Homeಕರ್ನಾಟಕತುಮಕೂರು ದಲಿತನ ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಭೂಮಿ, ಪರಿಹಾರ ನೀಡಲು ಹೋರಾಟಗಾರರ ಒತ್ತಾಯ

ತುಮಕೂರು ದಲಿತನ ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಭೂಮಿ, ಪರಿಹಾರ ನೀಡಲು ಹೋರಾಟಗಾರರ ಒತ್ತಾಯ

- Advertisement -
- Advertisement -

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪೋಲೇನಹಳ್ಳಿಯಲ್ಲಿ ಇತ್ತೀಚೆಗೆ ಹತ್ಯೆಗೀಡಾದ ದಲಿತ ವ್ಯಕ್ತಿ ಆನಂದ ಅವರ ಕುಟುಂಬಕ್ಕೆ ಸರ್ಕಾರ ಐದು ಎಕರೆ ಜಮೀನು ಮಂಜೂರು ಮಾಡಬೇಕು ಮತ್ತು 25 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ರಾಜ್ಯ ಒಳ ಮೀಸಲಾತಿ ಹೋರಾಟದ ಒಕ್ಕೂಟಗಳ ಸಮಿತಿಯ ರಾಜ್ಯ ಮುಖಂಡ ಬಸವರಾಜ ಕೌತಾಳ್ ಒತ್ತಾಯಿಸಿದರು.

ಆನಂದ ಅವರ ಕುಟುಂಬಸ್ಥರ ಮನೆಗೆ ವಿವಿಧ ದಲಿತ, ಪ್ರಗತಿಪರ ಹೋರಾಟಗಾರರು ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಘಟನೆಯ ನೈಜತೆಯ ಬಗ್ಗೆ ಕುಟುಂಬಸ್ಥರಿಂದ ಮಾಹಿತಿ ಪಡೆದು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೌತಾಳ್, “ಕೊಲೆಯಾಗಿರುವ ಆನಂದ ಅವರ ಹೆಂಡತಿಗೆ ಸರ್ಕಾರ ಉದ್ಯೋಗ ನೀಡಬೇಕು ಮತ್ತು ಅವರ ಮಗುವಿನ ಶಿಕ್ಷಣದ ವೆಚ್ಚವನ್ನು ಭರಿಸಬೇಕು” ಎಂದು ಆಗ್ರಹಿಸಿದರು.

ಆರೋಪಿ ನಾಗೇಶ ಅವರ ತಂದೆ-ತಾಯಿಯನ್ನೂ ಆರೋಪಿಗಳನ್ನಾಗಿಸಿ ಬಂಧಿಸಬೇಕು. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್, ಶಾಸಕ ಕೆ.ಎನ್ ರಾಜಣ್ಣ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಕಾನೂನಾತ್ಮಕವಾಗಿ ಶಿಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.

ಪ್ರಗತಿಪರ ಚಿಂತಕ ಪ್ರೊ. ನರಸಿಂಹಪ್ಪ ಕಾಳೇನಹಳ್ಳಿ ಮಾತನಾಡಿ, “ಸೌಹಾರ್ದಯುತವಾಗಿ ಬಾಳಿ ಬದುಕಬೇಕಾದ ಎಸ್‌ಸಿ- ಎಸ್ಟಿ ಸಮುದಾಯಗಳು, ಈ ರೀತಿ ಸಣ್ಣ ವಿಷಯಕ್ಕೆ ಜಗಳವಾಡಿ ಕೊಲೆಯಲ್ಲಿ ಅಂತ್ಯವಾಗಿರುವುದು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ದಲಿತರಾಗಿದ್ದು, ರಾಜಕೀಯ ಜನ್ಮ ನೀಡಿದ ಮಧುಗಿರಿ ತಾಲೂಕಿನಲ್ಲಿ ಆಗಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಶೋಷಿತರ ಪರ ನಿಲ್ಲಬೇಕಾಗಿದೆ. ಅವರು ಇದುವರೆಗೂ ಘಟನಾ ಸ್ಥಳಕ್ಕೆ ಭೇಟಿ ನೀಡದೇ ಇರುವುದು ದಲಿತರ ಮೇಲೆ ಇರುವ ಕಾಳಜಿ ಎಂತದ್ದು ಎಂಬುವುದನ್ನು ತಿಳಿಸುತ್ತದೆ. ಕೇಂದ್ರ ಸಚಿವ ವಿ. ಸೋಮಣ್ಣ ಮತ್ತು ಶಾಸಕ ಕೆ.ಎನ್ ರಾಜಣ್ಣ ಕೂಡ ಸ್ಥಳಕ್ಕೆ ಆಗಮಿಸಿ ನೊಂದ ಕುಟುಂಬಕ್ಕೆ ನೆರವು ಒದಗಿಸಲು ಮುಂದಾಗಬೇಕೆಂದು ಮನವಿ ಮಾಡಿದರು.

