Homeಕರ್ನಾಟಕತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

ತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

- Advertisement -
- Advertisement -

ತುಮಕೂರು ಜಿಲ್ಲೆ ಕವಿಗಳ ತವರು. ಹಲವು ಕವಿಗಳು, ವಿದ್ವಾಂಸರು, ಬರಹಗಾರರು ಇಲ್ಲಿ ಜನಿಸಿ ರಾಜ್ಯಮಟ್ಟದಲ್ಲಿ ಹೆಸರು ಮಾಡಿರುವ ಹೆಗ್ಗಳಿಕೆ ಜಿಲ್ಲೆಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಜಿಲ್ಲೆಯ ಕೊಡುಗೆ ಅಪಾರ. ಪ್ರಾಚೀನ- ಆಧುನಿಕ ಸಾಹಿತ್ಯದ ಕೊಂಡಿಯಾಗಿ ಕೆಲಸ ಮಾಡಿದವರು, ಕನ್ನಡ ಸಾಹಿತ್ಯಕ್ಕೆ ಹೊಸತನವನ್ನು ತಂದುಕೊಟ್ಟ ಹಲವು ಬರಹಗಾರರು ಈ ಜಿಲ್ಲೆಯವರಾಗಿದ್ದಾರೆ. ಅಂಥವರಲ್ಲಿ ಬಿಎಂಶ್ರೀ ಕೂಡ ಒಬ್ಬರು. ಅವರು ತಮ್ಮ ತಾಯಿಯ ತವರೂರು ತುರುವೇಕೆರೆಯ ಸಂಪಿಗೆ ಗ್ರಾಮದಲ್ಲಿ ಜನಿಸಿದ ಬಿಎಂಶ್ರೀ ದೊಡ್ಡ ವಿದ್ವಾಂಸರಾಗಿ ರಾಜಸೇವಾಸಕ್ತ ಬಿರುದು ಪಡೆದವರು. ಕನ್ನಡ ಸಾಹಿತ್ಯಕ್ಕೆ ಹೊಸಮಾರ್ಗ ಹಾಕಿಕೊಟ್ಟವರು.

ಅಂಥ ಘನ ವಿದ್ವಾಂಸರ ಹೆಸರಿನಲ್ಲಿ ಸಂಪಿಗೆಯಲ್ಲಿ ನಿರ್ಮಾಣಗೊಂಡಿರುವ ಬಿಎಂಶ್ರೀ ಭವನ ಯಾವುದೇ ಕಾರ್ಯಕ್ರಮಗಳಿಗೆ ಬಳಕೆಯಾಗುತ್ತಿಲ್ಲ. ಅದರ ನಿರ್ವಹಣೆಗೆಂದು ಯಾರೂ ಇಲ್ಲವಾಗಿದೆ. ಇನ್ನು ಅದರಿಂದ ಆದಾಯ ಬರುವುದಾದರೂ ಹೇಗೆ? ಹೀಗಾಗಿ ಸರಿಯಾದ ನಿರ್ವಹಣೆ ಇಲ್ಲದ ಅಕ್ರಮ ಚಟುವಟಿಕೆಗಳ ತಾಣವಾಗಿದೆ.

2006-07ನೇ ಸಾಲಿನಲ್ಲಿ ಬಿಎಂಶ್ರೀ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ 2008-09ನೇ ಸಾಲಿನ ಹೊತ್ತಿಗೆ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯನ್ನು ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇತೃತ್ವದಲ್ಲಿ ಭವನ ನಿರ್ಮಿಸಿ ಒಂದು ದಶಕ ಕಳೆದರೂ ಯಾವುದೇ ಚಟುವಟಿಕೆಗಳಿಗೆ ಬಳಸದೆ ಭವನ ವ್ಯರ್ಥವಾಗಿ ಪಾಳುಬಿದ್ದಿದೆ.

ಅಂದಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಪ್ಪ, ಸಾಹಿತಿಗಳು, ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ತಂದ ಪರಿಣಾಮ 16 ಲಕ್ಷ ರೂಪಾಯಿ ಬಿಡುಗಡೆಯಾಗಿತ್ತು. ತುರುವೇಕೆರೆಯ ಅಂದಿನ ಶಾಸಕ ಎಂ.ಟಿ.ಕೃಷ್ಣಪ್ಪ 3 ಲಕ್ಷ ರೂಪಾಯಿ ಹಣವನ್ನು ಶಾಸಕರ ನಿಧಿಯಿಂದ ನೀಡಿದ್ದರು. ಒಟ್ಟು 19-20 ಲಕ್ಷ ರೂ. ವೆಚ್ಚದಲ್ಲಿ ಬಿಎಂಶ್ರೀ ಭವನವನ್ನು ನಿರ್ಮಾಣ ಮಾಡಲಾಗಿದೆ. ಇಷ್ಟೊಂದು ಹಣವನ್ನು ವೆಚ್ಚ ಮಾಡಿದ್ದರೂ ಯಾವುದೇ ಚಟುವಟಿಕೆಗಳು ನಡೆಯದಿರುವುದು ದುರಂತ.

ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ

ತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

Posted by Naanu Gauri on Tuesday, September 8, 2020

ಈ ಕುರಿತು ಕಸಾಪ ಮಾಜಿ ಅಧ್ಯಕ್ಷ ಚಂದ್ರಪ್ಪ ಮಾತನಾಡಿ “ಬಿಎಂಶ್ರೀ ದೊಡ್ಡ ವಿದ್ವಾಂಸರು. ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ ಭವನ ಯಾವುದೇ ನಿರ್ವಣೆಯಿಲ್ಲದೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಬಾಗಿಲು ತೆಗೆದಿಲ್ಲ, ಕಸ ಹೊಡೆಯುತ್ತಿಲ್ಲ. ನಿರ್ವಹಣೆಯ ಹೊಣೆ ಹೊತ್ತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಪಿಗೆ ಗ್ರಾಮದತ್ತ ತಿರುಗಿಯೂ ನೋಡುತ್ತಿಲ್ಲ. ಸಾಹಿತ್ಯ, ಸಂಸ್ಕೃತಿ, ಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕಿದ್ದ ಬಿಎಂಶ್ರೀ ಭವನದ ಸ್ಥಿತಿಯನ್ನು ನೋಡಿದರೆ ನೋವಾಗುತ್ತದೆ. ಭವನದ ನಿರ್ವಹಣೆಯ ಬಗ್ಗೆ ಯಾರಿಗೂ ಕಾಳಜಿ ಇಲ್ಲ ಎಂದು ದೂರಿದ್ದಾರೆ.

ಹೌದು ಸಾಹಿತಿಗಳ ಹೆಸರಿನಲ್ಲಿ ಭವನ ನಿರ್ಮಿಸುವುದು ಸರಿಯಾದ ಕ್ರಮವೇ ಇರಬಹುದು. ಅದರೆ ಅದರ ನಿರ್ವಹಣೆ ಮಾಡದೇ ಇದ್ದರೆ, ಕಾರ್ಯಕ್ರಮಗಳಿಗೆ ಬಳಸಿಕೊಳ್ಳದಿದ್ದರೆ ಇಂಥ ಭವನಗಳ ನಿರ್ಮಾಣ ವ್ಯರ್ಥ ಎಸಿಸುತ್ತದೆ. ಗ್ರಾಮೀಣ ಭಾಗದಲ್ಲಿ ಯಾವುದೇ ಸಾಹಿತ್ಯಕ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೂ ಇಷ್ಟೊಂದು ಹಣ ವೆಚ್ಚ ಮಾಡಿದ್ದಾದರೂ ಏಕೆ ಎಂಬ ಮಾತುಗಳು ಕೂಡ ಕೇಳಿಬಂದಿವೆ.

ಬಿಎಂಶ್ರೀ ಭವನದಲ್ಲಿ ಸದಾ ಸಾಂಸ್ಕೃತಿಕ ಚಟುವಟಿಕೆಗಳ ನಡೆಯುವಂತೆ ಆಸಕ್ತಿ ವಹಿಸಬೇಕು. ಬಿಎಂಶ್ರೀ ಸಾಹಿತ್ಯದ ಕುರಿತು ಚರ್ಚೆ, ಸಂವಾದಗಳು ನಡೆಸಲು ಕಾರ್ಯಯೋಜನೆಗಳನ್ನು ಹಾಕಿಕೊಳ್ಳಬೇಕು. ಪ್ರತಿ ತಿಂಗಳಿಗೆ ಎರಡು ಸಾಹಿತ್ಯ, ಸಂಸ್ಕೃತಿ, ಜಾನಪದ ಮೇಳಗಳನ್ನು ನಡೆಸಿ ಕವಿ-ಕಲಾವಿದರನ್ನು ಗೌರವಿಸುವ ಕೆಲಸ ಆಗಬೇಕು. ಆಗ ಮಾತ್ರ ಇಂಥ ಭವನಗಳಿಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಲಕ್ಷಾಂತರ ರೂಪಾಯಿ ವೆಚ್ಚೆದಲ್ಲಿ ನಿರ್ಮಾಣಗೊಂಡ ಬಿಎಂಶ್ರೀ ಭವನ ಪ್ರಯೋಜನಕ್ಕೆ ಬಾರದಂತೆ ಆಗುತ್ತವೆ. ಈಗಲಾದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಕಾರ್ಯಕ್ರಮಗಳನ್ನು ಯೋಜಿಸಿ ಸದಾ ಚಟುವಟಿಕೆಗಳು ನಡೆಯುವಂತಹ ವಾತಾವರಣ ನಿರ್ಮಾಣ ಮಾಡಬೇಕಿದೆ ಎಂಬ ಒತ್ತಾಯ ಕೇಳಿಬಂದಿದೆ.


ಇದನ್ನೂ ಓದಿ: 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...