Homeಮುಖಪುಟತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಪ್ರಧಾನಿ ಮೋದಿಯವರು ಮನವಿ ಮಾಡಿದ್ದರು. ಆದರೆ ಮೋದಿಯವರೇ ಉದ್ಘಾಟಿಸಿದ ಪುಡ್ ಪಾರ್ಕ್ ನಲ್ಲಿ ಕೆಲಸದಿಂದ ತೆಗೆಯುವ ಕ್ರಿಯೆ ಮುಂದುವರೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ತುಮಕೂರಿನ ಫುಡ್ ಪಾರ್ಕ್ ನಲ್ಲೀಗ ಖಾಯಂ ಕಾರ್ಮಿಕರಿಗೆ ಕುತ್ತು ಬಂದಿದೆ. ಕೊರೊನಾ ಲಾಕ್ ಡೌನ್ ಪರಿಣಾಮ ಅರ್ಧಕ್ಕಿಂತ ಹೆಚ್ಚು ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಇದರಿಂದ ಖಾಯಂ ಕಾರ್ಮಿಕರು ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ಫುಡ್‌ಪಾರ್ಕ್ ಆಡಳಿತ ಮಂಡಳಿ ಗ್ರಾಮಗಳಿಗೆ ತೆರಳಿರುವ ಖಾಯಂ ಕಾರ್ಮಿಕರಿಗೆ ಮತ್ತೆ ಕೆಲಸಕ್ಕೆ ಬರಬೇಡಿ ಎಂದು ಕಟ್ಟುನಿಟ್ಟಾಗಿ ಹೇಳಿದೆ. ಅಷ್ಟೇ ಊರುಗಳಿಂದಲೇ ಕಾರ್ಮಿಕರಿಂದ ಇ-ಮೇಲ್  ಮೂಲಕ ರಾಜಿನಾಮೆ ಪಡೆಯಲಾಗಿದೆ. ಆಡಳಿತ ಮಂಡಳಿಯ ಒತ್ತಡಕ್ಕೆ ಸಿಲುಕಿರುವ ಖಾಯಂ ಕಾರ್ಮಿಕರು ಅನಿವಾರ್ಯವಾಗಿ ರಾಜಿನಾಮೆ ನೀಡಿದ್ದಾರೆ.

ಫುಡ್ ಪಾರ್ಕ್ ಅಸ್ತಿತ್ವಕ್ಕೆ ಬಂದು ಆರು ವರ್ಷ ಕಳೆದಿದೆ. ಸಾವಿರಾರು ಕಟುಂಬಗಳಿಗೆ ಮಾರ್ಗವಾಗಲಿದೆ ಎಂಬ ಭರವಸೆ ಕೇವಲ ಮಾತುಗಳಲ್ಲೇ ಉಳಿದಿದೆ. ಈಗ ಇರುವ ಖಾಯಂ ಕಾರ್ಮಿಕರ ಕೆಲಸಕ್ಕೂ ಸಂಕಷ್ಟ ಎದುರಾಗಿದೆ. ಸ್ಥಳೀಯ ಮತ್ತು ಉತ್ತರ ಭಾರತ ನೂರು ಕಾರ್ಮಿಕರು ಖಾಯಂ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ ಶೇಕಡ 60ಕ್ಕಿಂತ ಹೆಚ್ಚು ಮಂದಿ ಕಾರ್ಮಿಕರು ಮನೆಗೆ ಹೋಗಬೇಕಾಗಿದೆ.


