Homeಕರ್ನಾಟಕತುಮಕೂರು: ಬಲವಂತದ ಭೂ ಸ್ವಾಧೀನಕ್ಕೆ ರೈತ ಬಲಿ; ಆರೋಪ

ತುಮಕೂರು: ಬಲವಂತದ ಭೂ ಸ್ವಾಧೀನಕ್ಕೆ ರೈತ ಬಲಿ; ಆರೋಪ

- Advertisement -
- Advertisement -

ಪರಿಹಾರ ನೀಡದೆ ಭೂಮಿ ಕಿತ್ತುಕೊಂಡಿದ್ದರಿಂದಾಗಿ ಮನ ನೊಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಲು ಕಟ್ಟೆ ಗ್ರಾಮದ ರೈತ ರಂಗಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆದ್ದಾರಿ ಕಾಮಗಾರಿ ವೇಗಕ್ಕೆ ಪಡೆದಿರುವ ಬಲಿ ಇದೆಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಕೆ.ಬಿ.ಕ್ರಾಸ್‌ನಿಂದ ಹುಳಿಯಾರ್‌ವರೆಗೂ ರಸ್ತೆ ಕಾಮಗಾರಿ ನಡೆಸುವ ಉದ್ದೇಶಕ್ಕೆ ರಂಗಣ್ಣರವರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ಪರಿಹಾರ ನೀಡಿರಲಿಲ್ಲ. ಪರಿಹಾರ ನೀಡದೆ ಭೂಮಿ ಬಿಡುವುದಿಲ್ಲ ಎಂದು ರಂಗಣ್ಣ ನ್ಯಾಯಯುತವಾಗಿ ಒತ್ತಾಯಿಸುತ್ತಿದ್ದರು. ಆದರೆ ರೈತನ ನ್ಯಾಯಬದ್ದವಾದ ಹಕ್ಕನ್ನು ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಲವಂತವಾಗಿ ಭೂಮಿ ಕಿತ್ತುಕೊಂಡಿದ್ದರು. ಇದರಿಂದ ಮನನೊಂದು ರೈತ ರಂಗಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರವೇ ಹೊಣೆ ಎಂದು ಸಮಿತಿ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ರಾಜ್ಯ ಸರ್ಕಾರವು 2019ರಲ್ಲಿ ಕರ್ನಾಟಕ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆಗೆ ತಿದ್ದುಪಡಿ ತಂದಿತು. 10(ಎ) ಎನ್ನುವ ಹೊಸ ಪರಿಚ್ಛೇದವನ್ನು ಸೇರಿಸಿತು. ಆ ಮೂಲಕ ಭೂ ಸ್ವಾಧೀನಕ್ಕೆ ಬಾಧಿತ ರೈತ ಸಮುದಾಯದ ಒಪ್ಪಿಗೆ ಕಡ್ಡಾಯ ಎನ್ನುವ 2013ರ ಕಾಯ್ದೆಯ ಷರತ್ತನ್ನು ತೆಗೆದು ಹಾಕಿದೆ. ಪರಿಹಾರ ನೀಡದೇ ವಶಕ್ಕೆ ತೆಗೆದುಕೊಂಡ ಸಂದರ್ಭದಲ್ಲಿ ಕೋರ್ಟ್‌‌ನ ತಡೆಯಾಜ್ಞೆಯೂ ಯಾವುದೇ ಪರಿಣಾಮ ಬೀರದಂತೆ ಪರಿಚ್ಛೇದ 24(ಎ) ಗೆ ತಿದ್ದುಪಡಿ ತರಲಾಗಿದೆ. ಹೀಗೆ ಯಾವುದೇ ಸಾಮಾಜಿಕ ಪರಿಶೋಧನೆ ಇಲ್ಲದೇ, ರೈತ ಸಮುದಾಯದ ಒಪ್ಪಿಗೆ ಇಲ್ಲದೆ, ಯಾವುದೇ ಪರಿಹಾರ ನೀಡದೆ ರೈತರ ಭೂಮಿಯನ್ನು ಕಿತ್ತುಕೊಳ್ಳಲು ಸರ್ಕಾರಿ ಹಾಗೂ ಖಾಸಗಿ ಎಜೆನ್ಸಿಗಳಿಗೆ ಪರಮಾಧಿಕಾರ ನೀಡಿರುವ ಕರ್ನಾಟಕ ರಾಜ್ಯ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ 2019 ಅನ್ನು ರದ್ದುಪಡಿಸಬೇಕು ಕೆಪಿಆರ್‌ಎಸ್‌ ಒತ್ತಾಯಿಸಿದೆ.

