Homeಮುಖಪುಟತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಪ್ರಧಾನಿ ಮೋದಿಯವರು ಮನವಿ ಮಾಡಿದ್ದರು. ಆದರೆ ಮೋದಿಯವರೇ ಉದ್ಘಾಟಿಸಿದ ಪುಡ್ ಪಾರ್ಕ್ ನಲ್ಲಿ ಕೆಲಸದಿಂದ ತೆಗೆಯುವ ಕ್ರಿಯೆ ಮುಂದುವರೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ತುಮಕೂರಿನ ಫುಡ್ ಪಾರ್ಕ್ ನಲ್ಲೀಗ ಖಾಯಂ ಕಾರ್ಮಿಕರಿಗೆ ಕುತ್ತು ಬಂದಿದೆ. ಕೊರೊನಾ ಲಾಕ್ ಡೌನ್ ಪರಿಣಾಮ ಅರ್ಧಕ್ಕಿಂತ ಹೆಚ್ಚು ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಇದರಿಂದ ಖಾಯಂ ಕಾರ್ಮಿಕರು ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ಫುಡ್‌ಪಾರ್ಕ್ ಆಡಳಿತ ಮಂಡಳಿ ಗ್ರಾಮಗಳಿಗೆ ತೆರಳಿರುವ ಖಾಯಂ ಕಾರ್ಮಿಕರಿಗೆ ಮತ್ತೆ ಕೆಲಸಕ್ಕೆ ಬರಬೇಡಿ ಎಂದು ಕಟ್ಟುನಿಟ್ಟಾಗಿ ಹೇಳಿದೆ. ಅಷ್ಟೇ ಊರುಗಳಿಂದಲೇ ಕಾರ್ಮಿಕರಿಂದ ಇ-ಮೇಲ್  ಮೂಲಕ ರಾಜಿನಾಮೆ ಪಡೆಯಲಾಗಿದೆ. ಆಡಳಿತ ಮಂಡಳಿಯ ಒತ್ತಡಕ್ಕೆ ಸಿಲುಕಿರುವ ಖಾಯಂ ಕಾರ್ಮಿಕರು ಅನಿವಾರ್ಯವಾಗಿ ರಾಜಿನಾಮೆ ನೀಡಿದ್ದಾರೆ.

ಫುಡ್ ಪಾರ್ಕ್ ಅಸ್ತಿತ್ವಕ್ಕೆ ಬಂದು ಆರು ವರ್ಷ ಕಳೆದಿದೆ. ಸಾವಿರಾರು ಕಟುಂಬಗಳಿಗೆ ಮಾರ್ಗವಾಗಲಿದೆ ಎಂಬ ಭರವಸೆ ಕೇವಲ ಮಾತುಗಳಲ್ಲೇ ಉಳಿದಿದೆ. ಈಗ ಇರುವ ಖಾಯಂ ಕಾರ್ಮಿಕರ ಕೆಲಸಕ್ಕೂ ಸಂಕಷ್ಟ ಎದುರಾಗಿದೆ. ಸ್ಥಳೀಯ ಮತ್ತು ಉತ್ತರ ಭಾರತ ನೂರು ಕಾರ್ಮಿಕರು ಖಾಯಂ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ ಶೇಕಡ 60ಕ್ಕಿಂತ ಹೆಚ್ಚು ಮಂದಿ ಕಾರ್ಮಿಕರು ಮನೆಗೆ ಹೋಗಬೇಕಾಗಿದೆ.


