Homeಕರ್ನಾಟಕತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ...

ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

- Advertisement -
- Advertisement -

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ.

ಮೃತ ಮಹಿಳೆಗೆ ಆರು ವರ್ಷದ ಮಗಳಿದ್ದಾಳೆ. ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅನಾಥ ಮಹಿಳೆಯ ನೆರೆಹೊರೆಯವರು ಎಷ್ಟೇ ಬೇಡಿಕೊಂಡರೂ ಚಿಕಿತ್ಸೆಗೆ ಒಪ್ಪಲೇ ಇಲ್ಲ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿ ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದರು. ಬೆಂಗಳೂರಿಗೆ ಆಂಬುಲೆನ್ಸ್‌ನಲ್ಲಿ ತೆರಳಲು ಹಣ ಹೊಂದಿಸಲಾಗದ ಕಾರಣ ರಾತ್ರಿ ಮನೆಗೆ ವಾಪಸ್ಸಾಗಿದ್ದರು. ಗುರುವಾರ ಬೆಳಗಿನ ಜಾವ ಮತ್ತೆ ಹೆರಿಗೆ ನೋವು ಕಾಣಿಸಿಕೊಂಡು, ಮನೆಯಲ್ಲಿಯೇ ಹೆರಿಗೆಯಾಗಿದೆ. ಮೊದಲ ಗಂಡು ಮಗು ಜನಿಸುವ ಹೊತ್ತಿಗೆ ತೀವ್ರ ರಕ್ತ ಸ್ರಾವವಾಗಿದ್ದು, ಆ ವೇಳೆಗೆ ಮಗುವೂ ಸಾವನ್ನಪ್ಪಿದೆ. ಮತ್ತೊಂದು ಗಂಡು ಮಗು ಜನಿಸುವ ಮುನ್ನವೇ ಮಹಿಳೆಯೂ ಮೃತಪಟ್ಟಿದ್ದಾರೆ.

ಮೂಲತಃ ತಮಿಳುನಾಡಿನವರಾದ ಕಸ್ತೂರಿ ಮತ್ತು ಆಕೆಯ ಗಂಡ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ನಾಲ್ಕು ತಿಂಗಳ ಹಿಂದೆ ಕಸ್ತೂರಿಯವರ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತದಲ್ಲಿ ತನ್ನ ಆರು ವರ್ಷದ ಮಗುವಿನೊಂದಿಗೆ ಕಸ್ತೂರಿಯವರು ತುಮಕೂರಿಗೆ ವಲಸೆ ಬಂದು ನೆಲೆಸಿದ್ದರು. ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಭಾರತೀನಗರದಲ್ಲಿ ಸರೋಜಮ್ಮ ಎಂಬುವರು ನೀಡಿದ್ದ ಒಂದು ಸಣ್ಣ ಮನೆಯಲ್ಲಿ ವಾಸವಿದ್ದರು ಎಂದು ವರದಿಯಾಗಿದೆ.

ಜಿಲ್ಲಾ ಆಸ್ಪತ್ರೆಯ ವರ್ತನೆಗೆ ಬೇಸತ್ತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎನ್.ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ವೀಣಾ ಅವರು ಜನರಿಂದ ಮಾಹಿತಿ ಪಡೆದರು.

‘ತುಂಬು ಗರ್ಭಿಣಿಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡದೆ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ. ಕರ್ತವ್ಯ ಲೋಪ ಎದ್ದು ಕಾಣುತ್ತದೆ. ವೈದ್ಯೆ ಮತ್ತು ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಗಿದೆ. ಬುಧವಾರ ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಸರ್ಜನ್ ಡಾ.ವೀಣಾ ಆದೇಶಿಸಿದ್ದಾರೆ. ಡಾ.ವೀಣಾ ಅವರಿಗೆ ಕಾರಣ ಕೇಳಿ ಡಿಎಚ್‌ಒ ಡಾ.ಬಿ.ಎನ್.ಮಂಜುನಾಥ್ ನೋಟಿಸ್ ನೀಡಿದ್ದಾರೆ.

ಸುಧಾಕರ್‌ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ತುಮಕೂರು ಜಿಲ್ಲೆಯ ವೈದ್ಯರ ನಿರ್ಲಕ್ಷದಿಂದಾಗಿ ನಡೆದ ಬಾಣಂತಿ ಮತ್ತು ಎರಡು ಹಸುಗೂಸುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಇಡೀ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಡಾ.ಸುಧಾಕರ್ ಅವರೇ ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ” ಎಂದು ಟೀಕಿಸಿದ್ದಾರೆ.

“ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 40% ಕಮಿಷನ್ ನೀಡಲಿಕ್ಕಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಜನರನ್ನು ಸಾಯಿಸುವ ಸರ್ಕಾರವೇ ಹೊರತು ಬದುಕಿಸುವ ಸರ್ಕಾರ ಅಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದು ಸರ್ಕಾರಿ ಕೊಲೆ: ಕುಮಾರಸ್ವಾಮಿ

ಘಟನೆಯ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, “ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆ. ಬಾಣಂತಿ ಮತ್ತು ಅವಳಿ ಹಸುಗೂಸುಗಳ ಧಾರುಣ ಸಾವಿಗೆ ಆ ವೈದ್ಯೆ ಮತ್ತು ಸರಕಾರವೇ ನೇರ ಹೊಣೆ. ಸ್ವತಃ ವೈದ್ಯರೆಂದು ಹೇಳಿಕೊಳ್ಳುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿ ಆರೋಗ್ಯ ಇಲಾಖೆ ಎಷ್ಟರ ಮಟ್ಟಿಗೆ ಹಳ್ಳಹಿಡಿದು ಹೋಗಿದೆ ಎನ್ನುವುದಕ್ಕೆ ಈ ಸಾವುಗಳೇ ಸಾಕ್ಷಿ. ಮಾನವೀಯತೆ ಇಲ್ಲದ ವೈದ್ಯೆ ಹಾಗೂ ಸರಕಾರವೇ ಮಾಡಿದ ಕೊಲೆಗಳಿವು” ಎಂದಿದ್ದಾರೆ.

“ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿಗಳ ಬದಲಾವಣೆ, ಅಬ್ಬರದ ಪ್ರಚಾರವೇ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ. ಆ ನತದೃಷ್ಟ ಮಹಿಳೆ, ಆಕೆಯ ಮಕ್ಕಳಿಬ್ಬರಿಗೂ ಚಿರಶಾಂತಿ ಸಿಗಲಿ” ಎಂದಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಆರೋಪ ಸಾಬೀತಾದರೆ ವೈದ್ಯರ ವಜಾಕ್ಕೆ ಕ್ರಮ: ಸುಧಾಕರ್‌

ತುಮಕೂರಿನ ಘಟನೆ  ಸಂಬಂಧ ಪ್ರಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, “ದುರ್ದೈವವಶಾತ್ ನಡೆದಿರುವ ಈ ಘಟನೆ ನನಗೆ ಅತೀವ ನೋವು ತಂದಿದ್ದು ನನ್ನಲ್ಲಿ ದಿಗ್ಭ್ರಮೆ ಮೂಡಿಸಿದೆ. ಮೇಲ್ನೋಟಕ್ಕೆ ಹೆರಿಗೆ ವಾರ್ಡ್‌ನ ಮೂವರು ದಾದಿಯರು ಹಾಗೂ ಕರ್ತವ್ಯ ನಿರತ ವೈದ್ಯರ ಕರ್ತವ್ಯಲೋಪ ಕಂಡುಬಂದಿದ್ದು, ತನಿಖೆಗೆ ಆದೇಶ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಲ್ವರನ್ನೂ ಅಮಾನತು ಮಾಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು, ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿದೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ರೋಗಿಯ ಯಾವುದೇ ದಾಖಲಾತಿಗಳನ್ನು ನೀಡಲು ಒತ್ತಾಯಿಸಬಾರದು ಎಂದು ಈಗಾಗಲೇ ಸರ್ಕಾರದ ಆದೇಶವಿದ್ದು, ಮತ್ತೊಮ್ಮೆ ಆದೇಶವನ್ನು ಪ್ರಕಟಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಈ ಘಟನೆಯನ್ನು ನಮ್ಮ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಘಟನೆಯ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಇನ್ನೆರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ. ತನಿಖೆಯ ವರದಿಯಲ್ಲಿ ಆರೋಪ ಸಾಬೀತಾದರೆ ಅಮಾನತುಗೊಂಡಿರುವ ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸುವುದಲ್ಲದೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ಮುನ್ನಚ್ಚರಿಕೆ‌ ತೆಗೆದುಕೊಳ್ಳುವಂತೆ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...