Homeಕರ್ನಾಟಕತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ...

ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

- Advertisement -
- Advertisement -

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ.

ಮೃತ ಮಹಿಳೆಗೆ ಆರು ವರ್ಷದ ಮಗಳಿದ್ದಾಳೆ. ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅನಾಥ ಮಹಿಳೆಯ ನೆರೆಹೊರೆಯವರು ಎಷ್ಟೇ ಬೇಡಿಕೊಂಡರೂ ಚಿಕಿತ್ಸೆಗೆ ಒಪ್ಪಲೇ ಇಲ್ಲ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿ ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದರು. ಬೆಂಗಳೂರಿಗೆ ಆಂಬುಲೆನ್ಸ್‌ನಲ್ಲಿ ತೆರಳಲು ಹಣ ಹೊಂದಿಸಲಾಗದ ಕಾರಣ ರಾತ್ರಿ ಮನೆಗೆ ವಾಪಸ್ಸಾಗಿದ್ದರು. ಗುರುವಾರ ಬೆಳಗಿನ ಜಾವ ಮತ್ತೆ ಹೆರಿಗೆ ನೋವು ಕಾಣಿಸಿಕೊಂಡು, ಮನೆಯಲ್ಲಿಯೇ ಹೆರಿಗೆಯಾಗಿದೆ. ಮೊದಲ ಗಂಡು ಮಗು ಜನಿಸುವ ಹೊತ್ತಿಗೆ ತೀವ್ರ ರಕ್ತ ಸ್ರಾವವಾಗಿದ್ದು, ಆ ವೇಳೆಗೆ ಮಗುವೂ ಸಾವನ್ನಪ್ಪಿದೆ. ಮತ್ತೊಂದು ಗಂಡು ಮಗು ಜನಿಸುವ ಮುನ್ನವೇ ಮಹಿಳೆಯೂ ಮೃತಪಟ್ಟಿದ್ದಾರೆ.

ಮೂಲತಃ ತಮಿಳುನಾಡಿನವರಾದ ಕಸ್ತೂರಿ ಮತ್ತು ಆಕೆಯ ಗಂಡ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ನಾಲ್ಕು ತಿಂಗಳ ಹಿಂದೆ ಕಸ್ತೂರಿಯವರ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತದಲ್ಲಿ ತನ್ನ ಆರು ವರ್ಷದ ಮಗುವಿನೊಂದಿಗೆ ಕಸ್ತೂರಿಯವರು ತುಮಕೂರಿಗೆ ವಲಸೆ ಬಂದು ನೆಲೆಸಿದ್ದರು. ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಭಾರತೀನಗರದಲ್ಲಿ ಸರೋಜಮ್ಮ ಎಂಬುವರು ನೀಡಿದ್ದ ಒಂದು ಸಣ್ಣ ಮನೆಯಲ್ಲಿ ವಾಸವಿದ್ದರು ಎಂದು ವರದಿಯಾಗಿದೆ.

ಜಿಲ್ಲಾ ಆಸ್ಪತ್ರೆಯ ವರ್ತನೆಗೆ ಬೇಸತ್ತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎನ್.ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ವೀಣಾ ಅವರು ಜನರಿಂದ ಮಾಹಿತಿ ಪಡೆದರು.

‘ತುಂಬು ಗರ್ಭಿಣಿಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡದೆ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ. ಕರ್ತವ್ಯ ಲೋಪ ಎದ್ದು ಕಾಣುತ್ತದೆ. ವೈದ್ಯೆ ಮತ್ತು ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಗಿದೆ. ಬುಧವಾರ ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಸರ್ಜನ್ ಡಾ.ವೀಣಾ ಆದೇಶಿಸಿದ್ದಾರೆ. ಡಾ.ವೀಣಾ ಅವರಿಗೆ ಕಾರಣ ಕೇಳಿ ಡಿಎಚ್‌ಒ ಡಾ.ಬಿ.ಎನ್.ಮಂಜುನಾಥ್ ನೋಟಿಸ್ ನೀಡಿದ್ದಾರೆ.

ಸುಧಾಕರ್‌ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ತುಮಕೂರು ಜಿಲ್ಲೆಯ ವೈದ್ಯರ ನಿರ್ಲಕ್ಷದಿಂದಾಗಿ ನಡೆದ ಬಾಣಂತಿ ಮತ್ತು ಎರಡು ಹಸುಗೂಸುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಇಡೀ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಡಾ.ಸುಧಾಕರ್ ಅವರೇ ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ” ಎಂದು ಟೀಕಿಸಿದ್ದಾರೆ.

“ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 40% ಕಮಿಷನ್ ನೀಡಲಿಕ್ಕಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಜನರನ್ನು ಸಾಯಿಸುವ ಸರ್ಕಾರವೇ ಹೊರತು ಬದುಕಿಸುವ ಸರ್ಕಾರ ಅಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದು ಸರ್ಕಾರಿ ಕೊಲೆ: ಕುಮಾರಸ್ವಾಮಿ

ಘಟನೆಯ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, “ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆ. ಬಾಣಂತಿ ಮತ್ತು ಅವಳಿ ಹಸುಗೂಸುಗಳ ಧಾರುಣ ಸಾವಿಗೆ ಆ ವೈದ್ಯೆ ಮತ್ತು ಸರಕಾರವೇ ನೇರ ಹೊಣೆ. ಸ್ವತಃ ವೈದ್ಯರೆಂದು ಹೇಳಿಕೊಳ್ಳುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿ ಆರೋಗ್ಯ ಇಲಾಖೆ ಎಷ್ಟರ ಮಟ್ಟಿಗೆ ಹಳ್ಳಹಿಡಿದು ಹೋಗಿದೆ ಎನ್ನುವುದಕ್ಕೆ ಈ ಸಾವುಗಳೇ ಸಾಕ್ಷಿ. ಮಾನವೀಯತೆ ಇಲ್ಲದ ವೈದ್ಯೆ ಹಾಗೂ ಸರಕಾರವೇ ಮಾಡಿದ ಕೊಲೆಗಳಿವು” ಎಂದಿದ್ದಾರೆ.

“ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿಗಳ ಬದಲಾವಣೆ, ಅಬ್ಬರದ ಪ್ರಚಾರವೇ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ. ಆ ನತದೃಷ್ಟ ಮಹಿಳೆ, ಆಕೆಯ ಮಕ್ಕಳಿಬ್ಬರಿಗೂ ಚಿರಶಾಂತಿ ಸಿಗಲಿ” ಎಂದಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಆರೋಪ ಸಾಬೀತಾದರೆ ವೈದ್ಯರ ವಜಾಕ್ಕೆ ಕ್ರಮ: ಸುಧಾಕರ್‌

ತುಮಕೂರಿನ ಘಟನೆ  ಸಂಬಂಧ ಪ್ರಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, “ದುರ್ದೈವವಶಾತ್ ನಡೆದಿರುವ ಈ ಘಟನೆ ನನಗೆ ಅತೀವ ನೋವು ತಂದಿದ್ದು ನನ್ನಲ್ಲಿ ದಿಗ್ಭ್ರಮೆ ಮೂಡಿಸಿದೆ. ಮೇಲ್ನೋಟಕ್ಕೆ ಹೆರಿಗೆ ವಾರ್ಡ್‌ನ ಮೂವರು ದಾದಿಯರು ಹಾಗೂ ಕರ್ತವ್ಯ ನಿರತ ವೈದ್ಯರ ಕರ್ತವ್ಯಲೋಪ ಕಂಡುಬಂದಿದ್ದು, ತನಿಖೆಗೆ ಆದೇಶ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಲ್ವರನ್ನೂ ಅಮಾನತು ಮಾಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು, ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿದೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ರೋಗಿಯ ಯಾವುದೇ ದಾಖಲಾತಿಗಳನ್ನು ನೀಡಲು ಒತ್ತಾಯಿಸಬಾರದು ಎಂದು ಈಗಾಗಲೇ ಸರ್ಕಾರದ ಆದೇಶವಿದ್ದು, ಮತ್ತೊಮ್ಮೆ ಆದೇಶವನ್ನು ಪ್ರಕಟಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಈ ಘಟನೆಯನ್ನು ನಮ್ಮ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಘಟನೆಯ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಇನ್ನೆರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ. ತನಿಖೆಯ ವರದಿಯಲ್ಲಿ ಆರೋಪ ಸಾಬೀತಾದರೆ ಅಮಾನತುಗೊಂಡಿರುವ ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸುವುದಲ್ಲದೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ಮುನ್ನಚ್ಚರಿಕೆ‌ ತೆಗೆದುಕೊಳ್ಳುವಂತೆ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....