Homeಕರ್ನಾಟಕಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

- Advertisement -
- Advertisement -

ಕಾಡಿನಿಂದ ಆವೃತವಾಗಿರುವ ಉತ್ತರ ಕನ್ನಡದ ಇಡೀ ಜೋಯಿಡಾ ತಾಲ್ಲೂಕಿನಲ್ಲಿ ವೈವಿದ್ಯಮಯ ಗೆಡ್ಡೆ-ಗೆಣಸು ಅನಾದಿ ಕಾಲದಿಂದ ಬೆಳೆಯಲಾಗುತ್ತಿದೆ. ಇಲ್ಲಿಯ ಬುಡಕಟ್ಟು ಕುಣಬಿ ಜನಾಂಗದವರು ಸಾಂಪ್ರದಾಯಿಕವಾಗಿ ಗೆಡ್ಡೆ, ಗೆಣಸು ಬೆಳೆಯುತ್ತಿದ್ದಾರೆ. ಇದು ಕುಣಬಿಗಳ ಮೂಲ ಕಸುಬು. ಕೃಷಿ ವಿಜ್ಞಾನಿಗಳು ಜೋಯಿಡಾ ಭಾಗದ ಗೆಡ್ಡೆ-ಗೆಣಸು ಪರಿಶೀಲಿಸಿ ಇವುಗಳು ಚಿಕ್ಕ ಮಕ್ಕಳ ಆರೋಗ್ಯಕರ ಆಹಾರ ತಯಾರಿಕೆಗೆ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಕೆಲವು ವರ್ಷದಿಂದ ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ ನಡೆಸಲಾಗುತ್ತಿದ್ದು, ಬುಧವಾರ ಈ ಬಾರಿಯ ಮೇಳವನ್ನು ಕುಣಬಿ ಅಭಿವೃದ್ಧಿ ಸಂಘ ಮತ್ತು ಕಾಳಿ ರೈತ ಉತ್ಪದಕರ ಸಂಘ ಆಯೋಜಿಸಿತ್ತು.

230ಕ್ಕೂ ಹೆಚ್ಚು ರೈತರು ಮತ್ತು ರೈತ ಮಹಿಳೆಯರು ತಾವು ಬೆಳೆದ ನಾನಾ ನಮೂನೆಯ ಗೆಡ್ಡೆ, ಗೆಣಸುಗಳ ಪ್ರದರ್ಶನ ಮತ್ತು ಮಾರಾಟ ಮಾಡಿದರು. ಗೆಡ್ಡೆಗಳ ವಿವಿಧ ಬಗೆಯ ಖಾದ್ಯ ಮಾರಾಟವೂ ಇತ್ತು. ಸಣ್ಣ-ಪುಟ್ಟ ಗಾತ್ರದಿಂದ ಬೃಹದಾಕಾರದ ಗೆಡ್ಡೆ, ಗೆಣಸುಗಳು ಗೋವಾ, ಮಹಾರಾಷ್ಟ್ರ, ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಿಂದ ಮೇಳಕ್ಕೆ ಬಂದವರನ್ನು ಚಕಿತಗೋಳಿಸಿದವು. ಜೋಯಿಡಾದ ಸುಮಾರು 50 ಎಕರೆ ಪ್ರದೇಶದಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷದ ಗೆಡ್ಡೆ ಮೇಳದಲ್ಲಿ ಮೂರರಿಂದ ಮೂರುವರೆ ಲಕ್ಷದ ವ್ಯಾಪಾರವಾಗಿದೆ ಎನ್ನಲಾಗಿದೆ.

ಮೇಳ ಉದ್ಘಾಟಿಸಿದ ಕಾಳಿ ಹುಲಿ ಸಂರಕ್ಷಣಾ ಪ್ರದೇಶದ ನಿರ್ದೇಶಕ ಮಾರಿಯೋ ಕ್ರಿಸ್ತರಾಜ ಮಾತನಾಡಿ, “ಜೋಯಿಡಾದ ಹಳ್ಳಿಗಾಡಿನ ಜನರು ಅದರಲ್ಲೂ ಕುಣಬಿ ಸಮುದಾಯದವರು ಗೆಡ್ಡೆ-ಗೆಣಸು ಬೆಳೆದು ಪ್ರಸಿದ್ದರಾಗಿದ್ದಾರೆ. ಹಲವಾರು ತಲೆಮಾರಿನಿಂದ ಬಂದಿರುವ ಈ ಕೃಷಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಪೂರ್ವಜರು ಬೆಳೆಸಿ ಉಳಿಸಿದ ಗೆಡ್ಡೆ, ಗೆಣಸು ತಳಿಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಈ ಪ್ರಯತ್ನ ಯಶಸ್ವಿಯಾಗಲಿ” ಎಂದು ಹಾರೈಸಿದರು.

