Homeಮುಖಪುಟರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಕೊರೊನಾ ಸಾಂಕ್ರಾಮಿಕ ಹರಡುವುದಕ್ಕಿಂತ ಮೊದಲು ದಕ್ಷಿಣ ದೆಹಲಿಯ ಶಾಹೀನ್ ಬಾಗ್ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಆಂದೋಲನದ ಕೇಂದ್ರವಾಗಿತ್ತು.

- Advertisement -
- Advertisement -

ದೆಹಲಿಯ ಬಿಜೆಪಿ ಸಂಸದ ಮತ್ತು ಪಕ್ಷದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಮನೋಜ್ ತಿವಾರಿ, “ರಾಷ್ಟ್ರ ರಾಜಧಾನಿಯ ಗಡಿಯಲ್ಲಿನ ರೈತರ ಪ್ರತಿಭಟನೆಯನ್ನು ’ತುಕ್ಡೆ-ತುಕ್ಡೆ ಗ್ಯಾಂಗ್‌‌’ ’ಶಾಹೀನ್ ಬಾಗ್’ ಆಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ಹರಡುವುದಕ್ಕಿಂತ ಮೊದಲು ದಕ್ಷಿಣ ದೆಹಲಿಯ ಶಾಹೀನ್ ಬಾಗ್ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಆಂದೋಲನದ ಕೇಂದ್ರವಾಗಿತ್ತು. “ಖಾಲಿಸ್ತಾನ್ ಪರವಾಗಿರುವ ಘೋಷಣೆ ಸೇರಿದಂತೆ, ಕೆಲವು ಪ್ರತಿಭಟನಾಕಾರರು ಪ್ರಧಾನ ಮಂತ್ರಿಗೆ ಬೆದರಿಕೆ ಹಾಕಿದ್ದು, ಇದು ದೇಶದಲ್ಲಿ ಅಶಾಂತಿ ಸೃಷ್ಟಿಸಲು ಮಾಡಿರುವ ಯೋಜಿತ ಪಿತೂರಿ ಎಂದು ತೋರಿಸುತ್ತಿದೆ” ಎಂದು ಮನೋಜ್ ತಿವಾರಿ ಹೇಳಿದ್ದಾರೆ.

ಇದನ್ನೂ ಓದಿ: ಕಡುಖೋಟಾ ಅನ್ನೋ ಡೀಫ್ ಫೇಕು : ದೆಹಲಿಯಲ್ಲಿ ಬಿಜೆಪಿಯ ಮನೋಜ್‌ ತಿವಾರಿ ಮಾಡಿದ ಮೋಡಿ ಗೊತ್ತೆ?

“ಶಾಹೀನ್ ಬಾಗ್‌ನಲ್ಲಿ ಎನ್‌ಆರ್‌ಸಿ ಮತ್ತು ಸಿಎಎಯನ್ನು ವಿರೋಧಿಸಿದ ವ್ಯಕ್ತಿಗಳ ಮತ್ತು ಗುಂಪುಗಳ ತುಕ್ಡೆ-ತುಕ್ಡೆ ಗ್ಯಾಂಗ್, ರೈತರ ಪ್ರತಿಭಟನೆಯನ್ನು ’ಶಾಹೀನ್ ಬಾಗ್ 2.0’ ಆಗಿ ಮಾಡಲು ಮತ್ತು ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುವ ನಿಜವಾದ ರೈತರು ವಾಸ್ತವವನ್ನು ಅರ್ಥಮಾಡಿಕೊಳ್ಳುತ್ತಾರೆ ಮತ್ತು ತುಕ್ಡೆ-ತುಕ್ಡೆ ಗ್ಯಾಂಗ್‌‌ನ ಉದ್ದೇಶಗಳನ್ನು ತಡೆಯುತ್ತಾರೆ ಎಂದು ತಾನು ಭಾವಿಸಿದ್ದೇನೆ ಎಂದು ಮನೋಜ್ ತಿವಾರಿ ಹೇಳಿದ್ದಾರೆ.ಮನೋಜ್ ತಿವಾರಿ ಪ್ರತಿನಿಧಿಸುವ ಈಶಾನ್ಯ ದೆಹಲಿ ಸಂಸದೀಯ ಕ್ಷೇತ್ರದಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದು 50 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದುಕೊಂಡಿದ್ದವು.

ಹೊಸ ಕೃಷಿ ಕಾನೂನುಗಳನ್ನು ಕೇಂದ್ರ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ದೇಶದಾದ್ಯಂತ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆದರೂ ವಿಫಲವಾಗಿದೆ. ಇಂದು ಮತ್ತೇ ಸರ್ಕಾರದೊಂದಿಗೆ ರೈತರ ಸಭೆ ನಡೆಯಲಿದೆ. ರೈತರು ಹೊಸ ಕಾಯ್ದೆಗಳನ್ನು ವಾಪಾಸು ಪಡೆಯದೆ ತಾವು ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲರನ್ನು “ಭಯೋತ್ಪಾದಕ” ಎಂದು ಯಾರೂ ಕರೆಯುತ್ತಿಲ್ಲ : ಉಲ್ಟಾ ಹೊಡೆದ ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...