Homeಕರ್ನಾಟಕತುಮಕೂರಿನ ಪ್ರಾಮಾಣಿಕ ಅಧಿಕಾರಿಯ ಎತ್ತಂಗಡಿಯ ಹಿಂದಿದ್ದಾರೆ ರಿಯಲ್ ಎಸ್ಟೇಟ್ ರಾಜಕಾರಣಿಗಳು..

ತುಮಕೂರಿನ ಪ್ರಾಮಾಣಿಕ ಅಧಿಕಾರಿಯ ಎತ್ತಂಗಡಿಯ ಹಿಂದಿದ್ದಾರೆ ರಿಯಲ್ ಎಸ್ಟೇಟ್ ರಾಜಕಾರಣಿಗಳು..

- Advertisement -
- Advertisement -

ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಐ.ಎ.ಎಸ್ ಅಧಿಕಾರಿ ಟಿ.ಭೂಬಾಲನ್ ಅವರನ್ನು ಸರ್ಕಾರ ಇತ್ತಿಚಿಗೆ ಬೆಳಗಾವಿಯ ಮಲಪ್ರಭಾ –ಘಟಪ್ರಭಾ ಯೋಜನೆಯ ವಿಶೇಷ ಜಿಲ್ಲಾಧಿಕಾರಿ (ಭೂ ಸ್ವಾಧೀನ) ಹುದ್ದೆಗೆ ಹಠಾತ್ತನೆ ವರ್ಗಾಣೆ ಮಾಡಿತ್ತು. ಗೋಕಾಕ್ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಯ್ನಾಗಿಯೂ ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆಗಳು ಬಂದಿದ್ದವು.

ಆಯುಕ್ತರಾಗಿದ್ದ ಭೂಬಾಲನ್‌ರವರು ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯನ್ನು ಗಂಭೀರವಾಗಿ ತೆಗೆದುಕೊಂಡು ಕೆಲಸ ಮಾಡತ್ತಿದ್ದ ರೀತಿ ಜನಮನ್ನಣೆ ಗಳಿಸಿತ್ತು.. ಈಗ ಅವರನ್ನು ತುರ್ತು ವರ್ಗ ಮಾಡಿರುವ ರೀತಿ ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಮೂಡಿಸಿದ್ದು. ಹಾಲಿ ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಮತ್ತು ಅವರ ಮಗ ಶಾಸಕ ಜ್ಯೋತಿ ಗಣೇಶ್ ಮುಂತಾದ ಬಿಜೆಪಿಯ ಜನಪ್ರತಿನಿಧಿಗಳು ಮತ್ತು ಕೆಲವು ಗುತ್ತಿಗೆದಾರರು ಸೇರಿ ಅವರನ್ನು ಎತ್ತಂಗಡಿ ಮಾಡಿಸಿದ್ಧಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಅಧಿಕಾರಿ ಭೂಬಾಲನ್‍ಗೆ ‘ಸ್ಮಾರ್ಟ್ ಸಿಟೀಸ್ ಕೌನ್ಸಿಲ್ ಇಂಡಿಯಾ’ ಕೊಡುವ ಅತ್ಯುತ್ತಮ ವ್ಯವಸ್ಥಾಪಕ ನಿರ್ದೇಶಕ ಪ್ರಶಸ್ತಿಯನ್ನು ನೀಡಿದ ಮರುದಿನವೇ ಇವರನ್ನು ವರ್ಗಮಾಡಿ ಆದರ್ಶ ಕುಮಾರ್ ಎನ್ನುವವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಹಣದ ದುರುಪಯೋಗದ ವಿಚಾರದಲ್ಲಿ ಕಟ್ಟುನಿಟ್ಟಾಗಿದ್ದ ಭೂಬಾಲನ್‍ ಹಣ ಸೋರಿಕೆಯಾಗದೆ ಸರಿಯಾಗಿ ಯೋಜನೆಗೆ ಮಾತ್ರ ಖರ್ಚಾಗುವ ಕಡೆ ಗಮನ ಕೊಡುತ್ತಿದ್ದರು ಎಂದು ಜನಸಾಮಾನ್ಯರು ಹೇಳುತ್ತಾರೆ. ಪಾಲಿಕೆಯ ಆಯುಕ್ತರಾಗಿ ಅತ್ಯಲ್ಫ ಅವಧಿಯಲ್ಲಿಯೇ ತೆರಿಗೆ ಸಂಗ್ರಹ ಸೇರಿದಂತೆ ಸಾಕಷ್ಟು ಸುಧಾರಣೆಗಳನ್ನು ತಂದಿದ್ದರು.

