Homeಕರ್ನಾಟಕತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಅಮಾನತು ಮಾಡಿರುವುದರಿಂದ ಮಾನಸಿಕವಾಗಿ ಕುಗ್ಗಿದ್ದೇನೆ: ಡಾ.ಉಷಾ

- Advertisement -
- Advertisement -

ಗರ್ಭಿಣಿ ಮಹಿಳೆ ಹಾಗೂ ಇಬ್ಬರು ಅವಳಿ ಮಕ್ಕಳ ಸಾವಿನ ಬೆನ್ನಲ್ಲೇ ಅಮಾನತಿಗೆ ಒಳಗಾಗಿರುವ ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯೆಯೊಬ್ಬರು ಪತ್ರ ಬರೆದು, ತಮ್ಮ ಆಕ್ಷೇಪಗಳನ್ನು ದಾಖಲಿಸಿದ್ದಾರೆ.

ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಅಮಾನತಿಗೆ ಒಳಗಾಗಿರುವ ತುಮಕೂರು ಜಿಲ್ಲಾ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾಗಿರುವ ಡಾ.ಎ.ಆರ್‌.ಉಷಾ ಅವರು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ತುಮಕೂರು ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, “ಏಕಪಕ್ಷೀಯವಾಗಿ ಅಮಾನತು ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಪತ್ರಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಡಾ.ಉಷಾ ಅವರು, “ಕಳೆದ ಒಂದು ವರ್ಷದಿಂದ ಸ್ತ್ರೀ ರೋಗ ತಜ್ಞೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ದಿನಾಂಕ 02/11/2022ರಂದು ನಾನು ಕರ್ತವ್ಯನಿರತ ಸ್ತ್ರೀರೋಗ ತಜ್ಞೆಯಾಗಿ ಕೆಲಸ ಮಾಡುತ್ತಿದ್ದೆ. ಅಂದು ಬೆಳಿಗ್ಗೆ 9ರಿಂದ 5.30 ಗಂಟೆಯ ತನಕ ಒಪಿಡಿಯಲ್ಲಿ ಕರ್ತವ್ಯ ನಿರ್ವಹಿಸಿದೆ. ತದನಂತರ ಶಸ್ತ್ರಚಿಕಿತ್ಸಾ ಕೊಠಡಿಗೆ ಹೋದೆನು” ಎಂದು ವಿವರಿಸಿದ್ದಾರೆ.

ಮುಂದುವರಿದು, “ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಸಂಜೆ 5.30ರಿಂದ ರಾತ್ರಿ 9.30ರತನಕ ಇದ್ದೆ. ಎಂಟು ಶಸ್ತ್ರಚಿಕಿತ್ಸೆಗಳನ್ನು ಮುಗಿಸಿಕೊಂಡು, ಬೇರೆ ದಾಖಲಾದ ಗರ್ಭಿಣಿಯರನ್ನು ಪರೀಕ್ಷಿಸಲು ಹೆರಿಗೆ ಕೊಠಡಿಗೆ ಹೋಗುವಾಗ ಒಬ್ಬ ಗರ್ಭಿಣಿಯು ಇಬ್ಬರು ಮಹಿಳಾ ವೃದ್ಧರೊಡನೆ ಕಾರಿಡಾರ್‌ನಲ್ಲಿ ಹೋಗುವುದು ಕಂಡುಬಂತು. ಆಗ ಹೆರಿಗೆ ಕೊಠಡಿಯ ಬಳಿಗೆ ಹೋಗಿ ಕರ್ತವ್ಯನಿರತ ಸ್ನಾತಕೋತ್ತರ ವಿದ್ಯಾರ್ಥಿ ಮತ್ತು ಕರ್ತವ್ಯ ನಿರತ ಶಿಶ್ರೂಷಕಿಯರನ್ನು ವಿಚಾರಣೆ ಮಾಡಿದೆ. ಆ ಗರ್ಭಿಣಿಯು ಪರೀಕ್ಷೆ ಮತ್ತು ದಾಖಲಾತಿ ನಿರಾಕರಿಸಿರುವುದು ಕಂಡು ಬಂತು” ಎಂದು ತಿಳಿಸಿದ್ದಾರೆ.

