Homeಕರ್ನಾಟಕತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಅಮಾನತು ಮಾಡಿರುವುದರಿಂದ ಮಾನಸಿಕವಾಗಿ ಕುಗ್ಗಿದ್ದೇನೆ: ಡಾ.ಉಷಾ

- Advertisement -
- Advertisement -

ಗರ್ಭಿಣಿ ಮಹಿಳೆ ಹಾಗೂ ಇಬ್ಬರು ಅವಳಿ ಮಕ್ಕಳ ಸಾವಿನ ಬೆನ್ನಲ್ಲೇ ಅಮಾನತಿಗೆ ಒಳಗಾಗಿರುವ ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯೆಯೊಬ್ಬರು ಪತ್ರ ಬರೆದು, ತಮ್ಮ ಆಕ್ಷೇಪಗಳನ್ನು ದಾಖಲಿಸಿದ್ದಾರೆ.

ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಅಮಾನತಿಗೆ ಒಳಗಾಗಿರುವ ತುಮಕೂರು ಜಿಲ್ಲಾ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾಗಿರುವ ಡಾ.ಎ.ಆರ್‌.ಉಷಾ ಅವರು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ತುಮಕೂರು ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, “ಏಕಪಕ್ಷೀಯವಾಗಿ ಅಮಾನತು ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಪತ್ರಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಡಾ.ಉಷಾ ಅವರು, “ಕಳೆದ ಒಂದು ವರ್ಷದಿಂದ ಸ್ತ್ರೀ ರೋಗ ತಜ್ಞೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ದಿನಾಂಕ 02/11/2022ರಂದು ನಾನು ಕರ್ತವ್ಯನಿರತ ಸ್ತ್ರೀರೋಗ ತಜ್ಞೆಯಾಗಿ ಕೆಲಸ ಮಾಡುತ್ತಿದ್ದೆ. ಅಂದು ಬೆಳಿಗ್ಗೆ 9ರಿಂದ 5.30 ಗಂಟೆಯ ತನಕ ಒಪಿಡಿಯಲ್ಲಿ ಕರ್ತವ್ಯ ನಿರ್ವಹಿಸಿದೆ. ತದನಂತರ ಶಸ್ತ್ರಚಿಕಿತ್ಸಾ ಕೊಠಡಿಗೆ ಹೋದೆನು” ಎಂದು ವಿವರಿಸಿದ್ದಾರೆ.

ಮುಂದುವರಿದು, “ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಸಂಜೆ 5.30ರಿಂದ ರಾತ್ರಿ 9.30ರತನಕ ಇದ್ದೆ. ಎಂಟು ಶಸ್ತ್ರಚಿಕಿತ್ಸೆಗಳನ್ನು ಮುಗಿಸಿಕೊಂಡು, ಬೇರೆ ದಾಖಲಾದ ಗರ್ಭಿಣಿಯರನ್ನು ಪರೀಕ್ಷಿಸಲು ಹೆರಿಗೆ ಕೊಠಡಿಗೆ ಹೋಗುವಾಗ ಒಬ್ಬ ಗರ್ಭಿಣಿಯು ಇಬ್ಬರು ಮಹಿಳಾ ವೃದ್ಧರೊಡನೆ ಕಾರಿಡಾರ್‌ನಲ್ಲಿ ಹೋಗುವುದು ಕಂಡುಬಂತು. ಆಗ ಹೆರಿಗೆ ಕೊಠಡಿಯ ಬಳಿಗೆ ಹೋಗಿ ಕರ್ತವ್ಯನಿರತ ಸ್ನಾತಕೋತ್ತರ ವಿದ್ಯಾರ್ಥಿ ಮತ್ತು ಕರ್ತವ್ಯ ನಿರತ ಶಿಶ್ರೂಷಕಿಯರನ್ನು ವಿಚಾರಣೆ ಮಾಡಿದೆ. ಆ ಗರ್ಭಿಣಿಯು ಪರೀಕ್ಷೆ ಮತ್ತು ದಾಖಲಾತಿ ನಿರಾಕರಿಸಿರುವುದು ಕಂಡು ಬಂತು” ಎಂದು ತಿಳಿಸಿದ್ದಾರೆ.

