Homeಕರ್ನಾಟಕತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಅಮಾನತು ಮಾಡಿರುವುದರಿಂದ ಮಾನಸಿಕವಾಗಿ ಕುಗ್ಗಿದ್ದೇನೆ: ಡಾ.ಉಷಾ

- Advertisement -
- Advertisement -

ಗರ್ಭಿಣಿ ಮಹಿಳೆ ಹಾಗೂ ಇಬ್ಬರು ಅವಳಿ ಮಕ್ಕಳ ಸಾವಿನ ಬೆನ್ನಲ್ಲೇ ಅಮಾನತಿಗೆ ಒಳಗಾಗಿರುವ ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯೆಯೊಬ್ಬರು ಪತ್ರ ಬರೆದು, ತಮ್ಮ ಆಕ್ಷೇಪಗಳನ್ನು ದಾಖಲಿಸಿದ್ದಾರೆ.

ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಅಮಾನತಿಗೆ ಒಳಗಾಗಿರುವ ತುಮಕೂರು ಜಿಲ್ಲಾ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾಗಿರುವ ಡಾ.ಎ.ಆರ್‌.ಉಷಾ ಅವರು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ತುಮಕೂರು ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, “ಏಕಪಕ್ಷೀಯವಾಗಿ ಅಮಾನತು ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಪತ್ರಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಡಾ.ಉಷಾ ಅವರು, “ಕಳೆದ ಒಂದು ವರ್ಷದಿಂದ ಸ್ತ್ರೀ ರೋಗ ತಜ್ಞೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ದಿನಾಂಕ 02/11/2022ರಂದು ನಾನು ಕರ್ತವ್ಯನಿರತ ಸ್ತ್ರೀರೋಗ ತಜ್ಞೆಯಾಗಿ ಕೆಲಸ ಮಾಡುತ್ತಿದ್ದೆ. ಅಂದು ಬೆಳಿಗ್ಗೆ 9ರಿಂದ 5.30 ಗಂಟೆಯ ತನಕ ಒಪಿಡಿಯಲ್ಲಿ ಕರ್ತವ್ಯ ನಿರ್ವಹಿಸಿದೆ. ತದನಂತರ ಶಸ್ತ್ರಚಿಕಿತ್ಸಾ ಕೊಠಡಿಗೆ ಹೋದೆನು” ಎಂದು ವಿವರಿಸಿದ್ದಾರೆ.

ಮುಂದುವರಿದು, “ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಸಂಜೆ 5.30ರಿಂದ ರಾತ್ರಿ 9.30ರತನಕ ಇದ್ದೆ. ಎಂಟು ಶಸ್ತ್ರಚಿಕಿತ್ಸೆಗಳನ್ನು ಮುಗಿಸಿಕೊಂಡು, ಬೇರೆ ದಾಖಲಾದ ಗರ್ಭಿಣಿಯರನ್ನು ಪರೀಕ್ಷಿಸಲು ಹೆರಿಗೆ ಕೊಠಡಿಗೆ ಹೋಗುವಾಗ ಒಬ್ಬ ಗರ್ಭಿಣಿಯು ಇಬ್ಬರು ಮಹಿಳಾ ವೃದ್ಧರೊಡನೆ ಕಾರಿಡಾರ್‌ನಲ್ಲಿ ಹೋಗುವುದು ಕಂಡುಬಂತು. ಆಗ ಹೆರಿಗೆ ಕೊಠಡಿಯ ಬಳಿಗೆ ಹೋಗಿ ಕರ್ತವ್ಯನಿರತ ಸ್ನಾತಕೋತ್ತರ ವಿದ್ಯಾರ್ಥಿ ಮತ್ತು ಕರ್ತವ್ಯ ನಿರತ ಶಿಶ್ರೂಷಕಿಯರನ್ನು ವಿಚಾರಣೆ ಮಾಡಿದೆ. ಆ ಗರ್ಭಿಣಿಯು ಪರೀಕ್ಷೆ ಮತ್ತು ದಾಖಲಾತಿ ನಿರಾಕರಿಸಿರುವುದು ಕಂಡು ಬಂತು” ಎಂದು ತಿಳಿಸಿದ್ದಾರೆ.

