Homeಕರ್ನಾಟಕತುಮಕೂರಿನ ಪ್ರಾಮಾಣಿಕ ಅಧಿಕಾರಿಯ ಎತ್ತಂಗಡಿಯ ಹಿಂದಿದ್ದಾರೆ ರಿಯಲ್ ಎಸ್ಟೇಟ್ ರಾಜಕಾರಣಿಗಳು..

ತುಮಕೂರಿನ ಪ್ರಾಮಾಣಿಕ ಅಧಿಕಾರಿಯ ಎತ್ತಂಗಡಿಯ ಹಿಂದಿದ್ದಾರೆ ರಿಯಲ್ ಎಸ್ಟೇಟ್ ರಾಜಕಾರಣಿಗಳು..

- Advertisement -
- Advertisement -

ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಐ.ಎ.ಎಸ್ ಅಧಿಕಾರಿ ಟಿ.ಭೂಬಾಲನ್ ಅವರನ್ನು ಸರ್ಕಾರ ಇತ್ತಿಚಿಗೆ ಬೆಳಗಾವಿಯ ಮಲಪ್ರಭಾ –ಘಟಪ್ರಭಾ ಯೋಜನೆಯ ವಿಶೇಷ ಜಿಲ್ಲಾಧಿಕಾರಿ (ಭೂ ಸ್ವಾಧೀನ) ಹುದ್ದೆಗೆ ಹಠಾತ್ತನೆ ವರ್ಗಾಣೆ ಮಾಡಿತ್ತು. ಗೋಕಾಕ್ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಯ್ನಾಗಿಯೂ ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆಗಳು ಬಂದಿದ್ದವು.

ಆಯುಕ್ತರಾಗಿದ್ದ ಭೂಬಾಲನ್‌ರವರು ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯನ್ನು ಗಂಭೀರವಾಗಿ ತೆಗೆದುಕೊಂಡು ಕೆಲಸ ಮಾಡತ್ತಿದ್ದ ರೀತಿ ಜನಮನ್ನಣೆ ಗಳಿಸಿತ್ತು.. ಈಗ ಅವರನ್ನು ತುರ್ತು ವರ್ಗ ಮಾಡಿರುವ ರೀತಿ ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಮೂಡಿಸಿದ್ದು. ಹಾಲಿ ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಮತ್ತು ಅವರ ಮಗ ಶಾಸಕ ಜ್ಯೋತಿ ಗಣೇಶ್ ಮುಂತಾದ ಬಿಜೆಪಿಯ ಜನಪ್ರತಿನಿಧಿಗಳು ಮತ್ತು ಕೆಲವು ಗುತ್ತಿಗೆದಾರರು ಸೇರಿ ಅವರನ್ನು ಎತ್ತಂಗಡಿ ಮಾಡಿಸಿದ್ಧಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಅಧಿಕಾರಿ ಭೂಬಾಲನ್‍ಗೆ ‘ಸ್ಮಾರ್ಟ್ ಸಿಟೀಸ್ ಕೌನ್ಸಿಲ್ ಇಂಡಿಯಾ’ ಕೊಡುವ ಅತ್ಯುತ್ತಮ ವ್ಯವಸ್ಥಾಪಕ ನಿರ್ದೇಶಕ ಪ್ರಶಸ್ತಿಯನ್ನು ನೀಡಿದ ಮರುದಿನವೇ ಇವರನ್ನು ವರ್ಗಮಾಡಿ ಆದರ್ಶ ಕುಮಾರ್ ಎನ್ನುವವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಹಣದ ದುರುಪಯೋಗದ ವಿಚಾರದಲ್ಲಿ ಕಟ್ಟುನಿಟ್ಟಾಗಿದ್ದ ಭೂಬಾಲನ್‍ ಹಣ ಸೋರಿಕೆಯಾಗದೆ ಸರಿಯಾಗಿ ಯೋಜನೆಗೆ ಮಾತ್ರ ಖರ್ಚಾಗುವ ಕಡೆ ಗಮನ ಕೊಡುತ್ತಿದ್ದರು ಎಂದು ಜನಸಾಮಾನ್ಯರು ಹೇಳುತ್ತಾರೆ. ಪಾಲಿಕೆಯ ಆಯುಕ್ತರಾಗಿ ಅತ್ಯಲ್ಫ ಅವಧಿಯಲ್ಲಿಯೇ ತೆರಿಗೆ ಸಂಗ್ರಹ ಸೇರಿದಂತೆ ಸಾಕಷ್ಟು ಸುಧಾರಣೆಗಳನ್ನು ತಂದಿದ್ದರು.

