Homeಮುಖಪುಟಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

ಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಭೂಬಾಲನ್ ಅವರಿಗೆ ಗುತ್ತಿಗೆದಾರರ ಕಿರುಕುಳ ಹೆಚ್ಚಾಗಿದೆ. ತಮಗೆ ದಂಡ ಹಾಕಿದರೆಂಬ ಕಾರಣಕ್ಕೆ ಭೂಬಾಲನ್ ಅವರನ್ನು ತುಮಕೂರಿನಿಂದ ಎತ್ತಂಗಡಿ ಮಾಡಿಸಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಗುತ್ತಿಗೆದಾರರು ‘ಬಸವಜ್ಯೋತಿ’ ಮೇಲೆ ಒತ್ತಡ ತಂದು ಭೂಬಾಲನ್ ವರ್ಗಾವಣೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅದರ ಭಾಗವಾಗಿಯೇ ಅವರನ್ನು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ಹುದ್ದೆಯಿಂದ ಬಿಡುಗಡೆಗೊಳಿಸಿ, ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗರಾಜ್ ಅವರನ್ನು ತರುವುದು ಖಚಿತವಾಗಿದೆ.

ಭೂಬಾಲನ್ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ. ಜೊತೆಗೆ ದಕ್ಷ, ಪ್ರಾಮಾಣಿಕ ಎಂಬ ಹೆಸರು ಗಳಿಸಿದ್ದಾರೆ. ಅದನ್ನು ಕಾರ್ಯತಃ ಮಾಡಿಯೂ ತೋರಿಸಿದ್ದಾರೆ. ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಬಂದಿದ್ದಾರೆ. ಸ್ಮಾಟ್ ಸಿಟಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ದಂಡ ವಿಧಿಸುವಂತಹ ಸಾಹಸಕ್ಕೆ ಕೈಹಾಕಿದವರು ಭೂಬಾಲನ್.

ತುಮಕೂರು ನಗರದ ಒಳರಸ್ತೆಗಳ ಅಭಿವೃದ್ದಿ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದ ಮೆ/ಆರ್.ಎಂ.ಎನ್ ಇನ್ ಫ್ರಾಸ್ಟ್ರಕ್ಚರ್ಸ್ ಗೆ 50,4,630 ರೂಪಾಯಿ, ಅಶೋಕ ರಸ್ತೆ ಅಭಿವೃದ್ಧಿ ಗುತ್ತಿಗೆ ಹಿಡಿದಿದ್ದ ಸಿದ್ದಾರ್ಥ ಸಿವಿಲ್ ವರ್ಕ್ಸ್ ಪ್ರೈ., ಲಿಮಿಟೆಡ್ ಗೆ 26,97,720 ರೂ, ಅಮಾನಿಕೆರೆ ಏರಿ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿ ಗುತ್ತಿಗೆ ಪಡೆದಿದ್ದ ಮೆ/ಆರ್.ಎಂ.ಎನ್. ಇನ್ ಫ್ರಾಸ್ಟ್ರಕ್ಚರ್ಸ್ ಗೆ 23,42,295 ರೂಪಾಯಿ, ಡಾ.ರಾಧಕೃಷ್ಣ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದಿದ್ದ ಶ್ರೀ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ.ಲಿ.ಗೆ 16,42,295 ರೂ. ಭಗವಾನ್ ಮಹಾವೀರ್ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದ ಶ್ರೀ ಸುಧಾಕರ ಪೆರಿಟಾಲ ಕಂಪನಿಗೆ 10,3,460 ರೂ. ಮಹಿಳಾ ಥೀಮ್ ಪಾರ್ಕ್ ಗುತ್ತಿಗೆ ತೆಗೆದುಕೊಂಡಿದ್ದ ಮೆ/ರಾಜೇಗೌಡ ಅಂಡ್ ಕೋ ಗೆ 6,77, 377 ರೂ. ಟ್ರಾಮಾ ಸೆಂಟರ್ ಅಭಿವೃದ್ಧಿಪಡಿಸುವ ಗುತ್ತಿಗೆ ಪಡೆದಿರುವ ಕೆ.ಬಿ.ಆರ್. ಇನ್ ಫ್ರಾಟಿಕ್ ಲಿ ಕಂಪನಿಗೆ 5,28,000 ರೂ ದಂಡ ವಿಧಿಸಿದ್ದರು.