ಇದನ್ನೂ ಓದಿ: ತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ನಾನುಗೌರಿ.ಕಾಂ ಜೊತೆ ಪರಿಸ್ಥಿತಿಯನ್ನು ಹಂಚಿಕೊಂಡ ಕಾರ್ಮಿಕರು, ಫುಡ್ ಪಾರ್ಕ್ ಆಡಳಿತ ಮಂಡಳಿ ರಾಜಿನಾಮೆ ನೀಡುವಂತೆ ಒತ್ತಡ ಹೇರುತ್ತಿದೆ. ಕಿರುಕುಳ ನೀಡುತ್ತಿದೆ. ಈಗಾಗಲೇ ಕೆಲವರು ರಾಜಿನಾಮೆ ನೀಡಿದ್ದಾರೆ. ನಮಗೆಲ್ಲ 2 ವರ್ಷದ ಹಿಂದ ಖಾಯಂ ಆಗಿತ್ತು. ಸ್ಥಳೀಯರು ಮತ್ತು ಹೊರಗಿನಿಂದ ಬಂದಿರುವ ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಕೆಲಸಕ್ಕೆ ಬರಬೇಡಿ ಎಂದು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಫುಡ್‌ಪಾರ್ಕ್‌ನಲ್ಲಿ ಮೇಂಟೇನೆನ್ಸ್ ಮತ್ತು ಪ್ರೊಡಕ್ಷನ್ ಎಂಬ ಎರಡು ವಿಭಾಗಗಳಿವೆ. ಇವೆರಡಿರಿಂದ ಸೇರಿ ನೂರು ಮಂದಿ ಖಾಯಂ ಕಾರ್ಮಿಕರಿದ್ದಾರೆ. ಇವರಲ್ಲಿ ಸುಮಾರು 60ರಷ್ಟು ಮಂದಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗುತ್ತದೆ. ಏಕಾಏಕಿ ಕೆಲಸಕ್ಕೆ ಬರಬೇಡಿ ಎಂದರೆ ನಾವು ಏನು ಮಾಡಬೇಕು. ನಮ್ಮ ಬದುಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಮೂರು ತಿಂಗಳಿಂದಲೂ ವೇತನ ನೀಡಿಲ್ಲ. ಸೆಟ್ಲಮೆಂಟ್‌ ಮಾಡಿ ಅಂದ್ರೆ ನೋಡೋಣ ಎನ್ನುತ್ತಿದ್ದಾರೆ. ಹೀಗಾಗಿ ಕಷ್ಟವಾಗಿದೆ ಎಂದು ಕಾರ್ಮಿಕರು ನೋವು ತೋಡಿಕೊಂಡರು.

ಆಡಳಿತ ಮಂಡಲಳಿಯ ಕ್ರಮದಿಂದ ಖಾಯಂ ಕಾರ್ಮಿಕರು ಕಂಗಾಲಾಗಿದ್ದಾರೆ. ಭವಿಷ್ಯ ಕತ್ತಲಿಗೆ ಬೀಳಲಿದೆ ಎಂಬ ಚಿಂತೆ ಅವರನ್ನು ಕಾಡತೊಡಗಿದೆ. ನೀವು ಬೇರೆ ಕೆಲಸ ನೋಡಿಕೊಳ್ಳಿ ಎಂದು ಬಾಯಿಮಾತಿನ ಸಂದೇಶ ರವಾನಿಸಿರುವುದು ಅವರಿಗೆ ದಿಕ್ಕು ತೋಚದಂತೆ ಮಾಡಿದೆ. ಮುಂದಿನ 15-20 ದಿನಗಳಲ್ಲಿ ಮತ್ತಷ್ಟು ಕಾರ್ಮಿಕರ ರಾಜಿನಾಮೆ ಪಡೆದುಕೊಳ್ಳುವುದು ಖಚಿತ ಎಂಬ ಆತಂಕ ಖಾಯಂ ಕಾರ್ಮಿಕರನ್ನು ಚಿಂತಾಕ್ರಾಂತರನ್ನಾಗಿಸಿದೆ.

ಖಾಯಂ ಕಾರ್ಮಿಕರಿಂದಲೇ ರಾಜಿನಾಮೆ ಪಡೆದುಕೊಳ್ಳುತ್ತಿದ್ದಾರೆ ಎಂದರೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರ ಪಾಡು ಮತ್ತಷ್ಟು ಹೇಳತೀರದು. ಹಲವು ಸಮಸ್ಯೆಗಳಿಂದಲೇ ಗಮನ ಸೆಳೆದಿರುವ ಫುಡ್ ಪಾರ್ಕ್ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದಿದೆ. ಖಾಯಂ ಮತ್ತು ಗುತ್ತಿಗೆ ಕಾರ್ಮಿಕರು ಈಗ ಕೆಲಸವಿಲ್ಲದೆ ಪರದಾಡುತ್ತಿದ್ದಾರೆ.

ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆಯಾದ ಫುಡ್‌ಪಾರ್ಕ್ ಮುಚ್ಚುವಂತಹ ಸ್ಥಿತಿಗೆ ಬಂದಿದೆ. ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ನೌಕರರು ಮತ್ತು ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಕೇಂದ್ರ ಸರ್ಕಾರವೇ ಆದೇಶ ಹೊರಡಿಸಿದೆ. ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಮೋದಿಯವರೇ ಉದ್ಘಾಟಿಸಿದ, ಕೇಂದ್ರ ಸರ್ಕಾರದ ಸಹಭಾಗಿತ್ವ ಇರುವ ಫುಡ್ ಪಾರ್ಕ್ ನಲ್ಲೇ ಆ ಆದೇಶ ಉಲ್ಲಂಘನೆಯಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ.


ಇದನ್ನೂ ಓದಿ: ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...