Homeಕರ್ನಾಟಕತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಅಮಾನತು ಮಾಡಿರುವುದರಿಂದ ಮಾನಸಿಕವಾಗಿ ಕುಗ್ಗಿದ್ದೇನೆ: ಡಾ.ಉಷಾ

- Advertisement -
- Advertisement -

ಗರ್ಭಿಣಿ ಮಹಿಳೆ ಹಾಗೂ ಇಬ್ಬರು ಅವಳಿ ಮಕ್ಕಳ ಸಾವಿನ ಬೆನ್ನಲ್ಲೇ ಅಮಾನತಿಗೆ ಒಳಗಾಗಿರುವ ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯೆಯೊಬ್ಬರು ಪತ್ರ ಬರೆದು, ತಮ್ಮ ಆಕ್ಷೇಪಗಳನ್ನು ದಾಖಲಿಸಿದ್ದಾರೆ.

ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಅಮಾನತಿಗೆ ಒಳಗಾಗಿರುವ ತುಮಕೂರು ಜಿಲ್ಲಾ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾಗಿರುವ ಡಾ.ಎ.ಆರ್‌.ಉಷಾ ಅವರು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ತುಮಕೂರು ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, “ಏಕಪಕ್ಷೀಯವಾಗಿ ಅಮಾನತು ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಪತ್ರಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಡಾ.ಉಷಾ ಅವರು, “ಕಳೆದ ಒಂದು ವರ್ಷದಿಂದ ಸ್ತ್ರೀ ರೋಗ ತಜ್ಞೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ದಿನಾಂಕ 02/11/2022ರಂದು ನಾನು ಕರ್ತವ್ಯನಿರತ ಸ್ತ್ರೀರೋಗ ತಜ್ಞೆಯಾಗಿ ಕೆಲಸ ಮಾಡುತ್ತಿದ್ದೆ. ಅಂದು ಬೆಳಿಗ್ಗೆ 9ರಿಂದ 5.30 ಗಂಟೆಯ ತನಕ ಒಪಿಡಿಯಲ್ಲಿ ಕರ್ತವ್ಯ ನಿರ್ವಹಿಸಿದೆ. ತದನಂತರ ಶಸ್ತ್ರಚಿಕಿತ್ಸಾ ಕೊಠಡಿಗೆ ಹೋದೆನು” ಎಂದು ವಿವರಿಸಿದ್ದಾರೆ.

ಮುಂದುವರಿದು, “ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಸಂಜೆ 5.30ರಿಂದ ರಾತ್ರಿ 9.30ರತನಕ ಇದ್ದೆ. ಎಂಟು ಶಸ್ತ್ರಚಿಕಿತ್ಸೆಗಳನ್ನು ಮುಗಿಸಿಕೊಂಡು, ಬೇರೆ ದಾಖಲಾದ ಗರ್ಭಿಣಿಯರನ್ನು ಪರೀಕ್ಷಿಸಲು ಹೆರಿಗೆ ಕೊಠಡಿಗೆ ಹೋಗುವಾಗ ಒಬ್ಬ ಗರ್ಭಿಣಿಯು ಇಬ್ಬರು ಮಹಿಳಾ ವೃದ್ಧರೊಡನೆ ಕಾರಿಡಾರ್‌ನಲ್ಲಿ ಹೋಗುವುದು ಕಂಡುಬಂತು. ಆಗ ಹೆರಿಗೆ ಕೊಠಡಿಯ ಬಳಿಗೆ ಹೋಗಿ ಕರ್ತವ್ಯನಿರತ ಸ್ನಾತಕೋತ್ತರ ವಿದ್ಯಾರ್ಥಿ ಮತ್ತು ಕರ್ತವ್ಯ ನಿರತ ಶಿಶ್ರೂಷಕಿಯರನ್ನು ವಿಚಾರಣೆ ಮಾಡಿದೆ. ಆ ಗರ್ಭಿಣಿಯು ಪರೀಕ್ಷೆ ಮತ್ತು ದಾಖಲಾತಿ ನಿರಾಕರಿಸಿರುವುದು ಕಂಡು ಬಂತು” ಎಂದು ತಿಳಿಸಿದ್ದಾರೆ.

