Homeಕರ್ನಾಟಕತುಂಬಾಡಿ ರಾಮಯ್ಯ, ರಾಜೇಂದ್ರ ಚೆನ್ನಿ, ಎಚ್.ಎಲ್. ಪುಷ್ಪ, ರಹಮತ್ ತರೀಕೆರೆ, ಪ್ರಕಾಶ್ ರಾಜ್ ಸೇರಿದಂತೆ 70...

ತುಂಬಾಡಿ ರಾಮಯ್ಯ, ರಾಜೇಂದ್ರ ಚೆನ್ನಿ, ಎಚ್.ಎಲ್. ಪುಷ್ಪ, ರಹಮತ್ ತರೀಕೆರೆ, ಪ್ರಕಾಶ್ ರಾಜ್ ಸೇರಿದಂತೆ 70 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

- Advertisement -
- Advertisement -

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವಂತ ಗಣ್ಯರಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. 70ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ 70 ಮಂದಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಈ ಪೈಕಿ‌ ಕೆಲವರು ಸ್ವಯಂ ಮನವಿ ನೀಡಿದ್ರು, ಅಂತಹವರು ಪ್ರಶಸ್ತಿಗೆ ಅರ್ಹರಿದ್ದ ಕಾರಣ‌‌ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದಿದೆ.

ಪ್ರಶಸ್ತಿ ನೀಡಿಕೆಯಲ್ಲಿ ಜಿಲ್ಲಾವಾರು, ಸಾಮಾಜಿಕ ಪರಿಪಾಲನೆಯಡಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಆಯ್ಕೆ ಸಲಹಾ ಸಮಿತಿ ಸದಸ್ಯರು ಶಿಫಾರಸ್ಸು ಮಾಡಿದ್ದವರನ್ನು ಬಹುತೇಕ‌‌ ಆಯ್ಕೆ ಮಾಡಲಾಗಿದ್ದು,‌ ನಾಲ್ಕೈದು‌ ಬಾರಿ‌ ಸಭೆ ನಡೆಸಿದ ಸದಸ್ಯರು ಅರ್ಹರನ್ನು ‌ಆಯ್ಕೆ ಮಾಡಲು ಸಹಕರಿಸಿದ್ದಕ್ಕೆ‌ ಧನ್ಯವಾದಗಳನ್ನು ಸಚಿವ ಶಿವರಾಜ ತಂಡರಗಿ ತಿಳಿಸಿದ್ದಾರೆ.

ಪ್ರಶಸ್ತಿ ನೀಡಿಕೆ‌ ಇತಿಹಾಸದಲ್ಲೇ ಮೊದಲ ಬಾರಿಗೆ ಸಮಗಾರ ಹರಳಯ್ಯ ಸಮುದಾಯಕ್ಕೆ ಸೇರಿದ ಇಬ್ಬರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೊದಲೇ ನಿರ್ಧರಿಸಿದಂತೆ‌ ಈ ಬಾರಿ‌ ಯಾವುದೇ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ನೀಡಿಲ್ಲ. 12 ಮಂದಿ‌ ಮಹಿಳೆಯರಿಗೆ ಈ ಬಾರಿ ಪ್ರಶಸ್ತಿ ಆಯ್ಕೆ‌‌ ಮಾಡಲಾಗಿದೆ ಎಂದಿದ್ದಾರೆ.

ಹೀಗಿದೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಸಾಹಿತ್ಯ

ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ
ತುಂಬಾಡಿ ರಾಮಯ್ಯ, ತುಮಕೂರು
ಪ್ರೊ ಅರ್ ಸುನಂದಮ್ಮ, ಚಿಕ್ಕಬಳ್ಳಾಪುರ
ಡಾ.ಎಚ್.ಎಲ್ ಪುಷ್ಪ, ತುಮಕೂರು
ರಹಮತ್ ತರೀಕೆರೆ, ಚಿಕ್ಕಮಗಳೂರು
ಹ.ಮ. ಪೂಜಾರ, ವಿಜಯಪುರ

ಜಾನಪದ

ಬಸಪ್ಪ ಭರಮಪ್ಪ ಚೌಡ್ಕಿ, ಕೊಪ್ಪಳ
ಬಿ. ಟಾಕಪ್ಪ ಕಣ್ಣೂರು, ಶಿವಮೊಗ್ಗ
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ, ಬೆಳಗಾವಿ
ಹನುಮಂತಪ್ಪ, ಮಾರಪ್ಪ, ಚೀಳಂಗಿ, ಚಿತ್ರದುರ್ಗ
ಎಂ. ತೋಪಣ್ಣ, ಕೋಲಾರ
ಸೋಮಣ್ಣ ದುಂಡಪ್ಪ ಧನಗೊಂಡ, ವಿಜಯಪುರ
ಸಿಂಧು ಗುಜರನ್, ದಕ್ಷಿಣ ಕನ್ನಡ
ಎಲ್. ಮಹದೇವಪ್ಪ ಉಡಿಗಾಲ, ಮೈಸೂರು

