Homeಮುಖಪುಟತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

ತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

- Advertisement -
- Advertisement -

ಸರ್ಕಾರಿ ಜಾಗಗಳ ಒತ್ತುವರಿ ತೆರವು ಕಾರ್ಯಾಚರಣೆ ಬೆಂಗಳೂರಿನಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಬಡವರು, ವಲಸೆ ಬಂದವರು, ಬಾಡಿಗೆ ತೆರಲು ಸಾಧ್ಯವಾಗದವರು ಸರ್ಕಾರಿ ಜಾಗಗಳಲ್ಲಿ ಜೋಪಡಿ-ಗುಡಿಸಲು ನಿರ್ಮಿಸಿಕೊಂಡು ಜೀವನ ಸಾಗುಸುತ್ತಿರುವವರನ್ನು ಎಲ್ಲೆಡೆ ನೋಡಿರುತ್ತೀರಿ. ಅಂತಹ ವಸತಿರಹಿತರನ್ನು ನಿರ್ದಯವಾಗಿ ಒಕ್ಕಲೆಬ್ಬಿಸುವ ಬೆಂಗಳೂರು ಮಹಾನಗರ ಪಾಲಿಕೆ ಸರ್ಕಾರದ ವಶಕ್ಕೆ ಸೇರಿದ ಕನ್ಸರ್ ವೆನ್ಸಿ ಗಳನ್ನು ಒತ್ತುವರಿ ಮಾಡಿ ದೊಡ್ಡ ದೊಡ್ಡ ಮಹಲುಗಳನ್ನು ನಿಮಾರ್ಣ ಮಾಡಿರುವವರ ಕ್ರಮ ಕೈಗೊಳ್ಳದೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಶ್ರೀಮಂತರು, ಬಲಾಢ್ಯರು, ಪ್ರಭಾವಿಗಳು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅವರು ನೀಡುವ ಅಮೇಧ್ಯ ತಿಂದುಕೊಂಡು  ಬೆಂಗಳೂರು ಮಹಾನಗರ ಪಾಲಿಕೆ ಕ್ರಮಕ್ಕೆ ಮುಂದಾಗುತ್ತಿಲ್ಲ.

ಇದೇ ಪರಿಸ್ಥಿತಿ ತುಮಕೂರು ಸೇರಿದಂತೆ ಇತರೆ ನಗರಗಳಿಗೂ ವ್ಯಾಪಿಸಿದೆ. ಬೆಂಗಳೂರಿಗೆ 75 ಕಿಲೋ ಮೀಟರ್ ದೂರವಿರುವ, ಬೆಂಗಳೂರಿನ ಹೆಬ್ಬಾಗಿಲೆಂದೇ ಕರೆಯುವ ತುಮಕೂರು ಸ್ಮಾರ್ಟ್ ಸಿಟಿಯೂ ಹೌದು. ಇಂತಹ ಸ್ಮಾರ್ಟ್ ನಗರದಲ್ಲಿ ‘ಸ್ಮಾರ್ಟ್’ ಪದಕ್ಕೆ ಅರ್ಥವೇ ಇಲ್ಲವಾಗಿದೆ. ತುಮಕೂರು ಪುರಸಭೆ, ನಗರಸಭೆ ಆಗಿದ್ದ ಸಂದರ್ಭದಲ್ಲಿ ಕನ್ಸರ್ ವೆನ್ಸಿಗಳಿದ್ದವು. ಗಾಳಿ ಬೆಳಕಿಗೇನೂ ಕೊರತೆ ಇರಲಿಲ್ಲ. ತುಮಕೂರು ಮಹಾನಗರ  ಪಾಲಿಕೆಯಾದ ಮೇಲೆ ಕನ್ಸರ್ ವೆನ್ಸಿಗಳು ನಿಧಾನವಾಗಿ ಒತ್ತುವರಿಯಾಗುತ್ತಿವೆ. ಚರಂಡಿಗಳನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಇಂತಹ ಸರ್ಕಾರಿ ಜಾಗದ ಒತ್ತುವರಿದಾರರ ವಿರುದ್ದ ಕ್ರಮ ಕೈಗೊಳ್ಳುವವರೇ ಇಲ್ಲವಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಕನ್ಸರ್ ವೆನ್ಸಿಗಳ ಬಳಕೆ ಕುರಿತಂತೆ ಚರ್ಚೆ ನಡೆಯಿತು. ಕನ್ಸರ್ ವೆನ್ಸಿಗಳಿಗೆ ಕ್ರಾಂಕ್ರೀಟ್ ಹಾಕಿ ಅಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡುವ ಯತ್ನವೂ ನಡೆಯಿತು. ಅದರಂತೆ ಸೋಮೇಶ್ವರಪುರಂ ಸೇರಿದಂತೆ ಕೆಲವು ಕಡೆ ಕನ್ಸರ್ ವೆನ್ಸಿಗಳಿಗೆ ಕಾಂಕ್ರೀಟ್ ಮಾಡಿ ಬೀದಿಬದಿ ವ್ಯಾಪಾರಿಗಳಿಗೆ ಅನುವು ಮೋಡಿಕೊಡಲಾಯಿತು. ಇದನ್ನೇ ನೆಪಮಾಡಿಕೊಂಡ ಕೆಲವು ಮಂದಿ ಬಲಾಢ್ಯರು, ರಾಜಕೀಯ ಪ್ರಭಾವವಿರುವವರು ತಮ್ಮ ಮನೆ, ಆಸ್ಪತ್ರೆ ಪಕ್ಕದಲ್ಲಿರುವ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡರು. ಇದಕ್ಕಾಗಿ ಆಯಾ ವಾರ್ಡ್‌ನ  ಪಾಲಿಕೆ ಸದಸ್ಯರಿಗೆ ಒಂದಿಷ್ಟು ‘ಕಾಣಿಕೆ’ಯೂ ಸಿಕ್ಕಿತು.

