Homeಮುಖಪುಟತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಪ್ರಧಾನಿ ಮೋದಿಯವರು ಮನವಿ ಮಾಡಿದ್ದರು. ಆದರೆ ಮೋದಿಯವರೇ ಉದ್ಘಾಟಿಸಿದ ಪುಡ್ ಪಾರ್ಕ್ ನಲ್ಲಿ ಕೆಲಸದಿಂದ ತೆಗೆಯುವ ಕ್ರಿಯೆ ಮುಂದುವರೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ತುಮಕೂರಿನ ಫುಡ್ ಪಾರ್ಕ್ ನಲ್ಲೀಗ ಖಾಯಂ ಕಾರ್ಮಿಕರಿಗೆ ಕುತ್ತು ಬಂದಿದೆ. ಕೊರೊನಾ ಲಾಕ್ ಡೌನ್ ಪರಿಣಾಮ ಅರ್ಧಕ್ಕಿಂತ ಹೆಚ್ಚು ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಇದರಿಂದ ಖಾಯಂ ಕಾರ್ಮಿಕರು ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ಫುಡ್‌ಪಾರ್ಕ್ ಆಡಳಿತ ಮಂಡಳಿ ಗ್ರಾಮಗಳಿಗೆ ತೆರಳಿರುವ ಖಾಯಂ ಕಾರ್ಮಿಕರಿಗೆ ಮತ್ತೆ ಕೆಲಸಕ್ಕೆ ಬರಬೇಡಿ ಎಂದು ಕಟ್ಟುನಿಟ್ಟಾಗಿ ಹೇಳಿದೆ. ಅಷ್ಟೇ ಊರುಗಳಿಂದಲೇ ಕಾರ್ಮಿಕರಿಂದ ಇ-ಮೇಲ್  ಮೂಲಕ ರಾಜಿನಾಮೆ ಪಡೆಯಲಾಗಿದೆ. ಆಡಳಿತ ಮಂಡಳಿಯ ಒತ್ತಡಕ್ಕೆ ಸಿಲುಕಿರುವ ಖಾಯಂ ಕಾರ್ಮಿಕರು ಅನಿವಾರ್ಯವಾಗಿ ರಾಜಿನಾಮೆ ನೀಡಿದ್ದಾರೆ.

ಫುಡ್ ಪಾರ್ಕ್ ಅಸ್ತಿತ್ವಕ್ಕೆ ಬಂದು ಆರು ವರ್ಷ ಕಳೆದಿದೆ. ಸಾವಿರಾರು ಕಟುಂಬಗಳಿಗೆ ಮಾರ್ಗವಾಗಲಿದೆ ಎಂಬ ಭರವಸೆ ಕೇವಲ ಮಾತುಗಳಲ್ಲೇ ಉಳಿದಿದೆ. ಈಗ ಇರುವ ಖಾಯಂ ಕಾರ್ಮಿಕರ ಕೆಲಸಕ್ಕೂ ಸಂಕಷ್ಟ ಎದುರಾಗಿದೆ. ಸ್ಥಳೀಯ ಮತ್ತು ಉತ್ತರ ಭಾರತ ನೂರು ಕಾರ್ಮಿಕರು ಖಾಯಂ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ ಶೇಕಡ 60ಕ್ಕಿಂತ ಹೆಚ್ಚು ಮಂದಿ ಕಾರ್ಮಿಕರು ಮನೆಗೆ ಹೋಗಬೇಕಾಗಿದೆ.


