Homeಮುಖಪುಟಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

ಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಭೂಬಾಲನ್ ಅವರಿಗೆ ಗುತ್ತಿಗೆದಾರರ ಕಿರುಕುಳ ಹೆಚ್ಚಾಗಿದೆ. ತಮಗೆ ದಂಡ ಹಾಕಿದರೆಂಬ ಕಾರಣಕ್ಕೆ ಭೂಬಾಲನ್ ಅವರನ್ನು ತುಮಕೂರಿನಿಂದ ಎತ್ತಂಗಡಿ ಮಾಡಿಸಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಗುತ್ತಿಗೆದಾರರು ‘ಬಸವಜ್ಯೋತಿ’ ಮೇಲೆ ಒತ್ತಡ ತಂದು ಭೂಬಾಲನ್ ವರ್ಗಾವಣೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅದರ ಭಾಗವಾಗಿಯೇ ಅವರನ್ನು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ಹುದ್ದೆಯಿಂದ ಬಿಡುಗಡೆಗೊಳಿಸಿ, ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗರಾಜ್ ಅವರನ್ನು ತರುವುದು ಖಚಿತವಾಗಿದೆ.

ಭೂಬಾಲನ್ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ. ಜೊತೆಗೆ ದಕ್ಷ, ಪ್ರಾಮಾಣಿಕ ಎಂಬ ಹೆಸರು ಗಳಿಸಿದ್ದಾರೆ. ಅದನ್ನು ಕಾರ್ಯತಃ ಮಾಡಿಯೂ ತೋರಿಸಿದ್ದಾರೆ. ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಬಂದಿದ್ದಾರೆ. ಸ್ಮಾಟ್ ಸಿಟಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ದಂಡ ವಿಧಿಸುವಂತಹ ಸಾಹಸಕ್ಕೆ ಕೈಹಾಕಿದವರು ಭೂಬಾಲನ್.

ತುಮಕೂರು ನಗರದ ಒಳರಸ್ತೆಗಳ ಅಭಿವೃದ್ದಿ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದ ಮೆ/ಆರ್.ಎಂ.ಎನ್ ಇನ್ ಫ್ರಾಸ್ಟ್ರಕ್ಚರ್ಸ್ ಗೆ 50,4,630 ರೂಪಾಯಿ, ಅಶೋಕ ರಸ್ತೆ ಅಭಿವೃದ್ಧಿ ಗುತ್ತಿಗೆ ಹಿಡಿದಿದ್ದ ಸಿದ್ದಾರ್ಥ ಸಿವಿಲ್ ವರ್ಕ್ಸ್ ಪ್ರೈ., ಲಿಮಿಟೆಡ್ ಗೆ 26,97,720 ರೂ, ಅಮಾನಿಕೆರೆ ಏರಿ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿ ಗುತ್ತಿಗೆ ಪಡೆದಿದ್ದ ಮೆ/ಆರ್.ಎಂ.ಎನ್. ಇನ್ ಫ್ರಾಸ್ಟ್ರಕ್ಚರ್ಸ್ ಗೆ 23,42,295 ರೂಪಾಯಿ, ಡಾ.ರಾಧಕೃಷ್ಣ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದಿದ್ದ ಶ್ರೀ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ.ಲಿ.ಗೆ 16,42,295 ರೂ. ಭಗವಾನ್ ಮಹಾವೀರ್ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದ ಶ್ರೀ ಸುಧಾಕರ ಪೆರಿಟಾಲ ಕಂಪನಿಗೆ 10,3,460 ರೂ. ಮಹಿಳಾ ಥೀಮ್ ಪಾರ್ಕ್ ಗುತ್ತಿಗೆ ತೆಗೆದುಕೊಂಡಿದ್ದ ಮೆ/ರಾಜೇಗೌಡ ಅಂಡ್ ಕೋ ಗೆ 6,77, 377 ರೂ. ಟ್ರಾಮಾ ಸೆಂಟರ್ ಅಭಿವೃದ್ಧಿಪಡಿಸುವ ಗುತ್ತಿಗೆ ಪಡೆದಿರುವ ಕೆ.ಬಿ.ಆರ್. ಇನ್ ಫ್ರಾಟಿಕ್ ಲಿ ಕಂಪನಿಗೆ 5,28,000 ರೂ ದಂಡ ವಿಧಿಸಿದ್ದರು.

