Homeಕರ್ನಾಟಕತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

ತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

- Advertisement -
- Advertisement -

ತುಮಕೂರು ಜಿಲ್ಲೆ ಕವಿಗಳ ತವರು. ಹಲವು ಕವಿಗಳು, ವಿದ್ವಾಂಸರು, ಬರಹಗಾರರು ಇಲ್ಲಿ ಜನಿಸಿ ರಾಜ್ಯಮಟ್ಟದಲ್ಲಿ ಹೆಸರು ಮಾಡಿರುವ ಹೆಗ್ಗಳಿಕೆ ಜಿಲ್ಲೆಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಜಿಲ್ಲೆಯ ಕೊಡುಗೆ ಅಪಾರ. ಪ್ರಾಚೀನ- ಆಧುನಿಕ ಸಾಹಿತ್ಯದ ಕೊಂಡಿಯಾಗಿ ಕೆಲಸ ಮಾಡಿದವರು, ಕನ್ನಡ ಸಾಹಿತ್ಯಕ್ಕೆ ಹೊಸತನವನ್ನು ತಂದುಕೊಟ್ಟ ಹಲವು ಬರಹಗಾರರು ಈ ಜಿಲ್ಲೆಯವರಾಗಿದ್ದಾರೆ. ಅಂಥವರಲ್ಲಿ ಬಿಎಂಶ್ರೀ ಕೂಡ ಒಬ್ಬರು. ಅವರು ತಮ್ಮ ತಾಯಿಯ ತವರೂರು ತುರುವೇಕೆರೆಯ ಸಂಪಿಗೆ ಗ್ರಾಮದಲ್ಲಿ ಜನಿಸಿದ ಬಿಎಂಶ್ರೀ ದೊಡ್ಡ ವಿದ್ವಾಂಸರಾಗಿ ರಾಜಸೇವಾಸಕ್ತ ಬಿರುದು ಪಡೆದವರು. ಕನ್ನಡ ಸಾಹಿತ್ಯಕ್ಕೆ ಹೊಸಮಾರ್ಗ ಹಾಕಿಕೊಟ್ಟವರು.

ಅಂಥ ಘನ ವಿದ್ವಾಂಸರ ಹೆಸರಿನಲ್ಲಿ ಸಂಪಿಗೆಯಲ್ಲಿ ನಿರ್ಮಾಣಗೊಂಡಿರುವ ಬಿಎಂಶ್ರೀ ಭವನ ಯಾವುದೇ ಕಾರ್ಯಕ್ರಮಗಳಿಗೆ ಬಳಕೆಯಾಗುತ್ತಿಲ್ಲ. ಅದರ ನಿರ್ವಹಣೆಗೆಂದು ಯಾರೂ ಇಲ್ಲವಾಗಿದೆ. ಇನ್ನು ಅದರಿಂದ ಆದಾಯ ಬರುವುದಾದರೂ ಹೇಗೆ? ಹೀಗಾಗಿ ಸರಿಯಾದ ನಿರ್ವಹಣೆ ಇಲ್ಲದ ಅಕ್ರಮ ಚಟುವಟಿಕೆಗಳ ತಾಣವಾಗಿದೆ.

2006-07ನೇ ಸಾಲಿನಲ್ಲಿ ಬಿಎಂಶ್ರೀ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ 2008-09ನೇ ಸಾಲಿನ ಹೊತ್ತಿಗೆ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯನ್ನು ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇತೃತ್ವದಲ್ಲಿ ಭವನ ನಿರ್ಮಿಸಿ ಒಂದು ದಶಕ ಕಳೆದರೂ ಯಾವುದೇ ಚಟುವಟಿಕೆಗಳಿಗೆ ಬಳಸದೆ ಭವನ ವ್ಯರ್ಥವಾಗಿ ಪಾಳುಬಿದ್ದಿದೆ.

ಅಂದಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಪ್ಪ, ಸಾಹಿತಿಗಳು, ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ತಂದ ಪರಿಣಾಮ 16 ಲಕ್ಷ ರೂಪಾಯಿ ಬಿಡುಗಡೆಯಾಗಿತ್ತು. ತುರುವೇಕೆರೆಯ ಅಂದಿನ ಶಾಸಕ ಎಂ.ಟಿ.ಕೃಷ್ಣಪ್ಪ 3 ಲಕ್ಷ ರೂಪಾಯಿ ಹಣವನ್ನು ಶಾಸಕರ ನಿಧಿಯಿಂದ ನೀಡಿದ್ದರು. ಒಟ್ಟು 19-20 ಲಕ್ಷ ರೂ. ವೆಚ್ಚದಲ್ಲಿ ಬಿಎಂಶ್ರೀ ಭವನವನ್ನು ನಿರ್ಮಾಣ ಮಾಡಲಾಗಿದೆ. ಇಷ್ಟೊಂದು ಹಣವನ್ನು ವೆಚ್ಚ ಮಾಡಿದ್ದರೂ ಯಾವುದೇ ಚಟುವಟಿಕೆಗಳು ನಡೆಯದಿರುವುದು ದುರಂತ.

ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ

ತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

Posted by Naanu Gauri on Tuesday, September 8, 2020

ಈ ಕುರಿತು ಕಸಾಪ ಮಾಜಿ ಅಧ್ಯಕ್ಷ ಚಂದ್ರಪ್ಪ ಮಾತನಾಡಿ “ಬಿಎಂಶ್ರೀ ದೊಡ್ಡ ವಿದ್ವಾಂಸರು. ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ ಭವನ ಯಾವುದೇ ನಿರ್ವಣೆಯಿಲ್ಲದೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಬಾಗಿಲು ತೆಗೆದಿಲ್ಲ, ಕಸ ಹೊಡೆಯುತ್ತಿಲ್ಲ. ನಿರ್ವಹಣೆಯ ಹೊಣೆ ಹೊತ್ತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಪಿಗೆ ಗ್ರಾಮದತ್ತ ತಿರುಗಿಯೂ ನೋಡುತ್ತಿಲ್ಲ. ಸಾಹಿತ್ಯ, ಸಂಸ್ಕೃತಿ, ಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕಿದ್ದ ಬಿಎಂಶ್ರೀ ಭವನದ ಸ್ಥಿತಿಯನ್ನು ನೋಡಿದರೆ ನೋವಾಗುತ್ತದೆ. ಭವನದ ನಿರ್ವಹಣೆಯ ಬಗ್ಗೆ ಯಾರಿಗೂ ಕಾಳಜಿ ಇಲ್ಲ ಎಂದು ದೂರಿದ್ದಾರೆ.

ಹೌದು ಸಾಹಿತಿಗಳ ಹೆಸರಿನಲ್ಲಿ ಭವನ ನಿರ್ಮಿಸುವುದು ಸರಿಯಾದ ಕ್ರಮವೇ ಇರಬಹುದು. ಅದರೆ ಅದರ ನಿರ್ವಹಣೆ ಮಾಡದೇ ಇದ್ದರೆ, ಕಾರ್ಯಕ್ರಮಗಳಿಗೆ ಬಳಸಿಕೊಳ್ಳದಿದ್ದರೆ ಇಂಥ ಭವನಗಳ ನಿರ್ಮಾಣ ವ್ಯರ್ಥ ಎಸಿಸುತ್ತದೆ. ಗ್ರಾಮೀಣ ಭಾಗದಲ್ಲಿ ಯಾವುದೇ ಸಾಹಿತ್ಯಕ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೂ ಇಷ್ಟೊಂದು ಹಣ ವೆಚ್ಚ ಮಾಡಿದ್ದಾದರೂ ಏಕೆ ಎಂಬ ಮಾತುಗಳು ಕೂಡ ಕೇಳಿಬಂದಿವೆ.

ಬಿಎಂಶ್ರೀ ಭವನದಲ್ಲಿ ಸದಾ ಸಾಂಸ್ಕೃತಿಕ ಚಟುವಟಿಕೆಗಳ ನಡೆಯುವಂತೆ ಆಸಕ್ತಿ ವಹಿಸಬೇಕು. ಬಿಎಂಶ್ರೀ ಸಾಹಿತ್ಯದ ಕುರಿತು ಚರ್ಚೆ, ಸಂವಾದಗಳು ನಡೆಸಲು ಕಾರ್ಯಯೋಜನೆಗಳನ್ನು ಹಾಕಿಕೊಳ್ಳಬೇಕು. ಪ್ರತಿ ತಿಂಗಳಿಗೆ ಎರಡು ಸಾಹಿತ್ಯ, ಸಂಸ್ಕೃತಿ, ಜಾನಪದ ಮೇಳಗಳನ್ನು ನಡೆಸಿ ಕವಿ-ಕಲಾವಿದರನ್ನು ಗೌರವಿಸುವ ಕೆಲಸ ಆಗಬೇಕು. ಆಗ ಮಾತ್ರ ಇಂಥ ಭವನಗಳಿಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಲಕ್ಷಾಂತರ ರೂಪಾಯಿ ವೆಚ್ಚೆದಲ್ಲಿ ನಿರ್ಮಾಣಗೊಂಡ ಬಿಎಂಶ್ರೀ ಭವನ ಪ್ರಯೋಜನಕ್ಕೆ ಬಾರದಂತೆ ಆಗುತ್ತವೆ. ಈಗಲಾದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಕಾರ್ಯಕ್ರಮಗಳನ್ನು ಯೋಜಿಸಿ ಸದಾ ಚಟುವಟಿಕೆಗಳು ನಡೆಯುವಂತಹ ವಾತಾವರಣ ನಿರ್ಮಾಣ ಮಾಡಬೇಕಿದೆ ಎಂಬ ಒತ್ತಾಯ ಕೇಳಿಬಂದಿದೆ.


ಇದನ್ನೂ ಓದಿ: 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....