Homeಕರ್ನಾಟಕತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಚಳವಳಿಯೊಂದಿಗೆ ಗುರುತಿಸಿಕೊಂಡಿರುವ ಪ್ರಮುಖರು ಆಯ್ಕೆಯಾಗಿರುವುದು ವಿಶೇಷ. ಸಾಮಾಜಿಕ ಮತ್ತು ದಲಿತಪರ ಹೋರಾಟಗಳಲ್ಲಿ ಗುರುತಿಸಿಕೊಂಡು ದಶಕದಿಂದ ದುಡಿಯುತ್ತ ಬಂದಿರುವ ಕೆಲವು ಮುಖಗಳು ಆಯ್ಕೆಯಾಗಿದ್ದು ಗ್ರಾಮ ಸ್ವರಾಜ್ಯದ ಕನಸ್ಸಿಗೆ ಮತ್ತಷ್ಟು ಬಲ ಬಂದಂತೆ ಆಗಿದೆ. ಹೋರಾಟಗಳಲ್ಲಿ ಮುಂಚೂಣಿಯಲ್ಲಿರುವವರಿಗೆ ಗ್ರಾಮಗಳ ನಿಜವಾದ ಅರಿವು ಇರುತ್ತದೆ. ಜೊತೆಗೆ ಯಾವ ಅಂಶಗಳನ್ನು ಗ್ರಾಮ ಪಂಚಾಯಿತಿ ಸಭೆಯಲ್ಲಿ ಪ್ರಸ್ತಾಪ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬ ಜ್ಞಾನವಿರುವುದರಿಂದ ಜನರಿಗೆ ಸಾಕಷ್ಟು ಅನುಕೂಲಗಳು ದೊರೆಯಲಿದೆ.

ಇದಕ್ಕೆ ನಿದರ್ಶನವೆಂಬಂತೆ ಜಿಲ್ಲೆಯಲ್ಲಿ ಇಬ್ಬರು ಪ್ರಮುಖರು ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನ ಸೆಳೆದಿದ್ದಾರೆ. ಅವರಲ್ಲಿ ಗುಬ್ಬಿ ತಾಲೂಕು ಕಾಡಶೆಟ್ಟಿಹಳ್ಳಿ ಸತೀಶ್ ಕೂಡ ಒಬ್ಬರು. ಮಹಾತ್ಮ ಗಾಂಧೀಜಿಯ ಗ್ರಾಮ ಸ್ವರಾಜ್ಯದ ಆಶಯವನ್ನು ಸತೀಶ್ ಸ್ವಲ್ಪಮಟ್ಟಿಗಾದರೂ ಆಚರಣೆಗೆ ತಂದಿರುವುದನ್ನು ಗ್ರಾಮದಲ್ಲಿ ನೋಡಬಹುದು. ಸತೀಶ್ ಇದು ಮೂರನೇ ಬಾರಿಗೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆ ಆಗಿದ್ದು ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನಮನ ಸೆಳೆದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಪಾಕಿಸ್ತಾನದ ಪ್ರಜೆ!- ತನಿಖೆಗೆ ಆದೇಶ

ಕಾಡಶೆಟ್ಟಿಹಳ್ಳಿಯ ಶಾಲೆ ತುಮಕೂರು ಜಿಲ್ಲೆಯಲ್ಲೇ ಹೆಸರು ಮಾಡಿದೆ. ಯಾವ ಖಾಸಗಿ ಶಾಲೆಗೂ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಯನ್ನು ಅಭಿವೃದ್ಧಿಪಡಿಸಿದ್ದು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸಲು ಪೋಷಕರು ಪೈಪೋಟಿ ನಡೆಸುವುದು ಇಲ್ಲಿ ಸಾಮಾನ್ಯವಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ದೊರೆತರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡವರು ಕಾಡಶೆಟ್ಟಿಹಳ್ಳಿ ಸತೀಶ್. ಅದೇ ಕಾರಣಕ್ಕಾಗಿಯೇ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹಣ ಖರ್ಚು ಮಾಡದೆ ಗೆದ್ದು ಬರಲು ಸಾಧ್ಯವಾಗಿದೆ.

ಸರ್ಕಾರೇತರ ಸಂಸ್ಥೆಯನ್ನು ಸ್ಥಾಪಿಸಿಕೊಂಡಿರುವ ಕಾಡಶೆಟ್ಟಿಹಳ್ಳಿ ಸತೀಶ್, ಶಾಲೆಯ ಅಭಿವೃದ್ಧಿ ಮತ್ತು ಗ್ರಾಮ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಸ್ಥಳೀಯರಿಗೆ ಇನ್ನಿಲ್ಲದ ಒಲವು ಉಂಟಾಗಲು ಕಾರಣವಾಗಿದೆ. ಕಳೆದ ಗ್ರಾಮ ಪಂಚಾಯಿತಿ ಚುನಾವಣೆ ಸಮಯದಲ್ಲಿ ಕರ್ನಾಟಕ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿರುವ ಸತೀಶ್, ಗ್ರಾಮ ಪಂಚಾಯತ್‌ರಾಜ್ ವ್ಯವಸ್ಥೆಯ ಬಗ್ಗೆ ಸಾಕಷ್ಟು ತಿಳುವಳಿಕೆ ಹೊಂದಿದ್ದಾರೆ. ಜನರಲ್ಲಿ ಗ್ರಾಮ ಪಂಚಾಯ್ತಿಗಳ ಬಗ್ಗೆ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ಶಾಲೆ ಮತ್ತು ಗ್ರಾಮದ ಅಭಿವೃದ್ಧಿ ಕಾರಣದಿಂದ ಕಾಡಶೆಟ್ಟಿಹಳ್ಳಿ ಗ್ರಾಮ ರಾಜ್ಯದ ಗಮನ ಸೆಳೆಯುವಂತೆ ಆಗಿದೆ. ಒಂದು ಗ್ರಾಮವನ್ನು ಹೀಗೂ ಅಭಿವೃದ್ಧಿ ಮಾಡಬಹುದು ಎಂಬುದಕ್ಕೆ ಕಾಡಶೆಟ್ಟಿಹಳ್ಳಿ ಮಾದರಿ ಆಗಿದೆ.