“ಆಗ ನಾನು ಆ ಗರ್ಭಿಣಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಹೇಳಿದೆ. ನಿರಾಕರಿಸಿ ಹೊರಟು ಹೋದರು. ಈ ಎಲ್ಲಾ ಘಟನೆಯ ದಾಖಲಾತಿಗಳನ್ನು ಕೆಜಿಎಂಒಎ (ಕರ್ನಾಟಕ ಸರ್ಕಾರಿ ಮೆಡಿಕಲ್ ಆಫೀಸರ್ಸ್ ಅಸೋಸಿಯೇಷನ್) ವೆಬ್‌ಸೈಟ್‌ನಲ್ಲಿ ಹಾಕಿದ್ದೇನೆ. ಇದೇ ಹೇಳಿಕೆಯನ್ನು ನಾನು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಲಿಖಿತ ರೂಪದಲ್ಲಿ ಸಲ್ಲಿಸಿರುತ್ತೇನೆ” ಎಂದಿದ್ದಾರೆ.

“ಆರೋಗ್ಯ ಸಚಿವರ ವಿಚಾರಣೆಯ ಸಮಯದಲ್ಲಿ ಮಹಿಳಾ ಎಎಸ್‌ಐ ತಮ್ಮ ಪ್ರಥಮ ವರದಿಯನ್ನು ತಿಳಿಸಿದ್ದಾರೆ. ಆ ಮಹಿಳೆಯು ಮೊದಲ ಹೆರಿಗೆಯನ್ನು ಮನೆಯಲ್ಲೇ ಮಾಡಿಸಿಕೊಂಡಿದ್ದರು. ಈ ಹೆರಿಗೆಯನ್ನೂ ಮನೆಯಲ್ಲೇ ಮಾಡಿಸಿಕೊಳ್ಳುತ್ತೇನೆ ಎಂದು ತನ್ನ ವೈಯಕ್ತಿಕ ಕಾರಣಗಳಿಂದ ಆಸ್ಪತ್ರೆಗೆ ಬರಲು ನಿರಾಕರಿಸಿದ್ದಳು. ಪಕ್ಕದ ಮನೆಯ ವೃದ್ಧೆಯರು ಬಲವಂತವಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿರುವುದಾಗಿ ಮಹಿಳಾ ಎಎಸ್‌ಐ ಹೇಳಿದ್ದಾರೆ. ಸಚಿವರು ನಮ್ಮ ಹೇಳಿಕೆಯನ್ನು, ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ನಾನು ಯಾವುದೇ ಕರ್ತವ್ಯಲೋಪ ಎಸಗದಿದ್ದರೂ ಏಕಪಕ್ಷೀಯವಾಗಿ, ಯಾವುದೇ ಹೇಳಿಕೆ ಹಾಗೂ ದೃಶ್ಯಾವಳಿಗಳನ್ನು ಗಮನಿಸದೆ ಕರ್ತವ್ಯ ಲೋಪದ ಆರೋಪ ಹೊರಿಸಿ ಮಾನ್ಯ ಆಯುಕ್ತರು ನನ್ನನ್ನು ದಿನಾಂಕ 4/11/2022ರಂದು ಸೇವೆಯಿಂದ ಅಮಾನತು ಮಾಡಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಸಚಿವರು ಕೂಡ ನನ್ನನ್ನು ಏಕಪಕ್ಷೀಯವಾಗಿ ಅಮಾನತು ಮಾಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏನಿದು ಘಟನೆ?

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿದೆ ಎಂಬ ಆರೋಪ ಬಂದಿದೆ.

ಇದನ್ನೂ ಓದಿರಿ: ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ ಎಂದು ದೂರಲಾಗಿದೆ.

ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದರು ಎಂಬ ಸಂಗತಿ ಹೊರಬಿದ್ದಿತ್ತು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಯಿತು. ಅಂದು ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಸರ್ಕಾರ ಅಮಾನತು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರಿಗೆ ಸಮರ್ಥನೆ ನೀಡಲು ಅವಕಾಶ ಖಂಡಿತ ಕೊಡಬೇಕು ಅದು ಅವರ ಹಕ್ಕು. ಬೇಕಾದರೆ ಮಂಪರು ಪರೀಕ್ಷೆ ಮಾಡಿ ನಿಜ ಹೊರತೆಗೆಯಿರಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...