Homeಮುಖಪುಟತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಪ್ರಧಾನಿ ಮೋದಿಯವರು ಮನವಿ ಮಾಡಿದ್ದರು. ಆದರೆ ಮೋದಿಯವರೇ ಉದ್ಘಾಟಿಸಿದ ಪುಡ್ ಪಾರ್ಕ್ ನಲ್ಲಿ ಕೆಲಸದಿಂದ ತೆಗೆಯುವ ಕ್ರಿಯೆ ಮುಂದುವರೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ತುಮಕೂರಿನ ಫುಡ್ ಪಾರ್ಕ್ ನಲ್ಲೀಗ ಖಾಯಂ ಕಾರ್ಮಿಕರಿಗೆ ಕುತ್ತು ಬಂದಿದೆ. ಕೊರೊನಾ ಲಾಕ್ ಡೌನ್ ಪರಿಣಾಮ ಅರ್ಧಕ್ಕಿಂತ ಹೆಚ್ಚು ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಇದರಿಂದ ಖಾಯಂ ಕಾರ್ಮಿಕರು ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ಫುಡ್‌ಪಾರ್ಕ್ ಆಡಳಿತ ಮಂಡಳಿ ಗ್ರಾಮಗಳಿಗೆ ತೆರಳಿರುವ ಖಾಯಂ ಕಾರ್ಮಿಕರಿಗೆ ಮತ್ತೆ ಕೆಲಸಕ್ಕೆ ಬರಬೇಡಿ ಎಂದು ಕಟ್ಟುನಿಟ್ಟಾಗಿ ಹೇಳಿದೆ. ಅಷ್ಟೇ ಊರುಗಳಿಂದಲೇ ಕಾರ್ಮಿಕರಿಂದ ಇ-ಮೇಲ್  ಮೂಲಕ ರಾಜಿನಾಮೆ ಪಡೆಯಲಾಗಿದೆ. ಆಡಳಿತ ಮಂಡಳಿಯ ಒತ್ತಡಕ್ಕೆ ಸಿಲುಕಿರುವ ಖಾಯಂ ಕಾರ್ಮಿಕರು ಅನಿವಾರ್ಯವಾಗಿ ರಾಜಿನಾಮೆ ನೀಡಿದ್ದಾರೆ.

ಫುಡ್ ಪಾರ್ಕ್ ಅಸ್ತಿತ್ವಕ್ಕೆ ಬಂದು ಆರು ವರ್ಷ ಕಳೆದಿದೆ. ಸಾವಿರಾರು ಕಟುಂಬಗಳಿಗೆ ಮಾರ್ಗವಾಗಲಿದೆ ಎಂಬ ಭರವಸೆ ಕೇವಲ ಮಾತುಗಳಲ್ಲೇ ಉಳಿದಿದೆ. ಈಗ ಇರುವ ಖಾಯಂ ಕಾರ್ಮಿಕರ ಕೆಲಸಕ್ಕೂ ಸಂಕಷ್ಟ ಎದುರಾಗಿದೆ. ಸ್ಥಳೀಯ ಮತ್ತು ಉತ್ತರ ಭಾರತ ನೂರು ಕಾರ್ಮಿಕರು ಖಾಯಂ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ ಶೇಕಡ 60ಕ್ಕಿಂತ ಹೆಚ್ಚು ಮಂದಿ ಕಾರ್ಮಿಕರು ಮನೆಗೆ ಹೋಗಬೇಕಾಗಿದೆ.


