Homeಮುಖಪುಟಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

ಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಭೂಬಾಲನ್ ಅವರಿಗೆ ಗುತ್ತಿಗೆದಾರರ ಕಿರುಕುಳ ಹೆಚ್ಚಾಗಿದೆ. ತಮಗೆ ದಂಡ ಹಾಕಿದರೆಂಬ ಕಾರಣಕ್ಕೆ ಭೂಬಾಲನ್ ಅವರನ್ನು ತುಮಕೂರಿನಿಂದ ಎತ್ತಂಗಡಿ ಮಾಡಿಸಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಗುತ್ತಿಗೆದಾರರು ‘ಬಸವಜ್ಯೋತಿ’ ಮೇಲೆ ಒತ್ತಡ ತಂದು ಭೂಬಾಲನ್ ವರ್ಗಾವಣೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅದರ ಭಾಗವಾಗಿಯೇ ಅವರನ್ನು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ಹುದ್ದೆಯಿಂದ ಬಿಡುಗಡೆಗೊಳಿಸಿ, ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗರಾಜ್ ಅವರನ್ನು ತರುವುದು ಖಚಿತವಾಗಿದೆ.

ಭೂಬಾಲನ್ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ. ಜೊತೆಗೆ ದಕ್ಷ, ಪ್ರಾಮಾಣಿಕ ಎಂಬ ಹೆಸರು ಗಳಿಸಿದ್ದಾರೆ. ಅದನ್ನು ಕಾರ್ಯತಃ ಮಾಡಿಯೂ ತೋರಿಸಿದ್ದಾರೆ. ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಬಂದಿದ್ದಾರೆ. ಸ್ಮಾಟ್ ಸಿಟಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ದಂಡ ವಿಧಿಸುವಂತಹ ಸಾಹಸಕ್ಕೆ ಕೈಹಾಕಿದವರು ಭೂಬಾಲನ್.

ತುಮಕೂರು ನಗರದ ಒಳರಸ್ತೆಗಳ ಅಭಿವೃದ್ದಿ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದ ಮೆ/ಆರ್.ಎಂ.ಎನ್ ಇನ್ ಫ್ರಾಸ್ಟ್ರಕ್ಚರ್ಸ್ ಗೆ 50,4,630 ರೂಪಾಯಿ, ಅಶೋಕ ರಸ್ತೆ ಅಭಿವೃದ್ಧಿ ಗುತ್ತಿಗೆ ಹಿಡಿದಿದ್ದ ಸಿದ್ದಾರ್ಥ ಸಿವಿಲ್ ವರ್ಕ್ಸ್ ಪ್ರೈ., ಲಿಮಿಟೆಡ್ ಗೆ 26,97,720 ರೂ, ಅಮಾನಿಕೆರೆ ಏರಿ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿ ಗುತ್ತಿಗೆ ಪಡೆದಿದ್ದ ಮೆ/ಆರ್.ಎಂ.ಎನ್. ಇನ್ ಫ್ರಾಸ್ಟ್ರಕ್ಚರ್ಸ್ ಗೆ 23,42,295 ರೂಪಾಯಿ, ಡಾ.ರಾಧಕೃಷ್ಣ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದಿದ್ದ ಶ್ರೀ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ.ಲಿ.ಗೆ 16,42,295 ರೂ. ಭಗವಾನ್ ಮಹಾವೀರ್ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದ ಶ್ರೀ ಸುಧಾಕರ ಪೆರಿಟಾಲ ಕಂಪನಿಗೆ 10,3,460 ರೂ. ಮಹಿಳಾ ಥೀಮ್ ಪಾರ್ಕ್ ಗುತ್ತಿಗೆ ತೆಗೆದುಕೊಂಡಿದ್ದ ಮೆ/ರಾಜೇಗೌಡ ಅಂಡ್ ಕೋ ಗೆ 6,77, 377 ರೂ. ಟ್ರಾಮಾ ಸೆಂಟರ್ ಅಭಿವೃದ್ಧಿಪಡಿಸುವ ಗುತ್ತಿಗೆ ಪಡೆದಿರುವ ಕೆ.ಬಿ.ಆರ್. ಇನ್ ಫ್ರಾಟಿಕ್ ಲಿ ಕಂಪನಿಗೆ 5,28,000 ರೂ ದಂಡ ವಿಧಿಸಿದ್ದರು.