ರೈತರನ್ನು ದಿವಾಳಿ ಮಾಡಿ ಅಭಿವೃದ್ಧಿ ಸಾಧಿಸುವ ಬಂಡವಾಳಶಾಹಿ ಅಭಿವೃದ್ಧಿ ಕಣ್ಣೋಟವನ್ನು ಕೈ ಬಿಟ್ಟು ಅಭಿವೃದ್ಧಿಯಲ್ಲಿ ರೈತ ಸಮುದಾಯದ ಉನ್ನತಿಯನ್ನು ಪ್ರಧಾನವಾಗಿ ಒಳಗೊಳ್ಳುವ ಸಂವಿಧಾನದ ಕಲ್ಯಾಣ ರಾಜ್ಯ ಕಣ್ಣೋಟವನ್ನು ಅಳವಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರ ಗಮನಕ್ಕೆ ತರದೇ, ರೈತರ ಒಪ್ಪಿಗೆ ಪಡೆಯದೇ, ರೈತರಿಗೆ ಪರಿಹಾರ ನೀಡದೇ ಭೂಮಿ ವಶಕ್ಕೆ ಪಡೆಯಬಾರದು ಎಂದು ಸಂಘಟನೆಯ ಅಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಯು.ಬಸವರಾಜು ಆಗ್ರಹಿಸಿದ್ದಾರೆ.

ಈಗಾಗಲೇ ಬೇಸಾಯ ನಷ್ಟ, ಸಾಲ ಬಾಧೆ ಕಾರಣಗಳಿಂದ ನಡೆಯುತ್ತಿರುವ ರೈತರ ಆತ್ಮಹತ್ಯೆ ಪಟ್ಟಿಗೆ ಸ್ವಾಧೀನದ ವಂಚನೆಯೂ ಸೇರ್ಪಡೆ ಆಗಿರುವುದು ಸರ್ಕಾರದ ಕ್ರೂರ ಮುಖವನ್ನು ಬಯಲುಗೊಳಿಸುತ್ತದೆ ಎಂದು ವಿಷಾದಿಸಿದ್ದಾರೆ.

ಬಲವಂತವಾಗಿ, ಯಾವುದೇ ಪರಿಹಾರ ನೀಡದೆ ಭೂ ಸ್ವಾಧೀನಕ್ಕೆ ಅವಕಾಶ ನೀಡಿರುವ ಕರ್ನಾಟಕ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ 2019 ರದ್ದಾಗಬೇಕು. ಈ ಕೂಡಲೇ ಹೆದ್ದಾರಿ ಕಾಮಗಾರಿಗೆ ಭೂಮಿ ಕಳೆದುಕೊಂಡಿರುವ ರೈತ ರಂಗಣ್ಣ ಕುಟುಂಬಕ್ಕೆ ಭೂ ಸ್ವಾಧೀನ ಪರಿಹಾರ ಹಣವನ್ನು 2013ರ ಕಾಯ್ದೆ ಪ್ರಕಾರ ಮಾರುಕಟ್ಟೆ ದರದ ನಾಲ್ಕು ಪಟ್ಟು ಪಾವತಿಸಬೇಕು. ಹೆದ್ದಾರಿ ಪ್ರಾಧಿಕಾರದ ಹಾಗೂ ರಾಜ್ಯ ಸರ್ಕಾರದ ಕಿರುಕುಳದಿಂದ ಪ್ರಾಣ ಕಳೆದುಕೊಂಡ ರಂಗಣ್ಣರವರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಯಂ ಉದ್ಯೋಗ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...