Homeಕರ್ನಾಟಕಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

- Advertisement -
- Advertisement -

ಕಾಡಿನಿಂದ ಆವೃತವಾಗಿರುವ ಉತ್ತರ ಕನ್ನಡದ ಇಡೀ ಜೋಯಿಡಾ ತಾಲ್ಲೂಕಿನಲ್ಲಿ ವೈವಿದ್ಯಮಯ ಗೆಡ್ಡೆ-ಗೆಣಸು ಅನಾದಿ ಕಾಲದಿಂದ ಬೆಳೆಯಲಾಗುತ್ತಿದೆ. ಇಲ್ಲಿಯ ಬುಡಕಟ್ಟು ಕುಣಬಿ ಜನಾಂಗದವರು ಸಾಂಪ್ರದಾಯಿಕವಾಗಿ ಗೆಡ್ಡೆ, ಗೆಣಸು ಬೆಳೆಯುತ್ತಿದ್ದಾರೆ. ಇದು ಕುಣಬಿಗಳ ಮೂಲ ಕಸುಬು. ಕೃಷಿ ವಿಜ್ಞಾನಿಗಳು ಜೋಯಿಡಾ ಭಾಗದ ಗೆಡ್ಡೆ-ಗೆಣಸು ಪರಿಶೀಲಿಸಿ ಇವುಗಳು ಚಿಕ್ಕ ಮಕ್ಕಳ ಆರೋಗ್ಯಕರ ಆಹಾರ ತಯಾರಿಕೆಗೆ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಕೆಲವು ವರ್ಷದಿಂದ ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ ನಡೆಸಲಾಗುತ್ತಿದ್ದು, ಬುಧವಾರ ಈ ಬಾರಿಯ ಮೇಳವನ್ನು ಕುಣಬಿ ಅಭಿವೃದ್ಧಿ ಸಂಘ ಮತ್ತು ಕಾಳಿ ರೈತ ಉತ್ಪದಕರ ಸಂಘ ಆಯೋಜಿಸಿತ್ತು.

230ಕ್ಕೂ ಹೆಚ್ಚು ರೈತರು ಮತ್ತು ರೈತ ಮಹಿಳೆಯರು ತಾವು ಬೆಳೆದ ನಾನಾ ನಮೂನೆಯ ಗೆಡ್ಡೆ, ಗೆಣಸುಗಳ ಪ್ರದರ್ಶನ ಮತ್ತು ಮಾರಾಟ ಮಾಡಿದರು. ಗೆಡ್ಡೆಗಳ ವಿವಿಧ ಬಗೆಯ ಖಾದ್ಯ ಮಾರಾಟವೂ ಇತ್ತು. ಸಣ್ಣ-ಪುಟ್ಟ ಗಾತ್ರದಿಂದ ಬೃಹದಾಕಾರದ ಗೆಡ್ಡೆ, ಗೆಣಸುಗಳು ಗೋವಾ, ಮಹಾರಾಷ್ಟ್ರ, ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಿಂದ ಮೇಳಕ್ಕೆ ಬಂದವರನ್ನು ಚಕಿತಗೋಳಿಸಿದವು. ಜೋಯಿಡಾದ ಸುಮಾರು 50 ಎಕರೆ ಪ್ರದೇಶದಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷದ ಗೆಡ್ಡೆ ಮೇಳದಲ್ಲಿ ಮೂರರಿಂದ ಮೂರುವರೆ ಲಕ್ಷದ ವ್ಯಾಪಾರವಾಗಿದೆ ಎನ್ನಲಾಗಿದೆ.

ಮೇಳ ಉದ್ಘಾಟಿಸಿದ ಕಾಳಿ ಹುಲಿ ಸಂರಕ್ಷಣಾ ಪ್ರದೇಶದ ನಿರ್ದೇಶಕ ಮಾರಿಯೋ ಕ್ರಿಸ್ತರಾಜ ಮಾತನಾಡಿ, “ಜೋಯಿಡಾದ ಹಳ್ಳಿಗಾಡಿನ ಜನರು ಅದರಲ್ಲೂ ಕುಣಬಿ ಸಮುದಾಯದವರು ಗೆಡ್ಡೆ-ಗೆಣಸು ಬೆಳೆದು ಪ್ರಸಿದ್ದರಾಗಿದ್ದಾರೆ. ಹಲವಾರು ತಲೆಮಾರಿನಿಂದ ಬಂದಿರುವ ಈ ಕೃಷಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಪೂರ್ವಜರು ಬೆಳೆಸಿ ಉಳಿಸಿದ ಗೆಡ್ಡೆ, ಗೆಣಸು ತಳಿಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಈ ಪ್ರಯತ್ನ ಯಶಸ್ವಿಯಾಗಲಿ” ಎಂದು ಹಾರೈಸಿದರು.

