Homeಕರ್ನಾಟಕತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಚಳವಳಿಯೊಂದಿಗೆ ಗುರುತಿಸಿಕೊಂಡಿರುವ ಪ್ರಮುಖರು ಆಯ್ಕೆಯಾಗಿರುವುದು ವಿಶೇಷ. ಸಾಮಾಜಿಕ ಮತ್ತು ದಲಿತಪರ ಹೋರಾಟಗಳಲ್ಲಿ ಗುರುತಿಸಿಕೊಂಡು ದಶಕದಿಂದ ದುಡಿಯುತ್ತ ಬಂದಿರುವ ಕೆಲವು ಮುಖಗಳು ಆಯ್ಕೆಯಾಗಿದ್ದು ಗ್ರಾಮ ಸ್ವರಾಜ್ಯದ ಕನಸ್ಸಿಗೆ ಮತ್ತಷ್ಟು ಬಲ ಬಂದಂತೆ ಆಗಿದೆ. ಹೋರಾಟಗಳಲ್ಲಿ ಮುಂಚೂಣಿಯಲ್ಲಿರುವವರಿಗೆ ಗ್ರಾಮಗಳ ನಿಜವಾದ ಅರಿವು ಇರುತ್ತದೆ. ಜೊತೆಗೆ ಯಾವ ಅಂಶಗಳನ್ನು ಗ್ರಾಮ ಪಂಚಾಯಿತಿ ಸಭೆಯಲ್ಲಿ ಪ್ರಸ್ತಾಪ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬ ಜ್ಞಾನವಿರುವುದರಿಂದ ಜನರಿಗೆ ಸಾಕಷ್ಟು ಅನುಕೂಲಗಳು ದೊರೆಯಲಿದೆ.

ಇದಕ್ಕೆ ನಿದರ್ಶನವೆಂಬಂತೆ ಜಿಲ್ಲೆಯಲ್ಲಿ ಇಬ್ಬರು ಪ್ರಮುಖರು ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನ ಸೆಳೆದಿದ್ದಾರೆ. ಅವರಲ್ಲಿ ಗುಬ್ಬಿ ತಾಲೂಕು ಕಾಡಶೆಟ್ಟಿಹಳ್ಳಿ ಸತೀಶ್ ಕೂಡ ಒಬ್ಬರು. ಮಹಾತ್ಮ ಗಾಂಧೀಜಿಯ ಗ್ರಾಮ ಸ್ವರಾಜ್ಯದ ಆಶಯವನ್ನು ಸತೀಶ್ ಸ್ವಲ್ಪಮಟ್ಟಿಗಾದರೂ ಆಚರಣೆಗೆ ತಂದಿರುವುದನ್ನು ಗ್ರಾಮದಲ್ಲಿ ನೋಡಬಹುದು. ಸತೀಶ್ ಇದು ಮೂರನೇ ಬಾರಿಗೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆ ಆಗಿದ್ದು ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನಮನ ಸೆಳೆದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಪಾಕಿಸ್ತಾನದ ಪ್ರಜೆ!- ತನಿಖೆಗೆ ಆದೇಶ

ಕಾಡಶೆಟ್ಟಿಹಳ್ಳಿಯ ಶಾಲೆ ತುಮಕೂರು ಜಿಲ್ಲೆಯಲ್ಲೇ ಹೆಸರು ಮಾಡಿದೆ. ಯಾವ ಖಾಸಗಿ ಶಾಲೆಗೂ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಯನ್ನು ಅಭಿವೃದ್ಧಿಪಡಿಸಿದ್ದು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸಲು ಪೋಷಕರು ಪೈಪೋಟಿ ನಡೆಸುವುದು ಇಲ್ಲಿ ಸಾಮಾನ್ಯವಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ದೊರೆತರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡವರು ಕಾಡಶೆಟ್ಟಿಹಳ್ಳಿ ಸತೀಶ್. ಅದೇ ಕಾರಣಕ್ಕಾಗಿಯೇ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹಣ ಖರ್ಚು ಮಾಡದೆ ಗೆದ್ದು ಬರಲು ಸಾಧ್ಯವಾಗಿದೆ.

ಸರ್ಕಾರೇತರ ಸಂಸ್ಥೆಯನ್ನು ಸ್ಥಾಪಿಸಿಕೊಂಡಿರುವ ಕಾಡಶೆಟ್ಟಿಹಳ್ಳಿ ಸತೀಶ್, ಶಾಲೆಯ ಅಭಿವೃದ್ಧಿ ಮತ್ತು ಗ್ರಾಮ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಸ್ಥಳೀಯರಿಗೆ ಇನ್ನಿಲ್ಲದ ಒಲವು ಉಂಟಾಗಲು ಕಾರಣವಾಗಿದೆ. ಕಳೆದ ಗ್ರಾಮ ಪಂಚಾಯಿತಿ ಚುನಾವಣೆ ಸಮಯದಲ್ಲಿ ಕರ್ನಾಟಕ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿರುವ ಸತೀಶ್, ಗ್ರಾಮ ಪಂಚಾಯತ್‌ರಾಜ್ ವ್ಯವಸ್ಥೆಯ ಬಗ್ಗೆ ಸಾಕಷ್ಟು ತಿಳುವಳಿಕೆ ಹೊಂದಿದ್ದಾರೆ. ಜನರಲ್ಲಿ ಗ್ರಾಮ ಪಂಚಾಯ್ತಿಗಳ ಬಗ್ಗೆ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ಶಾಲೆ ಮತ್ತು ಗ್ರಾಮದ ಅಭಿವೃದ್ಧಿ ಕಾರಣದಿಂದ ಕಾಡಶೆಟ್ಟಿಹಳ್ಳಿ ಗ್ರಾಮ ರಾಜ್ಯದ ಗಮನ ಸೆಳೆಯುವಂತೆ ಆಗಿದೆ. ಒಂದು ಗ್ರಾಮವನ್ನು ಹೀಗೂ ಅಭಿವೃದ್ಧಿ ಮಾಡಬಹುದು ಎಂಬುದಕ್ಕೆ ಕಾಡಶೆಟ್ಟಿಹಳ್ಳಿ ಮಾದರಿ ಆಗಿದೆ.