ಈ ರೋಗ ನಗರದೆಲ್ಲೆಡೆ ಹರಡಿಕೊಂಡಿದೆ. ಹೊಸದಾಗಿ ಮನೆಗಳನ್ನು ನಿರ್ಮಿಸುವವರು ಪಾಲಿಕೆಯ ಎಲ್ಲಾ ನಿಯಮಗಳನ್ನು ದಿಕ್ಕರಿಸುತ್ತಿದ್ದಾರೆ. ಗಾಂಧೀನಗರದ ಕಸ್ತೂರ ಬಾ ರಸ್ತೆಯಲ್ಲಿ ನಾಲ್ಕು ಹಂತಸ್ತಿನ ಮನೆ ನಿರ್ಮಾಣವಾಗುತ್ತಿದೆ. ಮಹಡಿಗಳ ಮೇಲೆ ಮಹಿಡಿ ನಿರ್ಮಾಣವಾದಂತೆ ಗಾಳಿ ಬೆಳಕು ಬೀಳುವಂತೆ ಹೆಚ್ಚು ಜಾಗ ಬಿಡಬೇಕು. ಕಟ್ಟಡದ ಎತ್ತರಕ್ಕೆ, ಗಾತ್ರಕ್ಕೆ ಅನುಗುಣವಾಗಿ ಅಕ್ಕಪಕ್ಕ ಜಾಗ ಬಿಡಬೇಕು. ಕಸ್ತೂರ ಬಾ ರಸ್ತೆಯಲ್ಲಿ ಐದು ಹಂತಸ್ತಿನ ಬೃಹತ್ ಕಟ್ಟಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸುತ್ತಿದ್ದಾರೆ. ಈ ಕಟ್ಟಡ ಮಾರ್ವಾಡಿಯೊಬ್ಬನಿಗೆ ಸೇರಿದ್ದು ಸ್ಥಳೀಯ ಕಾರ್ಪೋರೇಟರ್ ಅನ್ನು ಒಳಗೆ ಹಾಕಿಕೊಂಡು ಈ ಕಟ್ಟಡ ನಿರ್ಮಿಸುತ್ತಿದ್ದಾರೆ  ಎನ್ನಲಾಗುತ್ತಿದೆ.

ತುಮಕೂರು ನಗರದ ಸೋಮೇಶ್ವರಪುರಂ ಮುಖ್ಯರಸ್ತೆಯಲ್ಲಿ ಹಲವು ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ಪ್ರತಿಯೊಂದು ದೊಡ್ಡ ಮಳಿಗೆಯ ನೆಲಮಾಳಿಗೆಯನ್ನು ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂಬ ನಿಯಮವಿದೆ. ಆದರೆ 13ನೇ ಕ್ರಾಸ್ ನ ಎದುರುಗಡೆ ಕಟ್ಟಡದ ನೆಲಮಾಳಿಗೆಯಲ್ಲಿ ಡ್ಯಾನ್ಸ್ ಕ್ಲಾಸ್ ಮಾಡುತ್ತಿದ್ದಾರೆ. ನಮ್ಮೂರ ಆಹಾರ ಕಟ್ಟಡದ ನೆಲಮಾಳಿಗೆಯಲ್ಲಿ ಬೇಕರಿ ತಯಾರಿಕೆ ಕೆಲಸ ನಡೆಯುತ್ತಿದೆ. ಮಲ್ಲಿಗೆ ಪ್ಯಾಲಸ್ ಕಟ್ಟಡಕ್ಕೊಂದು ನೆಲಮಾಳಿಗೆ ಇದೆ. ಇಲ್ಲಿ ವಾಹನ ನಿಲುಗಡೆಗೆ ಅವಕಾಶ ಇಲ್ಲದಿರುವುದರಿಂದ ಸೋಮೇಶ್ವರ ಪುರಂ ಮುಖ್ಯರಸ್ತೆಯಲ್ಲಿ ವಾಹನನಿಲುಗಡೆ ಹೆಚ್ಚಾಗಿದ್ದು ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಆದರೂ ಸಂಚಾರಿ ಪೊಲೀಸರು ಮತ್ತು ಪಾಲಿಕೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ, ಮಳಿಗೆ ನಿರ್ಮಾಣ ಮಾಡಿದವರನ್ನು ಪ್ರಶ್ನೆ ಮಾಡದೆ ನಾಲಿಗೆಯನ್ನು ಕಳೆದುಕೊಂಡಿದ್ದಾರೆ.