ಇದನ್ನೂ ಓದಿ: ತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ನಾನುಗೌರಿ.ಕಾಂ ಜೊತೆ ಪರಿಸ್ಥಿತಿಯನ್ನು ಹಂಚಿಕೊಂಡ ಕಾರ್ಮಿಕರು, ಫುಡ್ ಪಾರ್ಕ್ ಆಡಳಿತ ಮಂಡಳಿ ರಾಜಿನಾಮೆ ನೀಡುವಂತೆ ಒತ್ತಡ ಹೇರುತ್ತಿದೆ. ಕಿರುಕುಳ ನೀಡುತ್ತಿದೆ. ಈಗಾಗಲೇ ಕೆಲವರು ರಾಜಿನಾಮೆ ನೀಡಿದ್ದಾರೆ. ನಮಗೆಲ್ಲ 2 ವರ್ಷದ ಹಿಂದ ಖಾಯಂ ಆಗಿತ್ತು. ಸ್ಥಳೀಯರು ಮತ್ತು ಹೊರಗಿನಿಂದ ಬಂದಿರುವ ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಕೆಲಸಕ್ಕೆ ಬರಬೇಡಿ ಎಂದು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಫುಡ್‌ಪಾರ್ಕ್‌ನಲ್ಲಿ ಮೇಂಟೇನೆನ್ಸ್ ಮತ್ತು ಪ್ರೊಡಕ್ಷನ್ ಎಂಬ ಎರಡು ವಿಭಾಗಗಳಿವೆ. ಇವೆರಡಿರಿಂದ ಸೇರಿ ನೂರು ಮಂದಿ ಖಾಯಂ ಕಾರ್ಮಿಕರಿದ್ದಾರೆ. ಇವರಲ್ಲಿ ಸುಮಾರು 60ರಷ್ಟು ಮಂದಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗುತ್ತದೆ. ಏಕಾಏಕಿ ಕೆಲಸಕ್ಕೆ ಬರಬೇಡಿ ಎಂದರೆ ನಾವು ಏನು ಮಾಡಬೇಕು. ನಮ್ಮ ಬದುಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಮೂರು ತಿಂಗಳಿಂದಲೂ ವೇತನ ನೀಡಿಲ್ಲ. ಸೆಟ್ಲಮೆಂಟ್‌ ಮಾಡಿ ಅಂದ್ರೆ ನೋಡೋಣ ಎನ್ನುತ್ತಿದ್ದಾರೆ. ಹೀಗಾಗಿ ಕಷ್ಟವಾಗಿದೆ ಎಂದು ಕಾರ್ಮಿಕರು ನೋವು ತೋಡಿಕೊಂಡರು.

ಆಡಳಿತ ಮಂಡಲಳಿಯ ಕ್ರಮದಿಂದ ಖಾಯಂ ಕಾರ್ಮಿಕರು ಕಂಗಾಲಾಗಿದ್ದಾರೆ. ಭವಿಷ್ಯ ಕತ್ತಲಿಗೆ ಬೀಳಲಿದೆ ಎಂಬ ಚಿಂತೆ ಅವರನ್ನು ಕಾಡತೊಡಗಿದೆ. ನೀವು ಬೇರೆ ಕೆಲಸ ನೋಡಿಕೊಳ್ಳಿ ಎಂದು ಬಾಯಿಮಾತಿನ ಸಂದೇಶ ರವಾನಿಸಿರುವುದು ಅವರಿಗೆ ದಿಕ್ಕು ತೋಚದಂತೆ ಮಾಡಿದೆ. ಮುಂದಿನ 15-20 ದಿನಗಳಲ್ಲಿ ಮತ್ತಷ್ಟು ಕಾರ್ಮಿಕರ ರಾಜಿನಾಮೆ ಪಡೆದುಕೊಳ್ಳುವುದು ಖಚಿತ ಎಂಬ ಆತಂಕ ಖಾಯಂ ಕಾರ್ಮಿಕರನ್ನು ಚಿಂತಾಕ್ರಾಂತರನ್ನಾಗಿಸಿದೆ.

ಖಾಯಂ ಕಾರ್ಮಿಕರಿಂದಲೇ ರಾಜಿನಾಮೆ ಪಡೆದುಕೊಳ್ಳುತ್ತಿದ್ದಾರೆ ಎಂದರೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರ ಪಾಡು ಮತ್ತಷ್ಟು ಹೇಳತೀರದು. ಹಲವು ಸಮಸ್ಯೆಗಳಿಂದಲೇ ಗಮನ ಸೆಳೆದಿರುವ ಫುಡ್ ಪಾರ್ಕ್ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದಿದೆ. ಖಾಯಂ ಮತ್ತು ಗುತ್ತಿಗೆ ಕಾರ್ಮಿಕರು ಈಗ ಕೆಲಸವಿಲ್ಲದೆ ಪರದಾಡುತ್ತಿದ್ದಾರೆ.

ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆಯಾದ ಫುಡ್‌ಪಾರ್ಕ್ ಮುಚ್ಚುವಂತಹ ಸ್ಥಿತಿಗೆ ಬಂದಿದೆ. ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ನೌಕರರು ಮತ್ತು ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಕೇಂದ್ರ ಸರ್ಕಾರವೇ ಆದೇಶ ಹೊರಡಿಸಿದೆ. ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಮೋದಿಯವರೇ ಉದ್ಘಾಟಿಸಿದ, ಕೇಂದ್ರ ಸರ್ಕಾರದ ಸಹಭಾಗಿತ್ವ ಇರುವ ಫುಡ್ ಪಾರ್ಕ್ ನಲ್ಲೇ ಆ ಆದೇಶ ಉಲ್ಲಂಘನೆಯಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ.


ಇದನ್ನೂ ಓದಿ: ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...