Homeಕರ್ನಾಟಕಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

- Advertisement -
- Advertisement -

ಕಾಡಿನಿಂದ ಆವೃತವಾಗಿರುವ ಉತ್ತರ ಕನ್ನಡದ ಇಡೀ ಜೋಯಿಡಾ ತಾಲ್ಲೂಕಿನಲ್ಲಿ ವೈವಿದ್ಯಮಯ ಗೆಡ್ಡೆ-ಗೆಣಸು ಅನಾದಿ ಕಾಲದಿಂದ ಬೆಳೆಯಲಾಗುತ್ತಿದೆ. ಇಲ್ಲಿಯ ಬುಡಕಟ್ಟು ಕುಣಬಿ ಜನಾಂಗದವರು ಸಾಂಪ್ರದಾಯಿಕವಾಗಿ ಗೆಡ್ಡೆ, ಗೆಣಸು ಬೆಳೆಯುತ್ತಿದ್ದಾರೆ. ಇದು ಕುಣಬಿಗಳ ಮೂಲ ಕಸುಬು. ಕೃಷಿ ವಿಜ್ಞಾನಿಗಳು ಜೋಯಿಡಾ ಭಾಗದ ಗೆಡ್ಡೆ-ಗೆಣಸು ಪರಿಶೀಲಿಸಿ ಇವುಗಳು ಚಿಕ್ಕ ಮಕ್ಕಳ ಆರೋಗ್ಯಕರ ಆಹಾರ ತಯಾರಿಕೆಗೆ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಕೆಲವು ವರ್ಷದಿಂದ ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ ನಡೆಸಲಾಗುತ್ತಿದ್ದು, ಬುಧವಾರ ಈ ಬಾರಿಯ ಮೇಳವನ್ನು ಕುಣಬಿ ಅಭಿವೃದ್ಧಿ ಸಂಘ ಮತ್ತು ಕಾಳಿ ರೈತ ಉತ್ಪದಕರ ಸಂಘ ಆಯೋಜಿಸಿತ್ತು.

230ಕ್ಕೂ ಹೆಚ್ಚು ರೈತರು ಮತ್ತು ರೈತ ಮಹಿಳೆಯರು ತಾವು ಬೆಳೆದ ನಾನಾ ನಮೂನೆಯ ಗೆಡ್ಡೆ, ಗೆಣಸುಗಳ ಪ್ರದರ್ಶನ ಮತ್ತು ಮಾರಾಟ ಮಾಡಿದರು. ಗೆಡ್ಡೆಗಳ ವಿವಿಧ ಬಗೆಯ ಖಾದ್ಯ ಮಾರಾಟವೂ ಇತ್ತು. ಸಣ್ಣ-ಪುಟ್ಟ ಗಾತ್ರದಿಂದ ಬೃಹದಾಕಾರದ ಗೆಡ್ಡೆ, ಗೆಣಸುಗಳು ಗೋವಾ, ಮಹಾರಾಷ್ಟ್ರ, ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಿಂದ ಮೇಳಕ್ಕೆ ಬಂದವರನ್ನು ಚಕಿತಗೋಳಿಸಿದವು. ಜೋಯಿಡಾದ ಸುಮಾರು 50 ಎಕರೆ ಪ್ರದೇಶದಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷದ ಗೆಡ್ಡೆ ಮೇಳದಲ್ಲಿ ಮೂರರಿಂದ ಮೂರುವರೆ ಲಕ್ಷದ ವ್ಯಾಪಾರವಾಗಿದೆ ಎನ್ನಲಾಗಿದೆ.

ಮೇಳ ಉದ್ಘಾಟಿಸಿದ ಕಾಳಿ ಹುಲಿ ಸಂರಕ್ಷಣಾ ಪ್ರದೇಶದ ನಿರ್ದೇಶಕ ಮಾರಿಯೋ ಕ್ರಿಸ್ತರಾಜ ಮಾತನಾಡಿ, “ಜೋಯಿಡಾದ ಹಳ್ಳಿಗಾಡಿನ ಜನರು ಅದರಲ್ಲೂ ಕುಣಬಿ ಸಮುದಾಯದವರು ಗೆಡ್ಡೆ-ಗೆಣಸು ಬೆಳೆದು ಪ್ರಸಿದ್ದರಾಗಿದ್ದಾರೆ. ಹಲವಾರು ತಲೆಮಾರಿನಿಂದ ಬಂದಿರುವ ಈ ಕೃಷಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಪೂರ್ವಜರು ಬೆಳೆಸಿ ಉಳಿಸಿದ ಗೆಡ್ಡೆ, ಗೆಣಸು ತಳಿಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಈ ಪ್ರಯತ್ನ ಯಶಸ್ವಿಯಾಗಲಿ” ಎಂದು ಹಾರೈಸಿದರು.

