Homeಕರ್ನಾಟಕತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

ತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

- Advertisement -
- Advertisement -

ತುಮಕೂರು ಜಿಲ್ಲೆ ಕವಿಗಳ ತವರು. ಹಲವು ಕವಿಗಳು, ವಿದ್ವಾಂಸರು, ಬರಹಗಾರರು ಇಲ್ಲಿ ಜನಿಸಿ ರಾಜ್ಯಮಟ್ಟದಲ್ಲಿ ಹೆಸರು ಮಾಡಿರುವ ಹೆಗ್ಗಳಿಕೆ ಜಿಲ್ಲೆಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಜಿಲ್ಲೆಯ ಕೊಡುಗೆ ಅಪಾರ. ಪ್ರಾಚೀನ- ಆಧುನಿಕ ಸಾಹಿತ್ಯದ ಕೊಂಡಿಯಾಗಿ ಕೆಲಸ ಮಾಡಿದವರು, ಕನ್ನಡ ಸಾಹಿತ್ಯಕ್ಕೆ ಹೊಸತನವನ್ನು ತಂದುಕೊಟ್ಟ ಹಲವು ಬರಹಗಾರರು ಈ ಜಿಲ್ಲೆಯವರಾಗಿದ್ದಾರೆ. ಅಂಥವರಲ್ಲಿ ಬಿಎಂಶ್ರೀ ಕೂಡ ಒಬ್ಬರು. ಅವರು ತಮ್ಮ ತಾಯಿಯ ತವರೂರು ತುರುವೇಕೆರೆಯ ಸಂಪಿಗೆ ಗ್ರಾಮದಲ್ಲಿ ಜನಿಸಿದ ಬಿಎಂಶ್ರೀ ದೊಡ್ಡ ವಿದ್ವಾಂಸರಾಗಿ ರಾಜಸೇವಾಸಕ್ತ ಬಿರುದು ಪಡೆದವರು. ಕನ್ನಡ ಸಾಹಿತ್ಯಕ್ಕೆ ಹೊಸಮಾರ್ಗ ಹಾಕಿಕೊಟ್ಟವರು.

ಅಂಥ ಘನ ವಿದ್ವಾಂಸರ ಹೆಸರಿನಲ್ಲಿ ಸಂಪಿಗೆಯಲ್ಲಿ ನಿರ್ಮಾಣಗೊಂಡಿರುವ ಬಿಎಂಶ್ರೀ ಭವನ ಯಾವುದೇ ಕಾರ್ಯಕ್ರಮಗಳಿಗೆ ಬಳಕೆಯಾಗುತ್ತಿಲ್ಲ. ಅದರ ನಿರ್ವಹಣೆಗೆಂದು ಯಾರೂ ಇಲ್ಲವಾಗಿದೆ. ಇನ್ನು ಅದರಿಂದ ಆದಾಯ ಬರುವುದಾದರೂ ಹೇಗೆ? ಹೀಗಾಗಿ ಸರಿಯಾದ ನಿರ್ವಹಣೆ ಇಲ್ಲದ ಅಕ್ರಮ ಚಟುವಟಿಕೆಗಳ ತಾಣವಾಗಿದೆ.

2006-07ನೇ ಸಾಲಿನಲ್ಲಿ ಬಿಎಂಶ್ರೀ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ 2008-09ನೇ ಸಾಲಿನ ಹೊತ್ತಿಗೆ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯನ್ನು ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇತೃತ್ವದಲ್ಲಿ ಭವನ ನಿರ್ಮಿಸಿ ಒಂದು ದಶಕ ಕಳೆದರೂ ಯಾವುದೇ ಚಟುವಟಿಕೆಗಳಿಗೆ ಬಳಸದೆ ಭವನ ವ್ಯರ್ಥವಾಗಿ ಪಾಳುಬಿದ್ದಿದೆ.

ಅಂದಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಪ್ಪ, ಸಾಹಿತಿಗಳು, ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ತಂದ ಪರಿಣಾಮ 16 ಲಕ್ಷ ರೂಪಾಯಿ ಬಿಡುಗಡೆಯಾಗಿತ್ತು. ತುರುವೇಕೆರೆಯ ಅಂದಿನ ಶಾಸಕ ಎಂ.ಟಿ.ಕೃಷ್ಣಪ್ಪ 3 ಲಕ್ಷ ರೂಪಾಯಿ ಹಣವನ್ನು ಶಾಸಕರ ನಿಧಿಯಿಂದ ನೀಡಿದ್ದರು. ಒಟ್ಟು 19-20 ಲಕ್ಷ ರೂ. ವೆಚ್ಚದಲ್ಲಿ ಬಿಎಂಶ್ರೀ ಭವನವನ್ನು ನಿರ್ಮಾಣ ಮಾಡಲಾಗಿದೆ. ಇಷ್ಟೊಂದು ಹಣವನ್ನು ವೆಚ್ಚ ಮಾಡಿದ್ದರೂ ಯಾವುದೇ ಚಟುವಟಿಕೆಗಳು ನಡೆಯದಿರುವುದು ದುರಂತ.

ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ

ತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

Posted by Naanu Gauri on Tuesday, September 8, 2020

ಈ ಕುರಿತು ಕಸಾಪ ಮಾಜಿ ಅಧ್ಯಕ್ಷ ಚಂದ್ರಪ್ಪ ಮಾತನಾಡಿ “ಬಿಎಂಶ್ರೀ ದೊಡ್ಡ ವಿದ್ವಾಂಸರು. ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ ಭವನ ಯಾವುದೇ ನಿರ್ವಣೆಯಿಲ್ಲದೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಬಾಗಿಲು ತೆಗೆದಿಲ್ಲ, ಕಸ ಹೊಡೆಯುತ್ತಿಲ್ಲ. ನಿರ್ವಹಣೆಯ ಹೊಣೆ ಹೊತ್ತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಪಿಗೆ ಗ್ರಾಮದತ್ತ ತಿರುಗಿಯೂ ನೋಡುತ್ತಿಲ್ಲ. ಸಾಹಿತ್ಯ, ಸಂಸ್ಕೃತಿ, ಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕಿದ್ದ ಬಿಎಂಶ್ರೀ ಭವನದ ಸ್ಥಿತಿಯನ್ನು ನೋಡಿದರೆ ನೋವಾಗುತ್ತದೆ. ಭವನದ ನಿರ್ವಹಣೆಯ ಬಗ್ಗೆ ಯಾರಿಗೂ ಕಾಳಜಿ ಇಲ್ಲ ಎಂದು ದೂರಿದ್ದಾರೆ.

ಹೌದು ಸಾಹಿತಿಗಳ ಹೆಸರಿನಲ್ಲಿ ಭವನ ನಿರ್ಮಿಸುವುದು ಸರಿಯಾದ ಕ್ರಮವೇ ಇರಬಹುದು. ಅದರೆ ಅದರ ನಿರ್ವಹಣೆ ಮಾಡದೇ ಇದ್ದರೆ, ಕಾರ್ಯಕ್ರಮಗಳಿಗೆ ಬಳಸಿಕೊಳ್ಳದಿದ್ದರೆ ಇಂಥ ಭವನಗಳ ನಿರ್ಮಾಣ ವ್ಯರ್ಥ ಎಸಿಸುತ್ತದೆ. ಗ್ರಾಮೀಣ ಭಾಗದಲ್ಲಿ ಯಾವುದೇ ಸಾಹಿತ್ಯಕ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೂ ಇಷ್ಟೊಂದು ಹಣ ವೆಚ್ಚ ಮಾಡಿದ್ದಾದರೂ ಏಕೆ ಎಂಬ ಮಾತುಗಳು ಕೂಡ ಕೇಳಿಬಂದಿವೆ.

ಬಿಎಂಶ್ರೀ ಭವನದಲ್ಲಿ ಸದಾ ಸಾಂಸ್ಕೃತಿಕ ಚಟುವಟಿಕೆಗಳ ನಡೆಯುವಂತೆ ಆಸಕ್ತಿ ವಹಿಸಬೇಕು. ಬಿಎಂಶ್ರೀ ಸಾಹಿತ್ಯದ ಕುರಿತು ಚರ್ಚೆ, ಸಂವಾದಗಳು ನಡೆಸಲು ಕಾರ್ಯಯೋಜನೆಗಳನ್ನು ಹಾಕಿಕೊಳ್ಳಬೇಕು. ಪ್ರತಿ ತಿಂಗಳಿಗೆ ಎರಡು ಸಾಹಿತ್ಯ, ಸಂಸ್ಕೃತಿ, ಜಾನಪದ ಮೇಳಗಳನ್ನು ನಡೆಸಿ ಕವಿ-ಕಲಾವಿದರನ್ನು ಗೌರವಿಸುವ ಕೆಲಸ ಆಗಬೇಕು. ಆಗ ಮಾತ್ರ ಇಂಥ ಭವನಗಳಿಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಲಕ್ಷಾಂತರ ರೂಪಾಯಿ ವೆಚ್ಚೆದಲ್ಲಿ ನಿರ್ಮಾಣಗೊಂಡ ಬಿಎಂಶ್ರೀ ಭವನ ಪ್ರಯೋಜನಕ್ಕೆ ಬಾರದಂತೆ ಆಗುತ್ತವೆ. ಈಗಲಾದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಕಾರ್ಯಕ್ರಮಗಳನ್ನು ಯೋಜಿಸಿ ಸದಾ ಚಟುವಟಿಕೆಗಳು ನಡೆಯುವಂತಹ ವಾತಾವರಣ ನಿರ್ಮಾಣ ಮಾಡಬೇಕಿದೆ ಎಂಬ ಒತ್ತಾಯ ಕೇಳಿಬಂದಿದೆ.


ಇದನ್ನೂ ಓದಿ: 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...