“ಆಗ ನಾನು ಆ ಗರ್ಭಿಣಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಹೇಳಿದೆ. ನಿರಾಕರಿಸಿ ಹೊರಟು ಹೋದರು. ಈ ಎಲ್ಲಾ ಘಟನೆಯ ದಾಖಲಾತಿಗಳನ್ನು ಕೆಜಿಎಂಒಎ (ಕರ್ನಾಟಕ ಸರ್ಕಾರಿ ಮೆಡಿಕಲ್ ಆಫೀಸರ್ಸ್ ಅಸೋಸಿಯೇಷನ್) ವೆಬ್‌ಸೈಟ್‌ನಲ್ಲಿ ಹಾಕಿದ್ದೇನೆ. ಇದೇ ಹೇಳಿಕೆಯನ್ನು ನಾನು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಲಿಖಿತ ರೂಪದಲ್ಲಿ ಸಲ್ಲಿಸಿರುತ್ತೇನೆ” ಎಂದಿದ್ದಾರೆ.

“ಆರೋಗ್ಯ ಸಚಿವರ ವಿಚಾರಣೆಯ ಸಮಯದಲ್ಲಿ ಮಹಿಳಾ ಎಎಸ್‌ಐ ತಮ್ಮ ಪ್ರಥಮ ವರದಿಯನ್ನು ತಿಳಿಸಿದ್ದಾರೆ. ಆ ಮಹಿಳೆಯು ಮೊದಲ ಹೆರಿಗೆಯನ್ನು ಮನೆಯಲ್ಲೇ ಮಾಡಿಸಿಕೊಂಡಿದ್ದರು. ಈ ಹೆರಿಗೆಯನ್ನೂ ಮನೆಯಲ್ಲೇ ಮಾಡಿಸಿಕೊಳ್ಳುತ್ತೇನೆ ಎಂದು ತನ್ನ ವೈಯಕ್ತಿಕ ಕಾರಣಗಳಿಂದ ಆಸ್ಪತ್ರೆಗೆ ಬರಲು ನಿರಾಕರಿಸಿದ್ದಳು. ಪಕ್ಕದ ಮನೆಯ ವೃದ್ಧೆಯರು ಬಲವಂತವಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿರುವುದಾಗಿ ಮಹಿಳಾ ಎಎಸ್‌ಐ ಹೇಳಿದ್ದಾರೆ. ಸಚಿವರು ನಮ್ಮ ಹೇಳಿಕೆಯನ್ನು, ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ನಾನು ಯಾವುದೇ ಕರ್ತವ್ಯಲೋಪ ಎಸಗದಿದ್ದರೂ ಏಕಪಕ್ಷೀಯವಾಗಿ, ಯಾವುದೇ ಹೇಳಿಕೆ ಹಾಗೂ ದೃಶ್ಯಾವಳಿಗಳನ್ನು ಗಮನಿಸದೆ ಕರ್ತವ್ಯ ಲೋಪದ ಆರೋಪ ಹೊರಿಸಿ ಮಾನ್ಯ ಆಯುಕ್ತರು ನನ್ನನ್ನು ದಿನಾಂಕ 4/11/2022ರಂದು ಸೇವೆಯಿಂದ ಅಮಾನತು ಮಾಡಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಸಚಿವರು ಕೂಡ ನನ್ನನ್ನು ಏಕಪಕ್ಷೀಯವಾಗಿ ಅಮಾನತು ಮಾಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏನಿದು ಘಟನೆ?

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿದೆ ಎಂಬ ಆರೋಪ ಬಂದಿದೆ.

ಇದನ್ನೂ ಓದಿರಿ: ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ ಎಂದು ದೂರಲಾಗಿದೆ.

ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದರು ಎಂಬ ಸಂಗತಿ ಹೊರಬಿದ್ದಿತ್ತು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಯಿತು. ಅಂದು ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಸರ್ಕಾರ ಅಮಾನತು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರಿಗೆ ಸಮರ್ಥನೆ ನೀಡಲು ಅವಕಾಶ ಖಂಡಿತ ಕೊಡಬೇಕು ಅದು ಅವರ ಹಕ್ಕು. ಬೇಕಾದರೆ ಮಂಪರು ಪರೀಕ್ಷೆ ಮಾಡಿ ನಿಜ ಹೊರತೆಗೆಯಿರಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...