Homeಮುಖಪುಟಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

ಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಭೂಬಾಲನ್ ಅವರಿಗೆ ಗುತ್ತಿಗೆದಾರರ ಕಿರುಕುಳ ಹೆಚ್ಚಾಗಿದೆ. ತಮಗೆ ದಂಡ ಹಾಕಿದರೆಂಬ ಕಾರಣಕ್ಕೆ ಭೂಬಾಲನ್ ಅವರನ್ನು ತುಮಕೂರಿನಿಂದ ಎತ್ತಂಗಡಿ ಮಾಡಿಸಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಗುತ್ತಿಗೆದಾರರು ‘ಬಸವಜ್ಯೋತಿ’ ಮೇಲೆ ಒತ್ತಡ ತಂದು ಭೂಬಾಲನ್ ವರ್ಗಾವಣೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅದರ ಭಾಗವಾಗಿಯೇ ಅವರನ್ನು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ಹುದ್ದೆಯಿಂದ ಬಿಡುಗಡೆಗೊಳಿಸಿ, ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗರಾಜ್ ಅವರನ್ನು ತರುವುದು ಖಚಿತವಾಗಿದೆ.

ಭೂಬಾಲನ್ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ. ಜೊತೆಗೆ ದಕ್ಷ, ಪ್ರಾಮಾಣಿಕ ಎಂಬ ಹೆಸರು ಗಳಿಸಿದ್ದಾರೆ. ಅದನ್ನು ಕಾರ್ಯತಃ ಮಾಡಿಯೂ ತೋರಿಸಿದ್ದಾರೆ. ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಬಂದಿದ್ದಾರೆ. ಸ್ಮಾಟ್ ಸಿಟಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ದಂಡ ವಿಧಿಸುವಂತಹ ಸಾಹಸಕ್ಕೆ ಕೈಹಾಕಿದವರು ಭೂಬಾಲನ್.

ತುಮಕೂರು ನಗರದ ಒಳರಸ್ತೆಗಳ ಅಭಿವೃದ್ದಿ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದ ಮೆ/ಆರ್.ಎಂ.ಎನ್ ಇನ್ ಫ್ರಾಸ್ಟ್ರಕ್ಚರ್ಸ್ ಗೆ 50,4,630 ರೂಪಾಯಿ, ಅಶೋಕ ರಸ್ತೆ ಅಭಿವೃದ್ಧಿ ಗುತ್ತಿಗೆ ಹಿಡಿದಿದ್ದ ಸಿದ್ದಾರ್ಥ ಸಿವಿಲ್ ವರ್ಕ್ಸ್ ಪ್ರೈ., ಲಿಮಿಟೆಡ್ ಗೆ 26,97,720 ರೂ, ಅಮಾನಿಕೆರೆ ಏರಿ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿ ಗುತ್ತಿಗೆ ಪಡೆದಿದ್ದ ಮೆ/ಆರ್.ಎಂ.ಎನ್. ಇನ್ ಫ್ರಾಸ್ಟ್ರಕ್ಚರ್ಸ್ ಗೆ 23,42,295 ರೂಪಾಯಿ, ಡಾ.ರಾಧಕೃಷ್ಣ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದಿದ್ದ ಶ್ರೀ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ.ಲಿ.ಗೆ 16,42,295 ರೂ. ಭಗವಾನ್ ಮಹಾವೀರ್ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದ ಶ್ರೀ ಸುಧಾಕರ ಪೆರಿಟಾಲ ಕಂಪನಿಗೆ 10,3,460 ರೂ. ಮಹಿಳಾ ಥೀಮ್ ಪಾರ್ಕ್ ಗುತ್ತಿಗೆ ತೆಗೆದುಕೊಂಡಿದ್ದ ಮೆ/ರಾಜೇಗೌಡ ಅಂಡ್ ಕೋ ಗೆ 6,77, 377 ರೂ. ಟ್ರಾಮಾ ಸೆಂಟರ್ ಅಭಿವೃದ್ಧಿಪಡಿಸುವ ಗುತ್ತಿಗೆ ಪಡೆದಿರುವ ಕೆ.ಬಿ.ಆರ್. ಇನ್ ಫ್ರಾಟಿಕ್ ಲಿ ಕಂಪನಿಗೆ 5,28,000 ರೂ ದಂಡ ವಿಧಿಸಿದ್ದರು.