ಪಾಲಿಕೆಯ ವ್ಯಾಪ್ತಿಯಲ್ಲಿ ಹಾಗೂ ಸ್ಮಾರ್ಟ್ ಸಿಟಿ ವ್ಯಾಪ್ತಿಯಲ್ಲಿ ಕಾರ್ಯನಿವರ್ಹಹಿಸುತ್ತಿರುವ ಕೆಲವು ಗುತ್ತಿಗೆದಾರರ ನಿರ್ಲಕ್ಷ್ಯವನ್ನು ಗಮನಿಸಿ ಲಕ್ಷಾಂತರ ರೂಪಾಯಿಗಳ ದಂಡ ವಿಧಿಸುವ ಮೂಲಕ ಚುರುಕು ಮುಟ್ಟಿಸಿದ್ದರು. ಭೂಬಾಲನ್ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ಮೇಲೆ ಕಾಮಗಾರಿಗಳಿಗೆ ವೇಗ ನೀಡಿ 712 ಕೋಟಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಮಾಜಿ ಮೇಯರ್, ಉಪ ಮೇಯರ್ ಸೇರಿದಂತೆ ಪಾಲಿಕೆ ಸದಸ್ಯರು ಅನಧಿಕೃತವಾಗಿ ತಮ್ಮ ವಶಕ್ಕೆ ಪಡೆದಿದ್ದ 22 ನೀರಿನ ಘಟಕಗಳನ್ನು ಭೂ ಬಾಲನ್ ಪಾಲಿಕೆಯ ಸುಪರ್ದಿಗೆ ಪಡೆದಿದ್ದರು.

ಈ ಅಧಿಕಾರಿಯ ಮೇಲೆ ಅಸಮಾಧಾನಗೊಂಡ ಗುತ್ತಿಗೆದಾರರೆಲ್ಲ ರಾಜಕಾರಣಿಗಳ ಹತ್ತಿರ ಅವಲತ್ತುಕೊಂಡಿದ್ದಾರೆ. ಈ ರೀತಿಯ ಕಟ್ಟುನಿಟ್ಟಿನ ಕ್ರಮಗಳಿಂದ ನಾವು ಮುಂದೆ ನಿಮಗೆ ಕಮಿಷನ್ ಕೊಡಲು ಆಗುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಈ ಪ್ರಾಮಾಣಿಕ ನಡೆಯೇ ಭೂಬಾಲನ್ ವರ್ಗಾವಣೆಗೆ ಕಾರಣವಾಗಿದೆ ಎನ್ನಲಾಗುತ್ತಿದೆ.

ವರ್ಗಾವಣೆಯಾಗುತ್ತಲೇ ಜನರು ಸಿಡಿದೆದ್ದಿದ್ದಾರೆ. ವರ್ಗಾವಣೆ ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಜನಾಕ್ರೋಶವನ್ನು ಮನಗಂಡ ಶಾಸಕ ಜ್ಯೋತಿಗಣೇಶ್ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರಬರೆದು ಭೂಬಾಲನ್ ಅವರನ್ನು ಮತ್ತೆ ನೇಮಕ ಮಾಡುವಂತೆ ಕೋರಿದ್ದಾರೆ. ಆದರೆ ಅಧಿಕಾರಿಯ ವರ್ಗಾವಣೆಯಿಂದ ಸಿಟ್ಟಾದ ಜನರನ್ನು ಸಮಾಧಾನ ಮಾಡಲು ಮಾತ್ರ ಈ ನಾಟಕ ಎಂದು ಹೇಳಲಾಗುತ್ತಿದೆ. ಇಷ್ಟೆಲ್ಲ ಆದರೂ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನ ಯಾವುದೇ ರಾಜಕಾರಣಿ ಮಾತಾಡದೆ ಬಾಯಿ ಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಏಕೆಂದರೆ ಪ್ರಾಮಾಣಿಕ ಅಧಿಕಾರಿ ಅವರಿಗೂ ಬೇಕಾಗಿಲ್ಲ ತಾನೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...