Homeಮುಖಪುಟತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಪ್ರಧಾನಿ ಮೋದಿಯವರು ಮನವಿ ಮಾಡಿದ್ದರು. ಆದರೆ ಮೋದಿಯವರೇ ಉದ್ಘಾಟಿಸಿದ ಪುಡ್ ಪಾರ್ಕ್ ನಲ್ಲಿ ಕೆಲಸದಿಂದ ತೆಗೆಯುವ ಕ್ರಿಯೆ ಮುಂದುವರೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ತುಮಕೂರಿನ ಫುಡ್ ಪಾರ್ಕ್ ನಲ್ಲೀಗ ಖಾಯಂ ಕಾರ್ಮಿಕರಿಗೆ ಕುತ್ತು ಬಂದಿದೆ. ಕೊರೊನಾ ಲಾಕ್ ಡೌನ್ ಪರಿಣಾಮ ಅರ್ಧಕ್ಕಿಂತ ಹೆಚ್ಚು ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಇದರಿಂದ ಖಾಯಂ ಕಾರ್ಮಿಕರು ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ಫುಡ್‌ಪಾರ್ಕ್ ಆಡಳಿತ ಮಂಡಳಿ ಗ್ರಾಮಗಳಿಗೆ ತೆರಳಿರುವ ಖಾಯಂ ಕಾರ್ಮಿಕರಿಗೆ ಮತ್ತೆ ಕೆಲಸಕ್ಕೆ ಬರಬೇಡಿ ಎಂದು ಕಟ್ಟುನಿಟ್ಟಾಗಿ ಹೇಳಿದೆ. ಅಷ್ಟೇ ಊರುಗಳಿಂದಲೇ ಕಾರ್ಮಿಕರಿಂದ ಇ-ಮೇಲ್  ಮೂಲಕ ರಾಜಿನಾಮೆ ಪಡೆಯಲಾಗಿದೆ. ಆಡಳಿತ ಮಂಡಳಿಯ ಒತ್ತಡಕ್ಕೆ ಸಿಲುಕಿರುವ ಖಾಯಂ ಕಾರ್ಮಿಕರು ಅನಿವಾರ್ಯವಾಗಿ ರಾಜಿನಾಮೆ ನೀಡಿದ್ದಾರೆ.

ಫುಡ್ ಪಾರ್ಕ್ ಅಸ್ತಿತ್ವಕ್ಕೆ ಬಂದು ಆರು ವರ್ಷ ಕಳೆದಿದೆ. ಸಾವಿರಾರು ಕಟುಂಬಗಳಿಗೆ ಮಾರ್ಗವಾಗಲಿದೆ ಎಂಬ ಭರವಸೆ ಕೇವಲ ಮಾತುಗಳಲ್ಲೇ ಉಳಿದಿದೆ. ಈಗ ಇರುವ ಖಾಯಂ ಕಾರ್ಮಿಕರ ಕೆಲಸಕ್ಕೂ ಸಂಕಷ್ಟ ಎದುರಾಗಿದೆ. ಸ್ಥಳೀಯ ಮತ್ತು ಉತ್ತರ ಭಾರತ ನೂರು ಕಾರ್ಮಿಕರು ಖಾಯಂ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ ಶೇಕಡ 60ಕ್ಕಿಂತ ಹೆಚ್ಚು ಮಂದಿ ಕಾರ್ಮಿಕರು ಮನೆಗೆ ಹೋಗಬೇಕಾಗಿದೆ.


