Homeಮುಖಪುಟಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

ಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಭೂಬಾಲನ್ ಅವರಿಗೆ ಗುತ್ತಿಗೆದಾರರ ಕಿರುಕುಳ ಹೆಚ್ಚಾಗಿದೆ. ತಮಗೆ ದಂಡ ಹಾಕಿದರೆಂಬ ಕಾರಣಕ್ಕೆ ಭೂಬಾಲನ್ ಅವರನ್ನು ತುಮಕೂರಿನಿಂದ ಎತ್ತಂಗಡಿ ಮಾಡಿಸಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಗುತ್ತಿಗೆದಾರರು ‘ಬಸವಜ್ಯೋತಿ’ ಮೇಲೆ ಒತ್ತಡ ತಂದು ಭೂಬಾಲನ್ ವರ್ಗಾವಣೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅದರ ಭಾಗವಾಗಿಯೇ ಅವರನ್ನು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ಹುದ್ದೆಯಿಂದ ಬಿಡುಗಡೆಗೊಳಿಸಿ, ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗರಾಜ್ ಅವರನ್ನು ತರುವುದು ಖಚಿತವಾಗಿದೆ.

ಭೂಬಾಲನ್ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ. ಜೊತೆಗೆ ದಕ್ಷ, ಪ್ರಾಮಾಣಿಕ ಎಂಬ ಹೆಸರು ಗಳಿಸಿದ್ದಾರೆ. ಅದನ್ನು ಕಾರ್ಯತಃ ಮಾಡಿಯೂ ತೋರಿಸಿದ್ದಾರೆ. ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಬಂದಿದ್ದಾರೆ. ಸ್ಮಾಟ್ ಸಿಟಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ದಂಡ ವಿಧಿಸುವಂತಹ ಸಾಹಸಕ್ಕೆ ಕೈಹಾಕಿದವರು ಭೂಬಾಲನ್.

ತುಮಕೂರು ನಗರದ ಒಳರಸ್ತೆಗಳ ಅಭಿವೃದ್ದಿ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದ ಮೆ/ಆರ್.ಎಂ.ಎನ್ ಇನ್ ಫ್ರಾಸ್ಟ್ರಕ್ಚರ್ಸ್ ಗೆ 50,4,630 ರೂಪಾಯಿ, ಅಶೋಕ ರಸ್ತೆ ಅಭಿವೃದ್ಧಿ ಗುತ್ತಿಗೆ ಹಿಡಿದಿದ್ದ ಸಿದ್ದಾರ್ಥ ಸಿವಿಲ್ ವರ್ಕ್ಸ್ ಪ್ರೈ., ಲಿಮಿಟೆಡ್ ಗೆ 26,97,720 ರೂ, ಅಮಾನಿಕೆರೆ ಏರಿ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿ ಗುತ್ತಿಗೆ ಪಡೆದಿದ್ದ ಮೆ/ಆರ್.ಎಂ.ಎನ್. ಇನ್ ಫ್ರಾಸ್ಟ್ರಕ್ಚರ್ಸ್ ಗೆ 23,42,295 ರೂಪಾಯಿ, ಡಾ.ರಾಧಕೃಷ್ಣ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದಿದ್ದ ಶ್ರೀ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ.ಲಿ.ಗೆ 16,42,295 ರೂ. ಭಗವಾನ್ ಮಹಾವೀರ್ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದ ಶ್ರೀ ಸುಧಾಕರ ಪೆರಿಟಾಲ ಕಂಪನಿಗೆ 10,3,460 ರೂ. ಮಹಿಳಾ ಥೀಮ್ ಪಾರ್ಕ್ ಗುತ್ತಿಗೆ ತೆಗೆದುಕೊಂಡಿದ್ದ ಮೆ/ರಾಜೇಗೌಡ ಅಂಡ್ ಕೋ ಗೆ 6,77, 377 ರೂ. ಟ್ರಾಮಾ ಸೆಂಟರ್ ಅಭಿವೃದ್ಧಿಪಡಿಸುವ ಗುತ್ತಿಗೆ ಪಡೆದಿರುವ ಕೆ.ಬಿ.ಆರ್. ಇನ್ ಫ್ರಾಟಿಕ್ ಲಿ ಕಂಪನಿಗೆ 5,28,000 ರೂ ದಂಡ ವಿಧಿಸಿದ್ದರು.