ಇದನ್ನೂ ಓದಿ: ತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ನಾನುಗೌರಿ.ಕಾಂ ಜೊತೆ ಪರಿಸ್ಥಿತಿಯನ್ನು ಹಂಚಿಕೊಂಡ ಕಾರ್ಮಿಕರು, ಫುಡ್ ಪಾರ್ಕ್ ಆಡಳಿತ ಮಂಡಳಿ ರಾಜಿನಾಮೆ ನೀಡುವಂತೆ ಒತ್ತಡ ಹೇರುತ್ತಿದೆ. ಕಿರುಕುಳ ನೀಡುತ್ತಿದೆ. ಈಗಾಗಲೇ ಕೆಲವರು ರಾಜಿನಾಮೆ ನೀಡಿದ್ದಾರೆ. ನಮಗೆಲ್ಲ 2 ವರ್ಷದ ಹಿಂದ ಖಾಯಂ ಆಗಿತ್ತು. ಸ್ಥಳೀಯರು ಮತ್ತು ಹೊರಗಿನಿಂದ ಬಂದಿರುವ ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಕೆಲಸಕ್ಕೆ ಬರಬೇಡಿ ಎಂದು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಫುಡ್‌ಪಾರ್ಕ್‌ನಲ್ಲಿ ಮೇಂಟೇನೆನ್ಸ್ ಮತ್ತು ಪ್ರೊಡಕ್ಷನ್ ಎಂಬ ಎರಡು ವಿಭಾಗಗಳಿವೆ. ಇವೆರಡಿರಿಂದ ಸೇರಿ ನೂರು ಮಂದಿ ಖಾಯಂ ಕಾರ್ಮಿಕರಿದ್ದಾರೆ. ಇವರಲ್ಲಿ ಸುಮಾರು 60ರಷ್ಟು ಮಂದಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗುತ್ತದೆ. ಏಕಾಏಕಿ ಕೆಲಸಕ್ಕೆ ಬರಬೇಡಿ ಎಂದರೆ ನಾವು ಏನು ಮಾಡಬೇಕು. ನಮ್ಮ ಬದುಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಮೂರು ತಿಂಗಳಿಂದಲೂ ವೇತನ ನೀಡಿಲ್ಲ. ಸೆಟ್ಲಮೆಂಟ್‌ ಮಾಡಿ ಅಂದ್ರೆ ನೋಡೋಣ ಎನ್ನುತ್ತಿದ್ದಾರೆ. ಹೀಗಾಗಿ ಕಷ್ಟವಾಗಿದೆ ಎಂದು ಕಾರ್ಮಿಕರು ನೋವು ತೋಡಿಕೊಂಡರು.

ಆಡಳಿತ ಮಂಡಲಳಿಯ ಕ್ರಮದಿಂದ ಖಾಯಂ ಕಾರ್ಮಿಕರು ಕಂಗಾಲಾಗಿದ್ದಾರೆ. ಭವಿಷ್ಯ ಕತ್ತಲಿಗೆ ಬೀಳಲಿದೆ ಎಂಬ ಚಿಂತೆ ಅವರನ್ನು ಕಾಡತೊಡಗಿದೆ. ನೀವು ಬೇರೆ ಕೆಲಸ ನೋಡಿಕೊಳ್ಳಿ ಎಂದು ಬಾಯಿಮಾತಿನ ಸಂದೇಶ ರವಾನಿಸಿರುವುದು ಅವರಿಗೆ ದಿಕ್ಕು ತೋಚದಂತೆ ಮಾಡಿದೆ. ಮುಂದಿನ 15-20 ದಿನಗಳಲ್ಲಿ ಮತ್ತಷ್ಟು ಕಾರ್ಮಿಕರ ರಾಜಿನಾಮೆ ಪಡೆದುಕೊಳ್ಳುವುದು ಖಚಿತ ಎಂಬ ಆತಂಕ ಖಾಯಂ ಕಾರ್ಮಿಕರನ್ನು ಚಿಂತಾಕ್ರಾಂತರನ್ನಾಗಿಸಿದೆ.

ಖಾಯಂ ಕಾರ್ಮಿಕರಿಂದಲೇ ರಾಜಿನಾಮೆ ಪಡೆದುಕೊಳ್ಳುತ್ತಿದ್ದಾರೆ ಎಂದರೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರ ಪಾಡು ಮತ್ತಷ್ಟು ಹೇಳತೀರದು. ಹಲವು ಸಮಸ್ಯೆಗಳಿಂದಲೇ ಗಮನ ಸೆಳೆದಿರುವ ಫುಡ್ ಪಾರ್ಕ್ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದಿದೆ. ಖಾಯಂ ಮತ್ತು ಗುತ್ತಿಗೆ ಕಾರ್ಮಿಕರು ಈಗ ಕೆಲಸವಿಲ್ಲದೆ ಪರದಾಡುತ್ತಿದ್ದಾರೆ.

ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆಯಾದ ಫುಡ್‌ಪಾರ್ಕ್ ಮುಚ್ಚುವಂತಹ ಸ್ಥಿತಿಗೆ ಬಂದಿದೆ. ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ನೌಕರರು ಮತ್ತು ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಕೇಂದ್ರ ಸರ್ಕಾರವೇ ಆದೇಶ ಹೊರಡಿಸಿದೆ. ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಮೋದಿಯವರೇ ಉದ್ಘಾಟಿಸಿದ, ಕೇಂದ್ರ ಸರ್ಕಾರದ ಸಹಭಾಗಿತ್ವ ಇರುವ ಫುಡ್ ಪಾರ್ಕ್ ನಲ್ಲೇ ಆ ಆದೇಶ ಉಲ್ಲಂಘನೆಯಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ.


ಇದನ್ನೂ ಓದಿ: ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...