ಹಾಗೆಯೇ ಫೀಲ್ಡ್ ಮಾರ್ಷಲ್ ಕರಿಯಪ್ಪ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ., ಲಿ ಕಂಪನಿಗೆ 5,65,119 ರೂ. ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾಲು ಆಲದ ಮರಗಳ ವಿಶಾಲ ರಾಜಮಾರ್ಗದ ನಿರ್ಮಾಣ ಮತ್ತು ಅಭಿವೃದ್ಧಿಯ ಗುತ್ತಿಗೆ ಪಡೆದಿದ್ದ ಮೆ/ಎ1 ಕನ್ ಸ್ಟ್ರಕ್ಷನ್ 4,19, 625 ರೂ. ಮೂರು ಪಾರ್ಕ್ ಗಳ ಅಭಿವೃದ್ಧಿ ಗುತ್ತಿಗೆದಾರ ಮೆ/ಸಾಯಿತ್ರಿಷ ಇನ್ ಫ್ರಾ ಇಂಜಿನಿಯರ್ಸ್ 1,26,200 ರೂ, ಮಹಾತ್ಮ ಗಾಂಧಿ ಕ್ರೀಡಾಂಗಣದ ಅಭಿವೃದ್ಧಿ (ಪಿಎಂಸಿ ವತಿಯಿಂದ ನಕ್ಷೆಗಳ ವಿಳಂಬಕ್ಕಾಗಿ) ಕ್ಯಾಡ್ ಫೋರಂ ಬೆಂಗಳೂರು ಗುತ್ತಿಗೆದಾರ ಕಂಪನಿಗೆ 3,08,060 ರೂ ದಂಡ ವಿಧಿಸಿ ಕೂಡಲೇ ಎಲ್ಲಾ ಗುತ್ತಿಗೆದಾರ ಕಂಪನಿಗಳು ದಂಡ ಪಾವತಿಸಬೇಕು ಎಂದು ಕಟ್ಟುನಿಟ್ಟಾಗಿ ಆದೇಶಿಸಿದ್ದರು..

ಅದೇ ಕಾರಣಕ್ಕೆ ಮೊದಲ ಬಾರಿಗೆ ಬಸವಜ್ಯೋತಿ ಗುತ್ತಿಗೆದಾರರ ಲಾಬಿಗೆ ಮಣಿದು ವರ್ಗಾವಣೆ ಮಾಡಿಸಿದ್ದರು. ಆಗ ವರ್ಗಾವಣೆ ವಿರೋಧಿಸಿ ತುಮಕೂರು ನಗರದ ನಾಗರಿಕರು ಪ್ರತಿಭಟನೆ ನಡೆಸಿದ್ದರು. ವರ್ಗಾವಣೆ ರದ್ದು ಗೊಳಿಸಬೇಕು ಎಂದು ಪಟ್ಟುಹಿಡಿದಿದ್ದರು.. ಜನರ ಒತ್ತಾಯಕ್ಕೆ ‘ಬಸವಜ್ಯೋತಿ’ ಮಣಿಯಲೇ ಬೇಕಾಯಿತು ಹಾಗಾಗಿ ಭೂಬಾಲನ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳಬೇಕಾಯಿತು.

ಇದೀಗ ಮತ್ತೆ ಭೂಬಾಲನ್ ಅವರಿಗೆ ಕಿರುಕುಳ ಮುಂದುವರಿದಿದೆ. ಭೂಬಾಲನ್ ಇದ್ದರೆ ನಮ್ಮ ಕೆಲಸ ನಡೆಯುವುದಿಲ್ಲವೆಂಬುದು ಅರಿತಿರುವ ಗುತ್ತಿಗೆದಾರರು ಬಸವಜ್ಯೋತಿ ಮೇಲೆ ಒತ್ತಡ ತಂದು ಆಯುಕ್ತರನ್ನು ವರ್ಗಾವಣೆ ಮಾಡಿಸುವ ಕಾರ್ಯ ಭರದಿಂದ ನಡೆಯುತ್ತಿದೆ.

