Homeಕರ್ನಾಟಕತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

ತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

- Advertisement -
- Advertisement -

ತುಮಕೂರು ಜಿಲ್ಲೆ ಕವಿಗಳ ತವರು. ಹಲವು ಕವಿಗಳು, ವಿದ್ವಾಂಸರು, ಬರಹಗಾರರು ಇಲ್ಲಿ ಜನಿಸಿ ರಾಜ್ಯಮಟ್ಟದಲ್ಲಿ ಹೆಸರು ಮಾಡಿರುವ ಹೆಗ್ಗಳಿಕೆ ಜಿಲ್ಲೆಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಜಿಲ್ಲೆಯ ಕೊಡುಗೆ ಅಪಾರ. ಪ್ರಾಚೀನ- ಆಧುನಿಕ ಸಾಹಿತ್ಯದ ಕೊಂಡಿಯಾಗಿ ಕೆಲಸ ಮಾಡಿದವರು, ಕನ್ನಡ ಸಾಹಿತ್ಯಕ್ಕೆ ಹೊಸತನವನ್ನು ತಂದುಕೊಟ್ಟ ಹಲವು ಬರಹಗಾರರು ಈ ಜಿಲ್ಲೆಯವರಾಗಿದ್ದಾರೆ. ಅಂಥವರಲ್ಲಿ ಬಿಎಂಶ್ರೀ ಕೂಡ ಒಬ್ಬರು. ಅವರು ತಮ್ಮ ತಾಯಿಯ ತವರೂರು ತುರುವೇಕೆರೆಯ ಸಂಪಿಗೆ ಗ್ರಾಮದಲ್ಲಿ ಜನಿಸಿದ ಬಿಎಂಶ್ರೀ ದೊಡ್ಡ ವಿದ್ವಾಂಸರಾಗಿ ರಾಜಸೇವಾಸಕ್ತ ಬಿರುದು ಪಡೆದವರು. ಕನ್ನಡ ಸಾಹಿತ್ಯಕ್ಕೆ ಹೊಸಮಾರ್ಗ ಹಾಕಿಕೊಟ್ಟವರು.

ಅಂಥ ಘನ ವಿದ್ವಾಂಸರ ಹೆಸರಿನಲ್ಲಿ ಸಂಪಿಗೆಯಲ್ಲಿ ನಿರ್ಮಾಣಗೊಂಡಿರುವ ಬಿಎಂಶ್ರೀ ಭವನ ಯಾವುದೇ ಕಾರ್ಯಕ್ರಮಗಳಿಗೆ ಬಳಕೆಯಾಗುತ್ತಿಲ್ಲ. ಅದರ ನಿರ್ವಹಣೆಗೆಂದು ಯಾರೂ ಇಲ್ಲವಾಗಿದೆ. ಇನ್ನು ಅದರಿಂದ ಆದಾಯ ಬರುವುದಾದರೂ ಹೇಗೆ? ಹೀಗಾಗಿ ಸರಿಯಾದ ನಿರ್ವಹಣೆ ಇಲ್ಲದ ಅಕ್ರಮ ಚಟುವಟಿಕೆಗಳ ತಾಣವಾಗಿದೆ.

2006-07ನೇ ಸಾಲಿನಲ್ಲಿ ಬಿಎಂಶ್ರೀ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ 2008-09ನೇ ಸಾಲಿನ ಹೊತ್ತಿಗೆ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯನ್ನು ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇತೃತ್ವದಲ್ಲಿ ಭವನ ನಿರ್ಮಿಸಿ ಒಂದು ದಶಕ ಕಳೆದರೂ ಯಾವುದೇ ಚಟುವಟಿಕೆಗಳಿಗೆ ಬಳಸದೆ ಭವನ ವ್ಯರ್ಥವಾಗಿ ಪಾಳುಬಿದ್ದಿದೆ.

ಅಂದಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಪ್ಪ, ಸಾಹಿತಿಗಳು, ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ತಂದ ಪರಿಣಾಮ 16 ಲಕ್ಷ ರೂಪಾಯಿ ಬಿಡುಗಡೆಯಾಗಿತ್ತು. ತುರುವೇಕೆರೆಯ ಅಂದಿನ ಶಾಸಕ ಎಂ.ಟಿ.ಕೃಷ್ಣಪ್ಪ 3 ಲಕ್ಷ ರೂಪಾಯಿ ಹಣವನ್ನು ಶಾಸಕರ ನಿಧಿಯಿಂದ ನೀಡಿದ್ದರು. ಒಟ್ಟು 19-20 ಲಕ್ಷ ರೂ. ವೆಚ್ಚದಲ್ಲಿ ಬಿಎಂಶ್ರೀ ಭವನವನ್ನು ನಿರ್ಮಾಣ ಮಾಡಲಾಗಿದೆ. ಇಷ್ಟೊಂದು ಹಣವನ್ನು ವೆಚ್ಚ ಮಾಡಿದ್ದರೂ ಯಾವುದೇ ಚಟುವಟಿಕೆಗಳು ನಡೆಯದಿರುವುದು ದುರಂತ.

ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ

ತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

Posted by Naanu Gauri on Tuesday, September 8, 2020

ಈ ಕುರಿತು ಕಸಾಪ ಮಾಜಿ ಅಧ್ಯಕ್ಷ ಚಂದ್ರಪ್ಪ ಮಾತನಾಡಿ “ಬಿಎಂಶ್ರೀ ದೊಡ್ಡ ವಿದ್ವಾಂಸರು. ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ ಭವನ ಯಾವುದೇ ನಿರ್ವಣೆಯಿಲ್ಲದೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಬಾಗಿಲು ತೆಗೆದಿಲ್ಲ, ಕಸ ಹೊಡೆಯುತ್ತಿಲ್ಲ. ನಿರ್ವಹಣೆಯ ಹೊಣೆ ಹೊತ್ತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಪಿಗೆ ಗ್ರಾಮದತ್ತ ತಿರುಗಿಯೂ ನೋಡುತ್ತಿಲ್ಲ. ಸಾಹಿತ್ಯ, ಸಂಸ್ಕೃತಿ, ಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕಿದ್ದ ಬಿಎಂಶ್ರೀ ಭವನದ ಸ್ಥಿತಿಯನ್ನು ನೋಡಿದರೆ ನೋವಾಗುತ್ತದೆ. ಭವನದ ನಿರ್ವಹಣೆಯ ಬಗ್ಗೆ ಯಾರಿಗೂ ಕಾಳಜಿ ಇಲ್ಲ ಎಂದು ದೂರಿದ್ದಾರೆ.

ಹೌದು ಸಾಹಿತಿಗಳ ಹೆಸರಿನಲ್ಲಿ ಭವನ ನಿರ್ಮಿಸುವುದು ಸರಿಯಾದ ಕ್ರಮವೇ ಇರಬಹುದು. ಅದರೆ ಅದರ ನಿರ್ವಹಣೆ ಮಾಡದೇ ಇದ್ದರೆ, ಕಾರ್ಯಕ್ರಮಗಳಿಗೆ ಬಳಸಿಕೊಳ್ಳದಿದ್ದರೆ ಇಂಥ ಭವನಗಳ ನಿರ್ಮಾಣ ವ್ಯರ್ಥ ಎಸಿಸುತ್ತದೆ. ಗ್ರಾಮೀಣ ಭಾಗದಲ್ಲಿ ಯಾವುದೇ ಸಾಹಿತ್ಯಕ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೂ ಇಷ್ಟೊಂದು ಹಣ ವೆಚ್ಚ ಮಾಡಿದ್ದಾದರೂ ಏಕೆ ಎಂಬ ಮಾತುಗಳು ಕೂಡ ಕೇಳಿಬಂದಿವೆ.

ಬಿಎಂಶ್ರೀ ಭವನದಲ್ಲಿ ಸದಾ ಸಾಂಸ್ಕೃತಿಕ ಚಟುವಟಿಕೆಗಳ ನಡೆಯುವಂತೆ ಆಸಕ್ತಿ ವಹಿಸಬೇಕು. ಬಿಎಂಶ್ರೀ ಸಾಹಿತ್ಯದ ಕುರಿತು ಚರ್ಚೆ, ಸಂವಾದಗಳು ನಡೆಸಲು ಕಾರ್ಯಯೋಜನೆಗಳನ್ನು ಹಾಕಿಕೊಳ್ಳಬೇಕು. ಪ್ರತಿ ತಿಂಗಳಿಗೆ ಎರಡು ಸಾಹಿತ್ಯ, ಸಂಸ್ಕೃತಿ, ಜಾನಪದ ಮೇಳಗಳನ್ನು ನಡೆಸಿ ಕವಿ-ಕಲಾವಿದರನ್ನು ಗೌರವಿಸುವ ಕೆಲಸ ಆಗಬೇಕು. ಆಗ ಮಾತ್ರ ಇಂಥ ಭವನಗಳಿಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಲಕ್ಷಾಂತರ ರೂಪಾಯಿ ವೆಚ್ಚೆದಲ್ಲಿ ನಿರ್ಮಾಣಗೊಂಡ ಬಿಎಂಶ್ರೀ ಭವನ ಪ್ರಯೋಜನಕ್ಕೆ ಬಾರದಂತೆ ಆಗುತ್ತವೆ. ಈಗಲಾದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಕಾರ್ಯಕ್ರಮಗಳನ್ನು ಯೋಜಿಸಿ ಸದಾ ಚಟುವಟಿಕೆಗಳು ನಡೆಯುವಂತಹ ವಾತಾವರಣ ನಿರ್ಮಾಣ ಮಾಡಬೇಕಿದೆ ಎಂಬ ಒತ್ತಾಯ ಕೇಳಿಬಂದಿದೆ.


ಇದನ್ನೂ ಓದಿ: 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...