Homeಕರ್ನಾಟಕತುಮಕೂರು: ಬಲವಂತದ ಭೂ ಸ್ವಾಧೀನಕ್ಕೆ ರೈತ ಬಲಿ; ಆರೋಪ

ತುಮಕೂರು: ಬಲವಂತದ ಭೂ ಸ್ವಾಧೀನಕ್ಕೆ ರೈತ ಬಲಿ; ಆರೋಪ

- Advertisement -
- Advertisement -

ಪರಿಹಾರ ನೀಡದೆ ಭೂಮಿ ಕಿತ್ತುಕೊಂಡಿದ್ದರಿಂದಾಗಿ ಮನ ನೊಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಲು ಕಟ್ಟೆ ಗ್ರಾಮದ ರೈತ ರಂಗಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆದ್ದಾರಿ ಕಾಮಗಾರಿ ವೇಗಕ್ಕೆ ಪಡೆದಿರುವ ಬಲಿ ಇದೆಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಕೆ.ಬಿ.ಕ್ರಾಸ್‌ನಿಂದ ಹುಳಿಯಾರ್‌ವರೆಗೂ ರಸ್ತೆ ಕಾಮಗಾರಿ ನಡೆಸುವ ಉದ್ದೇಶಕ್ಕೆ ರಂಗಣ್ಣರವರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ಪರಿಹಾರ ನೀಡಿರಲಿಲ್ಲ. ಪರಿಹಾರ ನೀಡದೆ ಭೂಮಿ ಬಿಡುವುದಿಲ್ಲ ಎಂದು ರಂಗಣ್ಣ ನ್ಯಾಯಯುತವಾಗಿ ಒತ್ತಾಯಿಸುತ್ತಿದ್ದರು. ಆದರೆ ರೈತನ ನ್ಯಾಯಬದ್ದವಾದ ಹಕ್ಕನ್ನು ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಲವಂತವಾಗಿ ಭೂಮಿ ಕಿತ್ತುಕೊಂಡಿದ್ದರು. ಇದರಿಂದ ಮನನೊಂದು ರೈತ ರಂಗಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರವೇ ಹೊಣೆ ಎಂದು ಸಮಿತಿ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ರಾಜ್ಯ ಸರ್ಕಾರವು 2019ರಲ್ಲಿ ಕರ್ನಾಟಕ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆಗೆ ತಿದ್ದುಪಡಿ ತಂದಿತು. 10(ಎ) ಎನ್ನುವ ಹೊಸ ಪರಿಚ್ಛೇದವನ್ನು ಸೇರಿಸಿತು. ಆ ಮೂಲಕ ಭೂ ಸ್ವಾಧೀನಕ್ಕೆ ಬಾಧಿತ ರೈತ ಸಮುದಾಯದ ಒಪ್ಪಿಗೆ ಕಡ್ಡಾಯ ಎನ್ನುವ 2013ರ ಕಾಯ್ದೆಯ ಷರತ್ತನ್ನು ತೆಗೆದು ಹಾಕಿದೆ. ಪರಿಹಾರ ನೀಡದೇ ವಶಕ್ಕೆ ತೆಗೆದುಕೊಂಡ ಸಂದರ್ಭದಲ್ಲಿ ಕೋರ್ಟ್‌‌ನ ತಡೆಯಾಜ್ಞೆಯೂ ಯಾವುದೇ ಪರಿಣಾಮ ಬೀರದಂತೆ ಪರಿಚ್ಛೇದ 24(ಎ) ಗೆ ತಿದ್ದುಪಡಿ ತರಲಾಗಿದೆ. ಹೀಗೆ ಯಾವುದೇ ಸಾಮಾಜಿಕ ಪರಿಶೋಧನೆ ಇಲ್ಲದೇ, ರೈತ ಸಮುದಾಯದ ಒಪ್ಪಿಗೆ ಇಲ್ಲದೆ, ಯಾವುದೇ ಪರಿಹಾರ ನೀಡದೆ ರೈತರ ಭೂಮಿಯನ್ನು ಕಿತ್ತುಕೊಳ್ಳಲು ಸರ್ಕಾರಿ ಹಾಗೂ ಖಾಸಗಿ ಎಜೆನ್ಸಿಗಳಿಗೆ ಪರಮಾಧಿಕಾರ ನೀಡಿರುವ ಕರ್ನಾಟಕ ರಾಜ್ಯ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ 2019 ಅನ್ನು ರದ್ದುಪಡಿಸಬೇಕು ಕೆಪಿಆರ್‌ಎಸ್‌ ಒತ್ತಾಯಿಸಿದೆ.

