Homeಕರ್ನಾಟಕತುಮಕೂರು: ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ವೃತ್ತದಲ್ಲಿ ಹಾರಾಡಿದ ಭಗವಧ್ವಜ!

ತುಮಕೂರು: ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ವೃತ್ತದಲ್ಲಿ ಹಾರಾಡಿದ ಭಗವಧ್ವಜ!

- Advertisement -
- Advertisement -

ಇಂದು ದೇಶದೆಲ್ಲೆಡೆ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಸಂವಿಧಾನ ಜಾರಿಗೆ ಬಂದ ನೆನಪಿಗಾಗಿ ಅಂಬೇಡ್ಕರ್, ಗಾಂಧಿ ಫೋಟೊ ಇಟ್ಟು ಸ್ಮರಿಸಲಾಗಿದೆ. ತ್ರಿವರ್ಣ ಧ್ವಜ ಹಾರಿಸಿ ಭಾರತದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲಾಗಿದೆ. ಆದರೆ ತುಮಕೂರಿನ ಐತಿಹಾಸಿಕ ಹಿನ್ನಲೆಯ ಸ್ವಾತಂತ್ರ್ಯ ಚೌಕದಲ್ಲಿ ಮಾತ್ರ ಇಂದೂ ಕೂಡ ಭಗವಧ್ವಜ ಹಾರಿಸಲಾಗಿದೆ. ಸುತ್ತಲೂ ಕೇಸರಿ ಬಂಟಿಗ್ಸ್‌ಗಳನ್ನು ಕಟ್ಟಲಾಗಿದೆ. ಈ ಸ್ಥಿತಿಗೆ ಹಲವು ಪ್ರಜ್ಞಾವಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮೈಸೂರು ಚಲೋ ಚಳವಳಿ ಉತ್ತುಂಗದಲ್ಲಿತ್ತು. ಜವಾಬ್ದಾರಿ ಸರ್ಕಾರದ ರಚನೆಗೆ ಆಗ್ರಹಿಸಿ ಮೈಸೂರು ಅರಸರ ವಿರುದ್ಧ ಹೋರಾಟ ನಡೆಯುತ್ತಿತ್ತು. ಎಲ್ಲೆಡೆ ತ್ರಿವರ್ಣ ಧ್ವಜ ಹಾರಿಸಲು ನಿಷೇಧ ಹೇರಲಾಗಿತ್ತು. ಅಂತಹ ಸಂದರ್ಭದಲ್ಲಿ 147ರ ಸೆಪ್ಟಂಬರ್ 14ರಂದು ತುಮಕೂರಿನಲ್ಲಿ ಬೃಹತ್ ಚಳವಳಿ ನಡೆದಿತ್ತು. ಪೊಲೀಸರು ಹೋರಾಟ ಹತ್ತಿಕ್ಕಲು ಲಾಠೀಚಾರ್ಜ್ ಮಾಡಿದರು. ಆನಂತರ ಗೋಲಿಬಾರ್ ಮಾಡಿದರು. ಆಗ ಖ್ಯಾತ ಸಾಹಿತಿ ಗೋರುರು ರಾಮಸ್ವಾಮಿ ಅಯ್ಯಂಗಾರ್‌ರವರ ಪುತ್ರ ರಾಮಚಂದ್ರ ಸೇರಿದಂತೆ ನಂಜುಂಡಪ್ಪ, ಗಂಗಪ್ಪ ಎಂಬ ಸತ್ಯಾಗ್ರಹಿಗಳು ಹುತಾತ್ಮರಾದರು. ಅವರ ನೆನಪಿನಲ್ಲಿ ಅಲ್ಲಿ ಸ್ಮಾರಕವೊಂದನ್ನು ನಿರ್ಮಿಸಿ ಅವರ ಹೆಸರುಗಳನ್ನು ಕೆತ್ತಲಾಗಿದೆ. ಆ ಚೌಕಕ್ಕೆ ಸ್ವಾತಂತ್ರ್ಯ ವೃತ್ತ ಎಂದು ಹೆಸರಿಡಲಾಗಿದೆ. ಇಂದಿನ ಗಣರಾಜ್ಯೋತ್ಸವದ ಸಂದರ್ಭದಲ್ಲಿಯೂ ಜಿಲ್ಲಾಡಳಿತ ಆ ವೃತ್ತದ ಬಗ್ಗೆ ಕಾಳಜಿ ವಹಿಸದಿರುವುದು ದುರಂತವಾಗಿದೆ.

ತುಮಕೂರು ನಗರದ ಈ ವೃತ್ತದ ಹೆಸರು ಸ್ವತಂತ್ರ ಚೌಕ, ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ಗುಂಡಿಗೆ ಗುಂಡಿಗೆಯೊಡ್ಡಿ ಹುತಾತ್ಮರಾದ ಸ್ಥಳ, ಅವರ ಸ್ಮಾರಕವೂ ಈ ವೃತ್ತದಲ್ಲಿದೆ, ಗಣರಾಜ್ಯೋತ್ಸವದ ದಿನವಾದರೂ ಈ ವೃತ್ತದಲ್ಲಿ ಭಾರತದ ಅಧಿಕೃತ ತ್ರಿವರ್ಣ ಧ್ವಜ ಹಾರಬೇಕಿತ್ತು, ಈ ಚೆಡ್ಡಿಗಳ ಉದ್ಧಟತನ ನೋಡಿ, ಅತ್ಯಂತ ಎತ್ತರದಲ್ಲಿ ಕೇಸರಿ ಪತಾಕೆಯನ್ನು ಹಾರಿಬಿಟ್ಟಿದ್ದಾರೆ. ತುಮಕೂರಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲ ಎಂಬುದಕ್ಕೆ ಈ ವೃತ್ತವೇ ಸಾಕ್ಷಿ ಎಂದು ಕುಚ್ಚಂಗಿ ಪ್ರಸನ್ನರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ನೆನಪಿಸುವ ಸ್ಥಳಗಳಲ್ಲಿ ಒಂದಾದ ಸ್ವಾತಂತ್ರ್ಯ ಚೌಕವು ಕಸ ಕಡ್ಡಿಗಳಿಂದ ತುಂಬಿಕೊಂದಿಡೆ. ಸರ್ಕಾರಿ ಜಾಹೀರಾತು ಸೇರಿದಂತೆ ಹಲವು ಜಾಹೀರಾತುಗಳನ್ನು ಹಾಕುವ ಸ್ಥಳವಾಗಿ ಬದಲಾಗಿದೆ. ಅದರ ಹೆಸರನ್ನು ಚರ್ಚ್ ಸರ್ಕಲ್ ಎಂದು ಕರೆಯುವ ಪರಿಪಾಠ ಆರಂಭವಾಗಿದೆ. ಅದರ ಮುಂದುವರಿದ ಭಾಗವಾಗಿ ಅಲ್ಲಿ ಇಂದು ಕೇಸರಿ ಬಾವುಟ ಬಂಟಿಂಗ್‌ಗಳು ರಾರಾಜಿಸಿವೆ. ಈಗಲಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಅ ಸ್ಥಳದ ಗೌರವವನ್ನು ಕಾಪಾಡಬೇಕಿದೆ.

ಇದನ್ನೂ ಓದಿ; ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...