Homeಮುಖಪುಟತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

ತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

- Advertisement -
- Advertisement -

ಸರ್ಕಾರಿ ಜಾಗಗಳ ಒತ್ತುವರಿ ತೆರವು ಕಾರ್ಯಾಚರಣೆ ಬೆಂಗಳೂರಿನಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಬಡವರು, ವಲಸೆ ಬಂದವರು, ಬಾಡಿಗೆ ತೆರಲು ಸಾಧ್ಯವಾಗದವರು ಸರ್ಕಾರಿ ಜಾಗಗಳಲ್ಲಿ ಜೋಪಡಿ-ಗುಡಿಸಲು ನಿರ್ಮಿಸಿಕೊಂಡು ಜೀವನ ಸಾಗುಸುತ್ತಿರುವವರನ್ನು ಎಲ್ಲೆಡೆ ನೋಡಿರುತ್ತೀರಿ. ಅಂತಹ ವಸತಿರಹಿತರನ್ನು ನಿರ್ದಯವಾಗಿ ಒಕ್ಕಲೆಬ್ಬಿಸುವ ಬೆಂಗಳೂರು ಮಹಾನಗರ ಪಾಲಿಕೆ ಸರ್ಕಾರದ ವಶಕ್ಕೆ ಸೇರಿದ ಕನ್ಸರ್ ವೆನ್ಸಿ ಗಳನ್ನು ಒತ್ತುವರಿ ಮಾಡಿ ದೊಡ್ಡ ದೊಡ್ಡ ಮಹಲುಗಳನ್ನು ನಿಮಾರ್ಣ ಮಾಡಿರುವವರ ಕ್ರಮ ಕೈಗೊಳ್ಳದೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಶ್ರೀಮಂತರು, ಬಲಾಢ್ಯರು, ಪ್ರಭಾವಿಗಳು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅವರು ನೀಡುವ ಅಮೇಧ್ಯ ತಿಂದುಕೊಂಡು  ಬೆಂಗಳೂರು ಮಹಾನಗರ ಪಾಲಿಕೆ ಕ್ರಮಕ್ಕೆ ಮುಂದಾಗುತ್ತಿಲ್ಲ.

ಇದೇ ಪರಿಸ್ಥಿತಿ ತುಮಕೂರು ಸೇರಿದಂತೆ ಇತರೆ ನಗರಗಳಿಗೂ ವ್ಯಾಪಿಸಿದೆ. ಬೆಂಗಳೂರಿಗೆ 75 ಕಿಲೋ ಮೀಟರ್ ದೂರವಿರುವ, ಬೆಂಗಳೂರಿನ ಹೆಬ್ಬಾಗಿಲೆಂದೇ ಕರೆಯುವ ತುಮಕೂರು ಸ್ಮಾರ್ಟ್ ಸಿಟಿಯೂ ಹೌದು. ಇಂತಹ ಸ್ಮಾರ್ಟ್ ನಗರದಲ್ಲಿ ‘ಸ್ಮಾರ್ಟ್’ ಪದಕ್ಕೆ ಅರ್ಥವೇ ಇಲ್ಲವಾಗಿದೆ. ತುಮಕೂರು ಪುರಸಭೆ, ನಗರಸಭೆ ಆಗಿದ್ದ ಸಂದರ್ಭದಲ್ಲಿ ಕನ್ಸರ್ ವೆನ್ಸಿಗಳಿದ್ದವು. ಗಾಳಿ ಬೆಳಕಿಗೇನೂ ಕೊರತೆ ಇರಲಿಲ್ಲ. ತುಮಕೂರು ಮಹಾನಗರ  ಪಾಲಿಕೆಯಾದ ಮೇಲೆ ಕನ್ಸರ್ ವೆನ್ಸಿಗಳು ನಿಧಾನವಾಗಿ ಒತ್ತುವರಿಯಾಗುತ್ತಿವೆ. ಚರಂಡಿಗಳನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಇಂತಹ ಸರ್ಕಾರಿ ಜಾಗದ ಒತ್ತುವರಿದಾರರ ವಿರುದ್ದ ಕ್ರಮ ಕೈಗೊಳ್ಳುವವರೇ ಇಲ್ಲವಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಕನ್ಸರ್ ವೆನ್ಸಿಗಳ ಬಳಕೆ ಕುರಿತಂತೆ ಚರ್ಚೆ ನಡೆಯಿತು. ಕನ್ಸರ್ ವೆನ್ಸಿಗಳಿಗೆ ಕ್ರಾಂಕ್ರೀಟ್ ಹಾಕಿ ಅಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡುವ ಯತ್ನವೂ ನಡೆಯಿತು. ಅದರಂತೆ ಸೋಮೇಶ್ವರಪುರಂ ಸೇರಿದಂತೆ ಕೆಲವು ಕಡೆ ಕನ್ಸರ್ ವೆನ್ಸಿಗಳಿಗೆ ಕಾಂಕ್ರೀಟ್ ಮಾಡಿ ಬೀದಿಬದಿ ವ್ಯಾಪಾರಿಗಳಿಗೆ ಅನುವು ಮೋಡಿಕೊಡಲಾಯಿತು. ಇದನ್ನೇ ನೆಪಮಾಡಿಕೊಂಡ ಕೆಲವು ಮಂದಿ ಬಲಾಢ್ಯರು, ರಾಜಕೀಯ ಪ್ರಭಾವವಿರುವವರು ತಮ್ಮ ಮನೆ, ಆಸ್ಪತ್ರೆ ಪಕ್ಕದಲ್ಲಿರುವ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡರು. ಇದಕ್ಕಾಗಿ ಆಯಾ ವಾರ್ಡ್‌ನ  ಪಾಲಿಕೆ ಸದಸ್ಯರಿಗೆ ಒಂದಿಷ್ಟು ‘ಕಾಣಿಕೆ’ಯೂ ಸಿಕ್ಕಿತು.