ಹಾಗೆಯೇ ಫೀಲ್ಡ್ ಮಾರ್ಷಲ್ ಕರಿಯಪ್ಪ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ., ಲಿ ಕಂಪನಿಗೆ 5,65,119 ರೂ. ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾಲು ಆಲದ ಮರಗಳ ವಿಶಾಲ ರಾಜಮಾರ್ಗದ ನಿರ್ಮಾಣ ಮತ್ತು ಅಭಿವೃದ್ಧಿಯ ಗುತ್ತಿಗೆ ಪಡೆದಿದ್ದ ಮೆ/ಎ1 ಕನ್ ಸ್ಟ್ರಕ್ಷನ್ 4,19, 625 ರೂ. ಮೂರು ಪಾರ್ಕ್ ಗಳ ಅಭಿವೃದ್ಧಿ ಗುತ್ತಿಗೆದಾರ ಮೆ/ಸಾಯಿತ್ರಿಷ ಇನ್ ಫ್ರಾ ಇಂಜಿನಿಯರ್ಸ್ 1,26,200 ರೂ, ಮಹಾತ್ಮ ಗಾಂಧಿ ಕ್ರೀಡಾಂಗಣದ ಅಭಿವೃದ್ಧಿ (ಪಿಎಂಸಿ ವತಿಯಿಂದ ನಕ್ಷೆಗಳ ವಿಳಂಬಕ್ಕಾಗಿ) ಕ್ಯಾಡ್ ಫೋರಂ ಬೆಂಗಳೂರು ಗುತ್ತಿಗೆದಾರ ಕಂಪನಿಗೆ 3,08,060 ರೂ ದಂಡ ವಿಧಿಸಿ ಕೂಡಲೇ ಎಲ್ಲಾ ಗುತ್ತಿಗೆದಾರ ಕಂಪನಿಗಳು ದಂಡ ಪಾವತಿಸಬೇಕು ಎಂದು ಕಟ್ಟುನಿಟ್ಟಾಗಿ ಆದೇಶಿಸಿದ್ದರು..

ಅದೇ ಕಾರಣಕ್ಕೆ ಮೊದಲ ಬಾರಿಗೆ ಬಸವಜ್ಯೋತಿ ಗುತ್ತಿಗೆದಾರರ ಲಾಬಿಗೆ ಮಣಿದು ವರ್ಗಾವಣೆ ಮಾಡಿಸಿದ್ದರು. ಆಗ ವರ್ಗಾವಣೆ ವಿರೋಧಿಸಿ ತುಮಕೂರು ನಗರದ ನಾಗರಿಕರು ಪ್ರತಿಭಟನೆ ನಡೆಸಿದ್ದರು. ವರ್ಗಾವಣೆ ರದ್ದು ಗೊಳಿಸಬೇಕು ಎಂದು ಪಟ್ಟುಹಿಡಿದಿದ್ದರು.. ಜನರ ಒತ್ತಾಯಕ್ಕೆ ‘ಬಸವಜ್ಯೋತಿ’ ಮಣಿಯಲೇ ಬೇಕಾಯಿತು ಹಾಗಾಗಿ ಭೂಬಾಲನ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳಬೇಕಾಯಿತು.

ಇದೀಗ ಮತ್ತೆ ಭೂಬಾಲನ್ ಅವರಿಗೆ ಕಿರುಕುಳ ಮುಂದುವರಿದಿದೆ. ಭೂಬಾಲನ್ ಇದ್ದರೆ ನಮ್ಮ ಕೆಲಸ ನಡೆಯುವುದಿಲ್ಲವೆಂಬುದು ಅರಿತಿರುವ ಗುತ್ತಿಗೆದಾರರು ಬಸವಜ್ಯೋತಿ ಮೇಲೆ ಒತ್ತಡ ತಂದು ಆಯುಕ್ತರನ್ನು ವರ್ಗಾವಣೆ ಮಾಡಿಸುವ ಕಾರ್ಯ ಭರದಿಂದ ನಡೆಯುತ್ತಿದೆ.

