Homeಮುಖಪುಟತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

ತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

- Advertisement -
- Advertisement -

ಸರ್ಕಾರಿ ಜಾಗಗಳ ಒತ್ತುವರಿ ತೆರವು ಕಾರ್ಯಾಚರಣೆ ಬೆಂಗಳೂರಿನಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಬಡವರು, ವಲಸೆ ಬಂದವರು, ಬಾಡಿಗೆ ತೆರಲು ಸಾಧ್ಯವಾಗದವರು ಸರ್ಕಾರಿ ಜಾಗಗಳಲ್ಲಿ ಜೋಪಡಿ-ಗುಡಿಸಲು ನಿರ್ಮಿಸಿಕೊಂಡು ಜೀವನ ಸಾಗುಸುತ್ತಿರುವವರನ್ನು ಎಲ್ಲೆಡೆ ನೋಡಿರುತ್ತೀರಿ. ಅಂತಹ ವಸತಿರಹಿತರನ್ನು ನಿರ್ದಯವಾಗಿ ಒಕ್ಕಲೆಬ್ಬಿಸುವ ಬೆಂಗಳೂರು ಮಹಾನಗರ ಪಾಲಿಕೆ ಸರ್ಕಾರದ ವಶಕ್ಕೆ ಸೇರಿದ ಕನ್ಸರ್ ವೆನ್ಸಿ ಗಳನ್ನು ಒತ್ತುವರಿ ಮಾಡಿ ದೊಡ್ಡ ದೊಡ್ಡ ಮಹಲುಗಳನ್ನು ನಿಮಾರ್ಣ ಮಾಡಿರುವವರ ಕ್ರಮ ಕೈಗೊಳ್ಳದೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಶ್ರೀಮಂತರು, ಬಲಾಢ್ಯರು, ಪ್ರಭಾವಿಗಳು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅವರು ನೀಡುವ ಅಮೇಧ್ಯ ತಿಂದುಕೊಂಡು  ಬೆಂಗಳೂರು ಮಹಾನಗರ ಪಾಲಿಕೆ ಕ್ರಮಕ್ಕೆ ಮುಂದಾಗುತ್ತಿಲ್ಲ.

ಇದೇ ಪರಿಸ್ಥಿತಿ ತುಮಕೂರು ಸೇರಿದಂತೆ ಇತರೆ ನಗರಗಳಿಗೂ ವ್ಯಾಪಿಸಿದೆ. ಬೆಂಗಳೂರಿಗೆ 75 ಕಿಲೋ ಮೀಟರ್ ದೂರವಿರುವ, ಬೆಂಗಳೂರಿನ ಹೆಬ್ಬಾಗಿಲೆಂದೇ ಕರೆಯುವ ತುಮಕೂರು ಸ್ಮಾರ್ಟ್ ಸಿಟಿಯೂ ಹೌದು. ಇಂತಹ ಸ್ಮಾರ್ಟ್ ನಗರದಲ್ಲಿ ‘ಸ್ಮಾರ್ಟ್’ ಪದಕ್ಕೆ ಅರ್ಥವೇ ಇಲ್ಲವಾಗಿದೆ. ತುಮಕೂರು ಪುರಸಭೆ, ನಗರಸಭೆ ಆಗಿದ್ದ ಸಂದರ್ಭದಲ್ಲಿ ಕನ್ಸರ್ ವೆನ್ಸಿಗಳಿದ್ದವು. ಗಾಳಿ ಬೆಳಕಿಗೇನೂ ಕೊರತೆ ಇರಲಿಲ್ಲ. ತುಮಕೂರು ಮಹಾನಗರ  ಪಾಲಿಕೆಯಾದ ಮೇಲೆ ಕನ್ಸರ್ ವೆನ್ಸಿಗಳು ನಿಧಾನವಾಗಿ ಒತ್ತುವರಿಯಾಗುತ್ತಿವೆ. ಚರಂಡಿಗಳನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಇಂತಹ ಸರ್ಕಾರಿ ಜಾಗದ ಒತ್ತುವರಿದಾರರ ವಿರುದ್ದ ಕ್ರಮ ಕೈಗೊಳ್ಳುವವರೇ ಇಲ್ಲವಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಕನ್ಸರ್ ವೆನ್ಸಿಗಳ ಬಳಕೆ ಕುರಿತಂತೆ ಚರ್ಚೆ ನಡೆಯಿತು. ಕನ್ಸರ್ ವೆನ್ಸಿಗಳಿಗೆ ಕ್ರಾಂಕ್ರೀಟ್ ಹಾಕಿ ಅಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡುವ ಯತ್ನವೂ ನಡೆಯಿತು. ಅದರಂತೆ ಸೋಮೇಶ್ವರಪುರಂ ಸೇರಿದಂತೆ ಕೆಲವು ಕಡೆ ಕನ್ಸರ್ ವೆನ್ಸಿಗಳಿಗೆ ಕಾಂಕ್ರೀಟ್ ಮಾಡಿ ಬೀದಿಬದಿ ವ್ಯಾಪಾರಿಗಳಿಗೆ ಅನುವು ಮೋಡಿಕೊಡಲಾಯಿತು. ಇದನ್ನೇ ನೆಪಮಾಡಿಕೊಂಡ ಕೆಲವು ಮಂದಿ ಬಲಾಢ್ಯರು, ರಾಜಕೀಯ ಪ್ರಭಾವವಿರುವವರು ತಮ್ಮ ಮನೆ, ಆಸ್ಪತ್ರೆ ಪಕ್ಕದಲ್ಲಿರುವ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡರು. ಇದಕ್ಕಾಗಿ ಆಯಾ ವಾರ್ಡ್‌ನ  ಪಾಲಿಕೆ ಸದಸ್ಯರಿಗೆ ಒಂದಿಷ್ಟು ‘ಕಾಣಿಕೆ’ಯೂ ಸಿಕ್ಕಿತು.