ಎಲ್ಲ ರಂಗದಲ್ಲಿ ತೀರಾ ಹಿಂದುಳಿದಿರುವ ಜೋಯಿಡಾ ತಾಲೂಕು ಗೆಡ್ಡೆ, ಗೆಣಸು ಮೇಳದಿಂದ ಹೊರ ಪ್ರಪಂಚದಲ್ಲಿ ಗುರುತಿಸಿಕೊಂಡಿದೆ. ದಟ್ಟ ಅಡವಿಯಲ್ಲಿ ಬೆಳೆಯುವ ಗೆಡ್ಡೆ-ಗೆಣಸನ್ನು ಕುಣಬಿ ಬುಡಕಟ್ಟಿನ ಸಮುದಾಯ ಅಡುಗೆ ಮನೆಗೆ ಪರಿಚಯಿಸಿದೆ. ಗೆಡ್ಡೆ-ಗೆಣಸು ಮೇಳದ ಹಿಂದಿನ ಶಕ್ತಿ ಸಹ ಕುಣಬಿ ಜನಾಂಗವೇ ಆಗಿದೆ. ಕೆಸುವಿನ ಗೆಡ್ಡೆ, ಸುವರ್ಣಗೆಡ್ಡೆ, ಕೆಂಪು ಗೆಣಸು, ಅರಿಶಿಣ, ಶುಂಠಿ, ಮಾವಿನ ಶುಂಠಿ, ಆನೆ ಪಾದದಂತೆ ಇರುವ ಬೃಹತ್ ಗಾತ್ರದ ಚರಣ ಮತ್ತಿತರ ಗೆಡ್ಡೆಗಳು ಮೇಳದಲ್ಲಿತ್ತು.

ಡೇರಿಯಾ, ಡಿಗ್ಗಿ, ಬಜಾರಕುಣಂಗ, ನಿಗುಂಡಿ, ತೇರಾಳಿ, ನುಜ್ಜಿ, ಕುಂಡಲ, ಬಾಡಪೋಲಿ, ದುಮಾಳ, ಕರಂಜೋಯಿಡಾ, ಅಣಶಿ, ಕುಂಬಾರವಾಡ, ಕುವೇಶಿ ಮುಂತಾದ ಹಳ್ಳಿಗಳ ಪ್ರತಿಯೊಂದು ಕುಣಬಿ ಮನೆ ಹಿತ್ತಲಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಕಣಬಿಗಳ ಆಡು ಭಾಷೆಯಲ್ಲಿ ಗೆಣಸಿಗೆ ಕೋನ್ ಎಂದರೆ ಕೆಸುವಿನ ಗೆಡ್ಡೆಗೆ ಮುಡ್ಲಿ ಎನ್ನುತ್ತಾರೆ.

ದಾವಾ ಮುಡ್ಲಿ, ಚೇಡ್ವಾಲಿ ಮುಡ್ಲಿ, ರಕ್ಯಾಮುಡ್ಲಿ, ಕುಣಬಿಮುಡ್ಲಿ, ಕಾಳಿ ಮುಡ್ಲಿ, ಪುಲಾ ಮುಡ್ಲಿ, ಗಿಡ್ಡಿ ಮುಡ್ಲಿ, ಲಾಂಬಟ ಮುಡ್ಲಿ, ಹುಂಡು, ಕಾಳೊ ತೆರೊ, ದುರತಾಳಿ, ಆಳೆಕೋನ್, ಧಯೆಕೋನ್, ತಾಂಬ್ಡೆ ಕೋನ್, ದುಕರ್ ಕೋನ್, ನಾಗರ್ ಕೋನ್, ಮಾಂಡೆ ಕೋನ್, ಆಳೆ ಕೋನ್, ಚೇನಿ ಕೋನ್, ಕಾಟೆ ಕಣಗಾ, ಝಾಡ ಕಣಗಾ, ತಾರೋಟಿ ಕಣಗಾ ಮುಂತಾದ ಹೆಸರಿನ ಗೆಡ್ಡೆ-ಗೆಣಸು ಜೋಯಿಡಾ ಪ್ರದೇಶದಲ್ಲಿ ವಿಪುಲವಾಗಿ ಬೆಳೆಯಲಾಗುತ್ತದೆ. ಜೋಯಿಡಾ ಮತ್ತು ಹತ್ತಿರದ ರಾಮನಗರ ಈ ಗೆಡ್ಡೆ-ಗೆಣಸುಗಳ ಪ್ರಮುಖ ಮಾರುಕಟ್ಟೆ.


ಇದನ್ನೂ ಓದಿ: ಮೂರ್ತಿ ಭಂಜನೆ ಎಂಬ ರಾಜಕೀಯ ಇತಿಹಾಸದ ಪಳೆಯುಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...