Homeಕರ್ನಾಟಕತುಮಕೂರು: ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ವೃತ್ತದಲ್ಲಿ ಹಾರಾಡಿದ ಭಗವಧ್ವಜ!

ತುಮಕೂರು: ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ವೃತ್ತದಲ್ಲಿ ಹಾರಾಡಿದ ಭಗವಧ್ವಜ!

- Advertisement -
- Advertisement -

ಇಂದು ದೇಶದೆಲ್ಲೆಡೆ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಸಂವಿಧಾನ ಜಾರಿಗೆ ಬಂದ ನೆನಪಿಗಾಗಿ ಅಂಬೇಡ್ಕರ್, ಗಾಂಧಿ ಫೋಟೊ ಇಟ್ಟು ಸ್ಮರಿಸಲಾಗಿದೆ. ತ್ರಿವರ್ಣ ಧ್ವಜ ಹಾರಿಸಿ ಭಾರತದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲಾಗಿದೆ. ಆದರೆ ತುಮಕೂರಿನ ಐತಿಹಾಸಿಕ ಹಿನ್ನಲೆಯ ಸ್ವಾತಂತ್ರ್ಯ ಚೌಕದಲ್ಲಿ ಮಾತ್ರ ಇಂದೂ ಕೂಡ ಭಗವಧ್ವಜ ಹಾರಿಸಲಾಗಿದೆ. ಸುತ್ತಲೂ ಕೇಸರಿ ಬಂಟಿಗ್ಸ್‌ಗಳನ್ನು ಕಟ್ಟಲಾಗಿದೆ. ಈ ಸ್ಥಿತಿಗೆ ಹಲವು ಪ್ರಜ್ಞಾವಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮೈಸೂರು ಚಲೋ ಚಳವಳಿ ಉತ್ತುಂಗದಲ್ಲಿತ್ತು. ಜವಾಬ್ದಾರಿ ಸರ್ಕಾರದ ರಚನೆಗೆ ಆಗ್ರಹಿಸಿ ಮೈಸೂರು ಅರಸರ ವಿರುದ್ಧ ಹೋರಾಟ ನಡೆಯುತ್ತಿತ್ತು. ಎಲ್ಲೆಡೆ ತ್ರಿವರ್ಣ ಧ್ವಜ ಹಾರಿಸಲು ನಿಷೇಧ ಹೇರಲಾಗಿತ್ತು. ಅಂತಹ ಸಂದರ್ಭದಲ್ಲಿ 147ರ ಸೆಪ್ಟಂಬರ್ 14ರಂದು ತುಮಕೂರಿನಲ್ಲಿ ಬೃಹತ್ ಚಳವಳಿ ನಡೆದಿತ್ತು. ಪೊಲೀಸರು ಹೋರಾಟ ಹತ್ತಿಕ್ಕಲು ಲಾಠೀಚಾರ್ಜ್ ಮಾಡಿದರು. ಆನಂತರ ಗೋಲಿಬಾರ್ ಮಾಡಿದರು. ಆಗ ಖ್ಯಾತ ಸಾಹಿತಿ ಗೋರುರು ರಾಮಸ್ವಾಮಿ ಅಯ್ಯಂಗಾರ್‌ರವರ ಪುತ್ರ ರಾಮಚಂದ್ರ ಸೇರಿದಂತೆ ನಂಜುಂಡಪ್ಪ, ಗಂಗಪ್ಪ ಎಂಬ ಸತ್ಯಾಗ್ರಹಿಗಳು ಹುತಾತ್ಮರಾದರು. ಅವರ ನೆನಪಿನಲ್ಲಿ ಅಲ್ಲಿ ಸ್ಮಾರಕವೊಂದನ್ನು ನಿರ್ಮಿಸಿ ಅವರ ಹೆಸರುಗಳನ್ನು ಕೆತ್ತಲಾಗಿದೆ. ಆ ಚೌಕಕ್ಕೆ ಸ್ವಾತಂತ್ರ್ಯ ವೃತ್ತ ಎಂದು ಹೆಸರಿಡಲಾಗಿದೆ. ಇಂದಿನ ಗಣರಾಜ್ಯೋತ್ಸವದ ಸಂದರ್ಭದಲ್ಲಿಯೂ ಜಿಲ್ಲಾಡಳಿತ ಆ ವೃತ್ತದ ಬಗ್ಗೆ ಕಾಳಜಿ ವಹಿಸದಿರುವುದು ದುರಂತವಾಗಿದೆ.

ತುಮಕೂರು ನಗರದ ಈ ವೃತ್ತದ ಹೆಸರು ಸ್ವತಂತ್ರ ಚೌಕ, ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ಗುಂಡಿಗೆ ಗುಂಡಿಗೆಯೊಡ್ಡಿ ಹುತಾತ್ಮರಾದ ಸ್ಥಳ, ಅವರ ಸ್ಮಾರಕವೂ ಈ ವೃತ್ತದಲ್ಲಿದೆ, ಗಣರಾಜ್ಯೋತ್ಸವದ ದಿನವಾದರೂ ಈ ವೃತ್ತದಲ್ಲಿ ಭಾರತದ ಅಧಿಕೃತ ತ್ರಿವರ್ಣ ಧ್ವಜ ಹಾರಬೇಕಿತ್ತು, ಈ ಚೆಡ್ಡಿಗಳ ಉದ್ಧಟತನ ನೋಡಿ, ಅತ್ಯಂತ ಎತ್ತರದಲ್ಲಿ ಕೇಸರಿ ಪತಾಕೆಯನ್ನು ಹಾರಿಬಿಟ್ಟಿದ್ದಾರೆ. ತುಮಕೂರಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲ ಎಂಬುದಕ್ಕೆ ಈ ವೃತ್ತವೇ ಸಾಕ್ಷಿ ಎಂದು ಕುಚ್ಚಂಗಿ ಪ್ರಸನ್ನರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ನೆನಪಿಸುವ ಸ್ಥಳಗಳಲ್ಲಿ ಒಂದಾದ ಸ್ವಾತಂತ್ರ್ಯ ಚೌಕವು ಕಸ ಕಡ್ಡಿಗಳಿಂದ ತುಂಬಿಕೊಂದಿಡೆ. ಸರ್ಕಾರಿ ಜಾಹೀರಾತು ಸೇರಿದಂತೆ ಹಲವು ಜಾಹೀರಾತುಗಳನ್ನು ಹಾಕುವ ಸ್ಥಳವಾಗಿ ಬದಲಾಗಿದೆ. ಅದರ ಹೆಸರನ್ನು ಚರ್ಚ್ ಸರ್ಕಲ್ ಎಂದು ಕರೆಯುವ ಪರಿಪಾಠ ಆರಂಭವಾಗಿದೆ. ಅದರ ಮುಂದುವರಿದ ಭಾಗವಾಗಿ ಅಲ್ಲಿ ಇಂದು ಕೇಸರಿ ಬಾವುಟ ಬಂಟಿಂಗ್‌ಗಳು ರಾರಾಜಿಸಿವೆ. ಈಗಲಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಅ ಸ್ಥಳದ ಗೌರವವನ್ನು ಕಾಪಾಡಬೇಕಿದೆ.

ಇದನ್ನೂ ಓದಿ; ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...