ಹಾಗೆಯೇ ಫೀಲ್ಡ್ ಮಾರ್ಷಲ್ ಕರಿಯಪ್ಪ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ., ಲಿ ಕಂಪನಿಗೆ 5,65,119 ರೂ. ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾಲು ಆಲದ ಮರಗಳ ವಿಶಾಲ ರಾಜಮಾರ್ಗದ ನಿರ್ಮಾಣ ಮತ್ತು ಅಭಿವೃದ್ಧಿಯ ಗುತ್ತಿಗೆ ಪಡೆದಿದ್ದ ಮೆ/ಎ1 ಕನ್ ಸ್ಟ್ರಕ್ಷನ್ 4,19, 625 ರೂ. ಮೂರು ಪಾರ್ಕ್ ಗಳ ಅಭಿವೃದ್ಧಿ ಗುತ್ತಿಗೆದಾರ ಮೆ/ಸಾಯಿತ್ರಿಷ ಇನ್ ಫ್ರಾ ಇಂಜಿನಿಯರ್ಸ್ 1,26,200 ರೂ, ಮಹಾತ್ಮ ಗಾಂಧಿ ಕ್ರೀಡಾಂಗಣದ ಅಭಿವೃದ್ಧಿ (ಪಿಎಂಸಿ ವತಿಯಿಂದ ನಕ್ಷೆಗಳ ವಿಳಂಬಕ್ಕಾಗಿ) ಕ್ಯಾಡ್ ಫೋರಂ ಬೆಂಗಳೂರು ಗುತ್ತಿಗೆದಾರ ಕಂಪನಿಗೆ 3,08,060 ರೂ ದಂಡ ವಿಧಿಸಿ ಕೂಡಲೇ ಎಲ್ಲಾ ಗುತ್ತಿಗೆದಾರ ಕಂಪನಿಗಳು ದಂಡ ಪಾವತಿಸಬೇಕು ಎಂದು ಕಟ್ಟುನಿಟ್ಟಾಗಿ ಆದೇಶಿಸಿದ್ದರು..

ಅದೇ ಕಾರಣಕ್ಕೆ ಮೊದಲ ಬಾರಿಗೆ ಬಸವಜ್ಯೋತಿ ಗುತ್ತಿಗೆದಾರರ ಲಾಬಿಗೆ ಮಣಿದು ವರ್ಗಾವಣೆ ಮಾಡಿಸಿದ್ದರು. ಆಗ ವರ್ಗಾವಣೆ ವಿರೋಧಿಸಿ ತುಮಕೂರು ನಗರದ ನಾಗರಿಕರು ಪ್ರತಿಭಟನೆ ನಡೆಸಿದ್ದರು. ವರ್ಗಾವಣೆ ರದ್ದು ಗೊಳಿಸಬೇಕು ಎಂದು ಪಟ್ಟುಹಿಡಿದಿದ್ದರು.. ಜನರ ಒತ್ತಾಯಕ್ಕೆ ‘ಬಸವಜ್ಯೋತಿ’ ಮಣಿಯಲೇ ಬೇಕಾಯಿತು ಹಾಗಾಗಿ ಭೂಬಾಲನ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳಬೇಕಾಯಿತು.

ಇದೀಗ ಮತ್ತೆ ಭೂಬಾಲನ್ ಅವರಿಗೆ ಕಿರುಕುಳ ಮುಂದುವರಿದಿದೆ. ಭೂಬಾಲನ್ ಇದ್ದರೆ ನಮ್ಮ ಕೆಲಸ ನಡೆಯುವುದಿಲ್ಲವೆಂಬುದು ಅರಿತಿರುವ ಗುತ್ತಿಗೆದಾರರು ಬಸವಜ್ಯೋತಿ ಮೇಲೆ ಒತ್ತಡ ತಂದು ಆಯುಕ್ತರನ್ನು ವರ್ಗಾವಣೆ ಮಾಡಿಸುವ ಕಾರ್ಯ ಭರದಿಂದ ನಡೆಯುತ್ತಿದೆ.