ದಲಿತ ಮುಖಂಡ ಡಿ.ಟಿ ವೆಂಕಟೇಶ್ ಮಾತನಾಡಿ, “ಕೊಲೆಯಾದ ಆನಂದ ಅವರ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು. ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಧೈರ್ಯದಿಂದ ಬದುಕುವ ವಾತಾವರಣ ನಿರ್ಮಾಣ ಮಾಡಬೇಕು. ಆನಂದ ಅವರ ಕುಟುಂಬಕ್ಕೆ ಅಗತ್ಯ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಹಿರಿಯ ಹೋರಾಟಗಾರ ಪ್ರೊ. ದೊರೆರಾಜು ಮಾತನಾಡಿ, “ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ಗ್ರಾಮದಲ್ಲಿ ಜನತೆ ಧೈರ್ಯದಿಂದ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಾಗಿದೆ” ಎಂದು ಹೇಳಿದರು.

ರೇಷ್ಮೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಬಾಲಕೃಷ್ಣಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರವಿಕುಮಾರ್ ನೀಹ, ದಸಂಸ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ, ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹರಾಜು, ಜಾಗೃತ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ತೊಂಡೋಟಿ ರಾಮಾಂಜಿನಪ್ಪ, ವಕೀಲ ನರಸಿಂಹಮೂರ್ತಿ, ಜೀವಿಕ ಮಂಜು, ಚಿಕ್ಕಮ್ಮ, ನಿವೃತ್ತ ಪ್ರಾಂಶುಪಾಲ ಮುನೀಂದ್ರ ಕುಮಾರ್, ಉಪನ್ಯಾಸಕ ರಾಮಚಂದ್ರಪ್ಪ, ನವೀನ್ ಪೂಜಾರಹಳ್ಳಿ, ನರಸಿಯಪ್ಪ,ನರಸಿಂಹಣ್ಣ, ವಿ.ಎಲ್ ನರಸಿಂಹಮೂರ್ತಿ, ನಾಗಭೂಷಣ್ ಬಗ್ಗನಾಡು, ವಕೀಲ ಕಿಶೋರ್, ಅಶ್ವಿನಿ ಬೋದ್ , ಪೂರ್ಣ ರವಿಶಂಕರ್, ಶಶಾಂಕ್, ವೇಣುಗೋಪಾಲ ಮೌರ್ಯ, ಮಂಜು ಪಿಟಿಸಿಎಲ್, ಮಂಜನಾಥ್, ಮನೋಜ್, ಅಶ್ವಥ್ ನಾರಾಯಣ ಗುಟ್ಟೆ, ಹಾಗೂ ಎಸ್‌ಸಿ, ಎಸ್ಟಿ ಸಮುದಾಯಗಳ ಹೋರಾಟಗಾರರು ಆನಂದ ಅವರ ಮನೆಗೆ ಭೇಟಿ ನೀಡಿದ ತಂಡದಲ್ಲಿದ್ದರು.

ತುಮಕೂರು: ಕುಡಿಯುವ ನೀರಿನ ಸಂಪರ್ಕ ವಿಚಾರಕ್ಕೆ ಜಗಳ; ದಲಿತ ವ್ಯಕ್ತಿಯ ಭೀಕರ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...