Homeಮುಖಪುಟತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

ತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

- Advertisement -
- Advertisement -

ಸರ್ಕಾರಿ ಜಾಗಗಳ ಒತ್ತುವರಿ ತೆರವು ಕಾರ್ಯಾಚರಣೆ ಬೆಂಗಳೂರಿನಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಬಡವರು, ವಲಸೆ ಬಂದವರು, ಬಾಡಿಗೆ ತೆರಲು ಸಾಧ್ಯವಾಗದವರು ಸರ್ಕಾರಿ ಜಾಗಗಳಲ್ಲಿ ಜೋಪಡಿ-ಗುಡಿಸಲು ನಿರ್ಮಿಸಿಕೊಂಡು ಜೀವನ ಸಾಗುಸುತ್ತಿರುವವರನ್ನು ಎಲ್ಲೆಡೆ ನೋಡಿರುತ್ತೀರಿ. ಅಂತಹ ವಸತಿರಹಿತರನ್ನು ನಿರ್ದಯವಾಗಿ ಒಕ್ಕಲೆಬ್ಬಿಸುವ ಬೆಂಗಳೂರು ಮಹಾನಗರ ಪಾಲಿಕೆ ಸರ್ಕಾರದ ವಶಕ್ಕೆ ಸೇರಿದ ಕನ್ಸರ್ ವೆನ್ಸಿ ಗಳನ್ನು ಒತ್ತುವರಿ ಮಾಡಿ ದೊಡ್ಡ ದೊಡ್ಡ ಮಹಲುಗಳನ್ನು ನಿಮಾರ್ಣ ಮಾಡಿರುವವರ ಕ್ರಮ ಕೈಗೊಳ್ಳದೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಶ್ರೀಮಂತರು, ಬಲಾಢ್ಯರು, ಪ್ರಭಾವಿಗಳು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅವರು ನೀಡುವ ಅಮೇಧ್ಯ ತಿಂದುಕೊಂಡು  ಬೆಂಗಳೂರು ಮಹಾನಗರ ಪಾಲಿಕೆ ಕ್ರಮಕ್ಕೆ ಮುಂದಾಗುತ್ತಿಲ್ಲ.

ಇದೇ ಪರಿಸ್ಥಿತಿ ತುಮಕೂರು ಸೇರಿದಂತೆ ಇತರೆ ನಗರಗಳಿಗೂ ವ್ಯಾಪಿಸಿದೆ. ಬೆಂಗಳೂರಿಗೆ 75 ಕಿಲೋ ಮೀಟರ್ ದೂರವಿರುವ, ಬೆಂಗಳೂರಿನ ಹೆಬ್ಬಾಗಿಲೆಂದೇ ಕರೆಯುವ ತುಮಕೂರು ಸ್ಮಾರ್ಟ್ ಸಿಟಿಯೂ ಹೌದು. ಇಂತಹ ಸ್ಮಾರ್ಟ್ ನಗರದಲ್ಲಿ ‘ಸ್ಮಾರ್ಟ್’ ಪದಕ್ಕೆ ಅರ್ಥವೇ ಇಲ್ಲವಾಗಿದೆ. ತುಮಕೂರು ಪುರಸಭೆ, ನಗರಸಭೆ ಆಗಿದ್ದ ಸಂದರ್ಭದಲ್ಲಿ ಕನ್ಸರ್ ವೆನ್ಸಿಗಳಿದ್ದವು. ಗಾಳಿ ಬೆಳಕಿಗೇನೂ ಕೊರತೆ ಇರಲಿಲ್ಲ. ತುಮಕೂರು ಮಹಾನಗರ  ಪಾಲಿಕೆಯಾದ ಮೇಲೆ ಕನ್ಸರ್ ವೆನ್ಸಿಗಳು ನಿಧಾನವಾಗಿ ಒತ್ತುವರಿಯಾಗುತ್ತಿವೆ. ಚರಂಡಿಗಳನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಇಂತಹ ಸರ್ಕಾರಿ ಜಾಗದ ಒತ್ತುವರಿದಾರರ ವಿರುದ್ದ ಕ್ರಮ ಕೈಗೊಳ್ಳುವವರೇ ಇಲ್ಲವಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಕನ್ಸರ್ ವೆನ್ಸಿಗಳ ಬಳಕೆ ಕುರಿತಂತೆ ಚರ್ಚೆ ನಡೆಯಿತು. ಕನ್ಸರ್ ವೆನ್ಸಿಗಳಿಗೆ ಕ್ರಾಂಕ್ರೀಟ್ ಹಾಕಿ ಅಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡುವ ಯತ್ನವೂ ನಡೆಯಿತು. ಅದರಂತೆ ಸೋಮೇಶ್ವರಪುರಂ ಸೇರಿದಂತೆ ಕೆಲವು ಕಡೆ ಕನ್ಸರ್ ವೆನ್ಸಿಗಳಿಗೆ ಕಾಂಕ್ರೀಟ್ ಮಾಡಿ ಬೀದಿಬದಿ ವ್ಯಾಪಾರಿಗಳಿಗೆ ಅನುವು ಮೋಡಿಕೊಡಲಾಯಿತು. ಇದನ್ನೇ ನೆಪಮಾಡಿಕೊಂಡ ಕೆಲವು ಮಂದಿ ಬಲಾಢ್ಯರು, ರಾಜಕೀಯ ಪ್ರಭಾವವಿರುವವರು ತಮ್ಮ ಮನೆ, ಆಸ್ಪತ್ರೆ ಪಕ್ಕದಲ್ಲಿರುವ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡರು. ಇದಕ್ಕಾಗಿ ಆಯಾ ವಾರ್ಡ್‌ನ  ಪಾಲಿಕೆ ಸದಸ್ಯರಿಗೆ ಒಂದಿಷ್ಟು ‘ಕಾಣಿಕೆ’ಯೂ ಸಿಕ್ಕಿತು.