ಎಲ್ಲ ರಂಗದಲ್ಲಿ ತೀರಾ ಹಿಂದುಳಿದಿರುವ ಜೋಯಿಡಾ ತಾಲೂಕು ಗೆಡ್ಡೆ, ಗೆಣಸು ಮೇಳದಿಂದ ಹೊರ ಪ್ರಪಂಚದಲ್ಲಿ ಗುರುತಿಸಿಕೊಂಡಿದೆ. ದಟ್ಟ ಅಡವಿಯಲ್ಲಿ ಬೆಳೆಯುವ ಗೆಡ್ಡೆ-ಗೆಣಸನ್ನು ಕುಣಬಿ ಬುಡಕಟ್ಟಿನ ಸಮುದಾಯ ಅಡುಗೆ ಮನೆಗೆ ಪರಿಚಯಿಸಿದೆ. ಗೆಡ್ಡೆ-ಗೆಣಸು ಮೇಳದ ಹಿಂದಿನ ಶಕ್ತಿ ಸಹ ಕುಣಬಿ ಜನಾಂಗವೇ ಆಗಿದೆ. ಕೆಸುವಿನ ಗೆಡ್ಡೆ, ಸುವರ್ಣಗೆಡ್ಡೆ, ಕೆಂಪು ಗೆಣಸು, ಅರಿಶಿಣ, ಶುಂಠಿ, ಮಾವಿನ ಶುಂಠಿ, ಆನೆ ಪಾದದಂತೆ ಇರುವ ಬೃಹತ್ ಗಾತ್ರದ ಚರಣ ಮತ್ತಿತರ ಗೆಡ್ಡೆಗಳು ಮೇಳದಲ್ಲಿತ್ತು.

ಡೇರಿಯಾ, ಡಿಗ್ಗಿ, ಬಜಾರಕುಣಂಗ, ನಿಗುಂಡಿ, ತೇರಾಳಿ, ನುಜ್ಜಿ, ಕುಂಡಲ, ಬಾಡಪೋಲಿ, ದುಮಾಳ, ಕರಂಜೋಯಿಡಾ, ಅಣಶಿ, ಕುಂಬಾರವಾಡ, ಕುವೇಶಿ ಮುಂತಾದ ಹಳ್ಳಿಗಳ ಪ್ರತಿಯೊಂದು ಕುಣಬಿ ಮನೆ ಹಿತ್ತಲಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಕಣಬಿಗಳ ಆಡು ಭಾಷೆಯಲ್ಲಿ ಗೆಣಸಿಗೆ ಕೋನ್ ಎಂದರೆ ಕೆಸುವಿನ ಗೆಡ್ಡೆಗೆ ಮುಡ್ಲಿ ಎನ್ನುತ್ತಾರೆ.

ದಾವಾ ಮುಡ್ಲಿ, ಚೇಡ್ವಾಲಿ ಮುಡ್ಲಿ, ರಕ್ಯಾಮುಡ್ಲಿ, ಕುಣಬಿಮುಡ್ಲಿ, ಕಾಳಿ ಮುಡ್ಲಿ, ಪುಲಾ ಮುಡ್ಲಿ, ಗಿಡ್ಡಿ ಮುಡ್ಲಿ, ಲಾಂಬಟ ಮುಡ್ಲಿ, ಹುಂಡು, ಕಾಳೊ ತೆರೊ, ದುರತಾಳಿ, ಆಳೆಕೋನ್, ಧಯೆಕೋನ್, ತಾಂಬ್ಡೆ ಕೋನ್, ದುಕರ್ ಕೋನ್, ನಾಗರ್ ಕೋನ್, ಮಾಂಡೆ ಕೋನ್, ಆಳೆ ಕೋನ್, ಚೇನಿ ಕೋನ್, ಕಾಟೆ ಕಣಗಾ, ಝಾಡ ಕಣಗಾ, ತಾರೋಟಿ ಕಣಗಾ ಮುಂತಾದ ಹೆಸರಿನ ಗೆಡ್ಡೆ-ಗೆಣಸು ಜೋಯಿಡಾ ಪ್ರದೇಶದಲ್ಲಿ ವಿಪುಲವಾಗಿ ಬೆಳೆಯಲಾಗುತ್ತದೆ. ಜೋಯಿಡಾ ಮತ್ತು ಹತ್ತಿರದ ರಾಮನಗರ ಈ ಗೆಡ್ಡೆ-ಗೆಣಸುಗಳ ಪ್ರಮುಖ ಮಾರುಕಟ್ಟೆ.


ಇದನ್ನೂ ಓದಿ: ಮೂರ್ತಿ ಭಂಜನೆ ಎಂಬ ರಾಜಕೀಯ ಇತಿಹಾಸದ ಪಳೆಯುಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...