ಹಾಗೆಯೇ ಫೀಲ್ಡ್ ಮಾರ್ಷಲ್ ಕರಿಯಪ್ಪ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ., ಲಿ ಕಂಪನಿಗೆ 5,65,119 ರೂ. ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾಲು ಆಲದ ಮರಗಳ ವಿಶಾಲ ರಾಜಮಾರ್ಗದ ನಿರ್ಮಾಣ ಮತ್ತು ಅಭಿವೃದ್ಧಿಯ ಗುತ್ತಿಗೆ ಪಡೆದಿದ್ದ ಮೆ/ಎ1 ಕನ್ ಸ್ಟ್ರಕ್ಷನ್ 4,19, 625 ರೂ. ಮೂರು ಪಾರ್ಕ್ ಗಳ ಅಭಿವೃದ್ಧಿ ಗುತ್ತಿಗೆದಾರ ಮೆ/ಸಾಯಿತ್ರಿಷ ಇನ್ ಫ್ರಾ ಇಂಜಿನಿಯರ್ಸ್ 1,26,200 ರೂ, ಮಹಾತ್ಮ ಗಾಂಧಿ ಕ್ರೀಡಾಂಗಣದ ಅಭಿವೃದ್ಧಿ (ಪಿಎಂಸಿ ವತಿಯಿಂದ ನಕ್ಷೆಗಳ ವಿಳಂಬಕ್ಕಾಗಿ) ಕ್ಯಾಡ್ ಫೋರಂ ಬೆಂಗಳೂರು ಗುತ್ತಿಗೆದಾರ ಕಂಪನಿಗೆ 3,08,060 ರೂ ದಂಡ ವಿಧಿಸಿ ಕೂಡಲೇ ಎಲ್ಲಾ ಗುತ್ತಿಗೆದಾರ ಕಂಪನಿಗಳು ದಂಡ ಪಾವತಿಸಬೇಕು ಎಂದು ಕಟ್ಟುನಿಟ್ಟಾಗಿ ಆದೇಶಿಸಿದ್ದರು..

ಅದೇ ಕಾರಣಕ್ಕೆ ಮೊದಲ ಬಾರಿಗೆ ಬಸವಜ್ಯೋತಿ ಗುತ್ತಿಗೆದಾರರ ಲಾಬಿಗೆ ಮಣಿದು ವರ್ಗಾವಣೆ ಮಾಡಿಸಿದ್ದರು. ಆಗ ವರ್ಗಾವಣೆ ವಿರೋಧಿಸಿ ತುಮಕೂರು ನಗರದ ನಾಗರಿಕರು ಪ್ರತಿಭಟನೆ ನಡೆಸಿದ್ದರು. ವರ್ಗಾವಣೆ ರದ್ದು ಗೊಳಿಸಬೇಕು ಎಂದು ಪಟ್ಟುಹಿಡಿದಿದ್ದರು.. ಜನರ ಒತ್ತಾಯಕ್ಕೆ ‘ಬಸವಜ್ಯೋತಿ’ ಮಣಿಯಲೇ ಬೇಕಾಯಿತು ಹಾಗಾಗಿ ಭೂಬಾಲನ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳಬೇಕಾಯಿತು.

ಇದೀಗ ಮತ್ತೆ ಭೂಬಾಲನ್ ಅವರಿಗೆ ಕಿರುಕುಳ ಮುಂದುವರಿದಿದೆ. ಭೂಬಾಲನ್ ಇದ್ದರೆ ನಮ್ಮ ಕೆಲಸ ನಡೆಯುವುದಿಲ್ಲವೆಂಬುದು ಅರಿತಿರುವ ಗುತ್ತಿಗೆದಾರರು ಬಸವಜ್ಯೋತಿ ಮೇಲೆ ಒತ್ತಡ ತಂದು ಆಯುಕ್ತರನ್ನು ವರ್ಗಾವಣೆ ಮಾಡಿಸುವ ಕಾರ್ಯ ಭರದಿಂದ ನಡೆಯುತ್ತಿದೆ.

