Homeಕರ್ನಾಟಕತುಮಕೂರು: ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಆಪ್ತ ಸುರೇಶ್‌ಗೌಡ ರಾಜೀನಾಮೆ

ತುಮಕೂರು: ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಆಪ್ತ ಸುರೇಶ್‌ಗೌಡ ರಾಜೀನಾಮೆ

- Advertisement -
- Advertisement -

ಕಳೆದ ಒಂದೂವರೆ ವರ್ಷದಿಂದ ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಶಾಸಕ ಸುರೇಶ್‌ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುರೇಶ್‌ಗೌಡ ಅವರನ್ನು ಸ್ಥಾನದಿಂದ ಇಳಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತರು, ಬೆಂಬಲಿಗರನ್ನು ನಿಯಂತ್ರಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ ಎನ್ನಲಾಗಿದೆ.

ರಾಜೀನಾಮೆ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಶಾಸಕ ಸುರೇಶ್‌ಗೌಡ, ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ. ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ ಹೀಗಾಗಿ ಅವರೊಂದಿಗೆ ಇರಲು ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

“ಪಕ್ಷದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನು ಇಂದು ರಾಜೀನಾಮೆ ನೀಡಿದ್ದು, ಜಿಲ್ಲೆಯ ಜನರು ತೋರಿಸಿದ ಪ್ರೀತಿ, ಬೆಂಬಲಕ್ಕೆ ಅಭಾರಿಯಾಗಿದ್ದೇನೆ. ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭಾ ಚುನಾವಣೆ ಜತೆಗೆ, ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ಒಂದಾಗಿತ್ತು. ಇದಕ್ಕೆಲ್ಲ ನನ್ನ ಗ್ರಾಮಾಂತರ ಕ್ಷೇತ್ರದ ಜನರ ಆರ್ಶೀವಾದ, ಕೊಟ್ಟ ಸಹಕಾರ, ಧೈರ್ಯವೇ ಕಾರಣ, ಈ ಸಂದರ್ಭದಲ್ಲಿ ನನ್ನ ಈ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

“ನಾನು ಎರಡು ಸಲ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕನಾಗಿ, ಎರಡು ಸಲ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷನಾಗಿ. ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಯಶಸ್ವಿಯಾಗಲು, ನನ್ನ ಕ್ಷೇತ್ರದ ಜನರು ತೋರಿದ ಪ್ರೀತಿ, ಸಹಕಾರ, ಬೆಂಬಲ ಕಾರಣವಾಗಿತ್ತೇ ಹೊರತು ಬೇರೇನು ಅಲ್ಲ. ಜಿಲ್ಲಾ ಘಟಕದ ಅಧ್ಯಕ್ಷನಾದ ಮೇಲೆ ಪಕ್ಷದ ಕೆಲಸಗಳ ಕಾರಣ ನನ್ನ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ ಎಂಬ ಕೊರಗು ಸದಾ ನನ್ನನ್ನು ಕಾಡುತ್ತಿತ್ತು, ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ. ಕೋವಿಡ್ ನಿಂದ ಆರ್ಥಿಕ ಹಿಂಜರಿತ, ನೀರಾವರಿ ಸಮಸ್ಯೆಯಿಂದ ಜನರು ಅನುಭವಿಸುತ್ತಿರುವ ಬವಣೆ, ಶಿಕ್ಷಣದ ಗುಣಮಟ್ಟದ ಕುಸಿತದಿಂದ ಕ್ಷೇತ್ರದ ಮಕ್ಕಳು ಅನುಭವಿಸುತ್ತಿರುವ ಯಾತನೆಯ ಹಿನ್ನೆಲೆಯಲ್ಲಿ ಅವರೊಂದಿಗೆ ಸದಾ ಸಮಯ ಇರಬೇಕೆಂದು ಮನಸ್ಸು ಹೇಳುತ್ತಿತ್ತು. ನನ್ನ ಕ್ಷೇತ್ರದ ಜನರೇ ನನಗೆ ಎಲ್ಲವೂ ಆಗಿರುವುದರಿಂದ ಅವರೊಂದಿಗೆ ಇರಲು ರಾಜೀನಾಮೆ ನಿರ್ಧಾರ ಮಾಡಿದೆ” ಎಂದು ತಮ್ಮ ರಾಜೀನಾಮೆಗೆ ಕಾರಣ ನೀಡಿದ್ದಾರೆ.

“ಜಿಲ್ಲಾ ಘಟಕದ ಅಧ್ಯಕ್ಷನಾಗಿದ್ದಾಗ ಜಿಲ್ಲೆಯ ಮೂಲೆಮೂಲೆಗಳಿಂದ ಎಲ್ಲಾ ಜಾತಿಗಳ, ಧರ್ಮಗಳ ಜನರು ನನಗೆ ತೋರಿಸಿದ ಪ್ರೀತಿ, ಕೊಟ್ಟ ಸಹಕಾರಕ್ಕೆ ಧನ್ಯವಾದವನ್ನು ಈ ಮೂಲಕ ಅರ್ಪಿಸುತ್ತಿದ್ದೇನೆ. ಇದೇ ರೀತಿಯ ಪ್ರೀತಿ, ಹಾರೈಕೆ, ಬೆಂಬಲ ಇನ್ನೂ ಮುಂದೆಯೂ ನೀಡುವಂತೆ ಈ ಮೂಲಕ ಕೇಳಿಕೊಳ್ಳುತ್ತೇನೆ” ಎಂದು ಸುರೇಶ್‌ಗೌಡ ಮನವಿ ಮಾಡಿದ್ದಾರೆ.

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ಗೌಡ ರಾಜೀನಾಮೆ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಯಡಿಯೂರಪ್ಪ ಆಪ್ತರನ್ನು ನಿಯಂತ್ರಿಸಲು ಅವರ ಆಪ್ತರನ್ನು ಕೆಳಗಿಳಿಸಲಾಗುತ್ತಿದೆ ಎನ್ನುವ ಜೊತೆಗೆ ಸುರೇಶ್‌ಗೌಡ ಅವರು ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂಬ ಮಾತು ಕೇಳಿಬಂದಿದೆ.


ಇದನ್ನೂ ಓದಿ: ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...