Homeಕರ್ನಾಟಕತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಅಮಾನತು ಮಾಡಿರುವುದರಿಂದ ಮಾನಸಿಕವಾಗಿ ಕುಗ್ಗಿದ್ದೇನೆ: ಡಾ.ಉಷಾ

- Advertisement -
- Advertisement -

ಗರ್ಭಿಣಿ ಮಹಿಳೆ ಹಾಗೂ ಇಬ್ಬರು ಅವಳಿ ಮಕ್ಕಳ ಸಾವಿನ ಬೆನ್ನಲ್ಲೇ ಅಮಾನತಿಗೆ ಒಳಗಾಗಿರುವ ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯೆಯೊಬ್ಬರು ಪತ್ರ ಬರೆದು, ತಮ್ಮ ಆಕ್ಷೇಪಗಳನ್ನು ದಾಖಲಿಸಿದ್ದಾರೆ.

ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಅಮಾನತಿಗೆ ಒಳಗಾಗಿರುವ ತುಮಕೂರು ಜಿಲ್ಲಾ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾಗಿರುವ ಡಾ.ಎ.ಆರ್‌.ಉಷಾ ಅವರು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ತುಮಕೂರು ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, “ಏಕಪಕ್ಷೀಯವಾಗಿ ಅಮಾನತು ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಪತ್ರಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಡಾ.ಉಷಾ ಅವರು, “ಕಳೆದ ಒಂದು ವರ್ಷದಿಂದ ಸ್ತ್ರೀ ರೋಗ ತಜ್ಞೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ದಿನಾಂಕ 02/11/2022ರಂದು ನಾನು ಕರ್ತವ್ಯನಿರತ ಸ್ತ್ರೀರೋಗ ತಜ್ಞೆಯಾಗಿ ಕೆಲಸ ಮಾಡುತ್ತಿದ್ದೆ. ಅಂದು ಬೆಳಿಗ್ಗೆ 9ರಿಂದ 5.30 ಗಂಟೆಯ ತನಕ ಒಪಿಡಿಯಲ್ಲಿ ಕರ್ತವ್ಯ ನಿರ್ವಹಿಸಿದೆ. ತದನಂತರ ಶಸ್ತ್ರಚಿಕಿತ್ಸಾ ಕೊಠಡಿಗೆ ಹೋದೆನು” ಎಂದು ವಿವರಿಸಿದ್ದಾರೆ.

ಮುಂದುವರಿದು, “ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಸಂಜೆ 5.30ರಿಂದ ರಾತ್ರಿ 9.30ರತನಕ ಇದ್ದೆ. ಎಂಟು ಶಸ್ತ್ರಚಿಕಿತ್ಸೆಗಳನ್ನು ಮುಗಿಸಿಕೊಂಡು, ಬೇರೆ ದಾಖಲಾದ ಗರ್ಭಿಣಿಯರನ್ನು ಪರೀಕ್ಷಿಸಲು ಹೆರಿಗೆ ಕೊಠಡಿಗೆ ಹೋಗುವಾಗ ಒಬ್ಬ ಗರ್ಭಿಣಿಯು ಇಬ್ಬರು ಮಹಿಳಾ ವೃದ್ಧರೊಡನೆ ಕಾರಿಡಾರ್‌ನಲ್ಲಿ ಹೋಗುವುದು ಕಂಡುಬಂತು. ಆಗ ಹೆರಿಗೆ ಕೊಠಡಿಯ ಬಳಿಗೆ ಹೋಗಿ ಕರ್ತವ್ಯನಿರತ ಸ್ನಾತಕೋತ್ತರ ವಿದ್ಯಾರ್ಥಿ ಮತ್ತು ಕರ್ತವ್ಯ ನಿರತ ಶಿಶ್ರೂಷಕಿಯರನ್ನು ವಿಚಾರಣೆ ಮಾಡಿದೆ. ಆ ಗರ್ಭಿಣಿಯು ಪರೀಕ್ಷೆ ಮತ್ತು ದಾಖಲಾತಿ ನಿರಾಕರಿಸಿರುವುದು ಕಂಡು ಬಂತು” ಎಂದು ತಿಳಿಸಿದ್ದಾರೆ.