“ಆಗ ನಾನು ಆ ಗರ್ಭಿಣಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಹೇಳಿದೆ. ನಿರಾಕರಿಸಿ ಹೊರಟು ಹೋದರು. ಈ ಎಲ್ಲಾ ಘಟನೆಯ ದಾಖಲಾತಿಗಳನ್ನು ಕೆಜಿಎಂಒಎ (ಕರ್ನಾಟಕ ಸರ್ಕಾರಿ ಮೆಡಿಕಲ್ ಆಫೀಸರ್ಸ್ ಅಸೋಸಿಯೇಷನ್) ವೆಬ್‌ಸೈಟ್‌ನಲ್ಲಿ ಹಾಕಿದ್ದೇನೆ. ಇದೇ ಹೇಳಿಕೆಯನ್ನು ನಾನು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಲಿಖಿತ ರೂಪದಲ್ಲಿ ಸಲ್ಲಿಸಿರುತ್ತೇನೆ” ಎಂದಿದ್ದಾರೆ.

“ಆರೋಗ್ಯ ಸಚಿವರ ವಿಚಾರಣೆಯ ಸಮಯದಲ್ಲಿ ಮಹಿಳಾ ಎಎಸ್‌ಐ ತಮ್ಮ ಪ್ರಥಮ ವರದಿಯನ್ನು ತಿಳಿಸಿದ್ದಾರೆ. ಆ ಮಹಿಳೆಯು ಮೊದಲ ಹೆರಿಗೆಯನ್ನು ಮನೆಯಲ್ಲೇ ಮಾಡಿಸಿಕೊಂಡಿದ್ದರು. ಈ ಹೆರಿಗೆಯನ್ನೂ ಮನೆಯಲ್ಲೇ ಮಾಡಿಸಿಕೊಳ್ಳುತ್ತೇನೆ ಎಂದು ತನ್ನ ವೈಯಕ್ತಿಕ ಕಾರಣಗಳಿಂದ ಆಸ್ಪತ್ರೆಗೆ ಬರಲು ನಿರಾಕರಿಸಿದ್ದಳು. ಪಕ್ಕದ ಮನೆಯ ವೃದ್ಧೆಯರು ಬಲವಂತವಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿರುವುದಾಗಿ ಮಹಿಳಾ ಎಎಸ್‌ಐ ಹೇಳಿದ್ದಾರೆ. ಸಚಿವರು ನಮ್ಮ ಹೇಳಿಕೆಯನ್ನು, ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ನಾನು ಯಾವುದೇ ಕರ್ತವ್ಯಲೋಪ ಎಸಗದಿದ್ದರೂ ಏಕಪಕ್ಷೀಯವಾಗಿ, ಯಾವುದೇ ಹೇಳಿಕೆ ಹಾಗೂ ದೃಶ್ಯಾವಳಿಗಳನ್ನು ಗಮನಿಸದೆ ಕರ್ತವ್ಯ ಲೋಪದ ಆರೋಪ ಹೊರಿಸಿ ಮಾನ್ಯ ಆಯುಕ್ತರು ನನ್ನನ್ನು ದಿನಾಂಕ 4/11/2022ರಂದು ಸೇವೆಯಿಂದ ಅಮಾನತು ಮಾಡಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಸಚಿವರು ಕೂಡ ನನ್ನನ್ನು ಏಕಪಕ್ಷೀಯವಾಗಿ ಅಮಾನತು ಮಾಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏನಿದು ಘಟನೆ?

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿದೆ ಎಂಬ ಆರೋಪ ಬಂದಿದೆ.

ಇದನ್ನೂ ಓದಿರಿ: ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ ಎಂದು ದೂರಲಾಗಿದೆ.

ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದರು ಎಂಬ ಸಂಗತಿ ಹೊರಬಿದ್ದಿತ್ತು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಯಿತು. ಅಂದು ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಸರ್ಕಾರ ಅಮಾನತು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರಿಗೆ ಸಮರ್ಥನೆ ನೀಡಲು ಅವಕಾಶ ಖಂಡಿತ ಕೊಡಬೇಕು ಅದು ಅವರ ಹಕ್ಕು. ಬೇಕಾದರೆ ಮಂಪರು ಪರೀಕ್ಷೆ ಮಾಡಿ ನಿಜ ಹೊರತೆಗೆಯಿರಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...