Homeಕರ್ನಾಟಕತುಮಕೂರು: ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ವೃತ್ತದಲ್ಲಿ ಹಾರಾಡಿದ ಭಗವಧ್ವಜ!

ತುಮಕೂರು: ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ವೃತ್ತದಲ್ಲಿ ಹಾರಾಡಿದ ಭಗವಧ್ವಜ!

- Advertisement -
- Advertisement -

ಇಂದು ದೇಶದೆಲ್ಲೆಡೆ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಸಂವಿಧಾನ ಜಾರಿಗೆ ಬಂದ ನೆನಪಿಗಾಗಿ ಅಂಬೇಡ್ಕರ್, ಗಾಂಧಿ ಫೋಟೊ ಇಟ್ಟು ಸ್ಮರಿಸಲಾಗಿದೆ. ತ್ರಿವರ್ಣ ಧ್ವಜ ಹಾರಿಸಿ ಭಾರತದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲಾಗಿದೆ. ಆದರೆ ತುಮಕೂರಿನ ಐತಿಹಾಸಿಕ ಹಿನ್ನಲೆಯ ಸ್ವಾತಂತ್ರ್ಯ ಚೌಕದಲ್ಲಿ ಮಾತ್ರ ಇಂದೂ ಕೂಡ ಭಗವಧ್ವಜ ಹಾರಿಸಲಾಗಿದೆ. ಸುತ್ತಲೂ ಕೇಸರಿ ಬಂಟಿಗ್ಸ್‌ಗಳನ್ನು ಕಟ್ಟಲಾಗಿದೆ. ಈ ಸ್ಥಿತಿಗೆ ಹಲವು ಪ್ರಜ್ಞಾವಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮೈಸೂರು ಚಲೋ ಚಳವಳಿ ಉತ್ತುಂಗದಲ್ಲಿತ್ತು. ಜವಾಬ್ದಾರಿ ಸರ್ಕಾರದ ರಚನೆಗೆ ಆಗ್ರಹಿಸಿ ಮೈಸೂರು ಅರಸರ ವಿರುದ್ಧ ಹೋರಾಟ ನಡೆಯುತ್ತಿತ್ತು. ಎಲ್ಲೆಡೆ ತ್ರಿವರ್ಣ ಧ್ವಜ ಹಾರಿಸಲು ನಿಷೇಧ ಹೇರಲಾಗಿತ್ತು. ಅಂತಹ ಸಂದರ್ಭದಲ್ಲಿ 147ರ ಸೆಪ್ಟಂಬರ್ 14ರಂದು ತುಮಕೂರಿನಲ್ಲಿ ಬೃಹತ್ ಚಳವಳಿ ನಡೆದಿತ್ತು. ಪೊಲೀಸರು ಹೋರಾಟ ಹತ್ತಿಕ್ಕಲು ಲಾಠೀಚಾರ್ಜ್ ಮಾಡಿದರು. ಆನಂತರ ಗೋಲಿಬಾರ್ ಮಾಡಿದರು. ಆಗ ಖ್ಯಾತ ಸಾಹಿತಿ ಗೋರುರು ರಾಮಸ್ವಾಮಿ ಅಯ್ಯಂಗಾರ್‌ರವರ ಪುತ್ರ ರಾಮಚಂದ್ರ ಸೇರಿದಂತೆ ನಂಜುಂಡಪ್ಪ, ಗಂಗಪ್ಪ ಎಂಬ ಸತ್ಯಾಗ್ರಹಿಗಳು ಹುತಾತ್ಮರಾದರು. ಅವರ ನೆನಪಿನಲ್ಲಿ ಅಲ್ಲಿ ಸ್ಮಾರಕವೊಂದನ್ನು ನಿರ್ಮಿಸಿ ಅವರ ಹೆಸರುಗಳನ್ನು ಕೆತ್ತಲಾಗಿದೆ. ಆ ಚೌಕಕ್ಕೆ ಸ್ವಾತಂತ್ರ್ಯ ವೃತ್ತ ಎಂದು ಹೆಸರಿಡಲಾಗಿದೆ. ಇಂದಿನ ಗಣರಾಜ್ಯೋತ್ಸವದ ಸಂದರ್ಭದಲ್ಲಿಯೂ ಜಿಲ್ಲಾಡಳಿತ ಆ ವೃತ್ತದ ಬಗ್ಗೆ ಕಾಳಜಿ ವಹಿಸದಿರುವುದು ದುರಂತವಾಗಿದೆ.

ತುಮಕೂರು ನಗರದ ಈ ವೃತ್ತದ ಹೆಸರು ಸ್ವತಂತ್ರ ಚೌಕ, ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ಗುಂಡಿಗೆ ಗುಂಡಿಗೆಯೊಡ್ಡಿ ಹುತಾತ್ಮರಾದ ಸ್ಥಳ, ಅವರ ಸ್ಮಾರಕವೂ ಈ ವೃತ್ತದಲ್ಲಿದೆ, ಗಣರಾಜ್ಯೋತ್ಸವದ ದಿನವಾದರೂ ಈ ವೃತ್ತದಲ್ಲಿ ಭಾರತದ ಅಧಿಕೃತ ತ್ರಿವರ್ಣ ಧ್ವಜ ಹಾರಬೇಕಿತ್ತು, ಈ ಚೆಡ್ಡಿಗಳ ಉದ್ಧಟತನ ನೋಡಿ, ಅತ್ಯಂತ ಎತ್ತರದಲ್ಲಿ ಕೇಸರಿ ಪತಾಕೆಯನ್ನು ಹಾರಿಬಿಟ್ಟಿದ್ದಾರೆ. ತುಮಕೂರಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲ ಎಂಬುದಕ್ಕೆ ಈ ವೃತ್ತವೇ ಸಾಕ್ಷಿ ಎಂದು ಕುಚ್ಚಂಗಿ ಪ್ರಸನ್ನರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ನೆನಪಿಸುವ ಸ್ಥಳಗಳಲ್ಲಿ ಒಂದಾದ ಸ್ವಾತಂತ್ರ್ಯ ಚೌಕವು ಕಸ ಕಡ್ಡಿಗಳಿಂದ ತುಂಬಿಕೊಂದಿಡೆ. ಸರ್ಕಾರಿ ಜಾಹೀರಾತು ಸೇರಿದಂತೆ ಹಲವು ಜಾಹೀರಾತುಗಳನ್ನು ಹಾಕುವ ಸ್ಥಳವಾಗಿ ಬದಲಾಗಿದೆ. ಅದರ ಹೆಸರನ್ನು ಚರ್ಚ್ ಸರ್ಕಲ್ ಎಂದು ಕರೆಯುವ ಪರಿಪಾಠ ಆರಂಭವಾಗಿದೆ. ಅದರ ಮುಂದುವರಿದ ಭಾಗವಾಗಿ ಅಲ್ಲಿ ಇಂದು ಕೇಸರಿ ಬಾವುಟ ಬಂಟಿಂಗ್‌ಗಳು ರಾರಾಜಿಸಿವೆ. ಈಗಲಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಅ ಸ್ಥಳದ ಗೌರವವನ್ನು ಕಾಪಾಡಬೇಕಿದೆ.

ಇದನ್ನೂ ಓದಿ; ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...