Homeಆರೋಗ್ಯಕೊರೊನ ವೈರಸ್‌ಗೆ ತುಮಕೂರು ಜಿಲ್ಲೆಯಲ್ಲಿ ಮೊದಲ ಸಾವು..

ಕೊರೊನ ವೈರಸ್‌ಗೆ ತುಮಕೂರು ಜಿಲ್ಲೆಯಲ್ಲಿ ಮೊದಲ ಸಾವು..

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಶಿರಾ ಮೂಲದ ವ್ಯಕ್ತಿಯೊಬ್ಬ (60) ಕೊರೊನಾ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ. ಈತ ಮಾರ್ಚ್ 23 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ. ಇಂದು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಕೊರೊನ ವೈರಸ್‌ನ ಮೊದಲ ಸಾವು ಇದಾಗಿದೆ.

ಈ ವ್ಯಕ್ತಿಯ ಸಂಪರ್ಕದಲ್ಲಿದ್ದ ಎಲ್ಲ 20 ಮಂದಿಯ ಮೇಲೆ ನಿಗಾ ಇರಿಸಿದ್ದು, ಅವರನ್ನು ಗೃಹಬಂಧನದಲ್ಲಿ ಇಡಲಾಗಿದೆ. ಈ ಮಧ್ಯೆ 33 ಮಂದಿಯ ರಕ್ತ ಮತ್ತು ಕಫಾ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.

ಆತ ಮಾರ್ಚ್‌ 11ರಂದು ದೆಹಲಿಯಿಂದ ತುಮಕೂರಿಗೆ ಪ್ರಯಾಣ ಬೆಳೆಸಿದ್ದ ಎನ್ನಲಾಗಿದ್ದು ಅಲ್ಲಿಂದ ಸೋಂಕು ಹರಡಿರುವ ಸಾಧ್ಯತೆಯಿವೆ ಎನ್ನಲಾಗಿದೆ.

ತುಮಕೂರಿನಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ. ರಾಕೇಶ್ ಕುಮಾರ್ ಜಿಲ್ಲೆಯಲ್ಲಿ ಕೊರೊನ ವೈರಸ್ ಗೆ ಒಬ್ಬ ಮೃತಪಟ್ಟಿದ್ದಾನೆ ಎಂದು ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಶಂಕಿತ ಹತ್ತು ಮಂದಿಯನ್ನು ಪ್ರತ್ಯೇಕ ಕೊಠಡಿಯಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನ ವೈರಸ್‌ಗೆ ತುಮಕೂರು ಜಿಲ್ಲೆಯಲ್ಲಿ ಮೊದಲ ಸಾವು..

ಕೊರೊನ ವೈರಸ್‌ಗೆ ತುಮಕೂರು ಜಿಲ್ಲೆಯಲ್ಲಿ ಮೊದಲ ಸಾವು.. ಜಿಲ್ಲಾಧಿಕಾರಿ ಸ್ಪಷ್ಟನೆ

Posted by Naanu Gauri on Friday, March 27, 2020

ಇದೇ ವೇಳೆ ತುಮಕೂರು ನಗರದ 450 ಜನರ ಮೇಲೆ ನಿಗಾ ವಹಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಎಲ್ಲಾ 35 ವಾರ್ಡ್ ಗಳಲ್ಲೂ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿ ದಾರಿ ತಪ್ಪಿಸುವ ಜಾಹೀರಾತು ಪ್ರಕರಣ; ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ರಾಮ್‌ದೇವ್‌ಗೆ ಸುಪ್ರೀಂ ತಪರಾಕಿ

0
ಪತಂಜಲಿ ಉತ್ಪನ್ನಗಳ ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಸಾರ್ವಜನಿಕ ಕ್ಷಮೆಯಾಚಿಸುವಂತೆ ಯೋಗ ಗುರು ರಾಮ್‌ದೇವ್, ಅವರ ಸಹಾಯಕ ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಒಂದು ವಾರ ಕಾಲಾವಕಾಶ ನೀಡಿದೆ. ಆದರೆ, ಈಗ ಅವರನ್ನು...