ಈ ರೋಗ ನಗರದೆಲ್ಲೆಡೆ ಹರಡಿಕೊಂಡಿದೆ. ಹೊಸದಾಗಿ ಮನೆಗಳನ್ನು ನಿರ್ಮಿಸುವವರು ಪಾಲಿಕೆಯ ಎಲ್ಲಾ ನಿಯಮಗಳನ್ನು ದಿಕ್ಕರಿಸುತ್ತಿದ್ದಾರೆ. ಗಾಂಧೀನಗರದ ಕಸ್ತೂರ ಬಾ ರಸ್ತೆಯಲ್ಲಿ ನಾಲ್ಕು ಹಂತಸ್ತಿನ ಮನೆ ನಿರ್ಮಾಣವಾಗುತ್ತಿದೆ. ಮಹಡಿಗಳ ಮೇಲೆ ಮಹಿಡಿ ನಿರ್ಮಾಣವಾದಂತೆ ಗಾಳಿ ಬೆಳಕು ಬೀಳುವಂತೆ ಹೆಚ್ಚು ಜಾಗ ಬಿಡಬೇಕು. ಕಟ್ಟಡದ ಎತ್ತರಕ್ಕೆ, ಗಾತ್ರಕ್ಕೆ ಅನುಗುಣವಾಗಿ ಅಕ್ಕಪಕ್ಕ ಜಾಗ ಬಿಡಬೇಕು. ಕಸ್ತೂರ ಬಾ ರಸ್ತೆಯಲ್ಲಿ ಐದು ಹಂತಸ್ತಿನ ಬೃಹತ್ ಕಟ್ಟಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸುತ್ತಿದ್ದಾರೆ. ಈ ಕಟ್ಟಡ ಮಾರ್ವಾಡಿಯೊಬ್ಬನಿಗೆ ಸೇರಿದ್ದು ಸ್ಥಳೀಯ ಕಾರ್ಪೋರೇಟರ್ ಅನ್ನು ಒಳಗೆ ಹಾಕಿಕೊಂಡು ಈ ಕಟ್ಟಡ ನಿರ್ಮಿಸುತ್ತಿದ್ದಾರೆ  ಎನ್ನಲಾಗುತ್ತಿದೆ.

ತುಮಕೂರು ನಗರದ ಸೋಮೇಶ್ವರಪುರಂ ಮುಖ್ಯರಸ್ತೆಯಲ್ಲಿ ಹಲವು ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ಪ್ರತಿಯೊಂದು ದೊಡ್ಡ ಮಳಿಗೆಯ ನೆಲಮಾಳಿಗೆಯನ್ನು ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂಬ ನಿಯಮವಿದೆ. ಆದರೆ 13ನೇ ಕ್ರಾಸ್ ನ ಎದುರುಗಡೆ ಕಟ್ಟಡದ ನೆಲಮಾಳಿಗೆಯಲ್ಲಿ ಡ್ಯಾನ್ಸ್ ಕ್ಲಾಸ್ ಮಾಡುತ್ತಿದ್ದಾರೆ. ನಮ್ಮೂರ ಆಹಾರ ಕಟ್ಟಡದ ನೆಲಮಾಳಿಗೆಯಲ್ಲಿ ಬೇಕರಿ ತಯಾರಿಕೆ ಕೆಲಸ ನಡೆಯುತ್ತಿದೆ. ಮಲ್ಲಿಗೆ ಪ್ಯಾಲಸ್ ಕಟ್ಟಡಕ್ಕೊಂದು ನೆಲಮಾಳಿಗೆ ಇದೆ. ಇಲ್ಲಿ ವಾಹನ ನಿಲುಗಡೆಗೆ ಅವಕಾಶ ಇಲ್ಲದಿರುವುದರಿಂದ ಸೋಮೇಶ್ವರ ಪುರಂ ಮುಖ್ಯರಸ್ತೆಯಲ್ಲಿ ವಾಹನನಿಲುಗಡೆ ಹೆಚ್ಚಾಗಿದ್ದು ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಆದರೂ ಸಂಚಾರಿ ಪೊಲೀಸರು ಮತ್ತು ಪಾಲಿಕೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ, ಮಳಿಗೆ ನಿರ್ಮಾಣ ಮಾಡಿದವರನ್ನು ಪ್ರಶ್ನೆ ಮಾಡದೆ ನಾಲಿಗೆಯನ್ನು ಕಳೆದುಕೊಂಡಿದ್ದಾರೆ.

