Homeಕರ್ನಾಟಕತುಮಕೂರು: ಬಲವಂತದ ಭೂ ಸ್ವಾಧೀನಕ್ಕೆ ರೈತ ಬಲಿ; ಆರೋಪ

ತುಮಕೂರು: ಬಲವಂತದ ಭೂ ಸ್ವಾಧೀನಕ್ಕೆ ರೈತ ಬಲಿ; ಆರೋಪ

- Advertisement -
- Advertisement -

ಪರಿಹಾರ ನೀಡದೆ ಭೂಮಿ ಕಿತ್ತುಕೊಂಡಿದ್ದರಿಂದಾಗಿ ಮನ ನೊಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಲು ಕಟ್ಟೆ ಗ್ರಾಮದ ರೈತ ರಂಗಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆದ್ದಾರಿ ಕಾಮಗಾರಿ ವೇಗಕ್ಕೆ ಪಡೆದಿರುವ ಬಲಿ ಇದೆಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಕೆ.ಬಿ.ಕ್ರಾಸ್‌ನಿಂದ ಹುಳಿಯಾರ್‌ವರೆಗೂ ರಸ್ತೆ ಕಾಮಗಾರಿ ನಡೆಸುವ ಉದ್ದೇಶಕ್ಕೆ ರಂಗಣ್ಣರವರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ಪರಿಹಾರ ನೀಡಿರಲಿಲ್ಲ. ಪರಿಹಾರ ನೀಡದೆ ಭೂಮಿ ಬಿಡುವುದಿಲ್ಲ ಎಂದು ರಂಗಣ್ಣ ನ್ಯಾಯಯುತವಾಗಿ ಒತ್ತಾಯಿಸುತ್ತಿದ್ದರು. ಆದರೆ ರೈತನ ನ್ಯಾಯಬದ್ದವಾದ ಹಕ್ಕನ್ನು ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಲವಂತವಾಗಿ ಭೂಮಿ ಕಿತ್ತುಕೊಂಡಿದ್ದರು. ಇದರಿಂದ ಮನನೊಂದು ರೈತ ರಂಗಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರವೇ ಹೊಣೆ ಎಂದು ಸಮಿತಿ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ರಾಜ್ಯ ಸರ್ಕಾರವು 2019ರಲ್ಲಿ ಕರ್ನಾಟಕ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆಗೆ ತಿದ್ದುಪಡಿ ತಂದಿತು. 10(ಎ) ಎನ್ನುವ ಹೊಸ ಪರಿಚ್ಛೇದವನ್ನು ಸೇರಿಸಿತು. ಆ ಮೂಲಕ ಭೂ ಸ್ವಾಧೀನಕ್ಕೆ ಬಾಧಿತ ರೈತ ಸಮುದಾಯದ ಒಪ್ಪಿಗೆ ಕಡ್ಡಾಯ ಎನ್ನುವ 2013ರ ಕಾಯ್ದೆಯ ಷರತ್ತನ್ನು ತೆಗೆದು ಹಾಕಿದೆ. ಪರಿಹಾರ ನೀಡದೇ ವಶಕ್ಕೆ ತೆಗೆದುಕೊಂಡ ಸಂದರ್ಭದಲ್ಲಿ ಕೋರ್ಟ್‌‌ನ ತಡೆಯಾಜ್ಞೆಯೂ ಯಾವುದೇ ಪರಿಣಾಮ ಬೀರದಂತೆ ಪರಿಚ್ಛೇದ 24(ಎ) ಗೆ ತಿದ್ದುಪಡಿ ತರಲಾಗಿದೆ. ಹೀಗೆ ಯಾವುದೇ ಸಾಮಾಜಿಕ ಪರಿಶೋಧನೆ ಇಲ್ಲದೇ, ರೈತ ಸಮುದಾಯದ ಒಪ್ಪಿಗೆ ಇಲ್ಲದೆ, ಯಾವುದೇ ಪರಿಹಾರ ನೀಡದೆ ರೈತರ ಭೂಮಿಯನ್ನು ಕಿತ್ತುಕೊಳ್ಳಲು ಸರ್ಕಾರಿ ಹಾಗೂ ಖಾಸಗಿ ಎಜೆನ್ಸಿಗಳಿಗೆ ಪರಮಾಧಿಕಾರ ನೀಡಿರುವ ಕರ್ನಾಟಕ ರಾಜ್ಯ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ 2019 ಅನ್ನು ರದ್ದುಪಡಿಸಬೇಕು ಕೆಪಿಆರ್‌ಎಸ್‌ ಒತ್ತಾಯಿಸಿದೆ.