ಈಗಾಗಲೇ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ಹುದ್ದೆಯಿಂದ ಭೂಬಾಲನ್ ಅವರನ್ನು ಹೊರಗೆ ಕಳಿಸಲಾಗಿದೆ. ಅಲ್ಲಿ ಅವರಿದ್ದರೆ ನಮ್ಮ ‘ವ್ಯವಹಾರ’ ಸುಸೂತ್ರವಾಗಿ ನಡೆಯುವುದಿಲ್ಲವೆಂಬ ಸತ್ಯ ಭ್ರಷ್ಟ ರಾಜಕಾರಣಿಗಳು ಮತ್ತು ಗುತ್ತಿಗೆದಾರರಿಗೆ ತಿಳಿದುಹೋಗಿರುವುದರಿಂದ ದಕ್ಷ ಅಧಿಕಾರಿ ಎತ್ತಂಗಡಿಗೆ ಇನ್ನಿಲ್ಲದ ಕಸರತ್ತು ತೀವ್ರಗೊಂಡಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಭೂಬಾಲನ್ ಜಾಗಕ್ಕೆ ‘ಜಾತಿಬಂಧವ’ ರನ್ನೇ ಕರೆತಂದು ಕೂರಿಸಿದರೆ ಹುಲ್ಲುಗಾವಲಿನಲ್ಲಿ ಮೇಯ್ದು ದುಂಡಗಾಗಲು ಈ ಪಟಲಾಂ ತುದಿಮೇಲೆ ನಿಂತಿದ್ದಾರೆ. ಇಂತಹ ಪ್ರಾಮಾಣಿಕ ಅಧಿಕಾರಿಯನ್ನು ಎತ್ತಂಗಡಿ ಮಾಡಿಸುವಲ್ಲಿ ‘ಅಮ’ ಪಾತ್ರ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ದಕ್ಷ ಅಧಿಕಾರಿಗಳನ್ನು ಕಂಡರೆ ಆಗದವರ ಪಟ್ಟಿ ದೊಡ್ಡದಾಗಿದೆ. ಮಣಿವಣ್ಣನ್ ತುಮಕೂರು ನಗರಸಭೆಯ ಆಯುಕ್ತರಾಗಿ ಕೆಲಸ ಮಾಡಿದಾಗಲೂ ಇದೇ ಬಸವಜ್ಯೋತಿ ಅವರನ್ನು ವರ್ಗಾವಣೆ ಮಾಡಿಸಿದ್ದರು ಎಂಬ ಮಾತುಗಳು ಗುಟ್ಟಾಗಿ ಉಳಿದಿಲ್ಲ. ಅಭಿವೃದ್ಧಿಯ ‘ಹರಿಕಾರ’ನೆಂಬ ಬಿರುದು ಪಡೆದಿರುವ ವ್ಯಕ್ತಿಯೂ ಕೂಡ ಭೂಬಾಲನ್ ವರ್ಗಾವಣೆಗೆ ತಂತ್ರ ಹೆಣೆಯುತ್ತಲೇ ಇದ್ದಾರೆ. ಆ ಮೂವರು ಸೇರಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮತ್ರಿಯ ಮೇಲೆ ಭೂಬಾಲನ್ ವರ್ಗಾವಣೆಗೆ ಒತ್ತಡ ಹೇರಿದ್ದಾರೆ. ಇದು ವರ್ಕೌಟ್ ಆದರೆ ಇನ್ನು ಕೆಲವೇ ದಿನಗಳಲ್ಲಿ ಭೂಬಾಲನ್ ತುಮಕೂರಿನಿಂದ ಬೇರೆಡೆ ವರ್ಗಾವಣೆಯಾಗುವುದು ಖಚಿತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...