ಈಗಾಗಲೇ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ಹುದ್ದೆಯಿಂದ ಭೂಬಾಲನ್ ಅವರನ್ನು ಹೊರಗೆ ಕಳಿಸಲಾಗಿದೆ. ಅಲ್ಲಿ ಅವರಿದ್ದರೆ ನಮ್ಮ ‘ವ್ಯವಹಾರ’ ಸುಸೂತ್ರವಾಗಿ ನಡೆಯುವುದಿಲ್ಲವೆಂಬ ಸತ್ಯ ಭ್ರಷ್ಟ ರಾಜಕಾರಣಿಗಳು ಮತ್ತು ಗುತ್ತಿಗೆದಾರರಿಗೆ ತಿಳಿದುಹೋಗಿರುವುದರಿಂದ ದಕ್ಷ ಅಧಿಕಾರಿ ಎತ್ತಂಗಡಿಗೆ ಇನ್ನಿಲ್ಲದ ಕಸರತ್ತು ತೀವ್ರಗೊಂಡಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಭೂಬಾಲನ್ ಜಾಗಕ್ಕೆ ‘ಜಾತಿಬಂಧವ’ ರನ್ನೇ ಕರೆತಂದು ಕೂರಿಸಿದರೆ ಹುಲ್ಲುಗಾವಲಿನಲ್ಲಿ ಮೇಯ್ದು ದುಂಡಗಾಗಲು ಈ ಪಟಲಾಂ ತುದಿಮೇಲೆ ನಿಂತಿದ್ದಾರೆ. ಇಂತಹ ಪ್ರಾಮಾಣಿಕ ಅಧಿಕಾರಿಯನ್ನು ಎತ್ತಂಗಡಿ ಮಾಡಿಸುವಲ್ಲಿ ‘ಅಮ’ ಪಾತ್ರ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ದಕ್ಷ ಅಧಿಕಾರಿಗಳನ್ನು ಕಂಡರೆ ಆಗದವರ ಪಟ್ಟಿ ದೊಡ್ಡದಾಗಿದೆ. ಮಣಿವಣ್ಣನ್ ತುಮಕೂರು ನಗರಸಭೆಯ ಆಯುಕ್ತರಾಗಿ ಕೆಲಸ ಮಾಡಿದಾಗಲೂ ಇದೇ ಬಸವಜ್ಯೋತಿ ಅವರನ್ನು ವರ್ಗಾವಣೆ ಮಾಡಿಸಿದ್ದರು ಎಂಬ ಮಾತುಗಳು ಗುಟ್ಟಾಗಿ ಉಳಿದಿಲ್ಲ. ಅಭಿವೃದ್ಧಿಯ ‘ಹರಿಕಾರ’ನೆಂಬ ಬಿರುದು ಪಡೆದಿರುವ ವ್ಯಕ್ತಿಯೂ ಕೂಡ ಭೂಬಾಲನ್ ವರ್ಗಾವಣೆಗೆ ತಂತ್ರ ಹೆಣೆಯುತ್ತಲೇ ಇದ್ದಾರೆ. ಆ ಮೂವರು ಸೇರಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮತ್ರಿಯ ಮೇಲೆ ಭೂಬಾಲನ್ ವರ್ಗಾವಣೆಗೆ ಒತ್ತಡ ಹೇರಿದ್ದಾರೆ. ಇದು ವರ್ಕೌಟ್ ಆದರೆ ಇನ್ನು ಕೆಲವೇ ದಿನಗಳಲ್ಲಿ ಭೂಬಾಲನ್ ತುಮಕೂರಿನಿಂದ ಬೇರೆಡೆ ವರ್ಗಾವಣೆಯಾಗುವುದು ಖಚಿತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...