ಹಾಗೆಯೇ ಫೀಲ್ಡ್ ಮಾರ್ಷಲ್ ಕರಿಯಪ್ಪ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ., ಲಿ ಕಂಪನಿಗೆ 5,65,119 ರೂ. ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾಲು ಆಲದ ಮರಗಳ ವಿಶಾಲ ರಾಜಮಾರ್ಗದ ನಿರ್ಮಾಣ ಮತ್ತು ಅಭಿವೃದ್ಧಿಯ ಗುತ್ತಿಗೆ ಪಡೆದಿದ್ದ ಮೆ/ಎ1 ಕನ್ ಸ್ಟ್ರಕ್ಷನ್ 4,19, 625 ರೂ. ಮೂರು ಪಾರ್ಕ್ ಗಳ ಅಭಿವೃದ್ಧಿ ಗುತ್ತಿಗೆದಾರ ಮೆ/ಸಾಯಿತ್ರಿಷ ಇನ್ ಫ್ರಾ ಇಂಜಿನಿಯರ್ಸ್ 1,26,200 ರೂ, ಮಹಾತ್ಮ ಗಾಂಧಿ ಕ್ರೀಡಾಂಗಣದ ಅಭಿವೃದ್ಧಿ (ಪಿಎಂಸಿ ವತಿಯಿಂದ ನಕ್ಷೆಗಳ ವಿಳಂಬಕ್ಕಾಗಿ) ಕ್ಯಾಡ್ ಫೋರಂ ಬೆಂಗಳೂರು ಗುತ್ತಿಗೆದಾರ ಕಂಪನಿಗೆ 3,08,060 ರೂ ದಂಡ ವಿಧಿಸಿ ಕೂಡಲೇ ಎಲ್ಲಾ ಗುತ್ತಿಗೆದಾರ ಕಂಪನಿಗಳು ದಂಡ ಪಾವತಿಸಬೇಕು ಎಂದು ಕಟ್ಟುನಿಟ್ಟಾಗಿ ಆದೇಶಿಸಿದ್ದರು..

ಅದೇ ಕಾರಣಕ್ಕೆ ಮೊದಲ ಬಾರಿಗೆ ಬಸವಜ್ಯೋತಿ ಗುತ್ತಿಗೆದಾರರ ಲಾಬಿಗೆ ಮಣಿದು ವರ್ಗಾವಣೆ ಮಾಡಿಸಿದ್ದರು. ಆಗ ವರ್ಗಾವಣೆ ವಿರೋಧಿಸಿ ತುಮಕೂರು ನಗರದ ನಾಗರಿಕರು ಪ್ರತಿಭಟನೆ ನಡೆಸಿದ್ದರು. ವರ್ಗಾವಣೆ ರದ್ದು ಗೊಳಿಸಬೇಕು ಎಂದು ಪಟ್ಟುಹಿಡಿದಿದ್ದರು.. ಜನರ ಒತ್ತಾಯಕ್ಕೆ ‘ಬಸವಜ್ಯೋತಿ’ ಮಣಿಯಲೇ ಬೇಕಾಯಿತು ಹಾಗಾಗಿ ಭೂಬಾಲನ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳಬೇಕಾಯಿತು.

ಇದೀಗ ಮತ್ತೆ ಭೂಬಾಲನ್ ಅವರಿಗೆ ಕಿರುಕುಳ ಮುಂದುವರಿದಿದೆ. ಭೂಬಾಲನ್ ಇದ್ದರೆ ನಮ್ಮ ಕೆಲಸ ನಡೆಯುವುದಿಲ್ಲವೆಂಬುದು ಅರಿತಿರುವ ಗುತ್ತಿಗೆದಾರರು ಬಸವಜ್ಯೋತಿ ಮೇಲೆ ಒತ್ತಡ ತಂದು ಆಯುಕ್ತರನ್ನು ವರ್ಗಾವಣೆ ಮಾಡಿಸುವ ಕಾರ್ಯ ಭರದಿಂದ ನಡೆಯುತ್ತಿದೆ.