ಯಾವ ಮಹಾಶಯ ಹೇಳಿದನೋ ಗೊತ್ತಿಲ್ಲ. ಅವರವರ ಮನೆಗಳು ಇರುವ ಕನ್ಸರ್ ವೆನ್ಸಿಗಳ ಜಾಗ ಅವರಿಗೆ ಸೇರಿದ್ದು ಎಂದು. ಎಲ್ಲರೂ ತಮಗೆ ಸಾಧ್ಯವಿರುವಷ್ಟು ಒತ್ತುವರಿ ಮಾಡಿಕೊಂಡು ಪಕ್ಕದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಅಳಲುತೋಡಿಕೊಳ್ಳುತ್ತಿದ್ದಾರೆ. ಅಶೋಕನಗರ ವಿನಾಯಕ ಆಸ್ಪತ್ರೆಯ ರಸ್ತೆಯಲ್ಲೂ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಹೊರಪೇಟೆ ಸೇರಿದಂತೆ ತುಮಕೂರಿನ ಬಹುತೇಕ ಕಡೆ ಕನ್ಸರ್ ವೆನ್ಸಿಗಳ ಒತ್ತುವರಿಯಾಗಿವೆ. ಚರಂಡಿಯನ್ನು ಒತ್ತುವರಿ ಮಾಡಿಕೊಂಡು ಮನೆ ಕಟ್ಟಲಾಗಿದೆ. ಹೀಗಾಗಿ ಸಿದ್ದಗಂಗಾ ಬಡಾವಣೆಯಲ್ಲಿ ಮಳೆ ಬಂದರೆ ಕೆರೆ ನಿರ್ಮಾಣವಾಗುತ್ತದೆ. ಸಾರ್ವಜನಿಕ ಸ್ವತ್ತು, ಸರ್ಕಾರಿ ಭೂಮಿ ಎಗ್ಗಿಲ್ಲದೆ ಒತ್ತುವರಿ ಮಾಡಿಕೊಂಡಿದ್ದರೂ ಜಿಲ್ಲಾಡಳಿತ, ಪಾಲಿಕೆ ಸತ್ತಂತೆ ವರ್ತಿಸುತ್ತಿದೆ.

ಸರ್ಕಾರಿ ಜಾಗದಲ್ಲಿ ಬಡವರು ಒಂದಿಂಚು ಒತ್ತುವರಿ ಮಾಡಿಕೊಂಡರೆ ತೆರವುಗೊಳಿಸುವ ಪಾಲಿಕೆ ಬಲಾಢ್ಯರ ಬಗ್ಗೆ ಮೌನ ವಹಿಸಿದೆ. ಕಸ್ತೂರಾ ಆಸ್ಪತ್ರೆ, ಉಪ್ಪಾರಹಳ್ಳಿಯಲ್ಲಿ ಖಾಸಗಿ ಕಾಲೇಜೊಂದನ್ನು ರಾಜಗಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿದ್ದರೂ ಪಾಲಿಕೆ ಮಾತ್ರ ಅತ್ತ ತಿರುಗಿಯೂ ನೋಡುತ್ತಿಲ್ಲ. ಕಾಲೇಜುಗಳು, ದೇವಾಲಯಗಳು ಅಕ್ರಮವಾಗಿ ನಿರ್ಮಾಣಗೊಂಡಿವೆ. ಇಂತಹವರಿಗೆ ಪಾಲಿಕೆಯ ನಿಯಮಗಳು ಅನ್ವಯ ಆಗುವುದಿಲ್ಲವೇ? ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ನೀಡುವ ಕಟ್ಟಡದ ನಕಾಶೆಗಳನ್ನು ಸರಿಯಾಗಿ ಪರಿಶೀಲಿಸುವುದಿಲ್ಲವೇ? ನೆಪಮಾತ್ರಕ್ಕೆ ಕಟ್ಟಡಗಳ ನಕ್ಷೆಯನ್ನು ಪಡೆಯಲಾಗುತ್ತಿದೆಯೇ? ಪಾಲಿಕೆ ಆಯುಕ್ತ ಭೂಬಾಲನ್ ಹೇಳಬೇಕು. ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡವರನ್ನು ತೆರೆಗೊಳಿಸುವ ಕೆಲಸಕ್ಕೆ ಕ್ರಮ ಕೈಗೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...