ಈ ರೋಗ ನಗರದೆಲ್ಲೆಡೆ ಹರಡಿಕೊಂಡಿದೆ. ಹೊಸದಾಗಿ ಮನೆಗಳನ್ನು ನಿರ್ಮಿಸುವವರು ಪಾಲಿಕೆಯ ಎಲ್ಲಾ ನಿಯಮಗಳನ್ನು ದಿಕ್ಕರಿಸುತ್ತಿದ್ದಾರೆ. ಗಾಂಧೀನಗರದ ಕಸ್ತೂರ ಬಾ ರಸ್ತೆಯಲ್ಲಿ ನಾಲ್ಕು ಹಂತಸ್ತಿನ ಮನೆ ನಿರ್ಮಾಣವಾಗುತ್ತಿದೆ. ಮಹಡಿಗಳ ಮೇಲೆ ಮಹಿಡಿ ನಿರ್ಮಾಣವಾದಂತೆ ಗಾಳಿ ಬೆಳಕು ಬೀಳುವಂತೆ ಹೆಚ್ಚು ಜಾಗ ಬಿಡಬೇಕು. ಕಟ್ಟಡದ ಎತ್ತರಕ್ಕೆ, ಗಾತ್ರಕ್ಕೆ ಅನುಗುಣವಾಗಿ ಅಕ್ಕಪಕ್ಕ ಜಾಗ ಬಿಡಬೇಕು. ಕಸ್ತೂರ ಬಾ ರಸ್ತೆಯಲ್ಲಿ ಐದು ಹಂತಸ್ತಿನ ಬೃಹತ್ ಕಟ್ಟಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸುತ್ತಿದ್ದಾರೆ. ಈ ಕಟ್ಟಡ ಮಾರ್ವಾಡಿಯೊಬ್ಬನಿಗೆ ಸೇರಿದ್ದು ಸ್ಥಳೀಯ ಕಾರ್ಪೋರೇಟರ್ ಅನ್ನು ಒಳಗೆ ಹಾಕಿಕೊಂಡು ಈ ಕಟ್ಟಡ ನಿರ್ಮಿಸುತ್ತಿದ್ದಾರೆ  ಎನ್ನಲಾಗುತ್ತಿದೆ.

ತುಮಕೂರು ನಗರದ ಸೋಮೇಶ್ವರಪುರಂ ಮುಖ್ಯರಸ್ತೆಯಲ್ಲಿ ಹಲವು ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ಪ್ರತಿಯೊಂದು ದೊಡ್ಡ ಮಳಿಗೆಯ ನೆಲಮಾಳಿಗೆಯನ್ನು ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂಬ ನಿಯಮವಿದೆ. ಆದರೆ 13ನೇ ಕ್ರಾಸ್ ನ ಎದುರುಗಡೆ ಕಟ್ಟಡದ ನೆಲಮಾಳಿಗೆಯಲ್ಲಿ ಡ್ಯಾನ್ಸ್ ಕ್ಲಾಸ್ ಮಾಡುತ್ತಿದ್ದಾರೆ. ನಮ್ಮೂರ ಆಹಾರ ಕಟ್ಟಡದ ನೆಲಮಾಳಿಗೆಯಲ್ಲಿ ಬೇಕರಿ ತಯಾರಿಕೆ ಕೆಲಸ ನಡೆಯುತ್ತಿದೆ. ಮಲ್ಲಿಗೆ ಪ್ಯಾಲಸ್ ಕಟ್ಟಡಕ್ಕೊಂದು ನೆಲಮಾಳಿಗೆ ಇದೆ. ಇಲ್ಲಿ ವಾಹನ ನಿಲುಗಡೆಗೆ ಅವಕಾಶ ಇಲ್ಲದಿರುವುದರಿಂದ ಸೋಮೇಶ್ವರ ಪುರಂ ಮುಖ್ಯರಸ್ತೆಯಲ್ಲಿ ವಾಹನನಿಲುಗಡೆ ಹೆಚ್ಚಾಗಿದ್ದು ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಆದರೂ ಸಂಚಾರಿ ಪೊಲೀಸರು ಮತ್ತು ಪಾಲಿಕೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ, ಮಳಿಗೆ ನಿರ್ಮಾಣ ಮಾಡಿದವರನ್ನು ಪ್ರಶ್ನೆ ಮಾಡದೆ ನಾಲಿಗೆಯನ್ನು ಕಳೆದುಕೊಂಡಿದ್ದಾರೆ.