ರೈತರನ್ನು ದಿವಾಳಿ ಮಾಡಿ ಅಭಿವೃದ್ಧಿ ಸಾಧಿಸುವ ಬಂಡವಾಳಶಾಹಿ ಅಭಿವೃದ್ಧಿ ಕಣ್ಣೋಟವನ್ನು ಕೈ ಬಿಟ್ಟು ಅಭಿವೃದ್ಧಿಯಲ್ಲಿ ರೈತ ಸಮುದಾಯದ ಉನ್ನತಿಯನ್ನು ಪ್ರಧಾನವಾಗಿ ಒಳಗೊಳ್ಳುವ ಸಂವಿಧಾನದ ಕಲ್ಯಾಣ ರಾಜ್ಯ ಕಣ್ಣೋಟವನ್ನು ಅಳವಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರ ಗಮನಕ್ಕೆ ತರದೇ, ರೈತರ ಒಪ್ಪಿಗೆ ಪಡೆಯದೇ, ರೈತರಿಗೆ ಪರಿಹಾರ ನೀಡದೇ ಭೂಮಿ ವಶಕ್ಕೆ ಪಡೆಯಬಾರದು ಎಂದು ಸಂಘಟನೆಯ ಅಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಯು.ಬಸವರಾಜು ಆಗ್ರಹಿಸಿದ್ದಾರೆ.

ಈಗಾಗಲೇ ಬೇಸಾಯ ನಷ್ಟ, ಸಾಲ ಬಾಧೆ ಕಾರಣಗಳಿಂದ ನಡೆಯುತ್ತಿರುವ ರೈತರ ಆತ್ಮಹತ್ಯೆ ಪಟ್ಟಿಗೆ ಸ್ವಾಧೀನದ ವಂಚನೆಯೂ ಸೇರ್ಪಡೆ ಆಗಿರುವುದು ಸರ್ಕಾರದ ಕ್ರೂರ ಮುಖವನ್ನು ಬಯಲುಗೊಳಿಸುತ್ತದೆ ಎಂದು ವಿಷಾದಿಸಿದ್ದಾರೆ.

ಬಲವಂತವಾಗಿ, ಯಾವುದೇ ಪರಿಹಾರ ನೀಡದೆ ಭೂ ಸ್ವಾಧೀನಕ್ಕೆ ಅವಕಾಶ ನೀಡಿರುವ ಕರ್ನಾಟಕ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ 2019 ರದ್ದಾಗಬೇಕು. ಈ ಕೂಡಲೇ ಹೆದ್ದಾರಿ ಕಾಮಗಾರಿಗೆ ಭೂಮಿ ಕಳೆದುಕೊಂಡಿರುವ ರೈತ ರಂಗಣ್ಣ ಕುಟುಂಬಕ್ಕೆ ಭೂ ಸ್ವಾಧೀನ ಪರಿಹಾರ ಹಣವನ್ನು 2013ರ ಕಾಯ್ದೆ ಪ್ರಕಾರ ಮಾರುಕಟ್ಟೆ ದರದ ನಾಲ್ಕು ಪಟ್ಟು ಪಾವತಿಸಬೇಕು. ಹೆದ್ದಾರಿ ಪ್ರಾಧಿಕಾರದ ಹಾಗೂ ರಾಜ್ಯ ಸರ್ಕಾರದ ಕಿರುಕುಳದಿಂದ ಪ್ರಾಣ ಕಳೆದುಕೊಂಡ ರಂಗಣ್ಣರವರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಯಂ ಉದ್ಯೋಗ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...