Homeಕರ್ನಾಟಕತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

ತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

- Advertisement -
- Advertisement -

ತುಮಕೂರು ಜಿಲ್ಲೆ ಕವಿಗಳ ತವರು. ಹಲವು ಕವಿಗಳು, ವಿದ್ವಾಂಸರು, ಬರಹಗಾರರು ಇಲ್ಲಿ ಜನಿಸಿ ರಾಜ್ಯಮಟ್ಟದಲ್ಲಿ ಹೆಸರು ಮಾಡಿರುವ ಹೆಗ್ಗಳಿಕೆ ಜಿಲ್ಲೆಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಜಿಲ್ಲೆಯ ಕೊಡುಗೆ ಅಪಾರ. ಪ್ರಾಚೀನ- ಆಧುನಿಕ ಸಾಹಿತ್ಯದ ಕೊಂಡಿಯಾಗಿ ಕೆಲಸ ಮಾಡಿದವರು, ಕನ್ನಡ ಸಾಹಿತ್ಯಕ್ಕೆ ಹೊಸತನವನ್ನು ತಂದುಕೊಟ್ಟ ಹಲವು ಬರಹಗಾರರು ಈ ಜಿಲ್ಲೆಯವರಾಗಿದ್ದಾರೆ. ಅಂಥವರಲ್ಲಿ ಬಿಎಂಶ್ರೀ ಕೂಡ ಒಬ್ಬರು. ಅವರು ತಮ್ಮ ತಾಯಿಯ ತವರೂರು ತುರುವೇಕೆರೆಯ ಸಂಪಿಗೆ ಗ್ರಾಮದಲ್ಲಿ ಜನಿಸಿದ ಬಿಎಂಶ್ರೀ ದೊಡ್ಡ ವಿದ್ವಾಂಸರಾಗಿ ರಾಜಸೇವಾಸಕ್ತ ಬಿರುದು ಪಡೆದವರು. ಕನ್ನಡ ಸಾಹಿತ್ಯಕ್ಕೆ ಹೊಸಮಾರ್ಗ ಹಾಕಿಕೊಟ್ಟವರು.

ಅಂಥ ಘನ ವಿದ್ವಾಂಸರ ಹೆಸರಿನಲ್ಲಿ ಸಂಪಿಗೆಯಲ್ಲಿ ನಿರ್ಮಾಣಗೊಂಡಿರುವ ಬಿಎಂಶ್ರೀ ಭವನ ಯಾವುದೇ ಕಾರ್ಯಕ್ರಮಗಳಿಗೆ ಬಳಕೆಯಾಗುತ್ತಿಲ್ಲ. ಅದರ ನಿರ್ವಹಣೆಗೆಂದು ಯಾರೂ ಇಲ್ಲವಾಗಿದೆ. ಇನ್ನು ಅದರಿಂದ ಆದಾಯ ಬರುವುದಾದರೂ ಹೇಗೆ? ಹೀಗಾಗಿ ಸರಿಯಾದ ನಿರ್ವಹಣೆ ಇಲ್ಲದ ಅಕ್ರಮ ಚಟುವಟಿಕೆಗಳ ತಾಣವಾಗಿದೆ.

2006-07ನೇ ಸಾಲಿನಲ್ಲಿ ಬಿಎಂಶ್ರೀ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ 2008-09ನೇ ಸಾಲಿನ ಹೊತ್ತಿಗೆ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯನ್ನು ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇತೃತ್ವದಲ್ಲಿ ಭವನ ನಿರ್ಮಿಸಿ ಒಂದು ದಶಕ ಕಳೆದರೂ ಯಾವುದೇ ಚಟುವಟಿಕೆಗಳಿಗೆ ಬಳಸದೆ ಭವನ ವ್ಯರ್ಥವಾಗಿ ಪಾಳುಬಿದ್ದಿದೆ.

ಅಂದಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಪ್ಪ, ಸಾಹಿತಿಗಳು, ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ತಂದ ಪರಿಣಾಮ 16 ಲಕ್ಷ ರೂಪಾಯಿ ಬಿಡುಗಡೆಯಾಗಿತ್ತು. ತುರುವೇಕೆರೆಯ ಅಂದಿನ ಶಾಸಕ ಎಂ.ಟಿ.ಕೃಷ್ಣಪ್ಪ 3 ಲಕ್ಷ ರೂಪಾಯಿ ಹಣವನ್ನು ಶಾಸಕರ ನಿಧಿಯಿಂದ ನೀಡಿದ್ದರು. ಒಟ್ಟು 19-20 ಲಕ್ಷ ರೂ. ವೆಚ್ಚದಲ್ಲಿ ಬಿಎಂಶ್ರೀ ಭವನವನ್ನು ನಿರ್ಮಾಣ ಮಾಡಲಾಗಿದೆ. ಇಷ್ಟೊಂದು ಹಣವನ್ನು ವೆಚ್ಚ ಮಾಡಿದ್ದರೂ ಯಾವುದೇ ಚಟುವಟಿಕೆಗಳು ನಡೆಯದಿರುವುದು ದುರಂತ.

ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ

ತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

Posted by Naanu Gauri on Tuesday, September 8, 2020

ಈ ಕುರಿತು ಕಸಾಪ ಮಾಜಿ ಅಧ್ಯಕ್ಷ ಚಂದ್ರಪ್ಪ ಮಾತನಾಡಿ “ಬಿಎಂಶ್ರೀ ದೊಡ್ಡ ವಿದ್ವಾಂಸರು. ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ ಭವನ ಯಾವುದೇ ನಿರ್ವಣೆಯಿಲ್ಲದೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಬಾಗಿಲು ತೆಗೆದಿಲ್ಲ, ಕಸ ಹೊಡೆಯುತ್ತಿಲ್ಲ. ನಿರ್ವಹಣೆಯ ಹೊಣೆ ಹೊತ್ತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಪಿಗೆ ಗ್ರಾಮದತ್ತ ತಿರುಗಿಯೂ ನೋಡುತ್ತಿಲ್ಲ. ಸಾಹಿತ್ಯ, ಸಂಸ್ಕೃತಿ, ಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕಿದ್ದ ಬಿಎಂಶ್ರೀ ಭವನದ ಸ್ಥಿತಿಯನ್ನು ನೋಡಿದರೆ ನೋವಾಗುತ್ತದೆ. ಭವನದ ನಿರ್ವಹಣೆಯ ಬಗ್ಗೆ ಯಾರಿಗೂ ಕಾಳಜಿ ಇಲ್ಲ ಎಂದು ದೂರಿದ್ದಾರೆ.

ಹೌದು ಸಾಹಿತಿಗಳ ಹೆಸರಿನಲ್ಲಿ ಭವನ ನಿರ್ಮಿಸುವುದು ಸರಿಯಾದ ಕ್ರಮವೇ ಇರಬಹುದು. ಅದರೆ ಅದರ ನಿರ್ವಹಣೆ ಮಾಡದೇ ಇದ್ದರೆ, ಕಾರ್ಯಕ್ರಮಗಳಿಗೆ ಬಳಸಿಕೊಳ್ಳದಿದ್ದರೆ ಇಂಥ ಭವನಗಳ ನಿರ್ಮಾಣ ವ್ಯರ್ಥ ಎಸಿಸುತ್ತದೆ. ಗ್ರಾಮೀಣ ಭಾಗದಲ್ಲಿ ಯಾವುದೇ ಸಾಹಿತ್ಯಕ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೂ ಇಷ್ಟೊಂದು ಹಣ ವೆಚ್ಚ ಮಾಡಿದ್ದಾದರೂ ಏಕೆ ಎಂಬ ಮಾತುಗಳು ಕೂಡ ಕೇಳಿಬಂದಿವೆ.

ಬಿಎಂಶ್ರೀ ಭವನದಲ್ಲಿ ಸದಾ ಸಾಂಸ್ಕೃತಿಕ ಚಟುವಟಿಕೆಗಳ ನಡೆಯುವಂತೆ ಆಸಕ್ತಿ ವಹಿಸಬೇಕು. ಬಿಎಂಶ್ರೀ ಸಾಹಿತ್ಯದ ಕುರಿತು ಚರ್ಚೆ, ಸಂವಾದಗಳು ನಡೆಸಲು ಕಾರ್ಯಯೋಜನೆಗಳನ್ನು ಹಾಕಿಕೊಳ್ಳಬೇಕು. ಪ್ರತಿ ತಿಂಗಳಿಗೆ ಎರಡು ಸಾಹಿತ್ಯ, ಸಂಸ್ಕೃತಿ, ಜಾನಪದ ಮೇಳಗಳನ್ನು ನಡೆಸಿ ಕವಿ-ಕಲಾವಿದರನ್ನು ಗೌರವಿಸುವ ಕೆಲಸ ಆಗಬೇಕು. ಆಗ ಮಾತ್ರ ಇಂಥ ಭವನಗಳಿಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಲಕ್ಷಾಂತರ ರೂಪಾಯಿ ವೆಚ್ಚೆದಲ್ಲಿ ನಿರ್ಮಾಣಗೊಂಡ ಬಿಎಂಶ್ರೀ ಭವನ ಪ್ರಯೋಜನಕ್ಕೆ ಬಾರದಂತೆ ಆಗುತ್ತವೆ. ಈಗಲಾದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಕಾರ್ಯಕ್ರಮಗಳನ್ನು ಯೋಜಿಸಿ ಸದಾ ಚಟುವಟಿಕೆಗಳು ನಡೆಯುವಂತಹ ವಾತಾವರಣ ನಿರ್ಮಾಣ ಮಾಡಬೇಕಿದೆ ಎಂಬ ಒತ್ತಾಯ ಕೇಳಿಬಂದಿದೆ.


ಇದನ್ನೂ ಓದಿ: 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...