ಯಾವ ಮಹಾಶಯ ಹೇಳಿದನೋ ಗೊತ್ತಿಲ್ಲ. ಅವರವರ ಮನೆಗಳು ಇರುವ ಕನ್ಸರ್ ವೆನ್ಸಿಗಳ ಜಾಗ ಅವರಿಗೆ ಸೇರಿದ್ದು ಎಂದು. ಎಲ್ಲರೂ ತಮಗೆ ಸಾಧ್ಯವಿರುವಷ್ಟು ಒತ್ತುವರಿ ಮಾಡಿಕೊಂಡು ಪಕ್ಕದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಅಳಲುತೋಡಿಕೊಳ್ಳುತ್ತಿದ್ದಾರೆ. ಅಶೋಕನಗರ ವಿನಾಯಕ ಆಸ್ಪತ್ರೆಯ ರಸ್ತೆಯಲ್ಲೂ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಹೊರಪೇಟೆ ಸೇರಿದಂತೆ ತುಮಕೂರಿನ ಬಹುತೇಕ ಕಡೆ ಕನ್ಸರ್ ವೆನ್ಸಿಗಳ ಒತ್ತುವರಿಯಾಗಿವೆ. ಚರಂಡಿಯನ್ನು ಒತ್ತುವರಿ ಮಾಡಿಕೊಂಡು ಮನೆ ಕಟ್ಟಲಾಗಿದೆ. ಹೀಗಾಗಿ ಸಿದ್ದಗಂಗಾ ಬಡಾವಣೆಯಲ್ಲಿ ಮಳೆ ಬಂದರೆ ಕೆರೆ ನಿರ್ಮಾಣವಾಗುತ್ತದೆ. ಸಾರ್ವಜನಿಕ ಸ್ವತ್ತು, ಸರ್ಕಾರಿ ಭೂಮಿ ಎಗ್ಗಿಲ್ಲದೆ ಒತ್ತುವರಿ ಮಾಡಿಕೊಂಡಿದ್ದರೂ ಜಿಲ್ಲಾಡಳಿತ, ಪಾಲಿಕೆ ಸತ್ತಂತೆ ವರ್ತಿಸುತ್ತಿದೆ.

ಸರ್ಕಾರಿ ಜಾಗದಲ್ಲಿ ಬಡವರು ಒಂದಿಂಚು ಒತ್ತುವರಿ ಮಾಡಿಕೊಂಡರೆ ತೆರವುಗೊಳಿಸುವ ಪಾಲಿಕೆ ಬಲಾಢ್ಯರ ಬಗ್ಗೆ ಮೌನ ವಹಿಸಿದೆ. ಕಸ್ತೂರಾ ಆಸ್ಪತ್ರೆ, ಉಪ್ಪಾರಹಳ್ಳಿಯಲ್ಲಿ ಖಾಸಗಿ ಕಾಲೇಜೊಂದನ್ನು ರಾಜಗಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿದ್ದರೂ ಪಾಲಿಕೆ ಮಾತ್ರ ಅತ್ತ ತಿರುಗಿಯೂ ನೋಡುತ್ತಿಲ್ಲ. ಕಾಲೇಜುಗಳು, ದೇವಾಲಯಗಳು ಅಕ್ರಮವಾಗಿ ನಿರ್ಮಾಣಗೊಂಡಿವೆ. ಇಂತಹವರಿಗೆ ಪಾಲಿಕೆಯ ನಿಯಮಗಳು ಅನ್ವಯ ಆಗುವುದಿಲ್ಲವೇ? ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ನೀಡುವ ಕಟ್ಟಡದ ನಕಾಶೆಗಳನ್ನು ಸರಿಯಾಗಿ ಪರಿಶೀಲಿಸುವುದಿಲ್ಲವೇ? ನೆಪಮಾತ್ರಕ್ಕೆ ಕಟ್ಟಡಗಳ ನಕ್ಷೆಯನ್ನು ಪಡೆಯಲಾಗುತ್ತಿದೆಯೇ? ಪಾಲಿಕೆ ಆಯುಕ್ತ ಭೂಬಾಲನ್ ಹೇಳಬೇಕು. ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡವರನ್ನು ತೆರೆಗೊಳಿಸುವ ಕೆಲಸಕ್ಕೆ ಕ್ರಮ ಕೈಗೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...