Homeಕರ್ನಾಟಕತುಮಕೂರು: ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ವೃತ್ತದಲ್ಲಿ ಹಾರಾಡಿದ ಭಗವಧ್ವಜ!

ತುಮಕೂರು: ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ವೃತ್ತದಲ್ಲಿ ಹಾರಾಡಿದ ಭಗವಧ್ವಜ!

- Advertisement -
- Advertisement -

ಇಂದು ದೇಶದೆಲ್ಲೆಡೆ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಸಂವಿಧಾನ ಜಾರಿಗೆ ಬಂದ ನೆನಪಿಗಾಗಿ ಅಂಬೇಡ್ಕರ್, ಗಾಂಧಿ ಫೋಟೊ ಇಟ್ಟು ಸ್ಮರಿಸಲಾಗಿದೆ. ತ್ರಿವರ್ಣ ಧ್ವಜ ಹಾರಿಸಿ ಭಾರತದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲಾಗಿದೆ. ಆದರೆ ತುಮಕೂರಿನ ಐತಿಹಾಸಿಕ ಹಿನ್ನಲೆಯ ಸ್ವಾತಂತ್ರ್ಯ ಚೌಕದಲ್ಲಿ ಮಾತ್ರ ಇಂದೂ ಕೂಡ ಭಗವಧ್ವಜ ಹಾರಿಸಲಾಗಿದೆ. ಸುತ್ತಲೂ ಕೇಸರಿ ಬಂಟಿಗ್ಸ್‌ಗಳನ್ನು ಕಟ್ಟಲಾಗಿದೆ. ಈ ಸ್ಥಿತಿಗೆ ಹಲವು ಪ್ರಜ್ಞಾವಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮೈಸೂರು ಚಲೋ ಚಳವಳಿ ಉತ್ತುಂಗದಲ್ಲಿತ್ತು. ಜವಾಬ್ದಾರಿ ಸರ್ಕಾರದ ರಚನೆಗೆ ಆಗ್ರಹಿಸಿ ಮೈಸೂರು ಅರಸರ ವಿರುದ್ಧ ಹೋರಾಟ ನಡೆಯುತ್ತಿತ್ತು. ಎಲ್ಲೆಡೆ ತ್ರಿವರ್ಣ ಧ್ವಜ ಹಾರಿಸಲು ನಿಷೇಧ ಹೇರಲಾಗಿತ್ತು. ಅಂತಹ ಸಂದರ್ಭದಲ್ಲಿ 147ರ ಸೆಪ್ಟಂಬರ್ 14ರಂದು ತುಮಕೂರಿನಲ್ಲಿ ಬೃಹತ್ ಚಳವಳಿ ನಡೆದಿತ್ತು. ಪೊಲೀಸರು ಹೋರಾಟ ಹತ್ತಿಕ್ಕಲು ಲಾಠೀಚಾರ್ಜ್ ಮಾಡಿದರು. ಆನಂತರ ಗೋಲಿಬಾರ್ ಮಾಡಿದರು. ಆಗ ಖ್ಯಾತ ಸಾಹಿತಿ ಗೋರುರು ರಾಮಸ್ವಾಮಿ ಅಯ್ಯಂಗಾರ್‌ರವರ ಪುತ್ರ ರಾಮಚಂದ್ರ ಸೇರಿದಂತೆ ನಂಜುಂಡಪ್ಪ, ಗಂಗಪ್ಪ ಎಂಬ ಸತ್ಯಾಗ್ರಹಿಗಳು ಹುತಾತ್ಮರಾದರು. ಅವರ ನೆನಪಿನಲ್ಲಿ ಅಲ್ಲಿ ಸ್ಮಾರಕವೊಂದನ್ನು ನಿರ್ಮಿಸಿ ಅವರ ಹೆಸರುಗಳನ್ನು ಕೆತ್ತಲಾಗಿದೆ. ಆ ಚೌಕಕ್ಕೆ ಸ್ವಾತಂತ್ರ್ಯ ವೃತ್ತ ಎಂದು ಹೆಸರಿಡಲಾಗಿದೆ. ಇಂದಿನ ಗಣರಾಜ್ಯೋತ್ಸವದ ಸಂದರ್ಭದಲ್ಲಿಯೂ ಜಿಲ್ಲಾಡಳಿತ ಆ ವೃತ್ತದ ಬಗ್ಗೆ ಕಾಳಜಿ ವಹಿಸದಿರುವುದು ದುರಂತವಾಗಿದೆ.

ತುಮಕೂರು ನಗರದ ಈ ವೃತ್ತದ ಹೆಸರು ಸ್ವತಂತ್ರ ಚೌಕ, ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ಗುಂಡಿಗೆ ಗುಂಡಿಗೆಯೊಡ್ಡಿ ಹುತಾತ್ಮರಾದ ಸ್ಥಳ, ಅವರ ಸ್ಮಾರಕವೂ ಈ ವೃತ್ತದಲ್ಲಿದೆ, ಗಣರಾಜ್ಯೋತ್ಸವದ ದಿನವಾದರೂ ಈ ವೃತ್ತದಲ್ಲಿ ಭಾರತದ ಅಧಿಕೃತ ತ್ರಿವರ್ಣ ಧ್ವಜ ಹಾರಬೇಕಿತ್ತು, ಈ ಚೆಡ್ಡಿಗಳ ಉದ್ಧಟತನ ನೋಡಿ, ಅತ್ಯಂತ ಎತ್ತರದಲ್ಲಿ ಕೇಸರಿ ಪತಾಕೆಯನ್ನು ಹಾರಿಬಿಟ್ಟಿದ್ದಾರೆ. ತುಮಕೂರಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲ ಎಂಬುದಕ್ಕೆ ಈ ವೃತ್ತವೇ ಸಾಕ್ಷಿ ಎಂದು ಕುಚ್ಚಂಗಿ ಪ್ರಸನ್ನರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ನೆನಪಿಸುವ ಸ್ಥಳಗಳಲ್ಲಿ ಒಂದಾದ ಸ್ವಾತಂತ್ರ್ಯ ಚೌಕವು ಕಸ ಕಡ್ಡಿಗಳಿಂದ ತುಂಬಿಕೊಂದಿಡೆ. ಸರ್ಕಾರಿ ಜಾಹೀರಾತು ಸೇರಿದಂತೆ ಹಲವು ಜಾಹೀರಾತುಗಳನ್ನು ಹಾಕುವ ಸ್ಥಳವಾಗಿ ಬದಲಾಗಿದೆ. ಅದರ ಹೆಸರನ್ನು ಚರ್ಚ್ ಸರ್ಕಲ್ ಎಂದು ಕರೆಯುವ ಪರಿಪಾಠ ಆರಂಭವಾಗಿದೆ. ಅದರ ಮುಂದುವರಿದ ಭಾಗವಾಗಿ ಅಲ್ಲಿ ಇಂದು ಕೇಸರಿ ಬಾವುಟ ಬಂಟಿಂಗ್‌ಗಳು ರಾರಾಜಿಸಿವೆ. ಈಗಲಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಅ ಸ್ಥಳದ ಗೌರವವನ್ನು ಕಾಪಾಡಬೇಕಿದೆ.

ಇದನ್ನೂ ಓದಿ; ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....