ಇದನ್ನೂ ಓದಿ: ತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ನಾನುಗೌರಿ.ಕಾಂ ಜೊತೆ ಪರಿಸ್ಥಿತಿಯನ್ನು ಹಂಚಿಕೊಂಡ ಕಾರ್ಮಿಕರು, ಫುಡ್ ಪಾರ್ಕ್ ಆಡಳಿತ ಮಂಡಳಿ ರಾಜಿನಾಮೆ ನೀಡುವಂತೆ ಒತ್ತಡ ಹೇರುತ್ತಿದೆ. ಕಿರುಕುಳ ನೀಡುತ್ತಿದೆ. ಈಗಾಗಲೇ ಕೆಲವರು ರಾಜಿನಾಮೆ ನೀಡಿದ್ದಾರೆ. ನಮಗೆಲ್ಲ 2 ವರ್ಷದ ಹಿಂದ ಖಾಯಂ ಆಗಿತ್ತು. ಸ್ಥಳೀಯರು ಮತ್ತು ಹೊರಗಿನಿಂದ ಬಂದಿರುವ ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಕೆಲಸಕ್ಕೆ ಬರಬೇಡಿ ಎಂದು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಫುಡ್‌ಪಾರ್ಕ್‌ನಲ್ಲಿ ಮೇಂಟೇನೆನ್ಸ್ ಮತ್ತು ಪ್ರೊಡಕ್ಷನ್ ಎಂಬ ಎರಡು ವಿಭಾಗಗಳಿವೆ. ಇವೆರಡಿರಿಂದ ಸೇರಿ ನೂರು ಮಂದಿ ಖಾಯಂ ಕಾರ್ಮಿಕರಿದ್ದಾರೆ. ಇವರಲ್ಲಿ ಸುಮಾರು 60ರಷ್ಟು ಮಂದಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗುತ್ತದೆ. ಏಕಾಏಕಿ ಕೆಲಸಕ್ಕೆ ಬರಬೇಡಿ ಎಂದರೆ ನಾವು ಏನು ಮಾಡಬೇಕು. ನಮ್ಮ ಬದುಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಮೂರು ತಿಂಗಳಿಂದಲೂ ವೇತನ ನೀಡಿಲ್ಲ. ಸೆಟ್ಲಮೆಂಟ್‌ ಮಾಡಿ ಅಂದ್ರೆ ನೋಡೋಣ ಎನ್ನುತ್ತಿದ್ದಾರೆ. ಹೀಗಾಗಿ ಕಷ್ಟವಾಗಿದೆ ಎಂದು ಕಾರ್ಮಿಕರು ನೋವು ತೋಡಿಕೊಂಡರು.

ಆಡಳಿತ ಮಂಡಲಳಿಯ ಕ್ರಮದಿಂದ ಖಾಯಂ ಕಾರ್ಮಿಕರು ಕಂಗಾಲಾಗಿದ್ದಾರೆ. ಭವಿಷ್ಯ ಕತ್ತಲಿಗೆ ಬೀಳಲಿದೆ ಎಂಬ ಚಿಂತೆ ಅವರನ್ನು ಕಾಡತೊಡಗಿದೆ. ನೀವು ಬೇರೆ ಕೆಲಸ ನೋಡಿಕೊಳ್ಳಿ ಎಂದು ಬಾಯಿಮಾತಿನ ಸಂದೇಶ ರವಾನಿಸಿರುವುದು ಅವರಿಗೆ ದಿಕ್ಕು ತೋಚದಂತೆ ಮಾಡಿದೆ. ಮುಂದಿನ 15-20 ದಿನಗಳಲ್ಲಿ ಮತ್ತಷ್ಟು ಕಾರ್ಮಿಕರ ರಾಜಿನಾಮೆ ಪಡೆದುಕೊಳ್ಳುವುದು ಖಚಿತ ಎಂಬ ಆತಂಕ ಖಾಯಂ ಕಾರ್ಮಿಕರನ್ನು ಚಿಂತಾಕ್ರಾಂತರನ್ನಾಗಿಸಿದೆ.

ಖಾಯಂ ಕಾರ್ಮಿಕರಿಂದಲೇ ರಾಜಿನಾಮೆ ಪಡೆದುಕೊಳ್ಳುತ್ತಿದ್ದಾರೆ ಎಂದರೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರ ಪಾಡು ಮತ್ತಷ್ಟು ಹೇಳತೀರದು. ಹಲವು ಸಮಸ್ಯೆಗಳಿಂದಲೇ ಗಮನ ಸೆಳೆದಿರುವ ಫುಡ್ ಪಾರ್ಕ್ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದಿದೆ. ಖಾಯಂ ಮತ್ತು ಗುತ್ತಿಗೆ ಕಾರ್ಮಿಕರು ಈಗ ಕೆಲಸವಿಲ್ಲದೆ ಪರದಾಡುತ್ತಿದ್ದಾರೆ.

ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆಯಾದ ಫುಡ್‌ಪಾರ್ಕ್ ಮುಚ್ಚುವಂತಹ ಸ್ಥಿತಿಗೆ ಬಂದಿದೆ. ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ನೌಕರರು ಮತ್ತು ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಕೇಂದ್ರ ಸರ್ಕಾರವೇ ಆದೇಶ ಹೊರಡಿಸಿದೆ. ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಮೋದಿಯವರೇ ಉದ್ಘಾಟಿಸಿದ, ಕೇಂದ್ರ ಸರ್ಕಾರದ ಸಹಭಾಗಿತ್ವ ಇರುವ ಫುಡ್ ಪಾರ್ಕ್ ನಲ್ಲೇ ಆ ಆದೇಶ ಉಲ್ಲಂಘನೆಯಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ.


ಇದನ್ನೂ ಓದಿ: ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...