ಈ ರೋಗ ನಗರದೆಲ್ಲೆಡೆ ಹರಡಿಕೊಂಡಿದೆ. ಹೊಸದಾಗಿ ಮನೆಗಳನ್ನು ನಿರ್ಮಿಸುವವರು ಪಾಲಿಕೆಯ ಎಲ್ಲಾ ನಿಯಮಗಳನ್ನು ದಿಕ್ಕರಿಸುತ್ತಿದ್ದಾರೆ. ಗಾಂಧೀನಗರದ ಕಸ್ತೂರ ಬಾ ರಸ್ತೆಯಲ್ಲಿ ನಾಲ್ಕು ಹಂತಸ್ತಿನ ಮನೆ ನಿರ್ಮಾಣವಾಗುತ್ತಿದೆ. ಮಹಡಿಗಳ ಮೇಲೆ ಮಹಿಡಿ ನಿರ್ಮಾಣವಾದಂತೆ ಗಾಳಿ ಬೆಳಕು ಬೀಳುವಂತೆ ಹೆಚ್ಚು ಜಾಗ ಬಿಡಬೇಕು. ಕಟ್ಟಡದ ಎತ್ತರಕ್ಕೆ, ಗಾತ್ರಕ್ಕೆ ಅನುಗುಣವಾಗಿ ಅಕ್ಕಪಕ್ಕ ಜಾಗ ಬಿಡಬೇಕು. ಕಸ್ತೂರ ಬಾ ರಸ್ತೆಯಲ್ಲಿ ಐದು ಹಂತಸ್ತಿನ ಬೃಹತ್ ಕಟ್ಟಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸುತ್ತಿದ್ದಾರೆ. ಈ ಕಟ್ಟಡ ಮಾರ್ವಾಡಿಯೊಬ್ಬನಿಗೆ ಸೇರಿದ್ದು ಸ್ಥಳೀಯ ಕಾರ್ಪೋರೇಟರ್ ಅನ್ನು ಒಳಗೆ ಹಾಕಿಕೊಂಡು ಈ ಕಟ್ಟಡ ನಿರ್ಮಿಸುತ್ತಿದ್ದಾರೆ  ಎನ್ನಲಾಗುತ್ತಿದೆ.

ತುಮಕೂರು ನಗರದ ಸೋಮೇಶ್ವರಪುರಂ ಮುಖ್ಯರಸ್ತೆಯಲ್ಲಿ ಹಲವು ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ಪ್ರತಿಯೊಂದು ದೊಡ್ಡ ಮಳಿಗೆಯ ನೆಲಮಾಳಿಗೆಯನ್ನು ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂಬ ನಿಯಮವಿದೆ. ಆದರೆ 13ನೇ ಕ್ರಾಸ್ ನ ಎದುರುಗಡೆ ಕಟ್ಟಡದ ನೆಲಮಾಳಿಗೆಯಲ್ಲಿ ಡ್ಯಾನ್ಸ್ ಕ್ಲಾಸ್ ಮಾಡುತ್ತಿದ್ದಾರೆ. ನಮ್ಮೂರ ಆಹಾರ ಕಟ್ಟಡದ ನೆಲಮಾಳಿಗೆಯಲ್ಲಿ ಬೇಕರಿ ತಯಾರಿಕೆ ಕೆಲಸ ನಡೆಯುತ್ತಿದೆ. ಮಲ್ಲಿಗೆ ಪ್ಯಾಲಸ್ ಕಟ್ಟಡಕ್ಕೊಂದು ನೆಲಮಾಳಿಗೆ ಇದೆ. ಇಲ್ಲಿ ವಾಹನ ನಿಲುಗಡೆಗೆ ಅವಕಾಶ ಇಲ್ಲದಿರುವುದರಿಂದ ಸೋಮೇಶ್ವರ ಪುರಂ ಮುಖ್ಯರಸ್ತೆಯಲ್ಲಿ ವಾಹನನಿಲುಗಡೆ ಹೆಚ್ಚಾಗಿದ್ದು ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಆದರೂ ಸಂಚಾರಿ ಪೊಲೀಸರು ಮತ್ತು ಪಾಲಿಕೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ, ಮಳಿಗೆ ನಿರ್ಮಾಣ ಮಾಡಿದವರನ್ನು ಪ್ರಶ್ನೆ ಮಾಡದೆ ನಾಲಿಗೆಯನ್ನು ಕಳೆದುಕೊಂಡಿದ್ದಾರೆ.

