Homeಕರ್ನಾಟಕತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರು

ತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರು

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ಬಸ್‌ ನಿಲ್ದಾಣದಿಂದ ಕೆಎಸ್‌ಆರ್‌‌ಟಿಸಿ ಬಸ್ಸೊಂದನ್ನು ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ಬಸ್ಸನ್ನು ನಿಲ್ದಾಣದಿಂದ ಕದ್ದು ಸುಮಾರು ಮೂವತ್ತು ಕಿಲೋ ಮೀಟರ್‌ ಓಡಿಸಿ ನಂತರ ಅದರಲ್ಲಿ ಇರುವ ಡೀಸೆಲ್‌ ಅನ್ನು ಕಳ್ಳತನ ಮಾಡಿ, ವಾಹನವನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದಾರೆ.

ಸೋಮವಾರ ಮುಂಜಾನೆ ಗುಬ್ಬಿ ಬಸ್ ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ಕಳವಾಗಿದೆ. ಬಸ್ ಚಾಲಕ ಹನುಮಂತರಾಯ ಭಾನುವಾರ ರಾತ್ರಿ 9.40 ರ ಸುಮಾರಿಗೆ ವಾಹನ ನಿಲ್ಲಿಸಿ (ಕೆಎ -06 ಎಫ್ -0888) ಕೆಎಸ್‌ಆರ್‌ಟಿಸಿ ವಸತಿ ನಿಲಯದಲ್ಲಿ ಮಲಗಲು ಹೋಗಿದ್ದರು. ಸೋಮವಾರ ಬೆಳಿಗ್ಗೆ 6 ಗಂಟೆಗೆ ಮತ್ತೆ ಗುಬ್ಬಿ ಬಸ್ ನಿಲ್ದಾಣಕ್ಕೆ ಹಿಂತಿರುಗಿದಾಗ, ಡಿಪೋದಿಂದ ಬಸ್ ಕಾಣೆಯಾಗಿದೆ. ಇದರ ನಂತರ ಅವರು ಪೊಲೀಸ್‌ ಠಾಣೆಗೆ ತೆರಳಿ ಘಟನೆ ಬಗ್ಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್‌ಗೆ ಜಾಮೀನು ನಿರಾಕರಣೆ

ಬಸ್ಸಿನಲ್ಲಿ GPRS ವ್ಯವಸ್ಥೆ ಇರುವುದರಿಂದ ಗುಬ್ಬಿ ಬಸ್ ನಿಲ್ದಾಣದಿಂದ ಸುಮಾರು 30 ಕಿಮೀ ದೂರದಲ್ಲಿರುವ ಜನೇನಹಳ್ಳಿ ಬಳಿ ವಾಹನವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಕಳ್ಳರು ಡೀಸೆಲ್ ಕದ್ದು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಕಳ್ಳತನ ಹೆಚ್ಚಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. “ರಾತ್ರಿ ಸಮಯದಲ್ಲಿ ತಮ್ಮ ಪಾರ್ಕಿಂಗ್ ಪ್ರದೇಶಗಳಲ್ಲಿ ಗಸ್ತು ತಿರುಗಲು ವಸತಿ ಸಂಕೀರ್ಣಗಳಲ್ಲಿರುವ ಜನರು ನಮ್ಮನ್ನು ವಿನಂತಿಸುತ್ತಿದ್ದಾರೆ. ಈ ಹಿಂದೆ, ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯಂತಹ ನಗರಗಳಲ್ಲಿ ಇಂಧನ ಕಳ್ಳತನ ಹೆಚ್ಚಾಗಿ ನಡೆಯುತ್ತಿತ್ತು. ಆದರೆ ಈಗ ಇಂತಹ ಪ್ರಕರಣಗಳು ಸಣ್ಣ ಪಟ್ಟಣಗಳಿಂದಲೂ ವರದಿಯಾಗುತ್ತಿವೆ” ಎಂದು ಅವರು ಹೇಳಿದ್ದಾರೆ.

ಈ ವರ್ಷದ ಆಗಸ್ಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ನಿಂದ ಡೀಸೆಲ್ ಕದಿಯುವ ಗ್ಯಾಂಗ್ ಅನ್ನು ಬಂಧಿಸಿದ್ದರು. ಈ ಗ್ಯಾಂಗ್‌ ಎಂಆರ್‌ಪಿಎಲ್‌ನ ಮುಖ್ಯ ಪೈಪ್‌ಲೈನ್‌ಗೆ ರಂಧ್ರವನ್ನು ಕೊರೆದು ಅಲ್ಲಿಂದ ಡೀಸೆಲ್ ಕದಿಯುತ್ತಿದ್ದರು. ಈ ಪ್ರಕರಣದಲ್ಲಿ ತಂಡದ ಆರು ಸದಸ್ಯರನ್ನು ಬಂಧಿಸಲಾಗಿದೆ.

ಬುಧವಾರದ ವೇಳೆಗೆ, ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 109.89 ರೂಪಾಯಿ ಆಗಿದ್ದರೆ, ಡೀಸೆಲ್‌ ಬೆಲೆ 100.75 ರೂಪಾಯಿಯಾಗಿದೆ.

ಇದನ್ನೂ ಓದಿ: ಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದಾಯಿತು, ಮುಂದೆ ಮಾಲ್ಡೀವ್‌?: BJP ಸಂಸದ ಸುಬ್ರಮಣಿಯನ್‌ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...