Homeಕರ್ನಾಟಕತುಮಕೂರು: ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

ತುಮಕೂರು: ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದು 75ವರ್ಷಗಳು ಕಳೆದರು ದಲಿತರಿಗೆ ಇನ್ನೂ ಕೆಲವು ವಿಚಾರಗಳಲ್ಲಿ ಸ್ವಾತಂತ್ರ ಸಿಕ್ಕಿಲ್ಲ. ಇಂದಿಗೂ ಅವರು ಕೆಲವು ಕಡೆ ದೇವಸ್ಥಾನ ಪ್ರವೇಶ ಮಾಡುವಂತಿಲ್ಲ, ಇಂತಹ ಅಸ್ಪೃಶ್ಯತೆ ಆಚರಣೆ ನಡೆಯುತ್ತಲೇ ಇದೆ. ಇದನ್ನು ಹೋಗಲಾಡಿಸಲು ಕಾನೂನು ಇದ್ದರೂ ಕೂಡ, ಸವರ್ಣೀಯರು ಈ ಅಮಾನವೀಯ ಆಚರಣೆಯನ್ನು ಮುಂದುವರೆಸಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಮಾಡುವ ದಲಿತ ಅರ್ಚಕನ ಮೇಲೆ ಜಾತ್ರೆಯಂದು ಸವರ್ಣೀಯರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಜಾತ್ರೆಯ ಸಮಯದಲ್ಲಿ ದಲಿತ ಅರ್ಚಕನ ಮೇಲೆ ಸವರ್ಣೀಯರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬಿದರೆಗುಡಿ ಗ್ರಾಮದಲ್ಲಿರುವ ಮುಜಾರಾಯಿ ಇಲಾಖೆಗೆ ಸೇರಿದ ಬಿದರೆಗುಡಿಯ ಬಿದಿರಾಂಬಿಕ ಹಾಗೂ ಚಿಕ್ಕಮ್ಮ ದೇವಿಯ ದೇವಸ್ಥಾನದ ಅರ್ಚಕ ಲಿಂಗರಾಜು ಮೇಲೆ ಸವರ್ಣೀಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಹೊನ್ನವಳ್ಳಿ, ತಿಪಟೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಿದಿರಾಂಬಿಕ ಹಾಗೂ ಚಿಕ್ಕಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ದೇವಿಯ ಬ್ರಹ್ಮ ರಥೋತ್ಸವ ನಡೆದಿದೆ. ಈ ರಥೋತ್ಸವದ ವೇಳೆ ಅರ್ಚಕ ಲಿಂಗರಾಜು ಅವರನ್ನು ದೇವಸ್ಥಾನಕ್ಕೆ ಕರೆಸಿ ಅನ್ಯ ಜನಾಂಗದ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹಲ್ಲೆಗೆ ಒಳಗಾದ ಅರ್ಚಕನಿಗೆ ಚಿಕಿತ್ಸೆ ಪಡೆಯಲು ಬಿಟ್ಟಿಲ್ಲ ಅಷ್ಟು ಮಾತ್ರವಲ್ಲದೆ, ಅಲ್ಲಿ ಪೂಜೆಗೆ ಬಂದಿದ್ದ ಇತರೆ ದಲಿತರ ಮೇಲೂ ಹಲ್ಲೆಗೆ ಯತ್ನ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ-36; ದಲಿತ್ ಫೈಲ್ಸ್ : ದಲಿತರು ಹಿಂದೂಗಳಲ್ಲ, ದೇಗುಲಕ್ಕೆ ಪ್ರವೇಶವಿಲ್ಲ

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಕಳೆದ ತಿಂಗಳು ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿತ್ತು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ ದೂರು ನೀಡಿದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಸವರ್ಣೀಯರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ನಡೆದಿತ್ತು.

ಇದಕ್ಕೂ ಮುನ್ನ ಜನವರಿ ತಿಂಗಳಲ್ಲಿ ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದಲ್ಲಿ ಸವರ್ಣಿಯರು ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ್ದ ಘಟನೆ ನಡೆದಿತ್ತು. ದೇವಸ್ಥಾನ, ಕಿರಾಣಿ ಶಾಪ್, ಹೊಟೇಲ್​ಗಳಿಗೆ ದಲಿತರು ಹೋದರೆ ಅಂಗಡಿ ಮಾಲೀಕರು ಯಾವ ವಸ್ತುಗಳನ್ನೂ ನೀಡುತ್ತಿಲ್ಲ. ಯಾಕೆ ಕೊಡಲ್ಲ ಎಂದು ಪ್ರಶ್ನೆ ಮಾಡಿದ್ದಕ್ಕೆ ವಾಗ್ವಾದ ನಡೆದಿದೆ. ನಿಮಗೆ ಏನಾದ್ರೂ ಕೊಟ್ಟರೆ ದಂಡ ಹಾಕುತ್ತಾರೆ ಎಂದು ಅಂಗಡಿಕಾರರು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು. ಪರಿಸ್ಥಿತಿ ಹೀಗಿದ್ದರೂ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳು ಮಾತ್ರ ಗ್ರಾಮಕ್ಕೆ ಭೇಟಿ ನೀಡಿರಲಿಲ್ಲ. ಇನ್ನು ಗ್ರಾಮದಲ್ಲಿ ನಡೆಯುವ ಕೆಟ್ಟ ಆಚರಣೆಯ ಬಗ್ಗೆ ಯುವಕರು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...