ಯಾವ ಮಹಾಶಯ ಹೇಳಿದನೋ ಗೊತ್ತಿಲ್ಲ. ಅವರವರ ಮನೆಗಳು ಇರುವ ಕನ್ಸರ್ ವೆನ್ಸಿಗಳ ಜಾಗ ಅವರಿಗೆ ಸೇರಿದ್ದು ಎಂದು. ಎಲ್ಲರೂ ತಮಗೆ ಸಾಧ್ಯವಿರುವಷ್ಟು ಒತ್ತುವರಿ ಮಾಡಿಕೊಂಡು ಪಕ್ಕದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಅಳಲುತೋಡಿಕೊಳ್ಳುತ್ತಿದ್ದಾರೆ. ಅಶೋಕನಗರ ವಿನಾಯಕ ಆಸ್ಪತ್ರೆಯ ರಸ್ತೆಯಲ್ಲೂ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಹೊರಪೇಟೆ ಸೇರಿದಂತೆ ತುಮಕೂರಿನ ಬಹುತೇಕ ಕಡೆ ಕನ್ಸರ್ ವೆನ್ಸಿಗಳ ಒತ್ತುವರಿಯಾಗಿವೆ. ಚರಂಡಿಯನ್ನು ಒತ್ತುವರಿ ಮಾಡಿಕೊಂಡು ಮನೆ ಕಟ್ಟಲಾಗಿದೆ. ಹೀಗಾಗಿ ಸಿದ್ದಗಂಗಾ ಬಡಾವಣೆಯಲ್ಲಿ ಮಳೆ ಬಂದರೆ ಕೆರೆ ನಿರ್ಮಾಣವಾಗುತ್ತದೆ. ಸಾರ್ವಜನಿಕ ಸ್ವತ್ತು, ಸರ್ಕಾರಿ ಭೂಮಿ ಎಗ್ಗಿಲ್ಲದೆ ಒತ್ತುವರಿ ಮಾಡಿಕೊಂಡಿದ್ದರೂ ಜಿಲ್ಲಾಡಳಿತ, ಪಾಲಿಕೆ ಸತ್ತಂತೆ ವರ್ತಿಸುತ್ತಿದೆ.

ಸರ್ಕಾರಿ ಜಾಗದಲ್ಲಿ ಬಡವರು ಒಂದಿಂಚು ಒತ್ತುವರಿ ಮಾಡಿಕೊಂಡರೆ ತೆರವುಗೊಳಿಸುವ ಪಾಲಿಕೆ ಬಲಾಢ್ಯರ ಬಗ್ಗೆ ಮೌನ ವಹಿಸಿದೆ. ಕಸ್ತೂರಾ ಆಸ್ಪತ್ರೆ, ಉಪ್ಪಾರಹಳ್ಳಿಯಲ್ಲಿ ಖಾಸಗಿ ಕಾಲೇಜೊಂದನ್ನು ರಾಜಗಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿದ್ದರೂ ಪಾಲಿಕೆ ಮಾತ್ರ ಅತ್ತ ತಿರುಗಿಯೂ ನೋಡುತ್ತಿಲ್ಲ. ಕಾಲೇಜುಗಳು, ದೇವಾಲಯಗಳು ಅಕ್ರಮವಾಗಿ ನಿರ್ಮಾಣಗೊಂಡಿವೆ. ಇಂತಹವರಿಗೆ ಪಾಲಿಕೆಯ ನಿಯಮಗಳು ಅನ್ವಯ ಆಗುವುದಿಲ್ಲವೇ? ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ನೀಡುವ ಕಟ್ಟಡದ ನಕಾಶೆಗಳನ್ನು ಸರಿಯಾಗಿ ಪರಿಶೀಲಿಸುವುದಿಲ್ಲವೇ? ನೆಪಮಾತ್ರಕ್ಕೆ ಕಟ್ಟಡಗಳ ನಕ್ಷೆಯನ್ನು ಪಡೆಯಲಾಗುತ್ತಿದೆಯೇ? ಪಾಲಿಕೆ ಆಯುಕ್ತ ಭೂಬಾಲನ್ ಹೇಳಬೇಕು. ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡವರನ್ನು ತೆರೆಗೊಳಿಸುವ ಕೆಲಸಕ್ಕೆ ಕ್ರಮ ಕೈಗೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...