ಪಾಲಿಕೆಯ ವ್ಯಾಪ್ತಿಯಲ್ಲಿ ಹಾಗೂ ಸ್ಮಾರ್ಟ್ ಸಿಟಿ ವ್ಯಾಪ್ತಿಯಲ್ಲಿ ಕಾರ್ಯನಿವರ್ಹಹಿಸುತ್ತಿರುವ ಕೆಲವು ಗುತ್ತಿಗೆದಾರರ ನಿರ್ಲಕ್ಷ್ಯವನ್ನು ಗಮನಿಸಿ ಲಕ್ಷಾಂತರ ರೂಪಾಯಿಗಳ ದಂಡ ವಿಧಿಸುವ ಮೂಲಕ ಚುರುಕು ಮುಟ್ಟಿಸಿದ್ದರು. ಭೂಬಾಲನ್ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ಮೇಲೆ ಕಾಮಗಾರಿಗಳಿಗೆ ವೇಗ ನೀಡಿ 712 ಕೋಟಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಮಾಜಿ ಮೇಯರ್, ಉಪ ಮೇಯರ್ ಸೇರಿದಂತೆ ಪಾಲಿಕೆ ಸದಸ್ಯರು ಅನಧಿಕೃತವಾಗಿ ತಮ್ಮ ವಶಕ್ಕೆ ಪಡೆದಿದ್ದ 22 ನೀರಿನ ಘಟಕಗಳನ್ನು ಭೂ ಬಾಲನ್ ಪಾಲಿಕೆಯ ಸುಪರ್ದಿಗೆ ಪಡೆದಿದ್ದರು.

ಈ ಅಧಿಕಾರಿಯ ಮೇಲೆ ಅಸಮಾಧಾನಗೊಂಡ ಗುತ್ತಿಗೆದಾರರೆಲ್ಲ ರಾಜಕಾರಣಿಗಳ ಹತ್ತಿರ ಅವಲತ್ತುಕೊಂಡಿದ್ದಾರೆ. ಈ ರೀತಿಯ ಕಟ್ಟುನಿಟ್ಟಿನ ಕ್ರಮಗಳಿಂದ ನಾವು ಮುಂದೆ ನಿಮಗೆ ಕಮಿಷನ್ ಕೊಡಲು ಆಗುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಈ ಪ್ರಾಮಾಣಿಕ ನಡೆಯೇ ಭೂಬಾಲನ್ ವರ್ಗಾವಣೆಗೆ ಕಾರಣವಾಗಿದೆ ಎನ್ನಲಾಗುತ್ತಿದೆ.

ವರ್ಗಾವಣೆಯಾಗುತ್ತಲೇ ಜನರು ಸಿಡಿದೆದ್ದಿದ್ದಾರೆ. ವರ್ಗಾವಣೆ ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಜನಾಕ್ರೋಶವನ್ನು ಮನಗಂಡ ಶಾಸಕ ಜ್ಯೋತಿಗಣೇಶ್ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರಬರೆದು ಭೂಬಾಲನ್ ಅವರನ್ನು ಮತ್ತೆ ನೇಮಕ ಮಾಡುವಂತೆ ಕೋರಿದ್ದಾರೆ. ಆದರೆ ಅಧಿಕಾರಿಯ ವರ್ಗಾವಣೆಯಿಂದ ಸಿಟ್ಟಾದ ಜನರನ್ನು ಸಮಾಧಾನ ಮಾಡಲು ಮಾತ್ರ ಈ ನಾಟಕ ಎಂದು ಹೇಳಲಾಗುತ್ತಿದೆ. ಇಷ್ಟೆಲ್ಲ ಆದರೂ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನ ಯಾವುದೇ ರಾಜಕಾರಣಿ ಮಾತಾಡದೆ ಬಾಯಿ ಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಏಕೆಂದರೆ ಪ್ರಾಮಾಣಿಕ ಅಧಿಕಾರಿ ಅವರಿಗೂ ಬೇಕಾಗಿಲ್ಲ ತಾನೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...