Homeಕರ್ನಾಟಕತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ...

ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

- Advertisement -
- Advertisement -

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ.

ಮೃತ ಮಹಿಳೆಗೆ ಆರು ವರ್ಷದ ಮಗಳಿದ್ದಾಳೆ. ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅನಾಥ ಮಹಿಳೆಯ ನೆರೆಹೊರೆಯವರು ಎಷ್ಟೇ ಬೇಡಿಕೊಂಡರೂ ಚಿಕಿತ್ಸೆಗೆ ಒಪ್ಪಲೇ ಇಲ್ಲ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿ ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದರು. ಬೆಂಗಳೂರಿಗೆ ಆಂಬುಲೆನ್ಸ್‌ನಲ್ಲಿ ತೆರಳಲು ಹಣ ಹೊಂದಿಸಲಾಗದ ಕಾರಣ ರಾತ್ರಿ ಮನೆಗೆ ವಾಪಸ್ಸಾಗಿದ್ದರು. ಗುರುವಾರ ಬೆಳಗಿನ ಜಾವ ಮತ್ತೆ ಹೆರಿಗೆ ನೋವು ಕಾಣಿಸಿಕೊಂಡು, ಮನೆಯಲ್ಲಿಯೇ ಹೆರಿಗೆಯಾಗಿದೆ. ಮೊದಲ ಗಂಡು ಮಗು ಜನಿಸುವ ಹೊತ್ತಿಗೆ ತೀವ್ರ ರಕ್ತ ಸ್ರಾವವಾಗಿದ್ದು, ಆ ವೇಳೆಗೆ ಮಗುವೂ ಸಾವನ್ನಪ್ಪಿದೆ. ಮತ್ತೊಂದು ಗಂಡು ಮಗು ಜನಿಸುವ ಮುನ್ನವೇ ಮಹಿಳೆಯೂ ಮೃತಪಟ್ಟಿದ್ದಾರೆ.

ಮೂಲತಃ ತಮಿಳುನಾಡಿನವರಾದ ಕಸ್ತೂರಿ ಮತ್ತು ಆಕೆಯ ಗಂಡ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ನಾಲ್ಕು ತಿಂಗಳ ಹಿಂದೆ ಕಸ್ತೂರಿಯವರ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತದಲ್ಲಿ ತನ್ನ ಆರು ವರ್ಷದ ಮಗುವಿನೊಂದಿಗೆ ಕಸ್ತೂರಿಯವರು ತುಮಕೂರಿಗೆ ವಲಸೆ ಬಂದು ನೆಲೆಸಿದ್ದರು. ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಭಾರತೀನಗರದಲ್ಲಿ ಸರೋಜಮ್ಮ ಎಂಬುವರು ನೀಡಿದ್ದ ಒಂದು ಸಣ್ಣ ಮನೆಯಲ್ಲಿ ವಾಸವಿದ್ದರು ಎಂದು ವರದಿಯಾಗಿದೆ.

ಜಿಲ್ಲಾ ಆಸ್ಪತ್ರೆಯ ವರ್ತನೆಗೆ ಬೇಸತ್ತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎನ್.ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ವೀಣಾ ಅವರು ಜನರಿಂದ ಮಾಹಿತಿ ಪಡೆದರು.

‘ತುಂಬು ಗರ್ಭಿಣಿಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡದೆ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ. ಕರ್ತವ್ಯ ಲೋಪ ಎದ್ದು ಕಾಣುತ್ತದೆ. ವೈದ್ಯೆ ಮತ್ತು ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಗಿದೆ. ಬುಧವಾರ ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಸರ್ಜನ್ ಡಾ.ವೀಣಾ ಆದೇಶಿಸಿದ್ದಾರೆ. ಡಾ.ವೀಣಾ ಅವರಿಗೆ ಕಾರಣ ಕೇಳಿ ಡಿಎಚ್‌ಒ ಡಾ.ಬಿ.ಎನ್.ಮಂಜುನಾಥ್ ನೋಟಿಸ್ ನೀಡಿದ್ದಾರೆ.

ಸುಧಾಕರ್‌ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ತುಮಕೂರು ಜಿಲ್ಲೆಯ ವೈದ್ಯರ ನಿರ್ಲಕ್ಷದಿಂದಾಗಿ ನಡೆದ ಬಾಣಂತಿ ಮತ್ತು ಎರಡು ಹಸುಗೂಸುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಇಡೀ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಡಾ.ಸುಧಾಕರ್ ಅವರೇ ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ” ಎಂದು ಟೀಕಿಸಿದ್ದಾರೆ.

“ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 40% ಕಮಿಷನ್ ನೀಡಲಿಕ್ಕಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಜನರನ್ನು ಸಾಯಿಸುವ ಸರ್ಕಾರವೇ ಹೊರತು ಬದುಕಿಸುವ ಸರ್ಕಾರ ಅಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದು ಸರ್ಕಾರಿ ಕೊಲೆ: ಕುಮಾರಸ್ವಾಮಿ

ಘಟನೆಯ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, “ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆ. ಬಾಣಂತಿ ಮತ್ತು ಅವಳಿ ಹಸುಗೂಸುಗಳ ಧಾರುಣ ಸಾವಿಗೆ ಆ ವೈದ್ಯೆ ಮತ್ತು ಸರಕಾರವೇ ನೇರ ಹೊಣೆ. ಸ್ವತಃ ವೈದ್ಯರೆಂದು ಹೇಳಿಕೊಳ್ಳುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿ ಆರೋಗ್ಯ ಇಲಾಖೆ ಎಷ್ಟರ ಮಟ್ಟಿಗೆ ಹಳ್ಳಹಿಡಿದು ಹೋಗಿದೆ ಎನ್ನುವುದಕ್ಕೆ ಈ ಸಾವುಗಳೇ ಸಾಕ್ಷಿ. ಮಾನವೀಯತೆ ಇಲ್ಲದ ವೈದ್ಯೆ ಹಾಗೂ ಸರಕಾರವೇ ಮಾಡಿದ ಕೊಲೆಗಳಿವು” ಎಂದಿದ್ದಾರೆ.

“ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿಗಳ ಬದಲಾವಣೆ, ಅಬ್ಬರದ ಪ್ರಚಾರವೇ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ. ಆ ನತದೃಷ್ಟ ಮಹಿಳೆ, ಆಕೆಯ ಮಕ್ಕಳಿಬ್ಬರಿಗೂ ಚಿರಶಾಂತಿ ಸಿಗಲಿ” ಎಂದಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಆರೋಪ ಸಾಬೀತಾದರೆ ವೈದ್ಯರ ವಜಾಕ್ಕೆ ಕ್ರಮ: ಸುಧಾಕರ್‌

ತುಮಕೂರಿನ ಘಟನೆ  ಸಂಬಂಧ ಪ್ರಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, “ದುರ್ದೈವವಶಾತ್ ನಡೆದಿರುವ ಈ ಘಟನೆ ನನಗೆ ಅತೀವ ನೋವು ತಂದಿದ್ದು ನನ್ನಲ್ಲಿ ದಿಗ್ಭ್ರಮೆ ಮೂಡಿಸಿದೆ. ಮೇಲ್ನೋಟಕ್ಕೆ ಹೆರಿಗೆ ವಾರ್ಡ್‌ನ ಮೂವರು ದಾದಿಯರು ಹಾಗೂ ಕರ್ತವ್ಯ ನಿರತ ವೈದ್ಯರ ಕರ್ತವ್ಯಲೋಪ ಕಂಡುಬಂದಿದ್ದು, ತನಿಖೆಗೆ ಆದೇಶ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಲ್ವರನ್ನೂ ಅಮಾನತು ಮಾಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು, ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿದೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ರೋಗಿಯ ಯಾವುದೇ ದಾಖಲಾತಿಗಳನ್ನು ನೀಡಲು ಒತ್ತಾಯಿಸಬಾರದು ಎಂದು ಈಗಾಗಲೇ ಸರ್ಕಾರದ ಆದೇಶವಿದ್ದು, ಮತ್ತೊಮ್ಮೆ ಆದೇಶವನ್ನು ಪ್ರಕಟಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಈ ಘಟನೆಯನ್ನು ನಮ್ಮ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಘಟನೆಯ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಇನ್ನೆರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ. ತನಿಖೆಯ ವರದಿಯಲ್ಲಿ ಆರೋಪ ಸಾಬೀತಾದರೆ ಅಮಾನತುಗೊಂಡಿರುವ ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸುವುದಲ್ಲದೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ಮುನ್ನಚ್ಚರಿಕೆ‌ ತೆಗೆದುಕೊಳ್ಳುವಂತೆ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...