ಸಂಗೀತ

ದೇವೆಂದ್ರಕುಮಾರ ಪತ್ತಾರ್, ಕೊಪ್ಪಳ
ಮಡಿವಾಳಯ್ಯ ಸಾಲಿ, ಬೀದರ್

ನೃತ್ಯ

ಪ್ರೊ. ಕೆ. ರಾಮಮೂರ್ತಿ ರಾವ್, ಮೈಸೂರು

ಚಲನಚಿತ್ರ /ಕಿರುತೆರೆ

ಪ್ರಕಾಶ್ ರಾಜ್, ದಕ್ಷಿಣ ಕನ್ನಡ
ವಿಜಯಲಕ್ಷ್ಮೀ ಸಿಂಗ್, ಕೊಡಗು

ಆಡಳಿತ

ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ), ಬೆಂಗಳೂರು ದಕ್ಷಿಣ (ರಾಮನಗರ)

ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ), ಬೆಂಗಳೂರು ದಕ್ಷಿಣ (ರಾಮನಗರ)

ವೈದ್ಯಕೀಯ

ಡಾ. ಆಲಮ್ಮ ಮಾರಣ್ಣ, ತುಮಕೂರು
ಡಾ. ಜಯರಂಗನಾಥ್, ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ

ಸೂಲಗಿತ್ತಿ ಈರಮ್ಮ, ವಿಜಯನಗರ
ಫಕ್ಕೀರಿ, ಬೆಂಗಳೂರು ಗ್ರಾಮಾಂತರ
ಕೋರಿನ್ ಆಂಟೊನಿಯಟ್ ರಸ್ಕೀನಾ, ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ, ಉಡುಪಿ
ಕೋಣಂದೂರು ಲಿಂಗಪ್ಪ, ಶಿವಮೊಗ್ಗ

ಉಮೇಶ ಪಂಬದ, ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್, ಧಾರವಾಡ
ಕೆ.ದಿನೇಶ್, ಬೆಂಗಳೂರು
ಶಾಂತರಾಜು, ತುಮಕೂರು
ಜಾಫರ್ ಮೊಹಿಯುದ್ದೀನ್, ರಾಯಚೂರು
ಪೆನ್ನ ಓಬಳಯ್ಯ, ಬೆಂಗಳೂರು ಗ್ರಾಮಾಂತರ
ಶಾಂತಿ ಬಾಯಿ, ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ), ಬೆಳಗಾವಿ

ಹೊರನಾಡು/ ಹೊರದೇಶ

ಜಕರಿಯ ಬಜಪೆ (ಸೌದಿ), ಹೊರನಾಡು/ ಹೊರದೇಶ
ಪಿ ವಿ ಶೆಟ್ಟಿ (ಮುಂಬೈ), ಹೊರನಾಡು/ ಹೊರದೇಶ

ಪರಿಸರ

ರಾಮೇಗೌಡ, ಚಾಮರಾಜನಗರ
ಮಲ್ಲಿಕಾರ್ಜುನ ನಿಂಗಪ್ಪ, ಯಾದಗಿರಿ

ಕೃಷಿ

ಡಾ.ಎಸ್.ವಿ.ಹಿತ್ತಲಮನಿ, ಹಾವೇರಿ
ಎಂ ಸಿ ರಂಗಸ್ವಾಮಿ, ಹಾಸನ

ಮಾಧ್ಯಮ

ಕೆ.ಸುಬ್ರಮಣ್ಯ, ಬೆಂಗಳೂರು
ಅಂಶಿ ಪ್ರಸನ್ನಕುಮಾರ್, ಮೈಸೂರು
ಬಿ.ಎಂ ಹನೀಫ್, ದಕ್ಷಿಣ ಕನ್ನಡ
ಎಂ ಸಿದ್ಧರಾಜು, ಮಂಡ್ಯ

ವಿಜ್ಞಾನ ಮತ್ತು ತಂತ್ರಜ್ಞಾನ

ರಾಮಯ್ಯ, ಚಿಕ್ಕಬಳ್ಳಾಪುರ
ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್, ದಾವಣಗೆರೆ
ಡಾ. ಆರ್. ವಿ ನಾಡಗೌಡ, ಗದಗ

ರಾಜ್ಯೋತ್ಸವ ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ಐದು ಲಕ್ಷ ನಗದನ್ನು ಒಳಗೊಂಡಿದೆ. ನವೆಂಬರ್.1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಬೆಳಗ್ಗೆ 8.30ಗಂಟೆಗೆ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...