ಈಗಾಗಲೇ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ಹುದ್ದೆಯಿಂದ ಭೂಬಾಲನ್ ಅವರನ್ನು ಹೊರಗೆ ಕಳಿಸಲಾಗಿದೆ. ಅಲ್ಲಿ ಅವರಿದ್ದರೆ ನಮ್ಮ ‘ವ್ಯವಹಾರ’ ಸುಸೂತ್ರವಾಗಿ ನಡೆಯುವುದಿಲ್ಲವೆಂಬ ಸತ್ಯ ಭ್ರಷ್ಟ ರಾಜಕಾರಣಿಗಳು ಮತ್ತು ಗುತ್ತಿಗೆದಾರರಿಗೆ ತಿಳಿದುಹೋಗಿರುವುದರಿಂದ ದಕ್ಷ ಅಧಿಕಾರಿ ಎತ್ತಂಗಡಿಗೆ ಇನ್ನಿಲ್ಲದ ಕಸರತ್ತು ತೀವ್ರಗೊಂಡಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಭೂಬಾಲನ್ ಜಾಗಕ್ಕೆ ‘ಜಾತಿಬಂಧವ’ ರನ್ನೇ ಕರೆತಂದು ಕೂರಿಸಿದರೆ ಹುಲ್ಲುಗಾವಲಿನಲ್ಲಿ ಮೇಯ್ದು ದುಂಡಗಾಗಲು ಈ ಪಟಲಾಂ ತುದಿಮೇಲೆ ನಿಂತಿದ್ದಾರೆ. ಇಂತಹ ಪ್ರಾಮಾಣಿಕ ಅಧಿಕಾರಿಯನ್ನು ಎತ್ತಂಗಡಿ ಮಾಡಿಸುವಲ್ಲಿ ‘ಅಮ’ ಪಾತ್ರ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ದಕ್ಷ ಅಧಿಕಾರಿಗಳನ್ನು ಕಂಡರೆ ಆಗದವರ ಪಟ್ಟಿ ದೊಡ್ಡದಾಗಿದೆ. ಮಣಿವಣ್ಣನ್ ತುಮಕೂರು ನಗರಸಭೆಯ ಆಯುಕ್ತರಾಗಿ ಕೆಲಸ ಮಾಡಿದಾಗಲೂ ಇದೇ ಬಸವಜ್ಯೋತಿ ಅವರನ್ನು ವರ್ಗಾವಣೆ ಮಾಡಿಸಿದ್ದರು ಎಂಬ ಮಾತುಗಳು ಗುಟ್ಟಾಗಿ ಉಳಿದಿಲ್ಲ. ಅಭಿವೃದ್ಧಿಯ ‘ಹರಿಕಾರ’ನೆಂಬ ಬಿರುದು ಪಡೆದಿರುವ ವ್ಯಕ್ತಿಯೂ ಕೂಡ ಭೂಬಾಲನ್ ವರ್ಗಾವಣೆಗೆ ತಂತ್ರ ಹೆಣೆಯುತ್ತಲೇ ಇದ್ದಾರೆ. ಆ ಮೂವರು ಸೇರಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮತ್ರಿಯ ಮೇಲೆ ಭೂಬಾಲನ್ ವರ್ಗಾವಣೆಗೆ ಒತ್ತಡ ಹೇರಿದ್ದಾರೆ. ಇದು ವರ್ಕೌಟ್ ಆದರೆ ಇನ್ನು ಕೆಲವೇ ದಿನಗಳಲ್ಲಿ ಭೂಬಾಲನ್ ತುಮಕೂರಿನಿಂದ ಬೇರೆಡೆ ವರ್ಗಾವಣೆಯಾಗುವುದು ಖಚಿತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...