Homeಕರ್ನಾಟಕತುಮಕೂರು: ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ವೃತ್ತದಲ್ಲಿ ಹಾರಾಡಿದ ಭಗವಧ್ವಜ!

ತುಮಕೂರು: ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ವೃತ್ತದಲ್ಲಿ ಹಾರಾಡಿದ ಭಗವಧ್ವಜ!

- Advertisement -
- Advertisement -

ಇಂದು ದೇಶದೆಲ್ಲೆಡೆ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಸಂವಿಧಾನ ಜಾರಿಗೆ ಬಂದ ನೆನಪಿಗಾಗಿ ಅಂಬೇಡ್ಕರ್, ಗಾಂಧಿ ಫೋಟೊ ಇಟ್ಟು ಸ್ಮರಿಸಲಾಗಿದೆ. ತ್ರಿವರ್ಣ ಧ್ವಜ ಹಾರಿಸಿ ಭಾರತದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲಾಗಿದೆ. ಆದರೆ ತುಮಕೂರಿನ ಐತಿಹಾಸಿಕ ಹಿನ್ನಲೆಯ ಸ್ವಾತಂತ್ರ್ಯ ಚೌಕದಲ್ಲಿ ಮಾತ್ರ ಇಂದೂ ಕೂಡ ಭಗವಧ್ವಜ ಹಾರಿಸಲಾಗಿದೆ. ಸುತ್ತಲೂ ಕೇಸರಿ ಬಂಟಿಗ್ಸ್‌ಗಳನ್ನು ಕಟ್ಟಲಾಗಿದೆ. ಈ ಸ್ಥಿತಿಗೆ ಹಲವು ಪ್ರಜ್ಞಾವಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮೈಸೂರು ಚಲೋ ಚಳವಳಿ ಉತ್ತುಂಗದಲ್ಲಿತ್ತು. ಜವಾಬ್ದಾರಿ ಸರ್ಕಾರದ ರಚನೆಗೆ ಆಗ್ರಹಿಸಿ ಮೈಸೂರು ಅರಸರ ವಿರುದ್ಧ ಹೋರಾಟ ನಡೆಯುತ್ತಿತ್ತು. ಎಲ್ಲೆಡೆ ತ್ರಿವರ್ಣ ಧ್ವಜ ಹಾರಿಸಲು ನಿಷೇಧ ಹೇರಲಾಗಿತ್ತು. ಅಂತಹ ಸಂದರ್ಭದಲ್ಲಿ 147ರ ಸೆಪ್ಟಂಬರ್ 14ರಂದು ತುಮಕೂರಿನಲ್ಲಿ ಬೃಹತ್ ಚಳವಳಿ ನಡೆದಿತ್ತು. ಪೊಲೀಸರು ಹೋರಾಟ ಹತ್ತಿಕ್ಕಲು ಲಾಠೀಚಾರ್ಜ್ ಮಾಡಿದರು. ಆನಂತರ ಗೋಲಿಬಾರ್ ಮಾಡಿದರು. ಆಗ ಖ್ಯಾತ ಸಾಹಿತಿ ಗೋರುರು ರಾಮಸ್ವಾಮಿ ಅಯ್ಯಂಗಾರ್‌ರವರ ಪುತ್ರ ರಾಮಚಂದ್ರ ಸೇರಿದಂತೆ ನಂಜುಂಡಪ್ಪ, ಗಂಗಪ್ಪ ಎಂಬ ಸತ್ಯಾಗ್ರಹಿಗಳು ಹುತಾತ್ಮರಾದರು. ಅವರ ನೆನಪಿನಲ್ಲಿ ಅಲ್ಲಿ ಸ್ಮಾರಕವೊಂದನ್ನು ನಿರ್ಮಿಸಿ ಅವರ ಹೆಸರುಗಳನ್ನು ಕೆತ್ತಲಾಗಿದೆ. ಆ ಚೌಕಕ್ಕೆ ಸ್ವಾತಂತ್ರ್ಯ ವೃತ್ತ ಎಂದು ಹೆಸರಿಡಲಾಗಿದೆ. ಇಂದಿನ ಗಣರಾಜ್ಯೋತ್ಸವದ ಸಂದರ್ಭದಲ್ಲಿಯೂ ಜಿಲ್ಲಾಡಳಿತ ಆ ವೃತ್ತದ ಬಗ್ಗೆ ಕಾಳಜಿ ವಹಿಸದಿರುವುದು ದುರಂತವಾಗಿದೆ.

ತುಮಕೂರು ನಗರದ ಈ ವೃತ್ತದ ಹೆಸರು ಸ್ವತಂತ್ರ ಚೌಕ, ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ಗುಂಡಿಗೆ ಗುಂಡಿಗೆಯೊಡ್ಡಿ ಹುತಾತ್ಮರಾದ ಸ್ಥಳ, ಅವರ ಸ್ಮಾರಕವೂ ಈ ವೃತ್ತದಲ್ಲಿದೆ, ಗಣರಾಜ್ಯೋತ್ಸವದ ದಿನವಾದರೂ ಈ ವೃತ್ತದಲ್ಲಿ ಭಾರತದ ಅಧಿಕೃತ ತ್ರಿವರ್ಣ ಧ್ವಜ ಹಾರಬೇಕಿತ್ತು, ಈ ಚೆಡ್ಡಿಗಳ ಉದ್ಧಟತನ ನೋಡಿ, ಅತ್ಯಂತ ಎತ್ತರದಲ್ಲಿ ಕೇಸರಿ ಪತಾಕೆಯನ್ನು ಹಾರಿಬಿಟ್ಟಿದ್ದಾರೆ. ತುಮಕೂರಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲ ಎಂಬುದಕ್ಕೆ ಈ ವೃತ್ತವೇ ಸಾಕ್ಷಿ ಎಂದು ಕುಚ್ಚಂಗಿ ಪ್ರಸನ್ನರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ನೆನಪಿಸುವ ಸ್ಥಳಗಳಲ್ಲಿ ಒಂದಾದ ಸ್ವಾತಂತ್ರ್ಯ ಚೌಕವು ಕಸ ಕಡ್ಡಿಗಳಿಂದ ತುಂಬಿಕೊಂದಿಡೆ. ಸರ್ಕಾರಿ ಜಾಹೀರಾತು ಸೇರಿದಂತೆ ಹಲವು ಜಾಹೀರಾತುಗಳನ್ನು ಹಾಕುವ ಸ್ಥಳವಾಗಿ ಬದಲಾಗಿದೆ. ಅದರ ಹೆಸರನ್ನು ಚರ್ಚ್ ಸರ್ಕಲ್ ಎಂದು ಕರೆಯುವ ಪರಿಪಾಠ ಆರಂಭವಾಗಿದೆ. ಅದರ ಮುಂದುವರಿದ ಭಾಗವಾಗಿ ಅಲ್ಲಿ ಇಂದು ಕೇಸರಿ ಬಾವುಟ ಬಂಟಿಂಗ್‌ಗಳು ರಾರಾಜಿಸಿವೆ. ಈಗಲಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಅ ಸ್ಥಳದ ಗೌರವವನ್ನು ಕಾಪಾಡಬೇಕಿದೆ.

ಇದನ್ನೂ ಓದಿ; ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...