ಈಗಾಗಲೇ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ಹುದ್ದೆಯಿಂದ ಭೂಬಾಲನ್ ಅವರನ್ನು ಹೊರಗೆ ಕಳಿಸಲಾಗಿದೆ. ಅಲ್ಲಿ ಅವರಿದ್ದರೆ ನಮ್ಮ ‘ವ್ಯವಹಾರ’ ಸುಸೂತ್ರವಾಗಿ ನಡೆಯುವುದಿಲ್ಲವೆಂಬ ಸತ್ಯ ಭ್ರಷ್ಟ ರಾಜಕಾರಣಿಗಳು ಮತ್ತು ಗುತ್ತಿಗೆದಾರರಿಗೆ ತಿಳಿದುಹೋಗಿರುವುದರಿಂದ ದಕ್ಷ ಅಧಿಕಾರಿ ಎತ್ತಂಗಡಿಗೆ ಇನ್ನಿಲ್ಲದ ಕಸರತ್ತು ತೀವ್ರಗೊಂಡಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಭೂಬಾಲನ್ ಜಾಗಕ್ಕೆ ‘ಜಾತಿಬಂಧವ’ ರನ್ನೇ ಕರೆತಂದು ಕೂರಿಸಿದರೆ ಹುಲ್ಲುಗಾವಲಿನಲ್ಲಿ ಮೇಯ್ದು ದುಂಡಗಾಗಲು ಈ ಪಟಲಾಂ ತುದಿಮೇಲೆ ನಿಂತಿದ್ದಾರೆ. ಇಂತಹ ಪ್ರಾಮಾಣಿಕ ಅಧಿಕಾರಿಯನ್ನು ಎತ್ತಂಗಡಿ ಮಾಡಿಸುವಲ್ಲಿ ‘ಅಮ’ ಪಾತ್ರ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ದಕ್ಷ ಅಧಿಕಾರಿಗಳನ್ನು ಕಂಡರೆ ಆಗದವರ ಪಟ್ಟಿ ದೊಡ್ಡದಾಗಿದೆ. ಮಣಿವಣ್ಣನ್ ತುಮಕೂರು ನಗರಸಭೆಯ ಆಯುಕ್ತರಾಗಿ ಕೆಲಸ ಮಾಡಿದಾಗಲೂ ಇದೇ ಬಸವಜ್ಯೋತಿ ಅವರನ್ನು ವರ್ಗಾವಣೆ ಮಾಡಿಸಿದ್ದರು ಎಂಬ ಮಾತುಗಳು ಗುಟ್ಟಾಗಿ ಉಳಿದಿಲ್ಲ. ಅಭಿವೃದ್ಧಿಯ ‘ಹರಿಕಾರ’ನೆಂಬ ಬಿರುದು ಪಡೆದಿರುವ ವ್ಯಕ್ತಿಯೂ ಕೂಡ ಭೂಬಾಲನ್ ವರ್ಗಾವಣೆಗೆ ತಂತ್ರ ಹೆಣೆಯುತ್ತಲೇ ಇದ್ದಾರೆ. ಆ ಮೂವರು ಸೇರಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮತ್ರಿಯ ಮೇಲೆ ಭೂಬಾಲನ್ ವರ್ಗಾವಣೆಗೆ ಒತ್ತಡ ಹೇರಿದ್ದಾರೆ. ಇದು ವರ್ಕೌಟ್ ಆದರೆ ಇನ್ನು ಕೆಲವೇ ದಿನಗಳಲ್ಲಿ ಭೂಬಾಲನ್ ತುಮಕೂರಿನಿಂದ ಬೇರೆಡೆ ವರ್ಗಾವಣೆಯಾಗುವುದು ಖಚಿತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...