ಇದನ್ನೂ ಓದಿ: ತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ನಾನುಗೌರಿ.ಕಾಂ ಜೊತೆ ಪರಿಸ್ಥಿತಿಯನ್ನು ಹಂಚಿಕೊಂಡ ಕಾರ್ಮಿಕರು, ಫುಡ್ ಪಾರ್ಕ್ ಆಡಳಿತ ಮಂಡಳಿ ರಾಜಿನಾಮೆ ನೀಡುವಂತೆ ಒತ್ತಡ ಹೇರುತ್ತಿದೆ. ಕಿರುಕುಳ ನೀಡುತ್ತಿದೆ. ಈಗಾಗಲೇ ಕೆಲವರು ರಾಜಿನಾಮೆ ನೀಡಿದ್ದಾರೆ. ನಮಗೆಲ್ಲ 2 ವರ್ಷದ ಹಿಂದ ಖಾಯಂ ಆಗಿತ್ತು. ಸ್ಥಳೀಯರು ಮತ್ತು ಹೊರಗಿನಿಂದ ಬಂದಿರುವ ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಕೆಲಸಕ್ಕೆ ಬರಬೇಡಿ ಎಂದು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಫುಡ್‌ಪಾರ್ಕ್‌ನಲ್ಲಿ ಮೇಂಟೇನೆನ್ಸ್ ಮತ್ತು ಪ್ರೊಡಕ್ಷನ್ ಎಂಬ ಎರಡು ವಿಭಾಗಗಳಿವೆ. ಇವೆರಡಿರಿಂದ ಸೇರಿ ನೂರು ಮಂದಿ ಖಾಯಂ ಕಾರ್ಮಿಕರಿದ್ದಾರೆ. ಇವರಲ್ಲಿ ಸುಮಾರು 60ರಷ್ಟು ಮಂದಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗುತ್ತದೆ. ಏಕಾಏಕಿ ಕೆಲಸಕ್ಕೆ ಬರಬೇಡಿ ಎಂದರೆ ನಾವು ಏನು ಮಾಡಬೇಕು. ನಮ್ಮ ಬದುಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಮೂರು ತಿಂಗಳಿಂದಲೂ ವೇತನ ನೀಡಿಲ್ಲ. ಸೆಟ್ಲಮೆಂಟ್‌ ಮಾಡಿ ಅಂದ್ರೆ ನೋಡೋಣ ಎನ್ನುತ್ತಿದ್ದಾರೆ. ಹೀಗಾಗಿ ಕಷ್ಟವಾಗಿದೆ ಎಂದು ಕಾರ್ಮಿಕರು ನೋವು ತೋಡಿಕೊಂಡರು.

ಆಡಳಿತ ಮಂಡಲಳಿಯ ಕ್ರಮದಿಂದ ಖಾಯಂ ಕಾರ್ಮಿಕರು ಕಂಗಾಲಾಗಿದ್ದಾರೆ. ಭವಿಷ್ಯ ಕತ್ತಲಿಗೆ ಬೀಳಲಿದೆ ಎಂಬ ಚಿಂತೆ ಅವರನ್ನು ಕಾಡತೊಡಗಿದೆ. ನೀವು ಬೇರೆ ಕೆಲಸ ನೋಡಿಕೊಳ್ಳಿ ಎಂದು ಬಾಯಿಮಾತಿನ ಸಂದೇಶ ರವಾನಿಸಿರುವುದು ಅವರಿಗೆ ದಿಕ್ಕು ತೋಚದಂತೆ ಮಾಡಿದೆ. ಮುಂದಿನ 15-20 ದಿನಗಳಲ್ಲಿ ಮತ್ತಷ್ಟು ಕಾರ್ಮಿಕರ ರಾಜಿನಾಮೆ ಪಡೆದುಕೊಳ್ಳುವುದು ಖಚಿತ ಎಂಬ ಆತಂಕ ಖಾಯಂ ಕಾರ್ಮಿಕರನ್ನು ಚಿಂತಾಕ್ರಾಂತರನ್ನಾಗಿಸಿದೆ.

ಖಾಯಂ ಕಾರ್ಮಿಕರಿಂದಲೇ ರಾಜಿನಾಮೆ ಪಡೆದುಕೊಳ್ಳುತ್ತಿದ್ದಾರೆ ಎಂದರೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರ ಪಾಡು ಮತ್ತಷ್ಟು ಹೇಳತೀರದು. ಹಲವು ಸಮಸ್ಯೆಗಳಿಂದಲೇ ಗಮನ ಸೆಳೆದಿರುವ ಫುಡ್ ಪಾರ್ಕ್ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದಿದೆ. ಖಾಯಂ ಮತ್ತು ಗುತ್ತಿಗೆ ಕಾರ್ಮಿಕರು ಈಗ ಕೆಲಸವಿಲ್ಲದೆ ಪರದಾಡುತ್ತಿದ್ದಾರೆ.

ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆಯಾದ ಫುಡ್‌ಪಾರ್ಕ್ ಮುಚ್ಚುವಂತಹ ಸ್ಥಿತಿಗೆ ಬಂದಿದೆ. ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ನೌಕರರು ಮತ್ತು ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಕೇಂದ್ರ ಸರ್ಕಾರವೇ ಆದೇಶ ಹೊರಡಿಸಿದೆ. ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಮೋದಿಯವರೇ ಉದ್ಘಾಟಿಸಿದ, ಕೇಂದ್ರ ಸರ್ಕಾರದ ಸಹಭಾಗಿತ್ವ ಇರುವ ಫುಡ್ ಪಾರ್ಕ್ ನಲ್ಲೇ ಆ ಆದೇಶ ಉಲ್ಲಂಘನೆಯಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ.


ಇದನ್ನೂ ಓದಿ: ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...