ಎಲ್ಲ ರಂಗದಲ್ಲಿ ತೀರಾ ಹಿಂದುಳಿದಿರುವ ಜೋಯಿಡಾ ತಾಲೂಕು ಗೆಡ್ಡೆ, ಗೆಣಸು ಮೇಳದಿಂದ ಹೊರ ಪ್ರಪಂಚದಲ್ಲಿ ಗುರುತಿಸಿಕೊಂಡಿದೆ. ದಟ್ಟ ಅಡವಿಯಲ್ಲಿ ಬೆಳೆಯುವ ಗೆಡ್ಡೆ-ಗೆಣಸನ್ನು ಕುಣಬಿ ಬುಡಕಟ್ಟಿನ ಸಮುದಾಯ ಅಡುಗೆ ಮನೆಗೆ ಪರಿಚಯಿಸಿದೆ. ಗೆಡ್ಡೆ-ಗೆಣಸು ಮೇಳದ ಹಿಂದಿನ ಶಕ್ತಿ ಸಹ ಕುಣಬಿ ಜನಾಂಗವೇ ಆಗಿದೆ. ಕೆಸುವಿನ ಗೆಡ್ಡೆ, ಸುವರ್ಣಗೆಡ್ಡೆ, ಕೆಂಪು ಗೆಣಸು, ಅರಿಶಿಣ, ಶುಂಠಿ, ಮಾವಿನ ಶುಂಠಿ, ಆನೆ ಪಾದದಂತೆ ಇರುವ ಬೃಹತ್ ಗಾತ್ರದ ಚರಣ ಮತ್ತಿತರ ಗೆಡ್ಡೆಗಳು ಮೇಳದಲ್ಲಿತ್ತು.

ಡೇರಿಯಾ, ಡಿಗ್ಗಿ, ಬಜಾರಕುಣಂಗ, ನಿಗುಂಡಿ, ತೇರಾಳಿ, ನುಜ್ಜಿ, ಕುಂಡಲ, ಬಾಡಪೋಲಿ, ದುಮಾಳ, ಕರಂಜೋಯಿಡಾ, ಅಣಶಿ, ಕುಂಬಾರವಾಡ, ಕುವೇಶಿ ಮುಂತಾದ ಹಳ್ಳಿಗಳ ಪ್ರತಿಯೊಂದು ಕುಣಬಿ ಮನೆ ಹಿತ್ತಲಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಕಣಬಿಗಳ ಆಡು ಭಾಷೆಯಲ್ಲಿ ಗೆಣಸಿಗೆ ಕೋನ್ ಎಂದರೆ ಕೆಸುವಿನ ಗೆಡ್ಡೆಗೆ ಮುಡ್ಲಿ ಎನ್ನುತ್ತಾರೆ.

ದಾವಾ ಮುಡ್ಲಿ, ಚೇಡ್ವಾಲಿ ಮುಡ್ಲಿ, ರಕ್ಯಾಮುಡ್ಲಿ, ಕುಣಬಿಮುಡ್ಲಿ, ಕಾಳಿ ಮುಡ್ಲಿ, ಪುಲಾ ಮುಡ್ಲಿ, ಗಿಡ್ಡಿ ಮುಡ್ಲಿ, ಲಾಂಬಟ ಮುಡ್ಲಿ, ಹುಂಡು, ಕಾಳೊ ತೆರೊ, ದುರತಾಳಿ, ಆಳೆಕೋನ್, ಧಯೆಕೋನ್, ತಾಂಬ್ಡೆ ಕೋನ್, ದುಕರ್ ಕೋನ್, ನಾಗರ್ ಕೋನ್, ಮಾಂಡೆ ಕೋನ್, ಆಳೆ ಕೋನ್, ಚೇನಿ ಕೋನ್, ಕಾಟೆ ಕಣಗಾ, ಝಾಡ ಕಣಗಾ, ತಾರೋಟಿ ಕಣಗಾ ಮುಂತಾದ ಹೆಸರಿನ ಗೆಡ್ಡೆ-ಗೆಣಸು ಜೋಯಿಡಾ ಪ್ರದೇಶದಲ್ಲಿ ವಿಪುಲವಾಗಿ ಬೆಳೆಯಲಾಗುತ್ತದೆ. ಜೋಯಿಡಾ ಮತ್ತು ಹತ್ತಿರದ ರಾಮನಗರ ಈ ಗೆಡ್ಡೆ-ಗೆಣಸುಗಳ ಪ್ರಮುಖ ಮಾರುಕಟ್ಟೆ.


ಇದನ್ನೂ ಓದಿ: ಮೂರ್ತಿ ಭಂಜನೆ ಎಂಬ ರಾಜಕೀಯ ಇತಿಹಾಸದ ಪಳೆಯುಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...