಾ ಮತ್ತು ಹತ್ತಿರದ ರಾಮನಗರ ಈ ಗೆಡ್ಡೆ-ಗೆಣಸುಗಳ ಪ್ರಮುಖ ಮಾರುಕಟ್ಟೆ.


ಇದನ್ನೂ ಓದಿ: ಮೂರ್ತಿ ಭಂಜನೆ ಎಂಬ ರಾಜಕೀಯ ಇತಿಹಾಸದ ಪಳೆಯುಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...