ಇನ್ನೊಂದು ಕಡೆ ದಲಿತ ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಮುರಳಿ ಕುಂದೂರು ಕೂಡ ಈ ಬಾರಿಯ ಗ್ರಾ.ಪಂ. ಚುನಾವಣೆಯಲ್ಲಿ ಆಯ್ಕೆಯಾಗಿರುವುದು ಗಮನ ಸೆಳೆದಿದೆ. ದಲಿತ ಸಂಘರ್ಷ ಸಮಿತಿಯ ಜಿಲ್ಲಾ  (ಪ್ರೊ.ಬಿ.ಕೃಷ್ಣಪ್ಪ ಬಣ) ಸಂಚಾಲಕ ಕುಂದೂರು ತಿಮ್ಮಯ್ಯ ಪುತ್ರ ಮುರಳಿ ಆಯ್ಕೆಯಾಗಿರುವುದು ಹಲವರ ಶ್ಲಾಘನೆಗೆ ಕಾರಣವಾಗಿದೆ. ವಿದ್ಯಾರ್ಥಿ ಹೋರಾಟಗಳು, ದಲಿತಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದು ದಲಿತರಿಗೆ ನ್ಯಾಯ ಕೊಡಿಸಿಕೊಡುವಲ್ಲಿ ಪಾತ್ರ ವಹಿಸಿದ್ದಾರೆ ಸದಾ ಜನಪರವಾಗಿ ಚಿಂತಿಸುವ ಮುರಳಿಗೆ ಎಲ್ಲಿಲ್ಲದ ಬೆಂಬಲ ವ್ಯಕ್ತವಾಗಿದೆ.

ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

ಮುರುಳಿ ಕುಂದೂರು ತಂದೆಯ ಹಾದಿಯಲ್ಲೇ ನಡೆಯುತ್ತಿದ್ದು ಇದೀಗ ಗ್ರಾಮದ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ಗ್ರಾಮ ಮಟ್ಟದಲ್ಲಿ ಆಗಬೇಕಾದ ಕೆಲಸಗಳಿಗೆ ಆದ್ಯತೆ ನೀಡುವ ಕನಸು ಮುರಳಿಯದ್ದು. ಕುಡಿಯುವ ನೀರು ಪೂರೈಕೆ, ಚರಂಡಿ ನಿರ್ಮಾಣ, ಸಿ.ಸಿ.ರಸ್ತೆಗಳ ನಿರ್ಮಾಣ, ಬೀದಿದೀಪಗಳ ಅಳವಡಿಕೆ ಮತ್ತು ಗ್ರಾಮಸ್ಥರು ಓದಲು ಅನುಕೂಲವಾಗುವಂತೆ ಗ್ರಂಥಾಲಯವನ್ನು ಸಜ್ಜುಗೊಳಿಸುವುದು ಸೇರಿದಂತೆ ಇತರೆ ಕೆಲಸಗಳಿಗೆ ಆದ್ಯತೆ ನೀಡುವುದಾಗಿ ನಾನುಗೌರಿ.ಕಾಂ ಗೆ ತಿಳಿಸಿದರು.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆಬ್ಬೂರು ಹೋಬಳಿ ಕಲ್ಕೆರೆ ಗ್ರಾಮ ಪಂಚಾಯ್ತಿಯಲ್ಲಿ ವಿಶಿಷ್ಟ ಕರಪತ್ರದ ಮೂಲಕ ರಾಜ್ಯದ ಗಮನ ಸೆಳೆದು, ಸಾಮಾಜಿಕ ಜಾಲತಾಣದಲ್ಲಿ ಕರಪತ್ರ ವೈರಲ್ ಆಗಿದ್ದ ಗಂಗಮ್ಮ ಕೇವಲ 6 ಮತಗಳನ್ನು ಮಾತ್ರ ಪಡೆಯಲು ಸಾಧ್ಯವಾಗಿದೆ. ಸ್ಪರ್ಧಿಸಿದ್ದ ಎರಡೂ ಕಡೆ ಮತದಾರ ಗಂಗಮ್ಮರ ಮನವಿಗೆ ಓಗೊಟ್ಟಿಲ್ಲ.


ಇದನ್ನೂ ಓದಿ: 24 ದಲಿತ ಕುಟುಂಬಗಳಿಗೆ ಬಹಿಷ್ಕಾರ – ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...