ಈಗಾಗಲೇ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ಹುದ್ದೆಯಿಂದ ಭೂಬಾಲನ್ ಅವರನ್ನು ಹೊರಗೆ ಕಳಿಸಲಾಗಿದೆ. ಅಲ್ಲಿ ಅವರಿದ್ದರೆ ನಮ್ಮ ‘ವ್ಯವಹಾರ’ ಸುಸೂತ್ರವಾಗಿ ನಡೆಯುವುದಿಲ್ಲವೆಂಬ ಸತ್ಯ ಭ್ರಷ್ಟ ರಾಜಕಾರಣಿಗಳು ಮತ್ತು ಗುತ್ತಿಗೆದಾರರಿಗೆ ತಿಳಿದುಹೋಗಿರುವುದರಿಂದ ದಕ್ಷ ಅಧಿಕಾರಿ ಎತ್ತಂಗಡಿಗೆ ಇನ್ನಿಲ್ಲದ ಕಸರತ್ತು ತೀವ್ರಗೊಂಡಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಭೂಬಾಲನ್ ಜಾಗಕ್ಕೆ ‘ಜಾತಿಬಂಧವ’ ರನ್ನೇ ಕರೆತಂದು ಕೂರಿಸಿದರೆ ಹುಲ್ಲುಗಾವಲಿನಲ್ಲಿ ಮೇಯ್ದು ದುಂಡಗಾಗಲು ಈ ಪಟಲಾಂ ತುದಿಮೇಲೆ ನಿಂತಿದ್ದಾರೆ. ಇಂತಹ ಪ್ರಾಮಾಣಿಕ ಅಧಿಕಾರಿಯನ್ನು ಎತ್ತಂಗಡಿ ಮಾಡಿಸುವಲ್ಲಿ ‘ಅಮ’ ಪಾತ್ರ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ದಕ್ಷ ಅಧಿಕಾರಿಗಳನ್ನು ಕಂಡರೆ ಆಗದವರ ಪಟ್ಟಿ ದೊಡ್ಡದಾಗಿದೆ. ಮಣಿವಣ್ಣನ್ ತುಮಕೂರು ನಗರಸಭೆಯ ಆಯುಕ್ತರಾಗಿ ಕೆಲಸ ಮಾಡಿದಾಗಲೂ ಇದೇ ಬಸವಜ್ಯೋತಿ ಅವರನ್ನು ವರ್ಗಾವಣೆ ಮಾಡಿಸಿದ್ದರು ಎಂಬ ಮಾತುಗಳು ಗುಟ್ಟಾಗಿ ಉಳಿದಿಲ್ಲ. ಅಭಿವೃದ್ಧಿಯ ‘ಹರಿಕಾರ’ನೆಂಬ ಬಿರುದು ಪಡೆದಿರುವ ವ್ಯಕ್ತಿಯೂ ಕೂಡ ಭೂಬಾಲನ್ ವರ್ಗಾವಣೆಗೆ ತಂತ್ರ ಹೆಣೆಯುತ್ತಲೇ ಇದ್ದಾರೆ. ಆ ಮೂವರು ಸೇರಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮತ್ರಿಯ ಮೇಲೆ ಭೂಬಾಲನ್ ವರ್ಗಾವಣೆಗೆ ಒತ್ತಡ ಹೇರಿದ್ದಾರೆ. ಇದು ವರ್ಕೌಟ್ ಆದರೆ ಇನ್ನು ಕೆಲವೇ ದಿನಗಳಲ್ಲಿ ಭೂಬಾಲನ್ ತುಮಕೂರಿನಿಂದ ಬೇರೆಡೆ ವರ್ಗಾವಣೆಯಾಗುವುದು ಖಚಿತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...