ಇನ್ನೊಂದು ಕಡೆ ದಲಿತ ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಮುರಳಿ ಕುಂದೂರು ಕೂಡ ಈ ಬಾರಿಯ ಗ್ರಾ.ಪಂ. ಚುನಾವಣೆಯಲ್ಲಿ ಆಯ್ಕೆಯಾಗಿರುವುದು ಗಮನ ಸೆಳೆದಿದೆ. ದಲಿತ ಸಂಘರ್ಷ ಸಮಿತಿಯ ಜಿಲ್ಲಾ  (ಪ್ರೊ.ಬಿ.ಕೃಷ್ಣಪ್ಪ ಬಣ) ಸಂಚಾಲಕ ಕುಂದೂರು ತಿಮ್ಮಯ್ಯ ಪುತ್ರ ಮುರಳಿ ಆಯ್ಕೆಯಾಗಿರುವುದು ಹಲವರ ಶ್ಲಾಘನೆಗೆ ಕಾರಣವಾಗಿದೆ. ವಿದ್ಯಾರ್ಥಿ ಹೋರಾಟಗಳು, ದಲಿತಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದು ದಲಿತರಿಗೆ ನ್ಯಾಯ ಕೊಡಿಸಿಕೊಡುವಲ್ಲಿ ಪಾತ್ರ ವಹಿಸಿದ್ದಾರೆ ಸದಾ ಜನಪರವಾಗಿ ಚಿಂತಿಸುವ ಮುರಳಿಗೆ ಎಲ್ಲಿಲ್ಲದ ಬೆಂಬಲ ವ್ಯಕ್ತವಾಗಿದೆ.

ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

ಮುರುಳಿ ಕುಂದೂರು ತಂದೆಯ ಹಾದಿಯಲ್ಲೇ ನಡೆಯುತ್ತಿದ್ದು ಇದೀಗ ಗ್ರಾಮದ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ಗ್ರಾಮ ಮಟ್ಟದಲ್ಲಿ ಆಗಬೇಕಾದ ಕೆಲಸಗಳಿಗೆ ಆದ್ಯತೆ ನೀಡುವ ಕನಸು ಮುರಳಿಯದ್ದು. ಕುಡಿಯುವ ನೀರು ಪೂರೈಕೆ, ಚರಂಡಿ ನಿರ್ಮಾಣ, ಸಿ.ಸಿ.ರಸ್ತೆಗಳ ನಿರ್ಮಾಣ, ಬೀದಿದೀಪಗಳ ಅಳವಡಿಕೆ ಮತ್ತು ಗ್ರಾಮಸ್ಥರು ಓದಲು ಅನುಕೂಲವಾಗುವಂತೆ ಗ್ರಂಥಾಲಯವನ್ನು ಸಜ್ಜುಗೊಳಿಸುವುದು ಸೇರಿದಂತೆ ಇತರೆ ಕೆಲಸಗಳಿಗೆ ಆದ್ಯತೆ ನೀಡುವುದಾಗಿ ನಾನುಗೌರಿ.ಕಾಂ ಗೆ ತಿಳಿಸಿದರು.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆಬ್ಬೂರು ಹೋಬಳಿ ಕಲ್ಕೆರೆ ಗ್ರಾಮ ಪಂಚಾಯ್ತಿಯಲ್ಲಿ ವಿಶಿಷ್ಟ ಕರಪತ್ರದ ಮೂಲಕ ರಾಜ್ಯದ ಗಮನ ಸೆಳೆದು, ಸಾಮಾಜಿಕ ಜಾಲತಾಣದಲ್ಲಿ ಕರಪತ್ರ ವೈರಲ್ ಆಗಿದ್ದ ಗಂಗಮ್ಮ ಕೇವಲ 6 ಮತಗಳನ್ನು ಮಾತ್ರ ಪಡೆಯಲು ಸಾಧ್ಯವಾಗಿದೆ. ಸ್ಪರ್ಧಿಸಿದ್ದ ಎರಡೂ ಕಡೆ ಮತದಾರ ಗಂಗಮ್ಮರ ಮನವಿಗೆ ಓಗೊಟ್ಟಿಲ್ಲ.


ಇದನ್ನೂ ಓದಿ: 24 ದಲಿತ ಕುಟುಂಬಗಳಿಗೆ ಬಹಿಷ್ಕಾರ – ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...