“ಆಗ ನಾನು ಆ ಗರ್ಭಿಣಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಹೇಳಿದೆ. ನಿರಾಕರಿಸಿ ಹೊರಟು ಹೋದರು. ಈ ಎಲ್ಲಾ ಘಟನೆಯ ದಾಖಲಾತಿಗಳನ್ನು ಕೆಜಿಎಂಒಎ (ಕರ್ನಾಟಕ ಸರ್ಕಾರಿ ಮೆಡಿಕಲ್ ಆಫೀಸರ್ಸ್ ಅಸೋಸಿಯೇಷನ್) ವೆಬ್‌ಸೈಟ್‌ನಲ್ಲಿ ಹಾಕಿದ್ದೇನೆ. ಇದೇ ಹೇಳಿಕೆಯನ್ನು ನಾನು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಲಿಖಿತ ರೂಪದಲ್ಲಿ ಸಲ್ಲಿಸಿರುತ್ತೇನೆ” ಎಂದಿದ್ದಾರೆ.

“ಆರೋಗ್ಯ ಸಚಿವರ ವಿಚಾರಣೆಯ ಸಮಯದಲ್ಲಿ ಮಹಿಳಾ ಎಎಸ್‌ಐ ತಮ್ಮ ಪ್ರಥಮ ವರದಿಯನ್ನು ತಿಳಿಸಿದ್ದಾರೆ. ಆ ಮಹಿಳೆಯು ಮೊದಲ ಹೆರಿಗೆಯನ್ನು ಮನೆಯಲ್ಲೇ ಮಾಡಿಸಿಕೊಂಡಿದ್ದರು. ಈ ಹೆರಿಗೆಯನ್ನೂ ಮನೆಯಲ್ಲೇ ಮಾಡಿಸಿಕೊಳ್ಳುತ್ತೇನೆ ಎಂದು ತನ್ನ ವೈಯಕ್ತಿಕ ಕಾರಣಗಳಿಂದ ಆಸ್ಪತ್ರೆಗೆ ಬರಲು ನಿರಾಕರಿಸಿದ್ದಳು. ಪಕ್ಕದ ಮನೆಯ ವೃದ್ಧೆಯರು ಬಲವಂತವಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿರುವುದಾಗಿ ಮಹಿಳಾ ಎಎಸ್‌ಐ ಹೇಳಿದ್ದಾರೆ. ಸಚಿವರು ನಮ್ಮ ಹೇಳಿಕೆಯನ್ನು, ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ನಾನು ಯಾವುದೇ ಕರ್ತವ್ಯಲೋಪ ಎಸಗದಿದ್ದರೂ ಏಕಪಕ್ಷೀಯವಾಗಿ, ಯಾವುದೇ ಹೇಳಿಕೆ ಹಾಗೂ ದೃಶ್ಯಾವಳಿಗಳನ್ನು ಗಮನಿಸದೆ ಕರ್ತವ್ಯ ಲೋಪದ ಆರೋಪ ಹೊರಿಸಿ ಮಾನ್ಯ ಆಯುಕ್ತರು ನನ್ನನ್ನು ದಿನಾಂಕ 4/11/2022ರಂದು ಸೇವೆಯಿಂದ ಅಮಾನತು ಮಾಡಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಸಚಿವರು ಕೂಡ ನನ್ನನ್ನು ಏಕಪಕ್ಷೀಯವಾಗಿ ಅಮಾನತು ಮಾಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏನಿದು ಘಟನೆ?

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿದೆ ಎಂಬ ಆರೋಪ ಬಂದಿದೆ.

ಇದನ್ನೂ ಓದಿರಿ: ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ ಎಂದು ದೂರಲಾಗಿದೆ.

ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದರು ಎಂಬ ಸಂಗತಿ ಹೊರಬಿದ್ದಿತ್ತು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಯಿತು. ಅಂದು ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಸರ್ಕಾರ ಅಮಾನತು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರಿಗೆ ಸಮರ್ಥನೆ ನೀಡಲು ಅವಕಾಶ ಖಂಡಿತ ಕೊಡಬೇಕು ಅದು ಅವರ ಹಕ್ಕು. ಬೇಕಾದರೆ ಮಂಪರು ಪರೀಕ್ಷೆ ಮಾಡಿ ನಿಜ ಹೊರತೆಗೆಯಿರಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...