“ಆಗ ನಾನು ಆ ಗರ್ಭಿಣಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಹೇಳಿದೆ. ನಿರಾಕರಿಸಿ ಹೊರಟು ಹೋದರು. ಈ ಎಲ್ಲಾ ಘಟನೆಯ ದಾಖಲಾತಿಗಳನ್ನು ಕೆಜಿಎಂಒಎ (ಕರ್ನಾಟಕ ಸರ್ಕಾರಿ ಮೆಡಿಕಲ್ ಆಫೀಸರ್ಸ್ ಅಸೋಸಿಯೇಷನ್) ವೆಬ್‌ಸೈಟ್‌ನಲ್ಲಿ ಹಾಕಿದ್ದೇನೆ. ಇದೇ ಹೇಳಿಕೆಯನ್ನು ನಾನು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಲಿಖಿತ ರೂಪದಲ್ಲಿ ಸಲ್ಲಿಸಿರುತ್ತೇನೆ” ಎಂದಿದ್ದಾರೆ.

“ಆರೋಗ್ಯ ಸಚಿವರ ವಿಚಾರಣೆಯ ಸಮಯದಲ್ಲಿ ಮಹಿಳಾ ಎಎಸ್‌ಐ ತಮ್ಮ ಪ್ರಥಮ ವರದಿಯನ್ನು ತಿಳಿಸಿದ್ದಾರೆ. ಆ ಮಹಿಳೆಯು ಮೊದಲ ಹೆರಿಗೆಯನ್ನು ಮನೆಯಲ್ಲೇ ಮಾಡಿಸಿಕೊಂಡಿದ್ದರು. ಈ ಹೆರಿಗೆಯನ್ನೂ ಮನೆಯಲ್ಲೇ ಮಾಡಿಸಿಕೊಳ್ಳುತ್ತೇನೆ ಎಂದು ತನ್ನ ವೈಯಕ್ತಿಕ ಕಾರಣಗಳಿಂದ ಆಸ್ಪತ್ರೆಗೆ ಬರಲು ನಿರಾಕರಿಸಿದ್ದಳು. ಪಕ್ಕದ ಮನೆಯ ವೃದ್ಧೆಯರು ಬಲವಂತವಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿರುವುದಾಗಿ ಮಹಿಳಾ ಎಎಸ್‌ಐ ಹೇಳಿದ್ದಾರೆ. ಸಚಿವರು ನಮ್ಮ ಹೇಳಿಕೆಯನ್ನು, ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ನಾನು ಯಾವುದೇ ಕರ್ತವ್ಯಲೋಪ ಎಸಗದಿದ್ದರೂ ಏಕಪಕ್ಷೀಯವಾಗಿ, ಯಾವುದೇ ಹೇಳಿಕೆ ಹಾಗೂ ದೃಶ್ಯಾವಳಿಗಳನ್ನು ಗಮನಿಸದೆ ಕರ್ತವ್ಯ ಲೋಪದ ಆರೋಪ ಹೊರಿಸಿ ಮಾನ್ಯ ಆಯುಕ್ತರು ನನ್ನನ್ನು ದಿನಾಂಕ 4/11/2022ರಂದು ಸೇವೆಯಿಂದ ಅಮಾನತು ಮಾಡಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಸಚಿವರು ಕೂಡ ನನ್ನನ್ನು ಏಕಪಕ್ಷೀಯವಾಗಿ ಅಮಾನತು ಮಾಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏನಿದು ಘಟನೆ?

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿದೆ ಎಂಬ ಆರೋಪ ಬಂದಿದೆ.

ಇದನ್ನೂ ಓದಿರಿ: ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ ಎಂದು ದೂರಲಾಗಿದೆ.

ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದರು ಎಂಬ ಸಂಗತಿ ಹೊರಬಿದ್ದಿತ್ತು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಯಿತು. ಅಂದು ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಸರ್ಕಾರ ಅಮಾನತು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರಿಗೆ ಸಮರ್ಥನೆ ನೀಡಲು ಅವಕಾಶ ಖಂಡಿತ ಕೊಡಬೇಕು ಅದು ಅವರ ಹಕ್ಕು. ಬೇಕಾದರೆ ಮಂಪರು ಪರೀಕ್ಷೆ ಮಾಡಿ ನಿಜ ಹೊರತೆಗೆಯಿರಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...