ರೈತರನ್ನು ದಿವಾಳಿ ಮಾಡಿ ಅಭಿವೃದ್ಧಿ ಸಾಧಿಸುವ ಬಂಡವಾಳಶಾಹಿ ಅಭಿವೃದ್ಧಿ ಕಣ್ಣೋಟವನ್ನು ಕೈ ಬಿಟ್ಟು ಅಭಿವೃದ್ಧಿಯಲ್ಲಿ ರೈತ ಸಮುದಾಯದ ಉನ್ನತಿಯನ್ನು ಪ್ರಧಾನವಾಗಿ ಒಳಗೊಳ್ಳುವ ಸಂವಿಧಾನದ ಕಲ್ಯಾಣ ರಾಜ್ಯ ಕಣ್ಣೋಟವನ್ನು ಅಳವಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರ ಗಮನಕ್ಕೆ ತರದೇ, ರೈತರ ಒಪ್ಪಿಗೆ ಪಡೆಯದೇ, ರೈತರಿಗೆ ಪರಿಹಾರ ನೀಡದೇ ಭೂಮಿ ವಶಕ್ಕೆ ಪಡೆಯಬಾರದು ಎಂದು ಸಂಘಟನೆಯ ಅಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಯು.ಬಸವರಾಜು ಆಗ್ರಹಿಸಿದ್ದಾರೆ.

ಈಗಾಗಲೇ ಬೇಸಾಯ ನಷ್ಟ, ಸಾಲ ಬಾಧೆ ಕಾರಣಗಳಿಂದ ನಡೆಯುತ್ತಿರುವ ರೈತರ ಆತ್ಮಹತ್ಯೆ ಪಟ್ಟಿಗೆ ಸ್ವಾಧೀನದ ವಂಚನೆಯೂ ಸೇರ್ಪಡೆ ಆಗಿರುವುದು ಸರ್ಕಾರದ ಕ್ರೂರ ಮುಖವನ್ನು ಬಯಲುಗೊಳಿಸುತ್ತದೆ ಎಂದು ವಿಷಾದಿಸಿದ್ದಾರೆ.

ಬಲವಂತವಾಗಿ, ಯಾವುದೇ ಪರಿಹಾರ ನೀಡದೆ ಭೂ ಸ್ವಾಧೀನಕ್ಕೆ ಅವಕಾಶ ನೀಡಿರುವ ಕರ್ನಾಟಕ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ 2019 ರದ್ದಾಗಬೇಕು. ಈ ಕೂಡಲೇ ಹೆದ್ದಾರಿ ಕಾಮಗಾರಿಗೆ ಭೂಮಿ ಕಳೆದುಕೊಂಡಿರುವ ರೈತ ರಂಗಣ್ಣ ಕುಟುಂಬಕ್ಕೆ ಭೂ ಸ್ವಾಧೀನ ಪರಿಹಾರ ಹಣವನ್ನು 2013ರ ಕಾಯ್ದೆ ಪ್ರಕಾರ ಮಾರುಕಟ್ಟೆ ದರದ ನಾಲ್ಕು ಪಟ್ಟು ಪಾವತಿಸಬೇಕು. ಹೆದ್ದಾರಿ ಪ್ರಾಧಿಕಾರದ ಹಾಗೂ ರಾಜ್ಯ ಸರ್ಕಾರದ ಕಿರುಕುಳದಿಂದ ಪ್ರಾಣ ಕಳೆದುಕೊಂಡ ರಂಗಣ್ಣರವರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಯಂ ಉದ್ಯೋಗ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...