ಯಾವ ಮಹಾಶಯ ಹೇಳಿದನೋ ಗೊತ್ತಿಲ್ಲ. ಅವರವರ ಮನೆಗಳು ಇರುವ ಕನ್ಸರ್ ವೆನ್ಸಿಗಳ ಜಾಗ ಅವರಿಗೆ ಸೇರಿದ್ದು ಎಂದು. ಎಲ್ಲರೂ ತಮಗೆ ಸಾಧ್ಯವಿರುವಷ್ಟು ಒತ್ತುವರಿ ಮಾಡಿಕೊಂಡು ಪಕ್ಕದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಅಳಲುತೋಡಿಕೊಳ್ಳುತ್ತಿದ್ದಾರೆ. ಅಶೋಕನಗರ ವಿನಾಯಕ ಆಸ್ಪತ್ರೆಯ ರಸ್ತೆಯಲ್ಲೂ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಹೊರಪೇಟೆ ಸೇರಿದಂತೆ ತುಮಕೂರಿನ ಬಹುತೇಕ ಕಡೆ ಕನ್ಸರ್ ವೆನ್ಸಿಗಳ ಒತ್ತುವರಿಯಾಗಿವೆ. ಚರಂಡಿಯನ್ನು ಒತ್ತುವರಿ ಮಾಡಿಕೊಂಡು ಮನೆ ಕಟ್ಟಲಾಗಿದೆ. ಹೀಗಾಗಿ ಸಿದ್ದಗಂಗಾ ಬಡಾವಣೆಯಲ್ಲಿ ಮಳೆ ಬಂದರೆ ಕೆರೆ ನಿರ್ಮಾಣವಾಗುತ್ತದೆ. ಸಾರ್ವಜನಿಕ ಸ್ವತ್ತು, ಸರ್ಕಾರಿ ಭೂಮಿ ಎಗ್ಗಿಲ್ಲದೆ ಒತ್ತುವರಿ ಮಾಡಿಕೊಂಡಿದ್ದರೂ ಜಿಲ್ಲಾಡಳಿತ, ಪಾಲಿಕೆ ಸತ್ತಂತೆ ವರ್ತಿಸುತ್ತಿದೆ.

ಸರ್ಕಾರಿ ಜಾಗದಲ್ಲಿ ಬಡವರು ಒಂದಿಂಚು ಒತ್ತುವರಿ ಮಾಡಿಕೊಂಡರೆ ತೆರವುಗೊಳಿಸುವ ಪಾಲಿಕೆ ಬಲಾಢ್ಯರ ಬಗ್ಗೆ ಮೌನ ವಹಿಸಿದೆ. ಕಸ್ತೂರಾ ಆಸ್ಪತ್ರೆ, ಉಪ್ಪಾರಹಳ್ಳಿಯಲ್ಲಿ ಖಾಸಗಿ ಕಾಲೇಜೊಂದನ್ನು ರಾಜಗಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿದ್ದರೂ ಪಾಲಿಕೆ ಮಾತ್ರ ಅತ್ತ ತಿರುಗಿಯೂ ನೋಡುತ್ತಿಲ್ಲ. ಕಾಲೇಜುಗಳು, ದೇವಾಲಯಗಳು ಅಕ್ರಮವಾಗಿ ನಿರ್ಮಾಣಗೊಂಡಿವೆ. ಇಂತಹವರಿಗೆ ಪಾಲಿಕೆಯ ನಿಯಮಗಳು ಅನ್ವಯ ಆಗುವುದಿಲ್ಲವೇ? ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ನೀಡುವ ಕಟ್ಟಡದ ನಕಾಶೆಗಳನ್ನು ಸರಿಯಾಗಿ ಪರಿಶೀಲಿಸುವುದಿಲ್ಲವೇ? ನೆಪಮಾತ್ರಕ್ಕೆ ಕಟ್ಟಡಗಳ ನಕ್ಷೆಯನ್ನು ಪಡೆಯಲಾಗುತ್ತಿದೆಯೇ? ಪಾಲಿಕೆ ಆಯುಕ್ತ ಭೂಬಾಲನ್ ಹೇಳಬೇಕು. ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡವರನ್ನು ತೆರೆಗೊಳಿಸುವ ಕೆಲಸಕ್ಕೆ ಕ್ರಮ ಕೈಗೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...